Homeಚಳವಳಿ10 ಜನರ ಗುಂಡಿಕ್ಕಿ ಹತ್ಯೆ | ಮಣಿಪುರದ ಗುಡ್ಡಗಾಡು ಪ್ರದೇಶ ಸಂಪೂರ್ಣ ಬಂದ್

10 ಜನರ ಗುಂಡಿಕ್ಕಿ ಹತ್ಯೆ | ಮಣಿಪುರದ ಗುಡ್ಡಗಾಡು ಪ್ರದೇಶ ಸಂಪೂರ್ಣ ಬಂದ್

- Advertisement -
- Advertisement -

ಮಣಿಪುರದ ಗುಡ್ಡಗಾಡು ಪ್ರದೇಶಗಳು ಮಂಗಳವಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಶಾಲಾ-ಕಾಲೇಜುಗಳು, ಮಾರುಕಟ್ಟೆಗಳು ಬಂದಾಗಿವೆ. ಬಂದ್ ಪರಿಣಾಮ ವಾಹನ ಸಂಚಾರ ಕೂಡಾ ಸ್ಥಗಿತಗೊಂಡಿದೆ ಎಂದು ದಿ ಟೆಲಿಗ್ರಾಫ್ ಆನ್‌ಲೈನ್ ವರದಿ ಮಾಡಿದೆ. ಸೋಮವಾರ ರಾಜ್ಯದ ಜಿರಿಬಾಮ್‌ನಲ್ಲಿ ಸೇನೆಯಿಂದ ಹತ್ಯೆಗೊಳಗಾದ 10 ಜನರಿಗೆ ಸಾಮೂಹಿಕ ಶ್ರದ್ಧಾಂಜಲಿ ಮತ್ತು ಬೆಂಬಲ ವ್ಯಕ್ತಪಡಿಸಿ ಕುಕಿ-ಜೊ ಕೌನ್ಸಿಲ್ 13 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು. ಈ ಬಂದ್ ಅನ್ನು ಬೆಳಿಗ್ಗೆ 5 ಗಂಟೆಗೆ ಪ್ರಾರಂಭಿಸಲಾಯಿತು. 10 ಜನರ

ಆದರೆ ಮಣಿಪುರ ಪೊಲೀಸರು, “ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬಂಡುಕೋರರು ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಜಿರಿಬಾಮ್ ಜಿಲ್ಲೆಯ ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ಮನಬಂದಂತೆ ಗುಂಡು ಹಾರಿಸಿದ ನಂತರ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಈ ಭೀಕರ ಗುಂಡಿನ ಚಕಮಕಿಯಲ್ಲಿ 10 ಶಂಕಿತ ಉಗ್ರರು ಹತರಾಗಿದ್ದಾರೆ” ಎಂದು ಹೇಳಿದ್ದರು. ಪೊಲೀಸರ ಈ ಪ್ರತಿಪಾದನೆಯನ್ನು ಕುಕಿ-ಜೊ ಕೌನ್ಸಿಲ್ ನಿರಾಕರಿಸಿದ್ದು, ಅವರು ‘ಗ್ರಾಮ ಸ್ವಯಂ ಸೇವಕ’ರಾಗಿದ್ದು, ಅವರನ್ನು ಸೇನೆಯು ಹೊಂಚು ಹಾಕಿ ಕೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. 10 ಜನರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಂದ್ ಸಮಯದಲ್ಲಿ ಕುಕಿ ಪ್ರಾಬಲ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಎಲ್ಲಿಯೂ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ಮುಚ್ಚಲ್ಪಟ್ಟಿದ್ದು, ಹೆಚ್ಚಿನ ಸ್ಥಳಗಳಲ್ಲಿ ಮಾರುಕಟ್ಟೆಗಳು ಮತ್ತು ಅಂಗಡಿಗಳನ್ನು ಮುಚ್ಚಲಾಗಿದೆ. ಸಾರ್ವಜನಿಕ ಸಾರಿಗೆ ಮತ್ತು ಖಾಸಗಿ ವಾಹನಗಳು ಕೂಡಾ ರಸ್ತೆಗಿಳಿಯಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಹಲವು ಕುಕಿ-ಜೋ ಸಂಘಟನೆಗಳು ಕೇಂದ್ರದ ಪಡೆಗಳನ್ನು ಗುರಿಯಾಗಿಸಿ, ಜಿರಿಬಾಮ್‌ನಲ್ಲಿ ನಡೆದ ಘಟನೆಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿವೆ.

ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) “…ಯಾವುದೇ ಸಿಆರ್‌ಪಿಎಫ್ ಸಿಬ್ಬಂದಿ ತಮ್ಮ ಶಿಬಿರದ ಆವರಣದಿಂದ ಹೊರಹೋಗಲು ಅನುಮತಿಸುವುದಿಲ್ಲ. ಈ ಸೂಚನೆಯನ್ನು ಉಲ್ಲಂಘಿಸಿದರೆ ಏನಾದರೂ ನಡೆದರೆ ಅದಕ್ಕೆ ಸಿಆರ್‌ಪಿಎಫ್ ಸಿಬ್ಬಂದಿಯೆ ಹೊಣೆ” ಎಂದು ಎಚ್ಚರಿಸಿದೆ.

“ಈ ಸೂಚನೆಯನ್ನು ನೀಡಿದ ತಕ್ಷಣ ಈ ನಿರ್ದೇಶನ ಜಾರಿಯಲ್ಲಿರುತ್ತದೆ. ಅಲ್ಲದೆ, ಸಿಆರ್‌ಪಿಎಫ್ ಜಿರಿಬಾಮ್‌ನಲ್ಲಿ ನಡೆಸಿದ ಅನಾಗರಿಕ ಕೃತ್ಯಗಳನ್ನು ಸಾರ್ವಜನಿಕವಾಗಿ ಅಂಗೀಕರಿಸುವ ವರೆಗೆ ಮತ್ತು ಕ್ಷಮೆಯಾಚಿಸುವವರೆಗೆ ಇದು ಜಾರಿಯಲ್ಲಿರುತ್ತದೆ. ಕುಕಿ ಪ್ರಾಬಲ್ಯವಿರುವ ಪ್ರದೇಶದಲ್ಲಿ ಸಿಆರ್‌ಪಿಎಫ್ ವಿರುದ್ಧ ಇದನ್ನು ದೊಡ್ಡ ಅಸಹಕಾರ ಚಳುವಳಿಯ ಭಾಗವಾಗಿ ಮಾಡಲಾಗುತ್ತದೆ. ಇದನ್ನು ಮುಂದಿನ ಸೂಚನೆಯವರೆಗೂ ಅನುಸರಿಸಲು ಸಾರ್ವಜನಿಕರಿಗೆ ಮನವಿ ಮಾಡಲಾಗುವುದು” ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ.

ಝೋಮಿ ಸ್ಟೂಡೆಂಟ್ಸ್ ಫೆಡರೇಶನ್ (ZSF) ಗುಂಡಿನ ಚಕಮಕಿಯ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿದೆ. “ಜಿರಿಬಾಮ್‌ನಲ್ಲಿ ನಿನ್ನೆ ಅಂದರೆ 11-11-2024 ರಂದು ನಮ್ಮ ಹನ್ನೊಂದು ಯುವಕರನ್ನು ವಿಶ್ವಾಸಘಾತುಕವಾಗಿ ಹತ್ಯೆಗೈದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಅಮಾನವೀಯ ಕ್ರಮಗಳ ಹಿನ್ನಲೆಯಲ್ಲಿ, ತಕ್ಷಣವೇ ಜಾರಿಗೆ ಬರುವಂತೆ ನಾವು CRPF ಅನ್ನು ಸಾಮಾಜಿಕ ಬಹಿಷ್ಕಾರ ಮಾಡಿದ್ದೇವೆ ಎಂದು ಘೋಷಿಸುತ್ತೇವೆ.” ಅದು ಹೇಳಿದೆ.

ಘಟನೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಎಚ್‌ಮಾರ್ ವಿದ್ಯಾರ್ಥಿಗಳ ಸಂಘ (ಎಚ್‌ಎಸ್‌ಎ) ಆಗ್ರಹಿಸಿದೆ. “ಜಖ್ರಾದವರ್‌ನಲ್ಲಿ ನಡೆದ ಹತ್ಯೆಗಳು ಮತ್ತು ಜೈರಾನ್ ಮೇಲಿನ ದಾಳಿಯ ಬಗ್ಗೆ ತಕ್ಷಣವೆ ಮತ್ತು ನಿಷ್ಪಕ್ಷಪಾತವಾದ ಸಿಬಿಐ ನೇತೃತ್ವದ ತನಿಖೆಯನ್ನು ನಾವು ಒತ್ತಾಯಿಸುತ್ತೇವೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ. ವಿಶ್ವಾಸಾರ್ಹ, ತಟಸ್ಥ ಭದ್ರತಾ ಕ್ರಮಗಳು ಜಾರಿಯಾಗುವವರೆಗೆ ಕುಕಿ-ಜೋ ಸಮುದಾಯಗಳು ವಾಸಿಸುವ ಪ್ರದೇಶಗಳಿಂದ CRPF ಮತ್ತು ಮಣಿಪುರ ಪೊಲೀಸ್ ಪಡೆಗಳನ್ನು ತಕ್ಷಣವೇ ಹಿಂಪಡೆಯಲು HSA ಆಗ್ರಹಿಸಿದೆ.

ಜಿರಿಬಾಮ್‌ನಲ್ಲಿ ನಡೆದ ದಾಳಿಯ ನಂತರ ಇನ್ನೂ ಆರು ಮಂದಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಪಕ್ಕದ ಬೆಟ್ಟಗಳಲ್ಲಿ ವಾಸಿಸುವ ಕುಕಿ-ಜೋ ಬುಡಕಟ್ಟು ಸಮುದಾಯದ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೆ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...