Homeಮುಖಪುಟಖಾಸಿಮ್ ಖುರೇಷಿ ಗುಂಪು ಹತ್ಯೆ ಪ್ರಕರಣ: 10 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಖಾಸಿಮ್ ಖುರೇಷಿ ಗುಂಪು ಹತ್ಯೆ ಪ್ರಕರಣ: 10 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ಉತ್ತರಪ್ರದೇಶದ ಹಾಪುರದಲ್ಲಿ 2018ರಲ್ಲಿ ಗೋಹತ್ಯೆ ನೆಪದಲ್ಲಿ ನಡೆದಿದ್ದ ಗುಂಪುಹತ್ಯೆ ಪ್ರಕರಣಕ್ಕೆ ಸಂಬಂಧಿಸಿ 10 ಜನರನ್ನು ದೋಷಿ ಎಂದು ಸ್ಥಳೀಯ ನ್ಯಾಯಾಲಯವು ಘೋಷಿಸಿದ್ದು, ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಶ್ವೇತಾ ದೀಕ್ಷಿತ್ ಅವರ ಪೀಠ ಈ ಕುರಿತು ವಿಚಾರಣೆಯನ್ನು ನಡೆಸಿ ಮಹತ್ವದ ತೀರ್ಪನ್ನು ನೀಡಿದ್ದು, ಗೋಹತ್ಯೆಯ ಸುಳ್ಳು ವದಂತಿಯ ಹಿನ್ನೆಲೆ 45 ವರ್ಷದ ಖಾಸಿಮ್‌ನನ್ನು ಹತ್ಯೆ ಮಾಡಿ ಸಮಯದೀನ್(62) ಮೇಲೆ ಹಲ್ಲೆ ನಡೆಸಿದ 10 ಜನರನ್ನು ದೋಷಿ ಎಂದು ತೀರ್ಪು ನೀಡಿದೆ.

ಸರ್ಕಾರಿ ವಕೀಲ ವಿಜಯ್ ಚೌಹಾಣ್ ಅವರ ಪ್ರಕಾರ, ಧೌಲಾನಾದ ಬಜೈದಾ ಗ್ರಾಮದ ರಾಕೇಶ್, ಹರಿಓಮ್, ಯುಧಿಷ್ಠಿರ್, ರಿಂಕು, ಕರನ್‌ಪಾಲ್, ಮನೀಶ್, ಲಲಿತ್, ಸೋನು, ಕಪ್ತಾನ್ ಮತ್ತು ಮಂಗೇರಾಮ್‌ಗೆ ಜೀವಾವಧಿ ಶಿಕ್ಷೆ ಮತ್ತು ತಲಾ 58,000ರೂ.ದಂಡವನ್ನು ವಿಧಿಸಲಾಗಿದೆ. 302/149, 307/149, 147, 148 ಮತ್ತು 153A IPCಯಡಿ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ರೂ. ತಲಾ 58,000/ ದಂಡ ವಿಧಿಸಿದೆ.

ಸಂತ್ರಸ್ತರು ಆರೋಪಿಗಳ ವಿರುದ್ಧ ಯಾವುದೇ ದ್ವೇಷವನ್ನು ಹೊಂದಿಲ್ಲ ಮತ್ತು ನ್ಯಾಯವನ್ನು ಮಾತ್ರ ಕೋರುತ್ತಾರೆ ಎಂದು ಪ್ರಾಸಿಕ್ಯೂಷನ್ ವಾದಿಸಿದೆ. ಇದಲ್ಲದೆ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆಯನ್ನು ಕೂಡ ವಿಧಿಸದಂತೆ ನ್ಯಾಯಾಲಯವನ್ನು ಕೋರಿದ್ದರು.

ಜೂನ್ 2018ರಲ್ಲಿ ಗೋಹತ್ಯೆ ಮಾಡಿದ್ದಾರೆಂದು ಆರೋಪಿಸಿ ಬಜೈದಾ ಗ್ರಾಮದ ನಿವಾಸಿ ಖಾಸಿಮ್ ಖುರೇಷಿ ಅವರನ್ನು ಗುಂಪೊಂದು ಹತ್ಯೆ ಮಾಡಿತ್ತು ಮತ್ತು ಅವರ ಜೊತೆಗಿದ್ದ ಸಮಯದೀನ್ ಮೇಲೆ ಹಲ್ಲೆ ನಡೆಸಿತ್ತು.  ಘಟನೆಗೆ ಅಪಘಾತದ ಆಯಾಮವನ್ನು ನೀಡುವ ಮೂಲಕ ಪೊಲೀಸರು ಸುಳ್ಳು ಎಫ್‌ಐಆರ್ ದಾಖಲಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಸಮಯದೀನ್ ನ್ಯಾಯಕ್ಕೆ ಆಗ್ರಹಿಸಿ ಸುಪ್ರೀಂಕೋರ್ಟ್‌ ಮೊರೆ ಹೋದ ನಂತರ ತನಿಖೆಯನ್ನು ಸರಿಯಾಗಿ ನಡೆಸಲಾಗಿದೆ ಎಂದು ಚೌಹಾಣ್ ಹೇಳಿದ್ದಾರೆ.

ಸಮಯದೀನ್ 2018ರಲ್ಲಿ ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು ಮತ್ತು ನ್ಯಾಯಾಲಯವು ಸೆಕ್ಷನ್ 164 CrPC ಅಡಿಯಲ್ಲಿ ಭದ್ರತೆ ಮತ್ತು ಹೇಳಿಕೆಯನ್ನು ದಾಖಲಿಸಲು ನಿರ್ದೇಶನ ನೀಡಿತ್ತು ಮತ್ತು ತನಿಖೆಯ ಮೇಲ್ವಿಚಾರಣೆಯನ್ನು ಮೀರತ್ ವಲಯ ಐಜಿಗೆ ವಹಿಸಿತ್ತು.

ಇದನ್ನು ಓದಿ: ‘ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್‌’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...