Homeಮುಖಪುಟಮಣಿಪುರ | ಜಿರಿಬಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ : 10 ಕುಕಿ ಬಂಡುಕೋರರ ಹತ್ಯೆ

ಮಣಿಪುರ | ಜಿರಿಬಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ : 10 ಕುಕಿ ಬಂಡುಕೋರರ ಹತ್ಯೆ

ವರ್ಷ ಕಳೆದರೂ ನಿಲ್ಲದ ಹಿಂಸಾಚಾರ, ಬಂದ್‌ ಕರೆಕೊಟ್ಟ ಕುಕಿ ಕೌನ್ಸಿಲ್

- Advertisement -
- Advertisement -

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಸೋಮವಾರ (ನ.11) ನಡೆದ ಗುಂಡಿನ ಚಕಮಕಿಯಲ್ಲಿ 10 ಶಂಕಿತ ಕುಕಿ-ಜೋ ಬಂಡುಕೋರರು ಹತರಾಗಿದ್ದಾರೆ ಮತ್ತು ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜವಾನರು ಗಾಯಗೊಂಡಿದ್ದಾರೆ.

ಬೊರೊಬೆಕ್ರಾ ಉಪವಿಭಾಗದಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳೀಯ ಪೊಲೀಸ್ ಠಾಣೆ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ. ಸಮವಸ್ತ್ರದಲ್ಲಿದ್ದ ಬಂಡುಕೋರರು ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಜೊತೆ ಆಗಮಿಸಿ, ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದರೆ, ಇನ್ನೂ ಕೆಲವರು ಠಾಣೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಜಕುರಾಧೋರ್ ಕರೋಂಗ್ ಮಾರುಕಟ್ಟೆಗೆ ತೆರಳಿ, ಅಲ್ಲಿ ಹಲವಾರು ಅಂಗಡಿಗಳನ್ನು ಸುಟ್ಟು ಹಾಕಿದ್ದಾರೆ ಮತ್ತು ಮನೆಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಭಾರೀ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಶಂಕಿತ ಬಂಡುಕೋರರು ಸಾವನ್ನಪ್ಪಿದ್ದಾರೆ. ಬಳಿಕ ಮೃತರ ಶವಗಳನ್ನು ಬೊರೊಬೆಕ್ರಾ ಪೊಲೀಸ್ ಠಾಣೆಗೆ ತರಲಾಗಿದೆ.

“ಇಂದು ನವೆಂಬರ್ 11, 2024 ಮಧ್ಯಾಹ್ನ 3 ಗಂಟೆಗೆ ಜಕುರಾಧೋರ್ ಮಾರುಕಟ್ಟೆ ಮತ್ತು ಬೊರೊಬೆಕ್ರಾ ಪೊಲೀಸ್ ಠಾಣೆ ಹಾಗೂ ಅದರ ಸಮೀಪದಲ್ಲಿರುವ ಸಿಆರ್‌ಪಿಎಫ್ ಶಿಬಿರದ ಮೇಲೆ ಸಶಸ್ತ್ರ ಬಂಡುಕೋರರು ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಪ್ರಬಲ ಪ್ರತಿದಾಳಿ ನಡೆಸಿವೆ. ಘಟನೆಯಲ್ಲಿ ಒಬ್ದರು ಸಿಆರ್‌ಪಿಎಫ್ ಕಾನ್‌ಸ್ಟೇಬಲ್ ಸಂಜೀವ್ ಕುಮಾರ್‌ ಎಂಬವರಿಗೆ ಬುಲೆಟ್ ತಗುಲಿ ಗಾಯವಾಗಿದೆ. ಅಸ್ಸಾಂನ ಸಿಲ್ಚಾರ್ ವೈದ್ಯಕೀಯ ಕಾಲೇಜಿಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಣಿಪುರ ಪೊಲೀಸ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

“ಸುಮಾರು 40-45 ನಿಮಿಷಗಳ ಭಾರೀ ಗುಂಡಿನ ಚಕಮಕಿಯ ನಂತರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು. ಗುಂಡು ಹಾರಾಟ ನಿಲ್ಲಿಸಿದ ನಂತರ, ಘಟನಾ ಪ್ರದೇಶವನ್ನು ಶೋಧಿಸಲಾಗಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಶಸ್ತ್ರಸಜ್ಜಿತ ಬಂಡುಕೋರರ 10 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಅದರ ಪ್ರಕಾರ, ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದೆ.

ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ ಮೂರು ಎಕೆ ಸರಣಿಯ ರೈಫಲ್‌ಗಳು, ನಾಲ್ಕು ಎಸ್‌ಎಲ್‌ಆರ್‌ಗಳು, ಎರಡು ಐಎನ್‌ಎಸ್‌ಎಸ್‌ ರೈಫಲ್‌ಗಳು, ಒಂದು ಆರ್‌ಪಿಜಿ ಮತ್ತು ಪಂಪ್-ಆಕ್ಷನ್ ಗನ್ ಜೊತೆಗೆ ಬುಲೆಟ್ ಪ್ರೂಫ್ ಹೆಲ್ಮೆಟ್‌ಗಳು ಮತ್ತು ಮ್ಯಾಗಜೀನ್‌ಗಳು ಸೇರಿವೆ.

ಬೊರೊಬೆಕ್ರಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆಂತರಿಕವಾಗಿ ಸ್ಥಳಾಂತರಗೊಂಡ ಜನರಿಗಾಗಿ ಪರಿಹಾರ ಶಿಬಿರವಿದ್ದು, ಅಲ್ಲಿ ವಾಸಿಸುತ್ತಿದ್ದ ಐವರು ನಾಪತ್ತೆಯಾಗಿದ್ದಾರೆ. ಈ ನಾಗರಿಕರನ್ನು ಬಂಡುಕೋರರು ಅಪಹರಿಸಿದ್ದಾರೆಯೇ? ಅಥವಾ ದಾಳಿ ನಡೆದಾಗ ಅವರೇ ಸ್ಥಳಾಂತರವಾಗಿದ್ದಾರೆಯೇ? ಎಂಬುವುದು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗಾಗಿ ಶೋಧ ನಡೆಯುತ್ತಿದೆ ಎಂದಿದ್ದಾರೆ.

ಬಂಡುಕೋರರ ವಿರುದ್ದದ ಕಾರ್ಯಾಚರಣೆ ಮುಂದುವರಿದಿದ್ದು, ಅಸ್ಸಾಂ ರೈಫಲ್ಸ್, ಸಿಆರ್‌ಪಿಎಫ್ ಮತ್ತು ಸಿವಿಲ್ ಪೊಲೀಸರನ್ನೊಳಗೊಂಡ ತಂಡಗಳು ಸ್ಥಳಕ್ಕೆ ಆಗಮಿಸಿವೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

ಗಮನಾರ್ಹವಾಗಿ, ಬೊರೊಬೆಕ್ರಾ ಪೊಲೀಸ್ ಠಾಣೆ ಮೇಲೆ ಈ ಹಿಂದೆಯೂ ಅನೇಕ ದಾಳಿಗಳು ನಡೆದಿದೆ. ಇದು ಜಿಲ್ಲೆಯ ಅತ್ಯಂತ ಹೆಚ್ಚು ಬಾಧಿತ ಪ್ರದೇಶಗಳಲ್ಲಿ ಒಂದಾಗಿದೆ. ಗುಂಡಿನ ಚಕಮಕಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಿತ್ತು.

ಸೋಮವಾರದ ಘಟನೆಯ ನಂತರ, ಅಧಿಕಾರಿಗಳು ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಿದ್ದಾರೆ. ಬಿಎನ್‌ಎಸ್‌ಎಸ್‌ನ ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕುಕಿ-ಜೋ ಕೌನ್ಸಿಲ್ ತನ್ನ 11 ಸ್ವಯಂ ಸೇವಕರ ಹತ್ಯೆಯನ್ನು ತೀವ್ರವಾಗಿ ಖಂಡಿಸಿದೆ. ಅವರಿಗೆ ಗೌರವ ಸೂಚಿಸುವ ಸಲುವಾಗಿ ಇಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ಗೆ ಕರೆ ಕೊಟ್ಟಿದೆ.

ಇದನ್ನೂ ಓದಿ : ಬಾಬಾ ಸಿದ್ದೀಕ್ ಹತ್ಯೆ ಪ್ರಕರಣ | ಪ್ರಮುಖ ಆರೋಪಿಯನ್ನು ಬಂಧಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...