Homeಮುಖಪುಟಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

ಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

- Advertisement -
- Advertisement -

ನಾವು ಪ್ರತಿದಿನ ಆಹಾರದಲ್ಲಿ, ಸೌಂದರ್ಯವರ್ಧಕವಾಗಿ ಬಳಸೋ ಜೇನುತುಪ್ಪವನ್ನು ಶುದ್ಧ ಜೇನುತುಪ್ಪ ಎಂದೇ ಬಳಸಿರುತ್ತೇವೆ. ಅದರಲ್ಲೂ ಆರ್ಯುವೇದ ಕಂಪನಿಯ ಜೇನುತುಪ್ಪ ಎಂದರೇ ಪರಿಶುದ್ಧ ಎನ್ನುವ ನಮ್ಮ ಭ್ರಮೆಯನ್ನು ಕಳಚುವ ಕೆಲಸ ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ (ಸಿಎಸ್‌ಇ) ಮಾಡಿದೆ.

ಹೌದು, ದೊಡ್ಡ ದೊಡ್ಡ ಕಂಪನಿಗಳ ಜೇನುತುಪ್ಪ ಕಳಪೆ ಗುಣಮಟ್ಟದ್ದಾಗಿವೆ ಎಂದು ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ​ ವರದಿ ನೀಡಿದೆ. ಭಾರತದ ಮಾರುಕಟ್ಟೆಯಲ್ಲಿ ಲಭ್ಯ ಇರುವ ಜೇನುತುಪ್ಪ ಬ್ರ್ಯಾಂಡ್‌ಗಳಲ್ಲಿ ಹೆಚ್ಚಿನವು ಕಲಬೆರಕೆ ಜೇನನ್ನು ಗ್ರಾಹಕರಿಗೆ ಮಾರುತ್ತಿವೆ ಎಂಬ ಅಂಶ ಸಿಎಸ್‌ಇ ನಡೆಸಿರುವ ಅಧ್ಯಯನದಲ್ಲಿ ಬಹಿರಂಗವಾಗಿದೆ.

ದೇಶದ ಮಾರುಕಟ್ಟೆಗಳಿಂದ 13 ಜೇನುತುಪ್ಪದ ವಿವಿಧ ಬ್ರಾಂಡ್‌ಗಳ ಮೇಲೆ ನಡೆಸಿದ ತನಿಖೆಯನ್ನು ವರದಿ ಉಲ್ಲೇಖಿಸಿದೆ. ಚೀನಾದಲ್ಲಿ ತಯಾರಾಗುವ ವಿಶೇಷ ರೀತಿಯ ಸಕ್ಕರೆ ಪಾಕವನ್ನು ಜೇನಿಗೆ ಬೆರೆಸಿ ಮಾರಾಟ ಮಾಡಲಾಗುತ್ತಿದೆ ಎಂಬ ಅಂಶವು ಈ ಅಧ್ಯಯನದಿಂದ ತಿಳಿದು ಬಂದಿದ್ದು, ಗುಜರಾತ್‌ನಲ್ಲಿರುವ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿಯ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು.

ಜೇನಿನ ಹಲವು ಆರೋಗ್ಯಲಾಭಗಳ ಬಗ್ಗೆ ಅಗತ್ಯವಾಗಿ ತಿಳಿದುಕೊಳ್ಳಿ | Vartha Bharati- ವಾರ್ತಾ ಭಾರತಿ

ಇದನ್ನೂಓದಿ: ರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ಈ 13 ದೊಡ್ಡ ದೊಡ್ಡ ಕಂಪನಿಯ ಜೇನುತುಪ್ಪಗಳಲ್ಲಿ ಕೇವಲ ಮೂರೇ ಮೂರೇ ಕಂಪನಿಯ ಜೇನುತುಪ್ಪ ಮಾತ್ರ ಗುಣಮಟ್ಟದ ಟೆಸ್ಟ್‌ನಲ್ಲಿ ಪಾಸ್​ ಆಗಿವೆ. ಉಳಿದ 10 ಕಂಪನಿಗಳು ಕಲಬೆರಕೆಯ ಜೇನು ಮಾರಾಟ ಮಾಡುತ್ತಿವೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಿಎಸ್ಇ ಆಹಾರ ಸಂಶೋಧಕರು ಡಾಬರ್, ಪತಂಜಲಿ, ಬೈದ್ಯನಾಥ್, ಇಮಾಮಿ ಮತ್ತು ಝಂಡು ಸೇರಿದಂತೆ 13 ಬ್ರಾಂಡ್‌ಗಳ ಜೇನುತುಪ್ಪವನ್ನು ಆಯ್ಕೆ ಮಾಡಿ, ಅವುಗಳನ್ನು ಜೇನುತುಪ್ಪ ಎಂದು ಲೇಬಲ್ ಮಾಡಲು ರಾಷ್ಟ್ರೀಯ ಆಹಾರ ನಿಯಂತ್ರಣ ಕಾನೂನುಗಳ ಅಡಿಯಲ್ಲಿ ಅಗತ್ಯವಿರುವ 18 ಪರೀಕ್ಷೆಗಳಿಗೆ ಒಳಪಡಿಸಿದ್ದಾರೆ.

ಈ ವರದಿಗೆ ಸುಮ್ಮನಾಗದ ಸಿಎಸ್‌ಇ, ಜರ್ಮನಿಯ ಪ್ರಯೋಗಾಲಯವೊಂದರಲ್ಲಿ ಮುಂದುವರಿದ ದೇಶಗಳಲ್ಲಿ ಜೇನಿನ ಪರಿಶುದ್ಧತೆ ಪರಿಶೀಲನೆಗೆ ಬಳಸಲಾಗುವ ನ್ಯೂಕ್ಲಿಯರ್‌ ಮ್ಯಾಗ್ನೆಟಿಕ್‌ ರೆಸೊನೆನ್ಸ್‌ (ಎನ್‌ಎಂಆರ್‌) ಪರೀಕ್ಷೆಗೂ ಒಳಪಡಿಸಲು ನಿರ್ಧರಿಸಿತು. ಅಲ್ಲಿ ನಡೆದ ಪರೀಕ್ಷೆಯಲ್ಲೂ 13 ಬ್ರ್ಯಾಂಡ್‌ಗಳ ಪೈಕಿ 10 ಬ್ರ್ಯಾಂಡ್‌ಗಳ ಜೇನು ಶುದ್ಧವಲ್ಲ ಎಂಬ ರಿಸಲ್ಟ್ ಬಂದಿದೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ (ಎರಡು ಮಾದರಿಗಳಲ್ಲಿ ಒಂದು) ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

“ನಾವು ಕೊರೊನಾ ಸಾಂಕ್ರಾಮಿಕದ ರೋಗದ ವಿರುದ್ಧ ಹೋರಾಡಲು, ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂಬ ಕಾರಣಕ್ಕಾಗಿ ಜೇನುತುಪ್ಪವನ್ನು ಸೇವಿಸುತ್ತಿದ್ದೇವೆ. ಆದರೆ, ಸಕ್ಕರೆಯೊಂದಿಗೆ ಕಲಬೆರಕೆ ಮಾಡಿದ ಜೇನುತುಪ್ಪವು ಆರೋಗ್ಯಕ್ಕೆ ಉತ್ತಮವಲ್ಲ ಎಂದು ಸಿಎಸ್‌ಇ ಪ್ರಧಾನ ನಿರ್ದೇಶಕಿ ಸುನಿತಾ ನಾರಾಯಣ್ ಮಾಹಿತಿ ನೀಡಿದ್ದಾರೆ.

ಕಳೆದ ಜೂನ್​ ಮತ್ತು ಸೆಪ್ಟೆಂಬರ್​ ಅವಧಿಯಲ್ಲಿ ವಿಶ್ವದಾದ್ಯಂತಾ ಅತಿಹೆಚ್ಚಿನ ಸಂಖ್ಯೆಯಲ್ಲಿ ಜೇನುತುಪ್ಪ ಮಾರಾಟವಾಗಿವೆ. ಆದರೆ ಸಂಸ್ಥೆಯ ಈ ವರದಿಯನ್ನು ಕಂಪನಿಗಳು ತಳ್ಳಿಹಾಕಿವೆ.

ಝಂಡು ಶುದ್ಧ ಹನಿ ತಯಾರಕ, ಇಮಾಮಿ ಕಂಪನಿಗಳು, “ನಮ್ಮ ಜೇನುತುಪ್ಪವು ಭಾರತ ಸರ್ಕಾರ ಮತ್ತು ಅದರ ಅಧಿಕೃತ ಸಂಸ್ಥೆಗಳಾದ ಎಫ್‌ಎಸ್‌ಎಸ್‌ಎಐನಂತಹ ಎಲ್ಲಾ ಪ್ರೋಟೋಕಾಲ್ಗಳು ಮತ್ತು ಗುಣಮಟ್ಟದ  ಮಾನದಂಡಗಳಿಗೆ ಅನುಗುಣವಾಗಿವೆ” ಎಂದು ಹೇಳಿವೆ.


ಇದನ್ನೂ ಓದಿ: ‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...