Homeಮುಖಪುಟಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

ಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

- Advertisement -
- Advertisement -

ನಾವು ಪ್ರತಿದಿನ ಆಹಾರದಲ್ಲಿ, ಸೌಂದರ್ಯವರ್ಧಕವಾಗಿ ಬಳಸೋ ಜೇನುತುಪ್ಪವನ್ನು ಶುದ್ಧ ಜೇನುತುಪ್ಪ ಎಂದೇ ಬಳಸಿರುತ್ತೇವೆ. ಅದರಲ್ಲೂ ಆರ್ಯುವೇದ ಕಂಪನಿಯ ಜೇನುತುಪ್ಪ ಎಂದರೇ ಪರಿಶುದ್ಧ ಎನ್ನುವ ನಮ್ಮ ಭ್ರಮೆಯನ್ನು ಕಳಚುವ ಕೆಲಸ ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ (ಸಿಎಸ್‌ಇ) ಮಾಡಿದೆ.

ಹೌದು, ದೊಡ್ಡ ದೊಡ್ಡ ಕಂಪನಿಗಳ ಜೇನುತುಪ್ಪ ಕಳಪೆ ಗುಣಮಟ್ಟದ್ದಾಗಿವೆ ಎಂದು ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ​ ವರದಿ ನೀಡಿದೆ. ಭಾರತದ ಮಾರುಕಟ್ಟೆಯಲ್ಲಿ ಲಭ್ಯ ಇರುವ ಜೇನುತುಪ್ಪ ಬ್ರ್ಯಾಂಡ್‌ಗಳಲ್ಲಿ ಹೆಚ್ಚಿನವು ಕಲಬೆರಕೆ ಜೇನನ್ನು ಗ್ರಾಹಕರಿಗೆ ಮಾರುತ್ತಿವೆ ಎಂಬ ಅಂಶ ಸಿಎಸ್‌ಇ ನಡೆಸಿರುವ ಅಧ್ಯಯನದಲ್ಲಿ ಬಹಿರಂಗವಾಗಿದೆ.

ದೇಶದ ಮಾರುಕಟ್ಟೆಗಳಿಂದ 13 ಜೇನುತುಪ್ಪದ ವಿವಿಧ ಬ್ರಾಂಡ್‌ಗಳ ಮೇಲೆ ನಡೆಸಿದ ತನಿಖೆಯನ್ನು ವರದಿ ಉಲ್ಲೇಖಿಸಿದೆ. ಚೀನಾದಲ್ಲಿ ತಯಾರಾಗುವ ವಿಶೇಷ ರೀತಿಯ ಸಕ್ಕರೆ ಪಾಕವನ್ನು ಜೇನಿಗೆ ಬೆರೆಸಿ ಮಾರಾಟ ಮಾಡಲಾಗುತ್ತಿದೆ ಎಂಬ ಅಂಶವು ಈ ಅಧ್ಯಯನದಿಂದ ತಿಳಿದು ಬಂದಿದ್ದು, ಗುಜರಾತ್‌ನಲ್ಲಿರುವ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿಯ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು.

ಜೇನಿನ ಹಲವು ಆರೋಗ್ಯಲಾಭಗಳ ಬಗ್ಗೆ ಅಗತ್ಯವಾಗಿ ತಿಳಿದುಕೊಳ್ಳಿ | Vartha Bharati- ವಾರ್ತಾ ಭಾರತಿ

ಇದನ್ನೂಓದಿ: ರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ಈ 13 ದೊಡ್ಡ ದೊಡ್ಡ ಕಂಪನಿಯ ಜೇನುತುಪ್ಪಗಳಲ್ಲಿ ಕೇವಲ ಮೂರೇ ಮೂರೇ ಕಂಪನಿಯ ಜೇನುತುಪ್ಪ ಮಾತ್ರ ಗುಣಮಟ್ಟದ ಟೆಸ್ಟ್‌ನಲ್ಲಿ ಪಾಸ್​ ಆಗಿವೆ. ಉಳಿದ 10 ಕಂಪನಿಗಳು ಕಲಬೆರಕೆಯ ಜೇನು ಮಾರಾಟ ಮಾಡುತ್ತಿವೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಿಎಸ್ಇ ಆಹಾರ ಸಂಶೋಧಕರು ಡಾಬರ್, ಪತಂಜಲಿ, ಬೈದ್ಯನಾಥ್, ಇಮಾಮಿ ಮತ್ತು ಝಂಡು ಸೇರಿದಂತೆ 13 ಬ್ರಾಂಡ್‌ಗಳ ಜೇನುತುಪ್ಪವನ್ನು ಆಯ್ಕೆ ಮಾಡಿ, ಅವುಗಳನ್ನು ಜೇನುತುಪ್ಪ ಎಂದು ಲೇಬಲ್ ಮಾಡಲು ರಾಷ್ಟ್ರೀಯ ಆಹಾರ ನಿಯಂತ್ರಣ ಕಾನೂನುಗಳ ಅಡಿಯಲ್ಲಿ ಅಗತ್ಯವಿರುವ 18 ಪರೀಕ್ಷೆಗಳಿಗೆ ಒಳಪಡಿಸಿದ್ದಾರೆ.

ಈ ವರದಿಗೆ ಸುಮ್ಮನಾಗದ ಸಿಎಸ್‌ಇ, ಜರ್ಮನಿಯ ಪ್ರಯೋಗಾಲಯವೊಂದರಲ್ಲಿ ಮುಂದುವರಿದ ದೇಶಗಳಲ್ಲಿ ಜೇನಿನ ಪರಿಶುದ್ಧತೆ ಪರಿಶೀಲನೆಗೆ ಬಳಸಲಾಗುವ ನ್ಯೂಕ್ಲಿಯರ್‌ ಮ್ಯಾಗ್ನೆಟಿಕ್‌ ರೆಸೊನೆನ್ಸ್‌ (ಎನ್‌ಎಂಆರ್‌) ಪರೀಕ್ಷೆಗೂ ಒಳಪಡಿಸಲು ನಿರ್ಧರಿಸಿತು. ಅಲ್ಲಿ ನಡೆದ ಪರೀಕ್ಷೆಯಲ್ಲೂ 13 ಬ್ರ್ಯಾಂಡ್‌ಗಳ ಪೈಕಿ 10 ಬ್ರ್ಯಾಂಡ್‌ಗಳ ಜೇನು ಶುದ್ಧವಲ್ಲ ಎಂಬ ರಿಸಲ್ಟ್ ಬಂದಿದೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ (ಎರಡು ಮಾದರಿಗಳಲ್ಲಿ ಒಂದು) ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

“ನಾವು ಕೊರೊನಾ ಸಾಂಕ್ರಾಮಿಕದ ರೋಗದ ವಿರುದ್ಧ ಹೋರಾಡಲು, ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂಬ ಕಾರಣಕ್ಕಾಗಿ ಜೇನುತುಪ್ಪವನ್ನು ಸೇವಿಸುತ್ತಿದ್ದೇವೆ. ಆದರೆ, ಸಕ್ಕರೆಯೊಂದಿಗೆ ಕಲಬೆರಕೆ ಮಾಡಿದ ಜೇನುತುಪ್ಪವು ಆರೋಗ್ಯಕ್ಕೆ ಉತ್ತಮವಲ್ಲ ಎಂದು ಸಿಎಸ್‌ಇ ಪ್ರಧಾನ ನಿರ್ದೇಶಕಿ ಸುನಿತಾ ನಾರಾಯಣ್ ಮಾಹಿತಿ ನೀಡಿದ್ದಾರೆ.

ಕಳೆದ ಜೂನ್​ ಮತ್ತು ಸೆಪ್ಟೆಂಬರ್​ ಅವಧಿಯಲ್ಲಿ ವಿಶ್ವದಾದ್ಯಂತಾ ಅತಿಹೆಚ್ಚಿನ ಸಂಖ್ಯೆಯಲ್ಲಿ ಜೇನುತುಪ್ಪ ಮಾರಾಟವಾಗಿವೆ. ಆದರೆ ಸಂಸ್ಥೆಯ ಈ ವರದಿಯನ್ನು ಕಂಪನಿಗಳು ತಳ್ಳಿಹಾಕಿವೆ.

ಝಂಡು ಶುದ್ಧ ಹನಿ ತಯಾರಕ, ಇಮಾಮಿ ಕಂಪನಿಗಳು, “ನಮ್ಮ ಜೇನುತುಪ್ಪವು ಭಾರತ ಸರ್ಕಾರ ಮತ್ತು ಅದರ ಅಧಿಕೃತ ಸಂಸ್ಥೆಗಳಾದ ಎಫ್‌ಎಸ್‌ಎಸ್‌ಎಐನಂತಹ ಎಲ್ಲಾ ಪ್ರೋಟೋಕಾಲ್ಗಳು ಮತ್ತು ಗುಣಮಟ್ಟದ  ಮಾನದಂಡಗಳಿಗೆ ಅನುಗುಣವಾಗಿವೆ” ಎಂದು ಹೇಳಿವೆ.


ಇದನ್ನೂ ಓದಿ: ‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...