Homeಮುಖಪುಟಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

ಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

- Advertisement -
- Advertisement -

ನಾವು ಪ್ರತಿದಿನ ಆಹಾರದಲ್ಲಿ, ಸೌಂದರ್ಯವರ್ಧಕವಾಗಿ ಬಳಸೋ ಜೇನುತುಪ್ಪವನ್ನು ಶುದ್ಧ ಜೇನುತುಪ್ಪ ಎಂದೇ ಬಳಸಿರುತ್ತೇವೆ. ಅದರಲ್ಲೂ ಆರ್ಯುವೇದ ಕಂಪನಿಯ ಜೇನುತುಪ್ಪ ಎಂದರೇ ಪರಿಶುದ್ಧ ಎನ್ನುವ ನಮ್ಮ ಭ್ರಮೆಯನ್ನು ಕಳಚುವ ಕೆಲಸ ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ (ಸಿಎಸ್‌ಇ) ಮಾಡಿದೆ.

ಹೌದು, ದೊಡ್ಡ ದೊಡ್ಡ ಕಂಪನಿಗಳ ಜೇನುತುಪ್ಪ ಕಳಪೆ ಗುಣಮಟ್ಟದ್ದಾಗಿವೆ ಎಂದು ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ​ ವರದಿ ನೀಡಿದೆ. ಭಾರತದ ಮಾರುಕಟ್ಟೆಯಲ್ಲಿ ಲಭ್ಯ ಇರುವ ಜೇನುತುಪ್ಪ ಬ್ರ್ಯಾಂಡ್‌ಗಳಲ್ಲಿ ಹೆಚ್ಚಿನವು ಕಲಬೆರಕೆ ಜೇನನ್ನು ಗ್ರಾಹಕರಿಗೆ ಮಾರುತ್ತಿವೆ ಎಂಬ ಅಂಶ ಸಿಎಸ್‌ಇ ನಡೆಸಿರುವ ಅಧ್ಯಯನದಲ್ಲಿ ಬಹಿರಂಗವಾಗಿದೆ.

ದೇಶದ ಮಾರುಕಟ್ಟೆಗಳಿಂದ 13 ಜೇನುತುಪ್ಪದ ವಿವಿಧ ಬ್ರಾಂಡ್‌ಗಳ ಮೇಲೆ ನಡೆಸಿದ ತನಿಖೆಯನ್ನು ವರದಿ ಉಲ್ಲೇಖಿಸಿದೆ. ಚೀನಾದಲ್ಲಿ ತಯಾರಾಗುವ ವಿಶೇಷ ರೀತಿಯ ಸಕ್ಕರೆ ಪಾಕವನ್ನು ಜೇನಿಗೆ ಬೆರೆಸಿ ಮಾರಾಟ ಮಾಡಲಾಗುತ್ತಿದೆ ಎಂಬ ಅಂಶವು ಈ ಅಧ್ಯಯನದಿಂದ ತಿಳಿದು ಬಂದಿದ್ದು, ಗುಜರಾತ್‌ನಲ್ಲಿರುವ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿಯ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು.

ಜೇನಿನ ಹಲವು ಆರೋಗ್ಯಲಾಭಗಳ ಬಗ್ಗೆ ಅಗತ್ಯವಾಗಿ ತಿಳಿದುಕೊಳ್ಳಿ | Vartha Bharati- ವಾರ್ತಾ ಭಾರತಿ

ಇದನ್ನೂಓದಿ: ರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ಈ 13 ದೊಡ್ಡ ದೊಡ್ಡ ಕಂಪನಿಯ ಜೇನುತುಪ್ಪಗಳಲ್ಲಿ ಕೇವಲ ಮೂರೇ ಮೂರೇ ಕಂಪನಿಯ ಜೇನುತುಪ್ಪ ಮಾತ್ರ ಗುಣಮಟ್ಟದ ಟೆಸ್ಟ್‌ನಲ್ಲಿ ಪಾಸ್​ ಆಗಿವೆ. ಉಳಿದ 10 ಕಂಪನಿಗಳು ಕಲಬೆರಕೆಯ ಜೇನು ಮಾರಾಟ ಮಾಡುತ್ತಿವೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಿಎಸ್ಇ ಆಹಾರ ಸಂಶೋಧಕರು ಡಾಬರ್, ಪತಂಜಲಿ, ಬೈದ್ಯನಾಥ್, ಇಮಾಮಿ ಮತ್ತು ಝಂಡು ಸೇರಿದಂತೆ 13 ಬ್ರಾಂಡ್‌ಗಳ ಜೇನುತುಪ್ಪವನ್ನು ಆಯ್ಕೆ ಮಾಡಿ, ಅವುಗಳನ್ನು ಜೇನುತುಪ್ಪ ಎಂದು ಲೇಬಲ್ ಮಾಡಲು ರಾಷ್ಟ್ರೀಯ ಆಹಾರ ನಿಯಂತ್ರಣ ಕಾನೂನುಗಳ ಅಡಿಯಲ್ಲಿ ಅಗತ್ಯವಿರುವ 18 ಪರೀಕ್ಷೆಗಳಿಗೆ ಒಳಪಡಿಸಿದ್ದಾರೆ.

ಈ ವರದಿಗೆ ಸುಮ್ಮನಾಗದ ಸಿಎಸ್‌ಇ, ಜರ್ಮನಿಯ ಪ್ರಯೋಗಾಲಯವೊಂದರಲ್ಲಿ ಮುಂದುವರಿದ ದೇಶಗಳಲ್ಲಿ ಜೇನಿನ ಪರಿಶುದ್ಧತೆ ಪರಿಶೀಲನೆಗೆ ಬಳಸಲಾಗುವ ನ್ಯೂಕ್ಲಿಯರ್‌ ಮ್ಯಾಗ್ನೆಟಿಕ್‌ ರೆಸೊನೆನ್ಸ್‌ (ಎನ್‌ಎಂಆರ್‌) ಪರೀಕ್ಷೆಗೂ ಒಳಪಡಿಸಲು ನಿರ್ಧರಿಸಿತು. ಅಲ್ಲಿ ನಡೆದ ಪರೀಕ್ಷೆಯಲ್ಲೂ 13 ಬ್ರ್ಯಾಂಡ್‌ಗಳ ಪೈಕಿ 10 ಬ್ರ್ಯಾಂಡ್‌ಗಳ ಜೇನು ಶುದ್ಧವಲ್ಲ ಎಂಬ ರಿಸಲ್ಟ್ ಬಂದಿದೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ (ಎರಡು ಮಾದರಿಗಳಲ್ಲಿ ಒಂದು) ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

“ನಾವು ಕೊರೊನಾ ಸಾಂಕ್ರಾಮಿಕದ ರೋಗದ ವಿರುದ್ಧ ಹೋರಾಡಲು, ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂಬ ಕಾರಣಕ್ಕಾಗಿ ಜೇನುತುಪ್ಪವನ್ನು ಸೇವಿಸುತ್ತಿದ್ದೇವೆ. ಆದರೆ, ಸಕ್ಕರೆಯೊಂದಿಗೆ ಕಲಬೆರಕೆ ಮಾಡಿದ ಜೇನುತುಪ್ಪವು ಆರೋಗ್ಯಕ್ಕೆ ಉತ್ತಮವಲ್ಲ ಎಂದು ಸಿಎಸ್‌ಇ ಪ್ರಧಾನ ನಿರ್ದೇಶಕಿ ಸುನಿತಾ ನಾರಾಯಣ್ ಮಾಹಿತಿ ನೀಡಿದ್ದಾರೆ.

ಕಳೆದ ಜೂನ್​ ಮತ್ತು ಸೆಪ್ಟೆಂಬರ್​ ಅವಧಿಯಲ್ಲಿ ವಿಶ್ವದಾದ್ಯಂತಾ ಅತಿಹೆಚ್ಚಿನ ಸಂಖ್ಯೆಯಲ್ಲಿ ಜೇನುತುಪ್ಪ ಮಾರಾಟವಾಗಿವೆ. ಆದರೆ ಸಂಸ್ಥೆಯ ಈ ವರದಿಯನ್ನು ಕಂಪನಿಗಳು ತಳ್ಳಿಹಾಕಿವೆ.

ಝಂಡು ಶುದ್ಧ ಹನಿ ತಯಾರಕ, ಇಮಾಮಿ ಕಂಪನಿಗಳು, “ನಮ್ಮ ಜೇನುತುಪ್ಪವು ಭಾರತ ಸರ್ಕಾರ ಮತ್ತು ಅದರ ಅಧಿಕೃತ ಸಂಸ್ಥೆಗಳಾದ ಎಫ್‌ಎಸ್‌ಎಸ್‌ಎಐನಂತಹ ಎಲ್ಲಾ ಪ್ರೋಟೋಕಾಲ್ಗಳು ಮತ್ತು ಗುಣಮಟ್ಟದ  ಮಾನದಂಡಗಳಿಗೆ ಅನುಗುಣವಾಗಿವೆ” ಎಂದು ಹೇಳಿವೆ.


ಇದನ್ನೂ ಓದಿ: ‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...