Homeಚಳವಳಿ10 ಜನರ ಗುಂಡಿಕ್ಕಿ ಹತ್ಯೆ | ಮಣಿಪುರದ ಗುಡ್ಡಗಾಡು ಪ್ರದೇಶ ಸಂಪೂರ್ಣ ಬಂದ್

10 ಜನರ ಗುಂಡಿಕ್ಕಿ ಹತ್ಯೆ | ಮಣಿಪುರದ ಗುಡ್ಡಗಾಡು ಪ್ರದೇಶ ಸಂಪೂರ್ಣ ಬಂದ್

- Advertisement -
- Advertisement -

ಮಣಿಪುರದ ಗುಡ್ಡಗಾಡು ಪ್ರದೇಶಗಳು ಮಂಗಳವಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಶಾಲಾ-ಕಾಲೇಜುಗಳು, ಮಾರುಕಟ್ಟೆಗಳು ಬಂದಾಗಿವೆ. ಬಂದ್ ಪರಿಣಾಮ ವಾಹನ ಸಂಚಾರ ಕೂಡಾ ಸ್ಥಗಿತಗೊಂಡಿದೆ ಎಂದು ದಿ ಟೆಲಿಗ್ರಾಫ್ ಆನ್‌ಲೈನ್ ವರದಿ ಮಾಡಿದೆ. ಸೋಮವಾರ ರಾಜ್ಯದ ಜಿರಿಬಾಮ್‌ನಲ್ಲಿ ಸೇನೆಯಿಂದ ಹತ್ಯೆಗೊಳಗಾದ 10 ಜನರಿಗೆ ಸಾಮೂಹಿಕ ಶ್ರದ್ಧಾಂಜಲಿ ಮತ್ತು ಬೆಂಬಲ ವ್ಯಕ್ತಪಡಿಸಿ ಕುಕಿ-ಜೊ ಕೌನ್ಸಿಲ್ 13 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು. ಈ ಬಂದ್ ಅನ್ನು ಬೆಳಿಗ್ಗೆ 5 ಗಂಟೆಗೆ ಪ್ರಾರಂಭಿಸಲಾಯಿತು. 10 ಜನರ

ಆದರೆ ಮಣಿಪುರ ಪೊಲೀಸರು, “ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬಂಡುಕೋರರು ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಜಿರಿಬಾಮ್ ಜಿಲ್ಲೆಯ ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ಮನಬಂದಂತೆ ಗುಂಡು ಹಾರಿಸಿದ ನಂತರ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಈ ಭೀಕರ ಗುಂಡಿನ ಚಕಮಕಿಯಲ್ಲಿ 10 ಶಂಕಿತ ಉಗ್ರರು ಹತರಾಗಿದ್ದಾರೆ” ಎಂದು ಹೇಳಿದ್ದರು. ಪೊಲೀಸರ ಈ ಪ್ರತಿಪಾದನೆಯನ್ನು ಕುಕಿ-ಜೊ ಕೌನ್ಸಿಲ್ ನಿರಾಕರಿಸಿದ್ದು, ಅವರು ‘ಗ್ರಾಮ ಸ್ವಯಂ ಸೇವಕ’ರಾಗಿದ್ದು, ಅವರನ್ನು ಸೇನೆಯು ಹೊಂಚು ಹಾಕಿ ಕೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. 10 ಜನರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಂದ್ ಸಮಯದಲ್ಲಿ ಕುಕಿ ಪ್ರಾಬಲ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಎಲ್ಲಿಯೂ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ಮುಚ್ಚಲ್ಪಟ್ಟಿದ್ದು, ಹೆಚ್ಚಿನ ಸ್ಥಳಗಳಲ್ಲಿ ಮಾರುಕಟ್ಟೆಗಳು ಮತ್ತು ಅಂಗಡಿಗಳನ್ನು ಮುಚ್ಚಲಾಗಿದೆ. ಸಾರ್ವಜನಿಕ ಸಾರಿಗೆ ಮತ್ತು ಖಾಸಗಿ ವಾಹನಗಳು ಕೂಡಾ ರಸ್ತೆಗಿಳಿಯಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಹಲವು ಕುಕಿ-ಜೋ ಸಂಘಟನೆಗಳು ಕೇಂದ್ರದ ಪಡೆಗಳನ್ನು ಗುರಿಯಾಗಿಸಿ, ಜಿರಿಬಾಮ್‌ನಲ್ಲಿ ನಡೆದ ಘಟನೆಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿವೆ.

ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) “…ಯಾವುದೇ ಸಿಆರ್‌ಪಿಎಫ್ ಸಿಬ್ಬಂದಿ ತಮ್ಮ ಶಿಬಿರದ ಆವರಣದಿಂದ ಹೊರಹೋಗಲು ಅನುಮತಿಸುವುದಿಲ್ಲ. ಈ ಸೂಚನೆಯನ್ನು ಉಲ್ಲಂಘಿಸಿದರೆ ಏನಾದರೂ ನಡೆದರೆ ಅದಕ್ಕೆ ಸಿಆರ್‌ಪಿಎಫ್ ಸಿಬ್ಬಂದಿಯೆ ಹೊಣೆ” ಎಂದು ಎಚ್ಚರಿಸಿದೆ.

“ಈ ಸೂಚನೆಯನ್ನು ನೀಡಿದ ತಕ್ಷಣ ಈ ನಿರ್ದೇಶನ ಜಾರಿಯಲ್ಲಿರುತ್ತದೆ. ಅಲ್ಲದೆ, ಸಿಆರ್‌ಪಿಎಫ್ ಜಿರಿಬಾಮ್‌ನಲ್ಲಿ ನಡೆಸಿದ ಅನಾಗರಿಕ ಕೃತ್ಯಗಳನ್ನು ಸಾರ್ವಜನಿಕವಾಗಿ ಅಂಗೀಕರಿಸುವ ವರೆಗೆ ಮತ್ತು ಕ್ಷಮೆಯಾಚಿಸುವವರೆಗೆ ಇದು ಜಾರಿಯಲ್ಲಿರುತ್ತದೆ. ಕುಕಿ ಪ್ರಾಬಲ್ಯವಿರುವ ಪ್ರದೇಶದಲ್ಲಿ ಸಿಆರ್‌ಪಿಎಫ್ ವಿರುದ್ಧ ಇದನ್ನು ದೊಡ್ಡ ಅಸಹಕಾರ ಚಳುವಳಿಯ ಭಾಗವಾಗಿ ಮಾಡಲಾಗುತ್ತದೆ. ಇದನ್ನು ಮುಂದಿನ ಸೂಚನೆಯವರೆಗೂ ಅನುಸರಿಸಲು ಸಾರ್ವಜನಿಕರಿಗೆ ಮನವಿ ಮಾಡಲಾಗುವುದು” ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ.

ಝೋಮಿ ಸ್ಟೂಡೆಂಟ್ಸ್ ಫೆಡರೇಶನ್ (ZSF) ಗುಂಡಿನ ಚಕಮಕಿಯ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿದೆ. “ಜಿರಿಬಾಮ್‌ನಲ್ಲಿ ನಿನ್ನೆ ಅಂದರೆ 11-11-2024 ರಂದು ನಮ್ಮ ಹನ್ನೊಂದು ಯುವಕರನ್ನು ವಿಶ್ವಾಸಘಾತುಕವಾಗಿ ಹತ್ಯೆಗೈದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಅಮಾನವೀಯ ಕ್ರಮಗಳ ಹಿನ್ನಲೆಯಲ್ಲಿ, ತಕ್ಷಣವೇ ಜಾರಿಗೆ ಬರುವಂತೆ ನಾವು CRPF ಅನ್ನು ಸಾಮಾಜಿಕ ಬಹಿಷ್ಕಾರ ಮಾಡಿದ್ದೇವೆ ಎಂದು ಘೋಷಿಸುತ್ತೇವೆ.” ಅದು ಹೇಳಿದೆ.

ಘಟನೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಎಚ್‌ಮಾರ್ ವಿದ್ಯಾರ್ಥಿಗಳ ಸಂಘ (ಎಚ್‌ಎಸ್‌ಎ) ಆಗ್ರಹಿಸಿದೆ. “ಜಖ್ರಾದವರ್‌ನಲ್ಲಿ ನಡೆದ ಹತ್ಯೆಗಳು ಮತ್ತು ಜೈರಾನ್ ಮೇಲಿನ ದಾಳಿಯ ಬಗ್ಗೆ ತಕ್ಷಣವೆ ಮತ್ತು ನಿಷ್ಪಕ್ಷಪಾತವಾದ ಸಿಬಿಐ ನೇತೃತ್ವದ ತನಿಖೆಯನ್ನು ನಾವು ಒತ್ತಾಯಿಸುತ್ತೇವೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ. ವಿಶ್ವಾಸಾರ್ಹ, ತಟಸ್ಥ ಭದ್ರತಾ ಕ್ರಮಗಳು ಜಾರಿಯಾಗುವವರೆಗೆ ಕುಕಿ-ಜೋ ಸಮುದಾಯಗಳು ವಾಸಿಸುವ ಪ್ರದೇಶಗಳಿಂದ CRPF ಮತ್ತು ಮಣಿಪುರ ಪೊಲೀಸ್ ಪಡೆಗಳನ್ನು ತಕ್ಷಣವೇ ಹಿಂಪಡೆಯಲು HSA ಆಗ್ರಹಿಸಿದೆ.

ಜಿರಿಬಾಮ್‌ನಲ್ಲಿ ನಡೆದ ದಾಳಿಯ ನಂತರ ಇನ್ನೂ ಆರು ಮಂದಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಪಕ್ಕದ ಬೆಟ್ಟಗಳಲ್ಲಿ ವಾಸಿಸುವ ಕುಕಿ-ಜೋ ಬುಡಕಟ್ಟು ಸಮುದಾಯದ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೆ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...