Homeಮುಖಪುಟ10 ಲಕ್ಷ ರೂ. ‘ಶಾಂತಿ ಉಲ್ಲಂಘನೆ' ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ...

10 ಲಕ್ಷ ರೂ. ‘ಶಾಂತಿ ಉಲ್ಲಂಘನೆ’ ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ ಕೇಳಿದ ನ್ಯಾಯಾಲಯ

ಈ "ಶಾಂತಿ ಉಲ್ಲಂಘನೆ" ನೋಟಿಸ್‌ಗಳನ್ನು ಬಡ ರೈತರಿಗೆ ಹೇಗೆ ನೀಡಲಾಗಿದೆ ಎಂದು ಫೆ. 2 ರೊಳಗೆ ವಿವರಿಸಲು ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

- Advertisement -
- Advertisement -

ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ‍್ಯಾಲಿಯ ಹಿಂದಿನ ದಿನ ಉತ್ತರಪ್ರದೇಶ ಸರ್ಕಾರವು ಅಲ್ಲಿನ ರೈತರಿಗೆ ‘ವಿಚಿತ್ರ’ ನೋಟಿಸ್‌ಗಳನ್ನು ನೀಡಿದೆ. ‘ರೈತರು ಶಾಂತಿ ಉಲ್ಲಂಘನೆಯ ಮಾಡುವ ಸಾಧ್ಯತೆ’ ಇರುವುದರಿಂದ, 50 ಸಾವಿರದಿಂದ 10 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್‌ಗಳನ್ನು ಸಲ್ಲಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ “ಶಾಂತಿ ಉಲ್ಲಂಘನೆ” ನೋಟಿಸ್‌ಗಳನ್ನು ಬಡ ರೈತರಿಗೆ ಹೇಗೆ ನೀಡಲಾಗಿದೆ ಎಂಬುದನ್ನು ಫೆಬ್ರವರಿ 2 ರೊಳಗೆ ವಿವರಿಸಲು ಅಲಹಾಬಾದ್ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕೇಳಿದೆ.

ರಾಜಧಾನಿ ಲಕ್ನೋದಿಂದ 80 ಕಿ.ಮೀ ದೂರದಲ್ಲಿರುವ ಸೀತಾಪುರ ಜಿಲ್ಲೆಯ ಟ್ರಾಕ್ಟರ್ ಮಾಲೀಕತ್ವದ ರೈತರಿಗೆ ಜನವರಿ 19 ರಂದು ನೋಟಿಸ್ ನೀಡಲಾಗಿದೆ. ರೂ 50,000 ದಿಂದ ಗರಿಷ್ಠ ರೂ. 10 ಲಕ್ಷದವರೆಗಿನ ವೈಯಕ್ತಿಕ ಬಾಂಡ್‌ಗಳನ್ನು ಸಲ್ಲಿಸಲು ಮತ್ತು ಅದೇ ಮೊತ್ತದ ಶ್ಯೂರಿಟಿಗಳನ್ನು ನೀಡಬೇಕು ಎಂದು ನೊಟಿಸ್‌ನಲ್ಲಿ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ “ರೈತರು ಕಾನೂನು ಸುವ್ಯವಸ್ಥೆಯನ್ನು ಉಲ್ಲಂಘಿಸಬಹುದೆಂಬ ಆತಂಕದಲ್ಲಿ’ ಈ ನೋಟಿಸ್‌ಗಳನ್ನು ನೀಡಲಾಗಿದೆ.

ಇದರ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಅರುಂಧತಿ ಧುರು ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ಆಲಿಸಿತು. “ರಾಜ್ಯ ಸರ್ಕಾರದ ಅಧಿಕಾರಿಗಳು ಹೊರಡಿಸಿದ ನೋಟಿಸ್ ಆಧಾರ ರಹಿತವಾದುದು ಮಾತ್ರವಲ್ಲದೆ, ಒಬ್ಬ ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಏಕೆಂದರೆ ಪೊಲೀಸರು ತಮ್ಮ ಮನೆಗಳನ್ನು ಸುತ್ತುವರೆದಿರುವ ಕಾರಣ ರೈತರು ತಮ್ಮ ಮನೆಗಳಿಂದ ಹೊರಬರಲು ಇದು ಅವಕಾಶವನ್ನು ನಿರಾಕರಿಸುತ್ತದೆ’ ಎಂದು ದ್ವಿಸದಸ್ಯ ಪೀಠಕ್ಕೆ ಅರ್ಜಿದಾರರು ದೂರಿದ್ದರು.

‘ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿಗಳ ಮೌಲ್ಯ ತುಂಬ ಜಾಸ್ತಿಯಿದೆ ಮತ್ತು ಬಡ ರೈತರಿಂದ ಅದನ್ನು ಭರಿಸಲು ಸಾಧ್ಯವಿಲ್ಲ, ಅದೂ ಕೇವಲ ಸ್ಥಳೀಯ ಪೊಲೀಸ್ ಸಿಬ್ಬಂದಿಯ ವರದಿಯ ಆಧಾರದ ಮೇಲೆ ಮತ್ತು ರೈತರಿಗೆ ಪ್ರತಿಕ್ರಿಯಿಸಲು ಯಾವುದೇ ಅವಕಾಶವನ್ನು ನೀಡದೆ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಅರ್ಜಿದಾರರು ವಿವರಿಸಿದ್ದರು.

ಉಪ ವಿಭಾಗಾಧಿಕಾರಿ ಜಾರಿ ಮಾಡಿದ್ದ ಅಂತಹ ನೋಟಿಸ್ ಒಂದನ್ನು ಎನ್‌ಡಿಟಿವಿ ಪರಿಶೀಲಿಸಿದೆ. ಅದರಲ್ಲಿ, “ಕೃಷಿ ಮಸೂದೆಗಳ ವಿರುದ್ಧದ ಪ್ರತಿಭಟನೆಯ ವಿಷಯವಾಗಿ ಜನರ ನಡುವೆ ಆಂತರಿಕ ಸಂಘರ್ಷವಿದೆ, ಉದ್ವಿಗ್ನತೆ ಇದೆ. ಈ ಕಾರಣದಿಂದಾಗಿ, ಶಾಂತಿಯ ಉಲ್ಲಂಘನೆಯಾಗಬಹುದು. ಆದ್ದರಿಂದ, ನೋಟಿಸ್‌ಗಳ ಮೂಲಕ ಎರಡೂ ಬದಿಗಳನ್ನು ಹತೋಟಿಯಲ್ಲಿಡಲು ಇದು ಅವಶ್ಯಕ. ತಪ್ಪು ಮಾಡಿದರೆ ಬಂಧಿಸಲು ಅವಶ್ಯಕ” ಎಂದು ಬರೆಯಲಾಗಿದೆ.

10 ರೈತರಿಗೆ ಈ ನೋಟಿಸ್ ನೀಡಲಾಗಿದ್ದು, ಎರಡು ದಿನಗಳಲ್ಲಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಲು ಮತ್ತು ವೈಯಕ್ತಿಕ ಬಾಂಡ್‌ಗಳಿಗೆ ತಾವೇಕೆ ಸಹಿ ಹಾಕುವುದಿಲ್ಲ ಎಂಬುದನ್ನು ವಿವರಿಸುವಂತೆಯೂ ಅದರಲ್ಲಿ ಸೂಚಿಸಲಾಗಿದೆ.


ಇದನ್ನೂ ಓದಿ: ಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ – ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...