Homeಮುಖಪುಟಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

ಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

- Advertisement -
- Advertisement -

ನಾವು ಪ್ರತಿದಿನ ಆಹಾರದಲ್ಲಿ, ಸೌಂದರ್ಯವರ್ಧಕವಾಗಿ ಬಳಸೋ ಜೇನುತುಪ್ಪವನ್ನು ಶುದ್ಧ ಜೇನುತುಪ್ಪ ಎಂದೇ ಬಳಸಿರುತ್ತೇವೆ. ಅದರಲ್ಲೂ ಆರ್ಯುವೇದ ಕಂಪನಿಯ ಜೇನುತುಪ್ಪ ಎಂದರೇ ಪರಿಶುದ್ಧ ಎನ್ನುವ ನಮ್ಮ ಭ್ರಮೆಯನ್ನು ಕಳಚುವ ಕೆಲಸ ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ (ಸಿಎಸ್‌ಇ) ಮಾಡಿದೆ.

ಹೌದು, ದೊಡ್ಡ ದೊಡ್ಡ ಕಂಪನಿಗಳ ಜೇನುತುಪ್ಪ ಕಳಪೆ ಗುಣಮಟ್ಟದ್ದಾಗಿವೆ ಎಂದು ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ​ ವರದಿ ನೀಡಿದೆ. ಭಾರತದ ಮಾರುಕಟ್ಟೆಯಲ್ಲಿ ಲಭ್ಯ ಇರುವ ಜೇನುತುಪ್ಪ ಬ್ರ್ಯಾಂಡ್‌ಗಳಲ್ಲಿ ಹೆಚ್ಚಿನವು ಕಲಬೆರಕೆ ಜೇನನ್ನು ಗ್ರಾಹಕರಿಗೆ ಮಾರುತ್ತಿವೆ ಎಂಬ ಅಂಶ ಸಿಎಸ್‌ಇ ನಡೆಸಿರುವ ಅಧ್ಯಯನದಲ್ಲಿ ಬಹಿರಂಗವಾಗಿದೆ.

ದೇಶದ ಮಾರುಕಟ್ಟೆಗಳಿಂದ 13 ಜೇನುತುಪ್ಪದ ವಿವಿಧ ಬ್ರಾಂಡ್‌ಗಳ ಮೇಲೆ ನಡೆಸಿದ ತನಿಖೆಯನ್ನು ವರದಿ ಉಲ್ಲೇಖಿಸಿದೆ. ಚೀನಾದಲ್ಲಿ ತಯಾರಾಗುವ ವಿಶೇಷ ರೀತಿಯ ಸಕ್ಕರೆ ಪಾಕವನ್ನು ಜೇನಿಗೆ ಬೆರೆಸಿ ಮಾರಾಟ ಮಾಡಲಾಗುತ್ತಿದೆ ಎಂಬ ಅಂಶವು ಈ ಅಧ್ಯಯನದಿಂದ ತಿಳಿದು ಬಂದಿದ್ದು, ಗುಜರಾತ್‌ನಲ್ಲಿರುವ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿಯ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು.

ಜೇನಿನ ಹಲವು ಆರೋಗ್ಯಲಾಭಗಳ ಬಗ್ಗೆ ಅಗತ್ಯವಾಗಿ ತಿಳಿದುಕೊಳ್ಳಿ | Vartha Bharati- ವಾರ್ತಾ ಭಾರತಿ

ಇದನ್ನೂಓದಿ: ರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ಈ 13 ದೊಡ್ಡ ದೊಡ್ಡ ಕಂಪನಿಯ ಜೇನುತುಪ್ಪಗಳಲ್ಲಿ ಕೇವಲ ಮೂರೇ ಮೂರೇ ಕಂಪನಿಯ ಜೇನುತುಪ್ಪ ಮಾತ್ರ ಗುಣಮಟ್ಟದ ಟೆಸ್ಟ್‌ನಲ್ಲಿ ಪಾಸ್​ ಆಗಿವೆ. ಉಳಿದ 10 ಕಂಪನಿಗಳು ಕಲಬೆರಕೆಯ ಜೇನು ಮಾರಾಟ ಮಾಡುತ್ತಿವೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಿಎಸ್ಇ ಆಹಾರ ಸಂಶೋಧಕರು ಡಾಬರ್, ಪತಂಜಲಿ, ಬೈದ್ಯನಾಥ್, ಇಮಾಮಿ ಮತ್ತು ಝಂಡು ಸೇರಿದಂತೆ 13 ಬ್ರಾಂಡ್‌ಗಳ ಜೇನುತುಪ್ಪವನ್ನು ಆಯ್ಕೆ ಮಾಡಿ, ಅವುಗಳನ್ನು ಜೇನುತುಪ್ಪ ಎಂದು ಲೇಬಲ್ ಮಾಡಲು ರಾಷ್ಟ್ರೀಯ ಆಹಾರ ನಿಯಂತ್ರಣ ಕಾನೂನುಗಳ ಅಡಿಯಲ್ಲಿ ಅಗತ್ಯವಿರುವ 18 ಪರೀಕ್ಷೆಗಳಿಗೆ ಒಳಪಡಿಸಿದ್ದಾರೆ.

ಈ ವರದಿಗೆ ಸುಮ್ಮನಾಗದ ಸಿಎಸ್‌ಇ, ಜರ್ಮನಿಯ ಪ್ರಯೋಗಾಲಯವೊಂದರಲ್ಲಿ ಮುಂದುವರಿದ ದೇಶಗಳಲ್ಲಿ ಜೇನಿನ ಪರಿಶುದ್ಧತೆ ಪರಿಶೀಲನೆಗೆ ಬಳಸಲಾಗುವ ನ್ಯೂಕ್ಲಿಯರ್‌ ಮ್ಯಾಗ್ನೆಟಿಕ್‌ ರೆಸೊನೆನ್ಸ್‌ (ಎನ್‌ಎಂಆರ್‌) ಪರೀಕ್ಷೆಗೂ ಒಳಪಡಿಸಲು ನಿರ್ಧರಿಸಿತು. ಅಲ್ಲಿ ನಡೆದ ಪರೀಕ್ಷೆಯಲ್ಲೂ 13 ಬ್ರ್ಯಾಂಡ್‌ಗಳ ಪೈಕಿ 10 ಬ್ರ್ಯಾಂಡ್‌ಗಳ ಜೇನು ಶುದ್ಧವಲ್ಲ ಎಂಬ ರಿಸಲ್ಟ್ ಬಂದಿದೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ (ಎರಡು ಮಾದರಿಗಳಲ್ಲಿ ಒಂದು) ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

“ನಾವು ಕೊರೊನಾ ಸಾಂಕ್ರಾಮಿಕದ ರೋಗದ ವಿರುದ್ಧ ಹೋರಾಡಲು, ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂಬ ಕಾರಣಕ್ಕಾಗಿ ಜೇನುತುಪ್ಪವನ್ನು ಸೇವಿಸುತ್ತಿದ್ದೇವೆ. ಆದರೆ, ಸಕ್ಕರೆಯೊಂದಿಗೆ ಕಲಬೆರಕೆ ಮಾಡಿದ ಜೇನುತುಪ್ಪವು ಆರೋಗ್ಯಕ್ಕೆ ಉತ್ತಮವಲ್ಲ ಎಂದು ಸಿಎಸ್‌ಇ ಪ್ರಧಾನ ನಿರ್ದೇಶಕಿ ಸುನಿತಾ ನಾರಾಯಣ್ ಮಾಹಿತಿ ನೀಡಿದ್ದಾರೆ.

ಕಳೆದ ಜೂನ್​ ಮತ್ತು ಸೆಪ್ಟೆಂಬರ್​ ಅವಧಿಯಲ್ಲಿ ವಿಶ್ವದಾದ್ಯಂತಾ ಅತಿಹೆಚ್ಚಿನ ಸಂಖ್ಯೆಯಲ್ಲಿ ಜೇನುತುಪ್ಪ ಮಾರಾಟವಾಗಿವೆ. ಆದರೆ ಸಂಸ್ಥೆಯ ಈ ವರದಿಯನ್ನು ಕಂಪನಿಗಳು ತಳ್ಳಿಹಾಕಿವೆ.

ಝಂಡು ಶುದ್ಧ ಹನಿ ತಯಾರಕ, ಇಮಾಮಿ ಕಂಪನಿಗಳು, “ನಮ್ಮ ಜೇನುತುಪ್ಪವು ಭಾರತ ಸರ್ಕಾರ ಮತ್ತು ಅದರ ಅಧಿಕೃತ ಸಂಸ್ಥೆಗಳಾದ ಎಫ್‌ಎಸ್‌ಎಸ್‌ಎಐನಂತಹ ಎಲ್ಲಾ ಪ್ರೋಟೋಕಾಲ್ಗಳು ಮತ್ತು ಗುಣಮಟ್ಟದ  ಮಾನದಂಡಗಳಿಗೆ ಅನುಗುಣವಾಗಿವೆ” ಎಂದು ಹೇಳಿವೆ.


ಇದನ್ನೂ ಓದಿ: ‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...