Homeಮುಖಪುಟಮಣಿಪುರ | ಜಿರಿಬಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ : 10 ಕುಕಿ ಬಂಡುಕೋರರ ಹತ್ಯೆ

ಮಣಿಪುರ | ಜಿರಿಬಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ : 10 ಕುಕಿ ಬಂಡುಕೋರರ ಹತ್ಯೆ

ವರ್ಷ ಕಳೆದರೂ ನಿಲ್ಲದ ಹಿಂಸಾಚಾರ, ಬಂದ್‌ ಕರೆಕೊಟ್ಟ ಕುಕಿ ಕೌನ್ಸಿಲ್

- Advertisement -
- Advertisement -

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಸೋಮವಾರ (ನ.11) ನಡೆದ ಗುಂಡಿನ ಚಕಮಕಿಯಲ್ಲಿ 10 ಶಂಕಿತ ಕುಕಿ-ಜೋ ಬಂಡುಕೋರರು ಹತರಾಗಿದ್ದಾರೆ ಮತ್ತು ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜವಾನರು ಗಾಯಗೊಂಡಿದ್ದಾರೆ.

ಬೊರೊಬೆಕ್ರಾ ಉಪವಿಭಾಗದಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳೀಯ ಪೊಲೀಸ್ ಠಾಣೆ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ. ಸಮವಸ್ತ್ರದಲ್ಲಿದ್ದ ಬಂಡುಕೋರರು ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಜೊತೆ ಆಗಮಿಸಿ, ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದರೆ, ಇನ್ನೂ ಕೆಲವರು ಠಾಣೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಜಕುರಾಧೋರ್ ಕರೋಂಗ್ ಮಾರುಕಟ್ಟೆಗೆ ತೆರಳಿ, ಅಲ್ಲಿ ಹಲವಾರು ಅಂಗಡಿಗಳನ್ನು ಸುಟ್ಟು ಹಾಕಿದ್ದಾರೆ ಮತ್ತು ಮನೆಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಭಾರೀ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಶಂಕಿತ ಬಂಡುಕೋರರು ಸಾವನ್ನಪ್ಪಿದ್ದಾರೆ. ಬಳಿಕ ಮೃತರ ಶವಗಳನ್ನು ಬೊರೊಬೆಕ್ರಾ ಪೊಲೀಸ್ ಠಾಣೆಗೆ ತರಲಾಗಿದೆ.

“ಇಂದು ನವೆಂಬರ್ 11, 2024 ಮಧ್ಯಾಹ್ನ 3 ಗಂಟೆಗೆ ಜಕುರಾಧೋರ್ ಮಾರುಕಟ್ಟೆ ಮತ್ತು ಬೊರೊಬೆಕ್ರಾ ಪೊಲೀಸ್ ಠಾಣೆ ಹಾಗೂ ಅದರ ಸಮೀಪದಲ್ಲಿರುವ ಸಿಆರ್‌ಪಿಎಫ್ ಶಿಬಿರದ ಮೇಲೆ ಸಶಸ್ತ್ರ ಬಂಡುಕೋರರು ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಪ್ರಬಲ ಪ್ರತಿದಾಳಿ ನಡೆಸಿವೆ. ಘಟನೆಯಲ್ಲಿ ಒಬ್ದರು ಸಿಆರ್‌ಪಿಎಫ್ ಕಾನ್‌ಸ್ಟೇಬಲ್ ಸಂಜೀವ್ ಕುಮಾರ್‌ ಎಂಬವರಿಗೆ ಬುಲೆಟ್ ತಗುಲಿ ಗಾಯವಾಗಿದೆ. ಅಸ್ಸಾಂನ ಸಿಲ್ಚಾರ್ ವೈದ್ಯಕೀಯ ಕಾಲೇಜಿಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಣಿಪುರ ಪೊಲೀಸ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

“ಸುಮಾರು 40-45 ನಿಮಿಷಗಳ ಭಾರೀ ಗುಂಡಿನ ಚಕಮಕಿಯ ನಂತರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು. ಗುಂಡು ಹಾರಾಟ ನಿಲ್ಲಿಸಿದ ನಂತರ, ಘಟನಾ ಪ್ರದೇಶವನ್ನು ಶೋಧಿಸಲಾಗಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಶಸ್ತ್ರಸಜ್ಜಿತ ಬಂಡುಕೋರರ 10 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಅದರ ಪ್ರಕಾರ, ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದೆ.

ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ ಮೂರು ಎಕೆ ಸರಣಿಯ ರೈಫಲ್‌ಗಳು, ನಾಲ್ಕು ಎಸ್‌ಎಲ್‌ಆರ್‌ಗಳು, ಎರಡು ಐಎನ್‌ಎಸ್‌ಎಸ್‌ ರೈಫಲ್‌ಗಳು, ಒಂದು ಆರ್‌ಪಿಜಿ ಮತ್ತು ಪಂಪ್-ಆಕ್ಷನ್ ಗನ್ ಜೊತೆಗೆ ಬುಲೆಟ್ ಪ್ರೂಫ್ ಹೆಲ್ಮೆಟ್‌ಗಳು ಮತ್ತು ಮ್ಯಾಗಜೀನ್‌ಗಳು ಸೇರಿವೆ.

ಬೊರೊಬೆಕ್ರಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆಂತರಿಕವಾಗಿ ಸ್ಥಳಾಂತರಗೊಂಡ ಜನರಿಗಾಗಿ ಪರಿಹಾರ ಶಿಬಿರವಿದ್ದು, ಅಲ್ಲಿ ವಾಸಿಸುತ್ತಿದ್ದ ಐವರು ನಾಪತ್ತೆಯಾಗಿದ್ದಾರೆ. ಈ ನಾಗರಿಕರನ್ನು ಬಂಡುಕೋರರು ಅಪಹರಿಸಿದ್ದಾರೆಯೇ? ಅಥವಾ ದಾಳಿ ನಡೆದಾಗ ಅವರೇ ಸ್ಥಳಾಂತರವಾಗಿದ್ದಾರೆಯೇ? ಎಂಬುವುದು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗಾಗಿ ಶೋಧ ನಡೆಯುತ್ತಿದೆ ಎಂದಿದ್ದಾರೆ.

ಬಂಡುಕೋರರ ವಿರುದ್ದದ ಕಾರ್ಯಾಚರಣೆ ಮುಂದುವರಿದಿದ್ದು, ಅಸ್ಸಾಂ ರೈಫಲ್ಸ್, ಸಿಆರ್‌ಪಿಎಫ್ ಮತ್ತು ಸಿವಿಲ್ ಪೊಲೀಸರನ್ನೊಳಗೊಂಡ ತಂಡಗಳು ಸ್ಥಳಕ್ಕೆ ಆಗಮಿಸಿವೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

ಗಮನಾರ್ಹವಾಗಿ, ಬೊರೊಬೆಕ್ರಾ ಪೊಲೀಸ್ ಠಾಣೆ ಮೇಲೆ ಈ ಹಿಂದೆಯೂ ಅನೇಕ ದಾಳಿಗಳು ನಡೆದಿದೆ. ಇದು ಜಿಲ್ಲೆಯ ಅತ್ಯಂತ ಹೆಚ್ಚು ಬಾಧಿತ ಪ್ರದೇಶಗಳಲ್ಲಿ ಒಂದಾಗಿದೆ. ಗುಂಡಿನ ಚಕಮಕಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಿತ್ತು.

ಸೋಮವಾರದ ಘಟನೆಯ ನಂತರ, ಅಧಿಕಾರಿಗಳು ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಿದ್ದಾರೆ. ಬಿಎನ್‌ಎಸ್‌ಎಸ್‌ನ ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕುಕಿ-ಜೋ ಕೌನ್ಸಿಲ್ ತನ್ನ 11 ಸ್ವಯಂ ಸೇವಕರ ಹತ್ಯೆಯನ್ನು ತೀವ್ರವಾಗಿ ಖಂಡಿಸಿದೆ. ಅವರಿಗೆ ಗೌರವ ಸೂಚಿಸುವ ಸಲುವಾಗಿ ಇಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ಗೆ ಕರೆ ಕೊಟ್ಟಿದೆ.

ಇದನ್ನೂ ಓದಿ : ಬಾಬಾ ಸಿದ್ದೀಕ್ ಹತ್ಯೆ ಪ್ರಕರಣ | ಪ್ರಮುಖ ಆರೋಪಿಯನ್ನು ಬಂಧಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...