Homeಮುಖಪುಟಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

ಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

- Advertisement -
- Advertisement -

ನಾವು ಪ್ರತಿದಿನ ಆಹಾರದಲ್ಲಿ, ಸೌಂದರ್ಯವರ್ಧಕವಾಗಿ ಬಳಸೋ ಜೇನುತುಪ್ಪವನ್ನು ಶುದ್ಧ ಜೇನುತುಪ್ಪ ಎಂದೇ ಬಳಸಿರುತ್ತೇವೆ. ಅದರಲ್ಲೂ ಆರ್ಯುವೇದ ಕಂಪನಿಯ ಜೇನುತುಪ್ಪ ಎಂದರೇ ಪರಿಶುದ್ಧ ಎನ್ನುವ ನಮ್ಮ ಭ್ರಮೆಯನ್ನು ಕಳಚುವ ಕೆಲಸ ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ (ಸಿಎಸ್‌ಇ) ಮಾಡಿದೆ.

ಹೌದು, ದೊಡ್ಡ ದೊಡ್ಡ ಕಂಪನಿಗಳ ಜೇನುತುಪ್ಪ ಕಳಪೆ ಗುಣಮಟ್ಟದ್ದಾಗಿವೆ ಎಂದು ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ​ ವರದಿ ನೀಡಿದೆ. ಭಾರತದ ಮಾರುಕಟ್ಟೆಯಲ್ಲಿ ಲಭ್ಯ ಇರುವ ಜೇನುತುಪ್ಪ ಬ್ರ್ಯಾಂಡ್‌ಗಳಲ್ಲಿ ಹೆಚ್ಚಿನವು ಕಲಬೆರಕೆ ಜೇನನ್ನು ಗ್ರಾಹಕರಿಗೆ ಮಾರುತ್ತಿವೆ ಎಂಬ ಅಂಶ ಸಿಎಸ್‌ಇ ನಡೆಸಿರುವ ಅಧ್ಯಯನದಲ್ಲಿ ಬಹಿರಂಗವಾಗಿದೆ.

ದೇಶದ ಮಾರುಕಟ್ಟೆಗಳಿಂದ 13 ಜೇನುತುಪ್ಪದ ವಿವಿಧ ಬ್ರಾಂಡ್‌ಗಳ ಮೇಲೆ ನಡೆಸಿದ ತನಿಖೆಯನ್ನು ವರದಿ ಉಲ್ಲೇಖಿಸಿದೆ. ಚೀನಾದಲ್ಲಿ ತಯಾರಾಗುವ ವಿಶೇಷ ರೀತಿಯ ಸಕ್ಕರೆ ಪಾಕವನ್ನು ಜೇನಿಗೆ ಬೆರೆಸಿ ಮಾರಾಟ ಮಾಡಲಾಗುತ್ತಿದೆ ಎಂಬ ಅಂಶವು ಈ ಅಧ್ಯಯನದಿಂದ ತಿಳಿದು ಬಂದಿದ್ದು, ಗುಜರಾತ್‌ನಲ್ಲಿರುವ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿಯ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು.

ಜೇನಿನ ಹಲವು ಆರೋಗ್ಯಲಾಭಗಳ ಬಗ್ಗೆ ಅಗತ್ಯವಾಗಿ ತಿಳಿದುಕೊಳ್ಳಿ | Vartha Bharati- ವಾರ್ತಾ ಭಾರತಿ

ಇದನ್ನೂಓದಿ: ರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ಈ 13 ದೊಡ್ಡ ದೊಡ್ಡ ಕಂಪನಿಯ ಜೇನುತುಪ್ಪಗಳಲ್ಲಿ ಕೇವಲ ಮೂರೇ ಮೂರೇ ಕಂಪನಿಯ ಜೇನುತುಪ್ಪ ಮಾತ್ರ ಗುಣಮಟ್ಟದ ಟೆಸ್ಟ್‌ನಲ್ಲಿ ಪಾಸ್​ ಆಗಿವೆ. ಉಳಿದ 10 ಕಂಪನಿಗಳು ಕಲಬೆರಕೆಯ ಜೇನು ಮಾರಾಟ ಮಾಡುತ್ತಿವೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಿಎಸ್ಇ ಆಹಾರ ಸಂಶೋಧಕರು ಡಾಬರ್, ಪತಂಜಲಿ, ಬೈದ್ಯನಾಥ್, ಇಮಾಮಿ ಮತ್ತು ಝಂಡು ಸೇರಿದಂತೆ 13 ಬ್ರಾಂಡ್‌ಗಳ ಜೇನುತುಪ್ಪವನ್ನು ಆಯ್ಕೆ ಮಾಡಿ, ಅವುಗಳನ್ನು ಜೇನುತುಪ್ಪ ಎಂದು ಲೇಬಲ್ ಮಾಡಲು ರಾಷ್ಟ್ರೀಯ ಆಹಾರ ನಿಯಂತ್ರಣ ಕಾನೂನುಗಳ ಅಡಿಯಲ್ಲಿ ಅಗತ್ಯವಿರುವ 18 ಪರೀಕ್ಷೆಗಳಿಗೆ ಒಳಪಡಿಸಿದ್ದಾರೆ.

ಈ ವರದಿಗೆ ಸುಮ್ಮನಾಗದ ಸಿಎಸ್‌ಇ, ಜರ್ಮನಿಯ ಪ್ರಯೋಗಾಲಯವೊಂದರಲ್ಲಿ ಮುಂದುವರಿದ ದೇಶಗಳಲ್ಲಿ ಜೇನಿನ ಪರಿಶುದ್ಧತೆ ಪರಿಶೀಲನೆಗೆ ಬಳಸಲಾಗುವ ನ್ಯೂಕ್ಲಿಯರ್‌ ಮ್ಯಾಗ್ನೆಟಿಕ್‌ ರೆಸೊನೆನ್ಸ್‌ (ಎನ್‌ಎಂಆರ್‌) ಪರೀಕ್ಷೆಗೂ ಒಳಪಡಿಸಲು ನಿರ್ಧರಿಸಿತು. ಅಲ್ಲಿ ನಡೆದ ಪರೀಕ್ಷೆಯಲ್ಲೂ 13 ಬ್ರ್ಯಾಂಡ್‌ಗಳ ಪೈಕಿ 10 ಬ್ರ್ಯಾಂಡ್‌ಗಳ ಜೇನು ಶುದ್ಧವಲ್ಲ ಎಂಬ ರಿಸಲ್ಟ್ ಬಂದಿದೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ (ಎರಡು ಮಾದರಿಗಳಲ್ಲಿ ಒಂದು) ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

“ನಾವು ಕೊರೊನಾ ಸಾಂಕ್ರಾಮಿಕದ ರೋಗದ ವಿರುದ್ಧ ಹೋರಾಡಲು, ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂಬ ಕಾರಣಕ್ಕಾಗಿ ಜೇನುತುಪ್ಪವನ್ನು ಸೇವಿಸುತ್ತಿದ್ದೇವೆ. ಆದರೆ, ಸಕ್ಕರೆಯೊಂದಿಗೆ ಕಲಬೆರಕೆ ಮಾಡಿದ ಜೇನುತುಪ್ಪವು ಆರೋಗ್ಯಕ್ಕೆ ಉತ್ತಮವಲ್ಲ ಎಂದು ಸಿಎಸ್‌ಇ ಪ್ರಧಾನ ನಿರ್ದೇಶಕಿ ಸುನಿತಾ ನಾರಾಯಣ್ ಮಾಹಿತಿ ನೀಡಿದ್ದಾರೆ.

ಕಳೆದ ಜೂನ್​ ಮತ್ತು ಸೆಪ್ಟೆಂಬರ್​ ಅವಧಿಯಲ್ಲಿ ವಿಶ್ವದಾದ್ಯಂತಾ ಅತಿಹೆಚ್ಚಿನ ಸಂಖ್ಯೆಯಲ್ಲಿ ಜೇನುತುಪ್ಪ ಮಾರಾಟವಾಗಿವೆ. ಆದರೆ ಸಂಸ್ಥೆಯ ಈ ವರದಿಯನ್ನು ಕಂಪನಿಗಳು ತಳ್ಳಿಹಾಕಿವೆ.

ಝಂಡು ಶುದ್ಧ ಹನಿ ತಯಾರಕ, ಇಮಾಮಿ ಕಂಪನಿಗಳು, “ನಮ್ಮ ಜೇನುತುಪ್ಪವು ಭಾರತ ಸರ್ಕಾರ ಮತ್ತು ಅದರ ಅಧಿಕೃತ ಸಂಸ್ಥೆಗಳಾದ ಎಫ್‌ಎಸ್‌ಎಸ್‌ಎಐನಂತಹ ಎಲ್ಲಾ ಪ್ರೋಟೋಕಾಲ್ಗಳು ಮತ್ತು ಗುಣಮಟ್ಟದ  ಮಾನದಂಡಗಳಿಗೆ ಅನುಗುಣವಾಗಿವೆ” ಎಂದು ಹೇಳಿವೆ.


ಇದನ್ನೂ ಓದಿ: ‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...