Homeಮುಖಪುಟಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

ಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

- Advertisement -
- Advertisement -

ನಾವು ಪ್ರತಿದಿನ ಆಹಾರದಲ್ಲಿ, ಸೌಂದರ್ಯವರ್ಧಕವಾಗಿ ಬಳಸೋ ಜೇನುತುಪ್ಪವನ್ನು ಶುದ್ಧ ಜೇನುತುಪ್ಪ ಎಂದೇ ಬಳಸಿರುತ್ತೇವೆ. ಅದರಲ್ಲೂ ಆರ್ಯುವೇದ ಕಂಪನಿಯ ಜೇನುತುಪ್ಪ ಎಂದರೇ ಪರಿಶುದ್ಧ ಎನ್ನುವ ನಮ್ಮ ಭ್ರಮೆಯನ್ನು ಕಳಚುವ ಕೆಲಸ ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ (ಸಿಎಸ್‌ಇ) ಮಾಡಿದೆ.

ಹೌದು, ದೊಡ್ಡ ದೊಡ್ಡ ಕಂಪನಿಗಳ ಜೇನುತುಪ್ಪ ಕಳಪೆ ಗುಣಮಟ್ಟದ್ದಾಗಿವೆ ಎಂದು ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ​ ವರದಿ ನೀಡಿದೆ. ಭಾರತದ ಮಾರುಕಟ್ಟೆಯಲ್ಲಿ ಲಭ್ಯ ಇರುವ ಜೇನುತುಪ್ಪ ಬ್ರ್ಯಾಂಡ್‌ಗಳಲ್ಲಿ ಹೆಚ್ಚಿನವು ಕಲಬೆರಕೆ ಜೇನನ್ನು ಗ್ರಾಹಕರಿಗೆ ಮಾರುತ್ತಿವೆ ಎಂಬ ಅಂಶ ಸಿಎಸ್‌ಇ ನಡೆಸಿರುವ ಅಧ್ಯಯನದಲ್ಲಿ ಬಹಿರಂಗವಾಗಿದೆ.

ದೇಶದ ಮಾರುಕಟ್ಟೆಗಳಿಂದ 13 ಜೇನುತುಪ್ಪದ ವಿವಿಧ ಬ್ರಾಂಡ್‌ಗಳ ಮೇಲೆ ನಡೆಸಿದ ತನಿಖೆಯನ್ನು ವರದಿ ಉಲ್ಲೇಖಿಸಿದೆ. ಚೀನಾದಲ್ಲಿ ತಯಾರಾಗುವ ವಿಶೇಷ ರೀತಿಯ ಸಕ್ಕರೆ ಪಾಕವನ್ನು ಜೇನಿಗೆ ಬೆರೆಸಿ ಮಾರಾಟ ಮಾಡಲಾಗುತ್ತಿದೆ ಎಂಬ ಅಂಶವು ಈ ಅಧ್ಯಯನದಿಂದ ತಿಳಿದು ಬಂದಿದ್ದು, ಗುಜರಾತ್‌ನಲ್ಲಿರುವ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿಯ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು.

ಜೇನಿನ ಹಲವು ಆರೋಗ್ಯಲಾಭಗಳ ಬಗ್ಗೆ ಅಗತ್ಯವಾಗಿ ತಿಳಿದುಕೊಳ್ಳಿ | Vartha Bharati- ವಾರ್ತಾ ಭಾರತಿ

ಇದನ್ನೂಓದಿ: ರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ಈ 13 ದೊಡ್ಡ ದೊಡ್ಡ ಕಂಪನಿಯ ಜೇನುತುಪ್ಪಗಳಲ್ಲಿ ಕೇವಲ ಮೂರೇ ಮೂರೇ ಕಂಪನಿಯ ಜೇನುತುಪ್ಪ ಮಾತ್ರ ಗುಣಮಟ್ಟದ ಟೆಸ್ಟ್‌ನಲ್ಲಿ ಪಾಸ್​ ಆಗಿವೆ. ಉಳಿದ 10 ಕಂಪನಿಗಳು ಕಲಬೆರಕೆಯ ಜೇನು ಮಾರಾಟ ಮಾಡುತ್ತಿವೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಿಎಸ್ಇ ಆಹಾರ ಸಂಶೋಧಕರು ಡಾಬರ್, ಪತಂಜಲಿ, ಬೈದ್ಯನಾಥ್, ಇಮಾಮಿ ಮತ್ತು ಝಂಡು ಸೇರಿದಂತೆ 13 ಬ್ರಾಂಡ್‌ಗಳ ಜೇನುತುಪ್ಪವನ್ನು ಆಯ್ಕೆ ಮಾಡಿ, ಅವುಗಳನ್ನು ಜೇನುತುಪ್ಪ ಎಂದು ಲೇಬಲ್ ಮಾಡಲು ರಾಷ್ಟ್ರೀಯ ಆಹಾರ ನಿಯಂತ್ರಣ ಕಾನೂನುಗಳ ಅಡಿಯಲ್ಲಿ ಅಗತ್ಯವಿರುವ 18 ಪರೀಕ್ಷೆಗಳಿಗೆ ಒಳಪಡಿಸಿದ್ದಾರೆ.

ಈ ವರದಿಗೆ ಸುಮ್ಮನಾಗದ ಸಿಎಸ್‌ಇ, ಜರ್ಮನಿಯ ಪ್ರಯೋಗಾಲಯವೊಂದರಲ್ಲಿ ಮುಂದುವರಿದ ದೇಶಗಳಲ್ಲಿ ಜೇನಿನ ಪರಿಶುದ್ಧತೆ ಪರಿಶೀಲನೆಗೆ ಬಳಸಲಾಗುವ ನ್ಯೂಕ್ಲಿಯರ್‌ ಮ್ಯಾಗ್ನೆಟಿಕ್‌ ರೆಸೊನೆನ್ಸ್‌ (ಎನ್‌ಎಂಆರ್‌) ಪರೀಕ್ಷೆಗೂ ಒಳಪಡಿಸಲು ನಿರ್ಧರಿಸಿತು. ಅಲ್ಲಿ ನಡೆದ ಪರೀಕ್ಷೆಯಲ್ಲೂ 13 ಬ್ರ್ಯಾಂಡ್‌ಗಳ ಪೈಕಿ 10 ಬ್ರ್ಯಾಂಡ್‌ಗಳ ಜೇನು ಶುದ್ಧವಲ್ಲ ಎಂಬ ರಿಸಲ್ಟ್ ಬಂದಿದೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ (ಎರಡು ಮಾದರಿಗಳಲ್ಲಿ ಒಂದು) ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

“ನಾವು ಕೊರೊನಾ ಸಾಂಕ್ರಾಮಿಕದ ರೋಗದ ವಿರುದ್ಧ ಹೋರಾಡಲು, ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂಬ ಕಾರಣಕ್ಕಾಗಿ ಜೇನುತುಪ್ಪವನ್ನು ಸೇವಿಸುತ್ತಿದ್ದೇವೆ. ಆದರೆ, ಸಕ್ಕರೆಯೊಂದಿಗೆ ಕಲಬೆರಕೆ ಮಾಡಿದ ಜೇನುತುಪ್ಪವು ಆರೋಗ್ಯಕ್ಕೆ ಉತ್ತಮವಲ್ಲ ಎಂದು ಸಿಎಸ್‌ಇ ಪ್ರಧಾನ ನಿರ್ದೇಶಕಿ ಸುನಿತಾ ನಾರಾಯಣ್ ಮಾಹಿತಿ ನೀಡಿದ್ದಾರೆ.

ಕಳೆದ ಜೂನ್​ ಮತ್ತು ಸೆಪ್ಟೆಂಬರ್​ ಅವಧಿಯಲ್ಲಿ ವಿಶ್ವದಾದ್ಯಂತಾ ಅತಿಹೆಚ್ಚಿನ ಸಂಖ್ಯೆಯಲ್ಲಿ ಜೇನುತುಪ್ಪ ಮಾರಾಟವಾಗಿವೆ. ಆದರೆ ಸಂಸ್ಥೆಯ ಈ ವರದಿಯನ್ನು ಕಂಪನಿಗಳು ತಳ್ಳಿಹಾಕಿವೆ.

ಝಂಡು ಶುದ್ಧ ಹನಿ ತಯಾರಕ, ಇಮಾಮಿ ಕಂಪನಿಗಳು, “ನಮ್ಮ ಜೇನುತುಪ್ಪವು ಭಾರತ ಸರ್ಕಾರ ಮತ್ತು ಅದರ ಅಧಿಕೃತ ಸಂಸ್ಥೆಗಳಾದ ಎಫ್‌ಎಸ್‌ಎಸ್‌ಎಐನಂತಹ ಎಲ್ಲಾ ಪ್ರೋಟೋಕಾಲ್ಗಳು ಮತ್ತು ಗುಣಮಟ್ಟದ  ಮಾನದಂಡಗಳಿಗೆ ಅನುಗುಣವಾಗಿವೆ” ಎಂದು ಹೇಳಿವೆ.


ಇದನ್ನೂ ಓದಿ: ‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...