Homeಮುಖಪುಟರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಪ್ರಕರಣ; ಹತ್ತು ಗಂಭೀರ ಪ್ರಶ್ನೆಗಳು

ರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಪ್ರಕರಣ; ಹತ್ತು ಗಂಭೀರ ಪ್ರಶ್ನೆಗಳು

- Advertisement -
- Advertisement -

’ನೀವು ಸುಖಾಸುಮ್ಮನೇ ವಿಷಯಗಳನ್ನು ದೊಡ್ಡದಾಗಿ ಮಾಡ್ತೀರಿ, ವಿಷಯ ತುಂಬಾ ಸರಳವಾಗಿದೆ. ರಾಹುಲ್ ಗಾಂಧಿ ಯಾರಿಗೋ ಅಪಮಾನ ಮಾಡಿದರು. ಅವರ ಮೇಲೆ ಕೇಸ್ ಹಾಕಲಾಯಿತು. ನ್ಯಾಯಾಧೀಶರು ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಘೋಷಿಸಿದರು ಹಾಗೂ 2 ವರ್ಷಗಳ ಶಿಕ್ಷೆ ವಿಧಿಸಿದರು. ಇಂತಹ ಶಿಕ್ಷೆ ಸಿಕ್ಕಾಗ ಸಂಸತ್ತಿನ ಸದಸ್ಯತ್ವ ರದ್ದಾಗುತ್ತದೆ, ಹಾಗಾಗಿ ಅನರ್ಹಗೊಳಿಸಲಾಯಿತು. ಇದರಲ್ಲಿ ಮೋದಿ ಸರಕಾರವನ್ನು ದೂಷಿಸುವಂತಹ ಯಾವ ವಿಷಯವಿದೆ? ಅದಾನಿಗೂ ಇದಕ್ಕೂ ಏನು ಸಂಬಂಧ? ನೀವು ಕಾರಣವಿಲ್ಲದೇ ಎಲ್ಲಾ ವಿಷಯಗಳಲ್ಲೂ ಪಿತೂರಿ ಹುಡುಕುತ್ತೀರಿ.’

ಪಾರ್ಕಿನಲ್ಲಿ ನಡೆಯುತ್ತಿದ್ದಾಗ ನನಗೆ ಒಬ್ಬ ವಯಸ್ಕರು ಈ ಪ್ರಶ್ನೆಗಳನ್ನು ಹಾಕಿದರು. ಅವರು ಒಳ್ಳೆಯ ವ್ಯಕ್ತಿ ಅನಿಸಿದರು ಮತ್ತು ಯಾವುದೇ ಪಕ್ಷದ ಕಾರ್ಯಕರ್ತ ಅಥವಾ ಸಮರ್ಥಕರಾಗಿರಲಿಲ್ಲ. ಪ್ರಶ್ನೆಗಳೂ ಸರಳವಾಗಿದ್ದವು, ಸೂಕ್ತವೂ ಆಗಿದ್ದವು. ಕಾರಣವಿಲ್ಲದೇ ಪಿತೂರಿ ಹುಡುಕಬಾರದು ಎಂಬ ನಿಮ್ಮ ಅಭಿಪ್ರಾಯ ಒಪ್ಪಿಕೊಳ್ಳುತ್ತೇನೆ ಎಂದು ನಾನು ಹೇಳಿದೆ. ಪ್ರತಿಯೊಂದು ಸಣ್ಣಪುಟ್ಟ ವಿಷಯಗಳಲ್ಲೂ ಆಳವಾದ ಪಿತೂರಿಯ ಆರೋಪ ಮಾಡುವುದು ರಾಜಕೀಯದ ರೋಗವಾಗಿದೆ. ನಾವಿದನ್ನು ಮಾಡಬಾರದು. ಆದರೆ ರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸುವ ವಿಷಯದಲ್ಲಿ ಒಂದು ಆಳವಾದ ತಂತ್ರದ ಕಡೆಗೆ ಬೊಟ್ಟು ತೋರಿಸುವ ಹತ್ತು ವಿಚಿತ್ರ ವಿಷಯಗಳಿವೆ.

ಮೊದಲ ವಿಚಿತ್ರ, ರಾಹುಲ್ ಗಾಂಧಿ ಈ ಭಾಷಣ ಮಾಡಿದ್ದು ಕರ್ನಾಟಕದ ಕೋಲಾರದಲ್ಲಿ ಆದರೆ ಅವರ ವಿರುದ್ಧ ಮಾನನಷ್ಟ ಪ್ರಕರಣ ದಾಖಲಾಗಿದ್ದು ಗುಜರಾತಿನ ಸೂರತ್ ನಗರದಲ್ಲಿ. ಹೌದು, ಪ್ರಕರಣ ಎಲ್ಲಿ ದಾಖಲಾಗಬೇಕು ಎಂಬುದು ಪ್ರಕರಣ ದಾಖಲಿಸುವವನ ಇಚ್ಛೆ ಎಂದು ನೀವು ಹೇಳಬಹುದು. ಆದರೆ ನೆನಪಿಡಿ, ಪ್ರಕರಣ ದಾಖಲಿಸಿದವರು ಒಬ್ಬ ಸಾಮಾನ್ಯ ವ್ಯಕ್ತಿಯಲ್ಲ, ಅವರು ಬಿಜೆಪಿಯ ಶಾಸಕ ಪೂರ್ಣೇಶ ಮೋದಿ. ಇದರ ಹಿಂದೆ ಏನೋ ಅಡಗಿದೆ ಎಂದು ನಿಮಗೆ ಅನಿಸುತ್ತಿಲ್ಲವಾ?

ಎರಡನೆಯ ವಿಚಿತ್ರವೇನೆಂದರೆ, ಪ್ರಕರಣ ಶುರುವಾದ ನಂತರ ಆಗಿನ ನ್ಯಾಯಾಧೀಶರಾಗಿದ್ದ ಕಪಾಡಿಯಾ, ಎಲ್ಲಾ ವಿಚಾರಣೆಗಳ ಸಂದರ್ಭಗಳಲ್ಲಿ ರಾಹುಲ್ ಗಾಂಧಿ ಹಾಜರಿರಬೇಕು ಎಂಬ ಆದೇಶ ನೀಡಲು ನಿರಾಕರಿಸಿದಾಗ, ದೂರು ದಾಖಲಿಸಿದವರೇ ಹೈಕೋರ್ಟಿಗೆ ಹೋಗಿ, ತಮ್ಮ ಪ್ರಕರಣ ನಿಲ್ಲಿಸಿದರು; ಸಾಮಾನ್ಯವಾಗಿ ಆರೋಪಿ ತನ್ನ ವಿರುದ್ಧದ ಪ್ರಕರಣ ನಿಲ್ಲಿಸುವ ಪ್ರಯತ್ನ ಮಾಡುತ್ತಾಳೆ/ನೆ, ದೂರು ದಾಖಲಿಸಿದ ವ್ಯಕ್ತಿ ಈ ರೀತಿ ಮಾಡುವುದಿಲ್ಲ. ಇದರ ಹಿಂದೆ ನ್ಯಾಯಾಧೀಶರ ವರ್ಗಾವಣೆಗೆ ಕಾಯುವ ಇರಾದೆ ಇದ್ದಿರಬಹುದಲ್ಲವೇ?

ಮೂರನೆಯ ವಿಚಿತ್ರ, ಅದಾನಿ ವಿಷಯದಲ್ಲಿ ರಾಹುಲ್ ಗಾಂಧಿಯ ಭಾಷಣ ಮಾಡಿದ ಒಂದು ವಾರದೊಳಗೇ ಅಷ್ಟು ತರಾತುರಿಯಲ್ಲಿ ಬಿಜೆಪಿಯ ಶಾಸಕರು ವರ್ಷಗಳಿಂದ ತಣ್ಣಗೇ ಕುಳಿತಿದ್ದ ಪ್ರಕರಣವನ್ನು ಮತ್ತೊಮ್ಮೆ ಶುರು ಮಾಡುವ ಪ್ರಕ್ರಿಯೆ ಆರಂಭಿಸಿದರು. ಇದರ ಹಿಂದೆ ಯಾವುದೇ ರಾಜಕೀಯ ನಡೆ ಕಾಣುತ್ತಿಲ್ಲವೇ?

ನಾಲ್ಕನೆಯ ವಿಚಿತ್ರ: ಇದು ಎಂಥ ಕಾಕತಾಳೀಯ ನೋಡಿ, ದೂರುದಾರ ತನ್ನ ಪ್ರಕರಣ ನಿಲ್ಲಿಸಲು ಬಯಸಿದಾಗ ಹೈಕೋರ್ಟ್ ನಿಲ್ಲಿಸುತ್ತೆ, ಯಾವಾಗ ಮತ್ತೆ ಶುರು ಮಾಡಲು ಬಯಸುತ್ತಾರೋ ಆಗ ಹೈಕೋರ್ಟ್ ಮರು ಪ್ರಾರಂಭಿಸುತ್ತದೆ. ಸಾಮಾನ್ಯ ಪ್ರಕರಣಗಳಲ್ಲಿಯೂ ಹೈಕೋರ್ಟ್ ಇಷ್ಟು ಉದಾರವಾಗಿರುತ್ತದೆಯೇ?

ಪೂರ್ಣೇಶ್ ಮೋದಿ

ಐದನೆಯ ವಿಚಿತ್ರ, ನ್ಯಾಯಾಧೀಶ ಹಸ್‌ಮುಖ್‌ಭಾಯಿ ವರ್ಮಗೆ ಸಂಬಂಧಿಸಿದೆ. ಮತ್ತೆ ಪ್ರಕರಣ ಶುರುವಾದಾಗ ನ್ಯಾಯಾಧೀಶರು ಬದಲಾಗುತ್ತಾರೆ ಹಾಗೂ ಕಳೆದ ಆರು ತಿಂಗಳಲ್ಲಿ ವರ್ಮಾಸಾಹೇಬರಿಗೆ ಒಂದಲ್ಲ ಎರಡು ಬಡ್ತಿ ಸಿಕ್ಕಿವೆ. ನಿಮಗೆ ಇದು ಅನುಮಾನಾಸ್ಪದವಾಗಿ ಕಾಣಿಸುತ್ತಿಲ್ಲವೇ?

ಈಗ ಆರನೆಯ ವಿಚಿತ್ರ ನೋಡಿ. ಪ್ರಕರಣ ಎರಡನೆಯ ಸಲ ಶುರುವಾದ ಒಂದು ತಿಂಗಳೊಳಗೆ ವಿಚಾರಣೆ ಪೂರ್ಣಗೊಳ್ಳುತ್ತದೆ ಹಾಗೂ ತೀರ್ಪನ್ನೂ ಪ್ರಕಟಿಸಲಾಗುತ್ತದೆ. ಈ ದೇಶದ ನ್ಯಾಯಾಲಯಗಳು ಇಷ್ಟು ತ್ವರಿತವಾಗಿ ಬೇರೆ ಯಾವುದೇ ಪ್ರಕರಣಗಳಲ್ಲಿ ವಿಚಾರಣೆ ನಡೆಸುತ್ತವೆಯೇ? ಅಥವಾ ಯಾವುದೋ ಒಂದು ಡೆಡ್‌ಲೈನ್‌ಗಿಂತ ಮುನ್ನ ತೀರ್ಪು ಪ್ರಕಟಿಸುವ ತರಾತರಿಯಲ್ಲಿದ್ದರೆ?

ಆಯ್ತು, ತೀರ್ಪು ಬೇಗನೇ ಬಂತು ಆದರೆ ಬಂದ ತೀರ್ಪಿಗೆ ಸಂಬಂಧಿಸಿದ ಏಳನೆಯ ವಿಚಿತ್ರ ನೋಡಿ. ರಾಹುಲ್ ಗಾಂಧಿ ಕೆಲವು ಕಳ್ಳರನ್ನು ಹೆಸರಿಸಿ, ಏನು ಎಲ್ಲಾ ಕಳ್ಳರ ಉಪನಾಮ ಮೋದಿ ಏಕೆ ಎಂದು ಕೇಳಿದ್ದರು. ಆದರೆ ಯಾರ ಹೆಸರಲ್ಲಿ ಮೋದಿ ಅಂತಿದೆಯೋ, ಅವರು ಕಳ್ಳರಾಗಿರುವುದು ಏಕೆ ಎಂದು ಹೇಳಿದ್ದಿಲ್ಲ. ಹಾಗೂ ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದ್ದೇನೆಂದರೆ, ಯಾವುದೇ ವರ್ಗ ಅಥವಾ ಸಮುದಾಯದ ಅಪಮಾನ ಆಗಿದೆ ಎಂದ ಮಾತ್ರಕ್ಕೆ ನೀವು ನಿಮ್ಮ ಮಾನನಷ್ಟ ಆಗಿದೆ ಎಂದು ಪ್ರಕರಣ ದಾಖಲಿಸುವಂತಿಲ್ಲ ಎಂದು; ಅಂದರೆ, ಹೇಳಿಕೆಯೊಂದು ನೇರಾನೇರವಾಗಿ ನಿಮ್ಮ ಕಡೆಗೆ ಸೂಚಿಸುತ್ತಿಲ್ಲ ಎಂದರೆ ಪ್ರಕರಣ ದಾಖಲಿಸುವಂತಿಲ್ಲ. ರಾಹುಲ್ ಗಾಂಧಿಯವರು ಪೂರ್ಣೇಶ್ ಮೋದಿಯ ಹೆಸರನ್ನೂ ಹೇಳಿಲ್ಲ ಹಾಗೂ ಅವರ ಕಡೆ ಬೊಟ್ಟು ಮಾಡಿ ತೋರಿಸಲೂ ಇಲ್ಲ. ಇಂತಹದ್ದರಲ್ಲಿ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವನ್ನು ಕಡೆಗಣಿಸುತ್ತ ಅವರನ್ನು ತಪ್ಪಿತಸ್ಥ ಎಂದು ಹೇಗೆ ತೀರ್ಮಾನಿಸಲಾಗುತ್ತದೆ?

ಇದನ್ನೂ ಓದಿ: ‘ಗಾಂಧಿ ತತ್ವಗಳಿಗೆ ಎಸಗಿದ ದೊಡ್ಡ ದ್ರೋಹ’: ರಾಹುಲ್ ಅಮಾನತ್ತಿಗೆ ಅಮೆರಿಕ ಸಂಸದರಿಂದ ಖಂಡನೆ

ಎಂಟನೆಯ ವಿಚಿತ್ರದ ಕಾಕತಾಳೀಯ ನೋಡಿ; ಈ ಪ್ರಕರಣದ ಶಿಕ್ಷೆಯ ಅವಧಿಗೆ ಸಂಬಂಧಿಸಿದ್ದು. ಮಾನನಷ್ಟ ಮೊಕದ್ದಮೆಯಲ್ಲಿ ಯಾರೊಬ್ಬ ದೋಷಿಗೂ 2 ವರ್ಷದ ಸೆರೆವಾಸ ಸಿಕ್ಕಿದ್ದರ ಬಗ್ಗೆ ದೇಶದ ಯಾವ ದೊಡ್ಡ ವಕೀಲರೂ ಒಂದು ಉದಾಹರಣೆ ನೀಡಲು ಸಾಧ್ಯವಾಗಿಲ್ಲ. ಇಂತಹ ಹಿಂದೆಂದೂ ಕಾಣದಂತಹ ಗರಿಷ್ಠ ಸಂಭಾವ್ಯ ಶಿಕ್ಷೆ ರಾಹುಲ್ ಗಾಂಧಿಗೆ ಏಕೆ ವಿಧಿಸಲಾಯಿತು? 2 ವರ್ಷದ ಶಿಕ್ಷೆಯಿಲ್ಲದೇ ಯಾರನ್ನೂ ಸಂಸತ್ತಿನಿಂದ ಅನರ್ಹಗೊಳಿಸಲು ಸಾಧ್ಯವಿಲ್ಲ ಎಂಬುದೂ ಕೇವಲ ಕಾಕತಾಳೀಯವೇ?

ಒಂಬತ್ತನೆಯ ಕಾಕತಾಳೀಯ, ಸೂರತ್‌ನ ನ್ಯಾಯಾಧೀಶರು ತೀರ್ಪು ನೀಡಿದ 24 ಗಂಟೆಗಳಲ್ಲಿ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಅನರ್ಹ ಎಂದು ಘೋಷಿಸುವ ಅಧಿಸೂಚನೆಯನ್ನು ಜಾರಿಗೊಳಿಸಲಾಯಿತು. ಇಲ್ಲಿಯವರೆಗೆ ಆದ ಇಂತಹ ಪ್ರಕರಣಗಳಲ್ಲಿ ಕ್ರಮ ತೆಗೆದುಕೊಳ್ಳಲು ಕನಿಷ್ಠ ಒಂದು ತಿಂಗಳು ಬೇಕಾಗಿದೆ. ಈ ಬಾರಿ ಮಿಂಚಿನ ವೇಗ ಏಕೆ? ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹೋಗಿ ಈ ತೀರ್ಪಿನ ವಿರುದ್ಧ ಸ್ಟೇ ತೆಗೆದುಕೊಂಡು ಬರಬಾರದು ಎಂಬ ಕಾರಣಕ್ಕೆ ಈ ತರಾತುರಿಯೇ? ಅಂದರೆ ಯಾರೋ ಎಲ್ಲೋ ಮುಂಚೆಯಿಂದಲೇ ಈ ಯೋಜನೆ ಮಾಡಿಟ್ಟಿದ್ದರೆ?

10ನೆಯ ವಿಚಿತ್ರ ಸಂವಿಧಾನಕ್ಕೆ ಸಂಬಂಧಿಸಿದೆ; ಏಕೆಂದರೆ ಸಂವಿಧಾನದ 103ನೆಯ ಅನುಚ್ಛೇದದ ಅನುಗುಣವಾಗಿ ಯಾವುದೇ ಸಂಸದರನ್ನು ಅನರ್ಹ ಎಂದು ಘೋಷಿಸುವ ಮುನ್ನ ರಾಷ್ಟ್ರಪತಿಯವರ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ. ಆದರೆ ಈ ವಿಷಯದಲ್ಲಿ ರಾಷ್ಟ್ರಪತಿಯವರ ಅಭಿಪ್ರಾಯ ಏಕೆ ತೆಗೆದುಕೊಳ್ಳಲಿಲ್ಲ? ರಾಷ್ಟ್ರಪತಿ ತಮ್ಮ ಅಭಿಪ್ರಾಯ ತೆಗೆದುಕೊಳ್ಳಲು ಚುನಾವಣಾ ಆಯೋಗದ ಅಭಿಪ್ರಾಯ ತೆಗೆದುಕೊಳ್ಳಬೇಕಾಗುತ್ತಿತ್ತು ಹಾಗೂ ಅದರಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸುವಲ್ಲಿ ತಡವಾಗುತ್ತಿತ್ತು ಎಂಬ ಕಾರಣಕ್ಕೆ ರಾಷ್ಟ್ರಪತಿಯವರ ಅನುಮತಿ ತೆಗೆದುಕೊಳ್ಳಲು ಮುಂದಾಗಲಿಲ್ಲವೇ?

ನನ್ನ ಎಲ್ಲ ಪ್ರಶ್ನೆಗಳನ್ನು ಕೇಳಿಸಿಕೊಂಡು ಆ ಸಾಹೇಬರು ಹ್ಮೂ ಅಂದು ಸುಮ್ಮನಾದರು. ಈಗ ನೀವೇ ಹೇಳಿ, ಇದು ಒಂದು ಸಾಮಾನ್ಯ ನ್ಯಾಯದ ಪ್ರಕ್ರಿಯೆಯೇ? ಅಥವಾ ಇನ್ನುಮುಂದೆ ರಾಹುಲ್ ಗಾಂಧಿಗೆ ಸಂಸತ್ತಿನಲ್ಲಿ ಮಾತನಾಡಲು ಬಿಡಬಾರದು ಎಂದು ಯಾರೋ ಮೊದಲೇ ತೀರ್ಮಾನಿಸಿದ್ದರೆ? ಅದಾನಿ ವಿರುದ್ಧ ಅವರು ಮಾತನಾಡಿದ್ದಕ್ಕೂ ಇದಕ್ಕೂ ಏನಾದರೂ ಸಂಬಂಧವಿದೆಯೇ? ತೀರ್ಮಾನ ಓದುಗರಿಗೆ ಬಿಟ್ಟಿದ್ದು.

ಕನ್ನಡಕ್ಕೆ: ರಾಜಶೇಖರ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಸಂಸ್ಥಾಪಕರಲ್ಲೊಬ್ಬರು, ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂಗತಿಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...