Homeಚಳವಳಿಹೋರಾಟ ನಿರತ ರೈತರ ಯೂಟ್ಯೂಬ್ ಚಾನೆಲ್‌ಗೆ ಒಂದೇ ವಾರದಲ್ಲಿ 10 ಲಕ್ಷ ಚಂದಾದಾರರು!

ಹೋರಾಟ ನಿರತ ರೈತರ ಯೂಟ್ಯೂಬ್ ಚಾನೆಲ್‌ಗೆ ಒಂದೇ ವಾರದಲ್ಲಿ 10 ಲಕ್ಷ ಚಂದಾದಾರರು!

Kisan Ekta Morcha ಹೆಸರಿನಲ್ಲಿ ಫೇಸ್‌ಬುಕ್, ಟ್ವಿಟ್ಟರ್ , ಇನ್ಟಾ ಅಕೌಂಟ್‌ಗಳನ್ನು ಸಹ ತೆರೆಯಲಾಗಿದೆ. ಫೇಸ್‌ಬುಕ್‌ನಲ್ಲಿ 2 ಲಕ್ಷಕ್ಕೂ ಅಧಿಕ ಫಾಲೋವರ್ಸ್, ಟ್ವಿಟರ್‌ನಲ್ಲಿ ಒಂದು ಲಕ್ಷ, ಇನ್ಸ್ಟಾಗ್ರಾಮ್ ಖಾತೆಯಲ್ಲಿ ಒಂದೂವರೆ ಲಕ್ಷ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಹೋರಾಡುತ್ತಿರುವ ರೈತರ ಪ್ರತಿಭಟನೆ 28 ನೇ ದಿನಕ್ಕೆ ಕಾಲಿಟ್ಟಿದೆ. ರೈತ ಹೋರಾಟವನ್ನು ಪ್ರಸಾರ ಮಾಡದ ಕೆಲವು ಚಾನೆಲ್‌ಗಳ ವಿರುದ್ಧ ಸಿಡಿದೆದ್ದ ಅನ್ನದಾತರು ತಾವೇ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದರು.

ಡಿಸೆಂಬರ್‌ 16 ರಂದು Kisan Ekta Morcha ಹೆಸರಿನಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದ ರೈತರಿಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದ್ದು, ಕಳೆದ ಒಂದು ವಾರದಲ್ಲಿ 10 ಲಕ್ಷ ಚಂದಾದಾರರನ್ನು ಚಾನೆಲ್ ಪಡೆದಿದೆ. ರೈತರ ದಿಟ್ಟ ಹೋರಾಟವನ್ನು ತೋರಿಸದ ಮಾಧ್ಯಮಗಳನ್ನು ಗೋದಿ ಮೀಡಿಯಾ ಎಂದು ರೈತರು ಆರೋಪಿಸಿದ್ದಾರೆ.

Kisan Ekta Morcha ಹೆಸರಿನಲ್ಲಿ ಫೇಸ್‌ಬುಕ್ಟ್ವಿಟ್ಟರ್ , ಇನ್ಟಾ ಅಕೌಂಟ್‌ಗಳನ್ನು ಸಹ ತೆರೆಯಲಾಗಿದೆ. ಫೇಸ್‌ಬುಕ್‌ನಲ್ಲಿ 2 ಲಕ್ಷಕ್ಕೂ ಅಧಿಕ ಫಾಲೋವರ್ಸ್, ಟ್ವಿಟರ್‌ನಲ್ಲಿ ಒಂದು ಲಕ್ಷ ಫಾಲೋವರ್ಸ್, ಇನ್ಸ್ಟಾಗ್ರಾಮ್ ಖಾತೆಯಲ್ಲಿ ಒಂದೂವರೆ ಲಕ್ಷ ಫಾಲೋವರ್ಸ್‌ಗಳನ್ನು ರೈತರು ಪಡೆದಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಾರರು ಪ್ರಾರಂಭಿಸಿದ್ದ ಫೇಸ್‌‌ಬುಕ್‌, ಇನ್ಸ್ಟಾಗ್ರಾಮ್ ಖಾತೆಗಳ ಮೇಲಿನ ನಿಷೇಧ ವಾಪಾಸ್!

ಹೋರಾಟನಿರತ ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರೆಂಬಂತೆ ಕೆಲ ಮಾಧ್ಯಮಗಳು ಚಿತ್ರಿಸುತ್ತಿವೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ‘ಕೇವಲ 1 ಲಕ್ಷ ರೈತರಷ್ಟೇ ಹೋರಾಡುತ್ತಿದ್ದಾರೆ’ ಎಂದು ಹೇಳಿಕೆ ನೀಡಿದ್ದಾರೆ. ಅವುಗಳಿಗೆ ತಿರುಗೇಟು ನೀಡಲು ಮತ್ತು ಹೋರಾಟವನ್ನು ದೇಶಕ್ಕೆ ತಲುಪಿಸಲು ನಾವು ಈ ಚಾನೆಲ್‌ಗಳನ್ನು ಆರಂಭಿಸಿದ್ದೇವೆ. ಹಾಗಾಗಿ ಡಿಸೆಂಬರ್ 25 ರೊಳಗೆ ಒಂದು ಕೋಟಿ ಚಂದಾದಾರರಾಗುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ನಮ್ಮ ರೈತರ ಶಕ್ತಿ ಏನೆಂದು ತೋರಿಸಬೇಕು. ದಯವಿಟ್ಟು ಚಂದಾದಾರರಾಗಿ ಎಂದು ಹೋರಾಟ ನಿರತ ರೈತರು ಕರೆ ನೀಡಿದ್ದರು.

ರೈತರ ಹೋರಾಟಕ್ಕೆ ಸ್ಪಂದಿಸಿರುವ ಜನರು ಚಂದಾರಾರಾಗುತ್ತಿದ್ದಾರೆ. ಹೋರಾಟದ ಎಲ್ಲಾ ವಿವರಗಳನ್ನು ಈ ಚಾನೆಲ್‌ಗಳ ಮೂಲಕ ನೀಡಲಾಗುತ್ತಿದೆ. ಗಂಟೆ ಗಂಟೆಗೂ ಕಿಸಾನ್ ಏಕ್ತಾ ಮೋರ್ಚಾದ ಚಂದಾದಾರರ ಸಂಖ್ಯೆ ಅಧಿಕಗೊಳ್ಳುತ್ತಿದೆ. ಇನ್ನೂ ಪೋಸ್ಟ್ ಮಾಡಿರುವ ವಿಡಿಯೋಗಳನ್ನು ಸಾವಿರಾರು ಜನರು ನೋಡುತ್ತಿದ್ದಾರೆ. ಇದೇ ಹುಮ್ಮಸ್ಸಿನಲ್ಲಿ ಹೋರಾಟದ ಪ್ರತಿ ವಿಚಾರವನ್ನು ರೈತ ಮುಖಂಡರು ಈ ವೇದಿಕೆ ಮೂಲಕ ಹಂಚಿಕೊಳ್ಳುತ್ತಾ ಗೋದಿ ಮೀಡಿಯಾಗಳಿಗಡ ಸೆಡ್ಡು ಹೊಡೆದಿದ್ದಾರೆ.

’ಕಿಸಾನ್ ಏಕತಾ ಮೋರ್ಚಾ’ ಫೇಸ್‌ಬುಕ್ ಮತ್ತು ನ್ಸ್ಟಾಗ್ರಾಮ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ವರದಿಯಾಗಿತ್ತು. ದೇಶಾದ್ಯಂತ ಫೇಸ್‌‌ಬುಕ್‌ನ ಈ ಕೃತ್ಯಕ್ಕೆ ಆಕ್ರೋಶವೆದ್ದ ಕಾರಣ ಸ್ವಲ್ಪ ಸಮಯದ ನಂತರ ಖಾತೆಗಳ ಮೇಲಿನ ನಿಷೇಧ ವಾಪಾಸ್ ಪಡೆದುಕೊಳ್ಳಲಾಗಿತ್ತು.

ಇದನ್ನೂ ಓದಿ: ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...