Homeಮುಖಪುಟಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

ಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

- Advertisement -
- Advertisement -

ನಾವು ಪ್ರತಿದಿನ ಆಹಾರದಲ್ಲಿ, ಸೌಂದರ್ಯವರ್ಧಕವಾಗಿ ಬಳಸೋ ಜೇನುತುಪ್ಪವನ್ನು ಶುದ್ಧ ಜೇನುತುಪ್ಪ ಎಂದೇ ಬಳಸಿರುತ್ತೇವೆ. ಅದರಲ್ಲೂ ಆರ್ಯುವೇದ ಕಂಪನಿಯ ಜೇನುತುಪ್ಪ ಎಂದರೇ ಪರಿಶುದ್ಧ ಎನ್ನುವ ನಮ್ಮ ಭ್ರಮೆಯನ್ನು ಕಳಚುವ ಕೆಲಸ ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ (ಸಿಎಸ್‌ಇ) ಮಾಡಿದೆ.

ಹೌದು, ದೊಡ್ಡ ದೊಡ್ಡ ಕಂಪನಿಗಳ ಜೇನುತುಪ್ಪ ಕಳಪೆ ಗುಣಮಟ್ಟದ್ದಾಗಿವೆ ಎಂದು ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ​ ವರದಿ ನೀಡಿದೆ. ಭಾರತದ ಮಾರುಕಟ್ಟೆಯಲ್ಲಿ ಲಭ್ಯ ಇರುವ ಜೇನುತುಪ್ಪ ಬ್ರ್ಯಾಂಡ್‌ಗಳಲ್ಲಿ ಹೆಚ್ಚಿನವು ಕಲಬೆರಕೆ ಜೇನನ್ನು ಗ್ರಾಹಕರಿಗೆ ಮಾರುತ್ತಿವೆ ಎಂಬ ಅಂಶ ಸಿಎಸ್‌ಇ ನಡೆಸಿರುವ ಅಧ್ಯಯನದಲ್ಲಿ ಬಹಿರಂಗವಾಗಿದೆ.

ದೇಶದ ಮಾರುಕಟ್ಟೆಗಳಿಂದ 13 ಜೇನುತುಪ್ಪದ ವಿವಿಧ ಬ್ರಾಂಡ್‌ಗಳ ಮೇಲೆ ನಡೆಸಿದ ತನಿಖೆಯನ್ನು ವರದಿ ಉಲ್ಲೇಖಿಸಿದೆ. ಚೀನಾದಲ್ಲಿ ತಯಾರಾಗುವ ವಿಶೇಷ ರೀತಿಯ ಸಕ್ಕರೆ ಪಾಕವನ್ನು ಜೇನಿಗೆ ಬೆರೆಸಿ ಮಾರಾಟ ಮಾಡಲಾಗುತ್ತಿದೆ ಎಂಬ ಅಂಶವು ಈ ಅಧ್ಯಯನದಿಂದ ತಿಳಿದು ಬಂದಿದ್ದು, ಗುಜರಾತ್‌ನಲ್ಲಿರುವ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿಯ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು.

ಜೇನಿನ ಹಲವು ಆರೋಗ್ಯಲಾಭಗಳ ಬಗ್ಗೆ ಅಗತ್ಯವಾಗಿ ತಿಳಿದುಕೊಳ್ಳಿ | Vartha Bharati- ವಾರ್ತಾ ಭಾರತಿ

ಇದನ್ನೂಓದಿ: ರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ಈ 13 ದೊಡ್ಡ ದೊಡ್ಡ ಕಂಪನಿಯ ಜೇನುತುಪ್ಪಗಳಲ್ಲಿ ಕೇವಲ ಮೂರೇ ಮೂರೇ ಕಂಪನಿಯ ಜೇನುತುಪ್ಪ ಮಾತ್ರ ಗುಣಮಟ್ಟದ ಟೆಸ್ಟ್‌ನಲ್ಲಿ ಪಾಸ್​ ಆಗಿವೆ. ಉಳಿದ 10 ಕಂಪನಿಗಳು ಕಲಬೆರಕೆಯ ಜೇನು ಮಾರಾಟ ಮಾಡುತ್ತಿವೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಿಎಸ್ಇ ಆಹಾರ ಸಂಶೋಧಕರು ಡಾಬರ್, ಪತಂಜಲಿ, ಬೈದ್ಯನಾಥ್, ಇಮಾಮಿ ಮತ್ತು ಝಂಡು ಸೇರಿದಂತೆ 13 ಬ್ರಾಂಡ್‌ಗಳ ಜೇನುತುಪ್ಪವನ್ನು ಆಯ್ಕೆ ಮಾಡಿ, ಅವುಗಳನ್ನು ಜೇನುತುಪ್ಪ ಎಂದು ಲೇಬಲ್ ಮಾಡಲು ರಾಷ್ಟ್ರೀಯ ಆಹಾರ ನಿಯಂತ್ರಣ ಕಾನೂನುಗಳ ಅಡಿಯಲ್ಲಿ ಅಗತ್ಯವಿರುವ 18 ಪರೀಕ್ಷೆಗಳಿಗೆ ಒಳಪಡಿಸಿದ್ದಾರೆ.

ಈ ವರದಿಗೆ ಸುಮ್ಮನಾಗದ ಸಿಎಸ್‌ಇ, ಜರ್ಮನಿಯ ಪ್ರಯೋಗಾಲಯವೊಂದರಲ್ಲಿ ಮುಂದುವರಿದ ದೇಶಗಳಲ್ಲಿ ಜೇನಿನ ಪರಿಶುದ್ಧತೆ ಪರಿಶೀಲನೆಗೆ ಬಳಸಲಾಗುವ ನ್ಯೂಕ್ಲಿಯರ್‌ ಮ್ಯಾಗ್ನೆಟಿಕ್‌ ರೆಸೊನೆನ್ಸ್‌ (ಎನ್‌ಎಂಆರ್‌) ಪರೀಕ್ಷೆಗೂ ಒಳಪಡಿಸಲು ನಿರ್ಧರಿಸಿತು. ಅಲ್ಲಿ ನಡೆದ ಪರೀಕ್ಷೆಯಲ್ಲೂ 13 ಬ್ರ್ಯಾಂಡ್‌ಗಳ ಪೈಕಿ 10 ಬ್ರ್ಯಾಂಡ್‌ಗಳ ಜೇನು ಶುದ್ಧವಲ್ಲ ಎಂಬ ರಿಸಲ್ಟ್ ಬಂದಿದೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ (ಎರಡು ಮಾದರಿಗಳಲ್ಲಿ ಒಂದು) ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

“ನಾವು ಕೊರೊನಾ ಸಾಂಕ್ರಾಮಿಕದ ರೋಗದ ವಿರುದ್ಧ ಹೋರಾಡಲು, ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂಬ ಕಾರಣಕ್ಕಾಗಿ ಜೇನುತುಪ್ಪವನ್ನು ಸೇವಿಸುತ್ತಿದ್ದೇವೆ. ಆದರೆ, ಸಕ್ಕರೆಯೊಂದಿಗೆ ಕಲಬೆರಕೆ ಮಾಡಿದ ಜೇನುತುಪ್ಪವು ಆರೋಗ್ಯಕ್ಕೆ ಉತ್ತಮವಲ್ಲ ಎಂದು ಸಿಎಸ್‌ಇ ಪ್ರಧಾನ ನಿರ್ದೇಶಕಿ ಸುನಿತಾ ನಾರಾಯಣ್ ಮಾಹಿತಿ ನೀಡಿದ್ದಾರೆ.

ಕಳೆದ ಜೂನ್​ ಮತ್ತು ಸೆಪ್ಟೆಂಬರ್​ ಅವಧಿಯಲ್ಲಿ ವಿಶ್ವದಾದ್ಯಂತಾ ಅತಿಹೆಚ್ಚಿನ ಸಂಖ್ಯೆಯಲ್ಲಿ ಜೇನುತುಪ್ಪ ಮಾರಾಟವಾಗಿವೆ. ಆದರೆ ಸಂಸ್ಥೆಯ ಈ ವರದಿಯನ್ನು ಕಂಪನಿಗಳು ತಳ್ಳಿಹಾಕಿವೆ.

ಝಂಡು ಶುದ್ಧ ಹನಿ ತಯಾರಕ, ಇಮಾಮಿ ಕಂಪನಿಗಳು, “ನಮ್ಮ ಜೇನುತುಪ್ಪವು ಭಾರತ ಸರ್ಕಾರ ಮತ್ತು ಅದರ ಅಧಿಕೃತ ಸಂಸ್ಥೆಗಳಾದ ಎಫ್‌ಎಸ್‌ಎಸ್‌ಎಐನಂತಹ ಎಲ್ಲಾ ಪ್ರೋಟೋಕಾಲ್ಗಳು ಮತ್ತು ಗುಣಮಟ್ಟದ  ಮಾನದಂಡಗಳಿಗೆ ಅನುಗುಣವಾಗಿವೆ” ಎಂದು ಹೇಳಿವೆ.


ಇದನ್ನೂ ಓದಿ: ‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...