Homeಚಳವಳಿ10 ಜನರ ಗುಂಡಿಕ್ಕಿ ಹತ್ಯೆ | ಮಣಿಪುರದ ಗುಡ್ಡಗಾಡು ಪ್ರದೇಶ ಸಂಪೂರ್ಣ ಬಂದ್

10 ಜನರ ಗುಂಡಿಕ್ಕಿ ಹತ್ಯೆ | ಮಣಿಪುರದ ಗುಡ್ಡಗಾಡು ಪ್ರದೇಶ ಸಂಪೂರ್ಣ ಬಂದ್

- Advertisement -
- Advertisement -

ಮಣಿಪುರದ ಗುಡ್ಡಗಾಡು ಪ್ರದೇಶಗಳು ಮಂಗಳವಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಶಾಲಾ-ಕಾಲೇಜುಗಳು, ಮಾರುಕಟ್ಟೆಗಳು ಬಂದಾಗಿವೆ. ಬಂದ್ ಪರಿಣಾಮ ವಾಹನ ಸಂಚಾರ ಕೂಡಾ ಸ್ಥಗಿತಗೊಂಡಿದೆ ಎಂದು ದಿ ಟೆಲಿಗ್ರಾಫ್ ಆನ್‌ಲೈನ್ ವರದಿ ಮಾಡಿದೆ. ಸೋಮವಾರ ರಾಜ್ಯದ ಜಿರಿಬಾಮ್‌ನಲ್ಲಿ ಸೇನೆಯಿಂದ ಹತ್ಯೆಗೊಳಗಾದ 10 ಜನರಿಗೆ ಸಾಮೂಹಿಕ ಶ್ರದ್ಧಾಂಜಲಿ ಮತ್ತು ಬೆಂಬಲ ವ್ಯಕ್ತಪಡಿಸಿ ಕುಕಿ-ಜೊ ಕೌನ್ಸಿಲ್ 13 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು. ಈ ಬಂದ್ ಅನ್ನು ಬೆಳಿಗ್ಗೆ 5 ಗಂಟೆಗೆ ಪ್ರಾರಂಭಿಸಲಾಯಿತು. 10 ಜನರ

ಆದರೆ ಮಣಿಪುರ ಪೊಲೀಸರು, “ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬಂಡುಕೋರರು ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಜಿರಿಬಾಮ್ ಜಿಲ್ಲೆಯ ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ಮನಬಂದಂತೆ ಗುಂಡು ಹಾರಿಸಿದ ನಂತರ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಈ ಭೀಕರ ಗುಂಡಿನ ಚಕಮಕಿಯಲ್ಲಿ 10 ಶಂಕಿತ ಉಗ್ರರು ಹತರಾಗಿದ್ದಾರೆ” ಎಂದು ಹೇಳಿದ್ದರು. ಪೊಲೀಸರ ಈ ಪ್ರತಿಪಾದನೆಯನ್ನು ಕುಕಿ-ಜೊ ಕೌನ್ಸಿಲ್ ನಿರಾಕರಿಸಿದ್ದು, ಅವರು ‘ಗ್ರಾಮ ಸ್ವಯಂ ಸೇವಕ’ರಾಗಿದ್ದು, ಅವರನ್ನು ಸೇನೆಯು ಹೊಂಚು ಹಾಕಿ ಕೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. 10 ಜನರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಂದ್ ಸಮಯದಲ್ಲಿ ಕುಕಿ ಪ್ರಾಬಲ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಎಲ್ಲಿಯೂ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ಮುಚ್ಚಲ್ಪಟ್ಟಿದ್ದು, ಹೆಚ್ಚಿನ ಸ್ಥಳಗಳಲ್ಲಿ ಮಾರುಕಟ್ಟೆಗಳು ಮತ್ತು ಅಂಗಡಿಗಳನ್ನು ಮುಚ್ಚಲಾಗಿದೆ. ಸಾರ್ವಜನಿಕ ಸಾರಿಗೆ ಮತ್ತು ಖಾಸಗಿ ವಾಹನಗಳು ಕೂಡಾ ರಸ್ತೆಗಿಳಿಯಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಹಲವು ಕುಕಿ-ಜೋ ಸಂಘಟನೆಗಳು ಕೇಂದ್ರದ ಪಡೆಗಳನ್ನು ಗುರಿಯಾಗಿಸಿ, ಜಿರಿಬಾಮ್‌ನಲ್ಲಿ ನಡೆದ ಘಟನೆಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿವೆ.

ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) “…ಯಾವುದೇ ಸಿಆರ್‌ಪಿಎಫ್ ಸಿಬ್ಬಂದಿ ತಮ್ಮ ಶಿಬಿರದ ಆವರಣದಿಂದ ಹೊರಹೋಗಲು ಅನುಮತಿಸುವುದಿಲ್ಲ. ಈ ಸೂಚನೆಯನ್ನು ಉಲ್ಲಂಘಿಸಿದರೆ ಏನಾದರೂ ನಡೆದರೆ ಅದಕ್ಕೆ ಸಿಆರ್‌ಪಿಎಫ್ ಸಿಬ್ಬಂದಿಯೆ ಹೊಣೆ” ಎಂದು ಎಚ್ಚರಿಸಿದೆ.

“ಈ ಸೂಚನೆಯನ್ನು ನೀಡಿದ ತಕ್ಷಣ ಈ ನಿರ್ದೇಶನ ಜಾರಿಯಲ್ಲಿರುತ್ತದೆ. ಅಲ್ಲದೆ, ಸಿಆರ್‌ಪಿಎಫ್ ಜಿರಿಬಾಮ್‌ನಲ್ಲಿ ನಡೆಸಿದ ಅನಾಗರಿಕ ಕೃತ್ಯಗಳನ್ನು ಸಾರ್ವಜನಿಕವಾಗಿ ಅಂಗೀಕರಿಸುವ ವರೆಗೆ ಮತ್ತು ಕ್ಷಮೆಯಾಚಿಸುವವರೆಗೆ ಇದು ಜಾರಿಯಲ್ಲಿರುತ್ತದೆ. ಕುಕಿ ಪ್ರಾಬಲ್ಯವಿರುವ ಪ್ರದೇಶದಲ್ಲಿ ಸಿಆರ್‌ಪಿಎಫ್ ವಿರುದ್ಧ ಇದನ್ನು ದೊಡ್ಡ ಅಸಹಕಾರ ಚಳುವಳಿಯ ಭಾಗವಾಗಿ ಮಾಡಲಾಗುತ್ತದೆ. ಇದನ್ನು ಮುಂದಿನ ಸೂಚನೆಯವರೆಗೂ ಅನುಸರಿಸಲು ಸಾರ್ವಜನಿಕರಿಗೆ ಮನವಿ ಮಾಡಲಾಗುವುದು” ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ.

ಝೋಮಿ ಸ್ಟೂಡೆಂಟ್ಸ್ ಫೆಡರೇಶನ್ (ZSF) ಗುಂಡಿನ ಚಕಮಕಿಯ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿದೆ. “ಜಿರಿಬಾಮ್‌ನಲ್ಲಿ ನಿನ್ನೆ ಅಂದರೆ 11-11-2024 ರಂದು ನಮ್ಮ ಹನ್ನೊಂದು ಯುವಕರನ್ನು ವಿಶ್ವಾಸಘಾತುಕವಾಗಿ ಹತ್ಯೆಗೈದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಅಮಾನವೀಯ ಕ್ರಮಗಳ ಹಿನ್ನಲೆಯಲ್ಲಿ, ತಕ್ಷಣವೇ ಜಾರಿಗೆ ಬರುವಂತೆ ನಾವು CRPF ಅನ್ನು ಸಾಮಾಜಿಕ ಬಹಿಷ್ಕಾರ ಮಾಡಿದ್ದೇವೆ ಎಂದು ಘೋಷಿಸುತ್ತೇವೆ.” ಅದು ಹೇಳಿದೆ.

ಘಟನೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಎಚ್‌ಮಾರ್ ವಿದ್ಯಾರ್ಥಿಗಳ ಸಂಘ (ಎಚ್‌ಎಸ್‌ಎ) ಆಗ್ರಹಿಸಿದೆ. “ಜಖ್ರಾದವರ್‌ನಲ್ಲಿ ನಡೆದ ಹತ್ಯೆಗಳು ಮತ್ತು ಜೈರಾನ್ ಮೇಲಿನ ದಾಳಿಯ ಬಗ್ಗೆ ತಕ್ಷಣವೆ ಮತ್ತು ನಿಷ್ಪಕ್ಷಪಾತವಾದ ಸಿಬಿಐ ನೇತೃತ್ವದ ತನಿಖೆಯನ್ನು ನಾವು ಒತ್ತಾಯಿಸುತ್ತೇವೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ. ವಿಶ್ವಾಸಾರ್ಹ, ತಟಸ್ಥ ಭದ್ರತಾ ಕ್ರಮಗಳು ಜಾರಿಯಾಗುವವರೆಗೆ ಕುಕಿ-ಜೋ ಸಮುದಾಯಗಳು ವಾಸಿಸುವ ಪ್ರದೇಶಗಳಿಂದ CRPF ಮತ್ತು ಮಣಿಪುರ ಪೊಲೀಸ್ ಪಡೆಗಳನ್ನು ತಕ್ಷಣವೇ ಹಿಂಪಡೆಯಲು HSA ಆಗ್ರಹಿಸಿದೆ.

ಜಿರಿಬಾಮ್‌ನಲ್ಲಿ ನಡೆದ ದಾಳಿಯ ನಂತರ ಇನ್ನೂ ಆರು ಮಂದಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಪಕ್ಕದ ಬೆಟ್ಟಗಳಲ್ಲಿ ವಾಸಿಸುವ ಕುಕಿ-ಜೋ ಬುಡಕಟ್ಟು ಸಮುದಾಯದ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೆ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...