Homeಮುಖಪುಟ10 ಲಕ್ಷ ರೂ. ‘ಶಾಂತಿ ಉಲ್ಲಂಘನೆ' ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ...

10 ಲಕ್ಷ ರೂ. ‘ಶಾಂತಿ ಉಲ್ಲಂಘನೆ’ ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ ಕೇಳಿದ ನ್ಯಾಯಾಲಯ

ಈ "ಶಾಂತಿ ಉಲ್ಲಂಘನೆ" ನೋಟಿಸ್‌ಗಳನ್ನು ಬಡ ರೈತರಿಗೆ ಹೇಗೆ ನೀಡಲಾಗಿದೆ ಎಂದು ಫೆ. 2 ರೊಳಗೆ ವಿವರಿಸಲು ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

- Advertisement -
- Advertisement -

ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ‍್ಯಾಲಿಯ ಹಿಂದಿನ ದಿನ ಉತ್ತರಪ್ರದೇಶ ಸರ್ಕಾರವು ಅಲ್ಲಿನ ರೈತರಿಗೆ ‘ವಿಚಿತ್ರ’ ನೋಟಿಸ್‌ಗಳನ್ನು ನೀಡಿದೆ. ‘ರೈತರು ಶಾಂತಿ ಉಲ್ಲಂಘನೆಯ ಮಾಡುವ ಸಾಧ್ಯತೆ’ ಇರುವುದರಿಂದ, 50 ಸಾವಿರದಿಂದ 10 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್‌ಗಳನ್ನು ಸಲ್ಲಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ “ಶಾಂತಿ ಉಲ್ಲಂಘನೆ” ನೋಟಿಸ್‌ಗಳನ್ನು ಬಡ ರೈತರಿಗೆ ಹೇಗೆ ನೀಡಲಾಗಿದೆ ಎಂಬುದನ್ನು ಫೆಬ್ರವರಿ 2 ರೊಳಗೆ ವಿವರಿಸಲು ಅಲಹಾಬಾದ್ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕೇಳಿದೆ.

ರಾಜಧಾನಿ ಲಕ್ನೋದಿಂದ 80 ಕಿ.ಮೀ ದೂರದಲ್ಲಿರುವ ಸೀತಾಪುರ ಜಿಲ್ಲೆಯ ಟ್ರಾಕ್ಟರ್ ಮಾಲೀಕತ್ವದ ರೈತರಿಗೆ ಜನವರಿ 19 ರಂದು ನೋಟಿಸ್ ನೀಡಲಾಗಿದೆ. ರೂ 50,000 ದಿಂದ ಗರಿಷ್ಠ ರೂ. 10 ಲಕ್ಷದವರೆಗಿನ ವೈಯಕ್ತಿಕ ಬಾಂಡ್‌ಗಳನ್ನು ಸಲ್ಲಿಸಲು ಮತ್ತು ಅದೇ ಮೊತ್ತದ ಶ್ಯೂರಿಟಿಗಳನ್ನು ನೀಡಬೇಕು ಎಂದು ನೊಟಿಸ್‌ನಲ್ಲಿ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ “ರೈತರು ಕಾನೂನು ಸುವ್ಯವಸ್ಥೆಯನ್ನು ಉಲ್ಲಂಘಿಸಬಹುದೆಂಬ ಆತಂಕದಲ್ಲಿ’ ಈ ನೋಟಿಸ್‌ಗಳನ್ನು ನೀಡಲಾಗಿದೆ.

ಇದರ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಅರುಂಧತಿ ಧುರು ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ಆಲಿಸಿತು. “ರಾಜ್ಯ ಸರ್ಕಾರದ ಅಧಿಕಾರಿಗಳು ಹೊರಡಿಸಿದ ನೋಟಿಸ್ ಆಧಾರ ರಹಿತವಾದುದು ಮಾತ್ರವಲ್ಲದೆ, ಒಬ್ಬ ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಏಕೆಂದರೆ ಪೊಲೀಸರು ತಮ್ಮ ಮನೆಗಳನ್ನು ಸುತ್ತುವರೆದಿರುವ ಕಾರಣ ರೈತರು ತಮ್ಮ ಮನೆಗಳಿಂದ ಹೊರಬರಲು ಇದು ಅವಕಾಶವನ್ನು ನಿರಾಕರಿಸುತ್ತದೆ’ ಎಂದು ದ್ವಿಸದಸ್ಯ ಪೀಠಕ್ಕೆ ಅರ್ಜಿದಾರರು ದೂರಿದ್ದರು.

‘ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿಗಳ ಮೌಲ್ಯ ತುಂಬ ಜಾಸ್ತಿಯಿದೆ ಮತ್ತು ಬಡ ರೈತರಿಂದ ಅದನ್ನು ಭರಿಸಲು ಸಾಧ್ಯವಿಲ್ಲ, ಅದೂ ಕೇವಲ ಸ್ಥಳೀಯ ಪೊಲೀಸ್ ಸಿಬ್ಬಂದಿಯ ವರದಿಯ ಆಧಾರದ ಮೇಲೆ ಮತ್ತು ರೈತರಿಗೆ ಪ್ರತಿಕ್ರಿಯಿಸಲು ಯಾವುದೇ ಅವಕಾಶವನ್ನು ನೀಡದೆ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಅರ್ಜಿದಾರರು ವಿವರಿಸಿದ್ದರು.

ಉಪ ವಿಭಾಗಾಧಿಕಾರಿ ಜಾರಿ ಮಾಡಿದ್ದ ಅಂತಹ ನೋಟಿಸ್ ಒಂದನ್ನು ಎನ್‌ಡಿಟಿವಿ ಪರಿಶೀಲಿಸಿದೆ. ಅದರಲ್ಲಿ, “ಕೃಷಿ ಮಸೂದೆಗಳ ವಿರುದ್ಧದ ಪ್ರತಿಭಟನೆಯ ವಿಷಯವಾಗಿ ಜನರ ನಡುವೆ ಆಂತರಿಕ ಸಂಘರ್ಷವಿದೆ, ಉದ್ವಿಗ್ನತೆ ಇದೆ. ಈ ಕಾರಣದಿಂದಾಗಿ, ಶಾಂತಿಯ ಉಲ್ಲಂಘನೆಯಾಗಬಹುದು. ಆದ್ದರಿಂದ, ನೋಟಿಸ್‌ಗಳ ಮೂಲಕ ಎರಡೂ ಬದಿಗಳನ್ನು ಹತೋಟಿಯಲ್ಲಿಡಲು ಇದು ಅವಶ್ಯಕ. ತಪ್ಪು ಮಾಡಿದರೆ ಬಂಧಿಸಲು ಅವಶ್ಯಕ” ಎಂದು ಬರೆಯಲಾಗಿದೆ.

10 ರೈತರಿಗೆ ಈ ನೋಟಿಸ್ ನೀಡಲಾಗಿದ್ದು, ಎರಡು ದಿನಗಳಲ್ಲಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಲು ಮತ್ತು ವೈಯಕ್ತಿಕ ಬಾಂಡ್‌ಗಳಿಗೆ ತಾವೇಕೆ ಸಹಿ ಹಾಕುವುದಿಲ್ಲ ಎಂಬುದನ್ನು ವಿವರಿಸುವಂತೆಯೂ ಅದರಲ್ಲಿ ಸೂಚಿಸಲಾಗಿದೆ.


ಇದನ್ನೂ ಓದಿ: ಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ – ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...