Homeಮುಖಪುಟಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

ಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

- Advertisement -
- Advertisement -

ನಾವು ಪ್ರತಿದಿನ ಆಹಾರದಲ್ಲಿ, ಸೌಂದರ್ಯವರ್ಧಕವಾಗಿ ಬಳಸೋ ಜೇನುತುಪ್ಪವನ್ನು ಶುದ್ಧ ಜೇನುತುಪ್ಪ ಎಂದೇ ಬಳಸಿರುತ್ತೇವೆ. ಅದರಲ್ಲೂ ಆರ್ಯುವೇದ ಕಂಪನಿಯ ಜೇನುತುಪ್ಪ ಎಂದರೇ ಪರಿಶುದ್ಧ ಎನ್ನುವ ನಮ್ಮ ಭ್ರಮೆಯನ್ನು ಕಳಚುವ ಕೆಲಸ ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ (ಸಿಎಸ್‌ಇ) ಮಾಡಿದೆ.

ಹೌದು, ದೊಡ್ಡ ದೊಡ್ಡ ಕಂಪನಿಗಳ ಜೇನುತುಪ್ಪ ಕಳಪೆ ಗುಣಮಟ್ಟದ್ದಾಗಿವೆ ಎಂದು ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ​ ವರದಿ ನೀಡಿದೆ. ಭಾರತದ ಮಾರುಕಟ್ಟೆಯಲ್ಲಿ ಲಭ್ಯ ಇರುವ ಜೇನುತುಪ್ಪ ಬ್ರ್ಯಾಂಡ್‌ಗಳಲ್ಲಿ ಹೆಚ್ಚಿನವು ಕಲಬೆರಕೆ ಜೇನನ್ನು ಗ್ರಾಹಕರಿಗೆ ಮಾರುತ್ತಿವೆ ಎಂಬ ಅಂಶ ಸಿಎಸ್‌ಇ ನಡೆಸಿರುವ ಅಧ್ಯಯನದಲ್ಲಿ ಬಹಿರಂಗವಾಗಿದೆ.

ದೇಶದ ಮಾರುಕಟ್ಟೆಗಳಿಂದ 13 ಜೇನುತುಪ್ಪದ ವಿವಿಧ ಬ್ರಾಂಡ್‌ಗಳ ಮೇಲೆ ನಡೆಸಿದ ತನಿಖೆಯನ್ನು ವರದಿ ಉಲ್ಲೇಖಿಸಿದೆ. ಚೀನಾದಲ್ಲಿ ತಯಾರಾಗುವ ವಿಶೇಷ ರೀತಿಯ ಸಕ್ಕರೆ ಪಾಕವನ್ನು ಜೇನಿಗೆ ಬೆರೆಸಿ ಮಾರಾಟ ಮಾಡಲಾಗುತ್ತಿದೆ ಎಂಬ ಅಂಶವು ಈ ಅಧ್ಯಯನದಿಂದ ತಿಳಿದು ಬಂದಿದ್ದು, ಗುಜರಾತ್‌ನಲ್ಲಿರುವ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿಯ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು.

ಜೇನಿನ ಹಲವು ಆರೋಗ್ಯಲಾಭಗಳ ಬಗ್ಗೆ ಅಗತ್ಯವಾಗಿ ತಿಳಿದುಕೊಳ್ಳಿ | Vartha Bharati- ವಾರ್ತಾ ಭಾರತಿ

ಇದನ್ನೂಓದಿ: ರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ಈ 13 ದೊಡ್ಡ ದೊಡ್ಡ ಕಂಪನಿಯ ಜೇನುತುಪ್ಪಗಳಲ್ಲಿ ಕೇವಲ ಮೂರೇ ಮೂರೇ ಕಂಪನಿಯ ಜೇನುತುಪ್ಪ ಮಾತ್ರ ಗುಣಮಟ್ಟದ ಟೆಸ್ಟ್‌ನಲ್ಲಿ ಪಾಸ್​ ಆಗಿವೆ. ಉಳಿದ 10 ಕಂಪನಿಗಳು ಕಲಬೆರಕೆಯ ಜೇನು ಮಾರಾಟ ಮಾಡುತ್ತಿವೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಿಎಸ್ಇ ಆಹಾರ ಸಂಶೋಧಕರು ಡಾಬರ್, ಪತಂಜಲಿ, ಬೈದ್ಯನಾಥ್, ಇಮಾಮಿ ಮತ್ತು ಝಂಡು ಸೇರಿದಂತೆ 13 ಬ್ರಾಂಡ್‌ಗಳ ಜೇನುತುಪ್ಪವನ್ನು ಆಯ್ಕೆ ಮಾಡಿ, ಅವುಗಳನ್ನು ಜೇನುತುಪ್ಪ ಎಂದು ಲೇಬಲ್ ಮಾಡಲು ರಾಷ್ಟ್ರೀಯ ಆಹಾರ ನಿಯಂತ್ರಣ ಕಾನೂನುಗಳ ಅಡಿಯಲ್ಲಿ ಅಗತ್ಯವಿರುವ 18 ಪರೀಕ್ಷೆಗಳಿಗೆ ಒಳಪಡಿಸಿದ್ದಾರೆ.

ಈ ವರದಿಗೆ ಸುಮ್ಮನಾಗದ ಸಿಎಸ್‌ಇ, ಜರ್ಮನಿಯ ಪ್ರಯೋಗಾಲಯವೊಂದರಲ್ಲಿ ಮುಂದುವರಿದ ದೇಶಗಳಲ್ಲಿ ಜೇನಿನ ಪರಿಶುದ್ಧತೆ ಪರಿಶೀಲನೆಗೆ ಬಳಸಲಾಗುವ ನ್ಯೂಕ್ಲಿಯರ್‌ ಮ್ಯಾಗ್ನೆಟಿಕ್‌ ರೆಸೊನೆನ್ಸ್‌ (ಎನ್‌ಎಂಆರ್‌) ಪರೀಕ್ಷೆಗೂ ಒಳಪಡಿಸಲು ನಿರ್ಧರಿಸಿತು. ಅಲ್ಲಿ ನಡೆದ ಪರೀಕ್ಷೆಯಲ್ಲೂ 13 ಬ್ರ್ಯಾಂಡ್‌ಗಳ ಪೈಕಿ 10 ಬ್ರ್ಯಾಂಡ್‌ಗಳ ಜೇನು ಶುದ್ಧವಲ್ಲ ಎಂಬ ರಿಸಲ್ಟ್ ಬಂದಿದೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ (ಎರಡು ಮಾದರಿಗಳಲ್ಲಿ ಒಂದು) ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

“ನಾವು ಕೊರೊನಾ ಸಾಂಕ್ರಾಮಿಕದ ರೋಗದ ವಿರುದ್ಧ ಹೋರಾಡಲು, ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂಬ ಕಾರಣಕ್ಕಾಗಿ ಜೇನುತುಪ್ಪವನ್ನು ಸೇವಿಸುತ್ತಿದ್ದೇವೆ. ಆದರೆ, ಸಕ್ಕರೆಯೊಂದಿಗೆ ಕಲಬೆರಕೆ ಮಾಡಿದ ಜೇನುತುಪ್ಪವು ಆರೋಗ್ಯಕ್ಕೆ ಉತ್ತಮವಲ್ಲ ಎಂದು ಸಿಎಸ್‌ಇ ಪ್ರಧಾನ ನಿರ್ದೇಶಕಿ ಸುನಿತಾ ನಾರಾಯಣ್ ಮಾಹಿತಿ ನೀಡಿದ್ದಾರೆ.

ಕಳೆದ ಜೂನ್​ ಮತ್ತು ಸೆಪ್ಟೆಂಬರ್​ ಅವಧಿಯಲ್ಲಿ ವಿಶ್ವದಾದ್ಯಂತಾ ಅತಿಹೆಚ್ಚಿನ ಸಂಖ್ಯೆಯಲ್ಲಿ ಜೇನುತುಪ್ಪ ಮಾರಾಟವಾಗಿವೆ. ಆದರೆ ಸಂಸ್ಥೆಯ ಈ ವರದಿಯನ್ನು ಕಂಪನಿಗಳು ತಳ್ಳಿಹಾಕಿವೆ.

ಝಂಡು ಶುದ್ಧ ಹನಿ ತಯಾರಕ, ಇಮಾಮಿ ಕಂಪನಿಗಳು, “ನಮ್ಮ ಜೇನುತುಪ್ಪವು ಭಾರತ ಸರ್ಕಾರ ಮತ್ತು ಅದರ ಅಧಿಕೃತ ಸಂಸ್ಥೆಗಳಾದ ಎಫ್‌ಎಸ್‌ಎಸ್‌ಎಐನಂತಹ ಎಲ್ಲಾ ಪ್ರೋಟೋಕಾಲ್ಗಳು ಮತ್ತು ಗುಣಮಟ್ಟದ  ಮಾನದಂಡಗಳಿಗೆ ಅನುಗುಣವಾಗಿವೆ” ಎಂದು ಹೇಳಿವೆ.


ಇದನ್ನೂ ಓದಿ: ‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...