Homeಮುಖಪುಟ10 ಲಕ್ಷ ರೂ. ‘ಶಾಂತಿ ಉಲ್ಲಂಘನೆ' ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ...

10 ಲಕ್ಷ ರೂ. ‘ಶಾಂತಿ ಉಲ್ಲಂಘನೆ’ ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ ಕೇಳಿದ ನ್ಯಾಯಾಲಯ

ಈ "ಶಾಂತಿ ಉಲ್ಲಂಘನೆ" ನೋಟಿಸ್‌ಗಳನ್ನು ಬಡ ರೈತರಿಗೆ ಹೇಗೆ ನೀಡಲಾಗಿದೆ ಎಂದು ಫೆ. 2 ರೊಳಗೆ ವಿವರಿಸಲು ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

- Advertisement -
- Advertisement -

ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ‍್ಯಾಲಿಯ ಹಿಂದಿನ ದಿನ ಉತ್ತರಪ್ರದೇಶ ಸರ್ಕಾರವು ಅಲ್ಲಿನ ರೈತರಿಗೆ ‘ವಿಚಿತ್ರ’ ನೋಟಿಸ್‌ಗಳನ್ನು ನೀಡಿದೆ. ‘ರೈತರು ಶಾಂತಿ ಉಲ್ಲಂಘನೆಯ ಮಾಡುವ ಸಾಧ್ಯತೆ’ ಇರುವುದರಿಂದ, 50 ಸಾವಿರದಿಂದ 10 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್‌ಗಳನ್ನು ಸಲ್ಲಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ “ಶಾಂತಿ ಉಲ್ಲಂಘನೆ” ನೋಟಿಸ್‌ಗಳನ್ನು ಬಡ ರೈತರಿಗೆ ಹೇಗೆ ನೀಡಲಾಗಿದೆ ಎಂಬುದನ್ನು ಫೆಬ್ರವರಿ 2 ರೊಳಗೆ ವಿವರಿಸಲು ಅಲಹಾಬಾದ್ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕೇಳಿದೆ.

ರಾಜಧಾನಿ ಲಕ್ನೋದಿಂದ 80 ಕಿ.ಮೀ ದೂರದಲ್ಲಿರುವ ಸೀತಾಪುರ ಜಿಲ್ಲೆಯ ಟ್ರಾಕ್ಟರ್ ಮಾಲೀಕತ್ವದ ರೈತರಿಗೆ ಜನವರಿ 19 ರಂದು ನೋಟಿಸ್ ನೀಡಲಾಗಿದೆ. ರೂ 50,000 ದಿಂದ ಗರಿಷ್ಠ ರೂ. 10 ಲಕ್ಷದವರೆಗಿನ ವೈಯಕ್ತಿಕ ಬಾಂಡ್‌ಗಳನ್ನು ಸಲ್ಲಿಸಲು ಮತ್ತು ಅದೇ ಮೊತ್ತದ ಶ್ಯೂರಿಟಿಗಳನ್ನು ನೀಡಬೇಕು ಎಂದು ನೊಟಿಸ್‌ನಲ್ಲಿ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ “ರೈತರು ಕಾನೂನು ಸುವ್ಯವಸ್ಥೆಯನ್ನು ಉಲ್ಲಂಘಿಸಬಹುದೆಂಬ ಆತಂಕದಲ್ಲಿ’ ಈ ನೋಟಿಸ್‌ಗಳನ್ನು ನೀಡಲಾಗಿದೆ.

ಇದರ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಅರುಂಧತಿ ಧುರು ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ಆಲಿಸಿತು. “ರಾಜ್ಯ ಸರ್ಕಾರದ ಅಧಿಕಾರಿಗಳು ಹೊರಡಿಸಿದ ನೋಟಿಸ್ ಆಧಾರ ರಹಿತವಾದುದು ಮಾತ್ರವಲ್ಲದೆ, ಒಬ್ಬ ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಏಕೆಂದರೆ ಪೊಲೀಸರು ತಮ್ಮ ಮನೆಗಳನ್ನು ಸುತ್ತುವರೆದಿರುವ ಕಾರಣ ರೈತರು ತಮ್ಮ ಮನೆಗಳಿಂದ ಹೊರಬರಲು ಇದು ಅವಕಾಶವನ್ನು ನಿರಾಕರಿಸುತ್ತದೆ’ ಎಂದು ದ್ವಿಸದಸ್ಯ ಪೀಠಕ್ಕೆ ಅರ್ಜಿದಾರರು ದೂರಿದ್ದರು.

‘ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿಗಳ ಮೌಲ್ಯ ತುಂಬ ಜಾಸ್ತಿಯಿದೆ ಮತ್ತು ಬಡ ರೈತರಿಂದ ಅದನ್ನು ಭರಿಸಲು ಸಾಧ್ಯವಿಲ್ಲ, ಅದೂ ಕೇವಲ ಸ್ಥಳೀಯ ಪೊಲೀಸ್ ಸಿಬ್ಬಂದಿಯ ವರದಿಯ ಆಧಾರದ ಮೇಲೆ ಮತ್ತು ರೈತರಿಗೆ ಪ್ರತಿಕ್ರಿಯಿಸಲು ಯಾವುದೇ ಅವಕಾಶವನ್ನು ನೀಡದೆ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಅರ್ಜಿದಾರರು ವಿವರಿಸಿದ್ದರು.

ಉಪ ವಿಭಾಗಾಧಿಕಾರಿ ಜಾರಿ ಮಾಡಿದ್ದ ಅಂತಹ ನೋಟಿಸ್ ಒಂದನ್ನು ಎನ್‌ಡಿಟಿವಿ ಪರಿಶೀಲಿಸಿದೆ. ಅದರಲ್ಲಿ, “ಕೃಷಿ ಮಸೂದೆಗಳ ವಿರುದ್ಧದ ಪ್ರತಿಭಟನೆಯ ವಿಷಯವಾಗಿ ಜನರ ನಡುವೆ ಆಂತರಿಕ ಸಂಘರ್ಷವಿದೆ, ಉದ್ವಿಗ್ನತೆ ಇದೆ. ಈ ಕಾರಣದಿಂದಾಗಿ, ಶಾಂತಿಯ ಉಲ್ಲಂಘನೆಯಾಗಬಹುದು. ಆದ್ದರಿಂದ, ನೋಟಿಸ್‌ಗಳ ಮೂಲಕ ಎರಡೂ ಬದಿಗಳನ್ನು ಹತೋಟಿಯಲ್ಲಿಡಲು ಇದು ಅವಶ್ಯಕ. ತಪ್ಪು ಮಾಡಿದರೆ ಬಂಧಿಸಲು ಅವಶ್ಯಕ” ಎಂದು ಬರೆಯಲಾಗಿದೆ.

10 ರೈತರಿಗೆ ಈ ನೋಟಿಸ್ ನೀಡಲಾಗಿದ್ದು, ಎರಡು ದಿನಗಳಲ್ಲಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಲು ಮತ್ತು ವೈಯಕ್ತಿಕ ಬಾಂಡ್‌ಗಳಿಗೆ ತಾವೇಕೆ ಸಹಿ ಹಾಕುವುದಿಲ್ಲ ಎಂಬುದನ್ನು ವಿವರಿಸುವಂತೆಯೂ ಅದರಲ್ಲಿ ಸೂಚಿಸಲಾಗಿದೆ.


ಇದನ್ನೂ ಓದಿ: ಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ – ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...