Homeಮುಖಪುಟಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು.

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಕಟ್ಟಬೇಕಿರುವ 1.6 ಲಕ್ಷ ಕೋಟಿ ಎಜಿಆರ್ ಹಣ ವಿಚಾರವಾಗಿ ಅವುಗಳ ವಿರುದ್ಧ ಕಿಡಿಕಾರುತ್ತಿದ್ದ ಸುಪ್ರೀಂ ಕೋರ್ಟ್ ಇಂದು ಏಕಾಏಕಿ ಅವುಗಳಿಗೆ ಬಾಕಿ ಪಾವತಿಸಲು 10 ವರ್ಷಗಳ ಕಾಲಾವಕಾಶ ನೀಡಿದೆ.

ವೋಡಾಫೋನ್ ಐಡಿಯಾ, ಭಾರ್ತಿ ಏರ್‌ಟೆಲ್‌ ಸೇರಿದಂತೆ ಹಲವು ಕಂಪನಿಗಳಿಗೆ ಹಣ ಪಾವತಿಗೆ ಮಾರ್ಚ್ 2031 ರವರೆಗೂ ಕಾಲಾವಕಾಶ ನೀಡಿದೆ. ಆದರೆ 2021ರ ಮಾರ್ಚ್ 31ರ ಒಳಗೆ ಎಜಿಆರ್ ಬಾಕಿಯ ಶೇಕಡಾ 10ರಷ್ಟನ್ನು ಪಾವತಿಸಲು ಕೋರ್ಟ್ ತಿಳಿಸಿದೆ.

ನಾಳೆ ನಿವೃತ್ತಿಯಾಗಲಿರುವ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ. ಬಾಕಿ ಪಾವತಿಸಲು ಕನಿಷ್ಟ 7 -10 ವರ್ಷಗಳ ಗಡುವನ್ನು ಟಾಟಾ ಟೆಲಿಕಾಂ ಸಂಸ್ಥೆ ಕೇಳಿದರೇ, ವೋಡಾಫೋನ್-ಐಡಿಯಾ ಮತ್ತು ಭಾರ್ತಿ ಏರ್‌ಟೆಲ್ 15 ವರ್ಷಗಳ ಕಾಲಾವಕಾಶವನ್ನು ಕೇಳಿದ್ದವು. ಆದರೆ ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆ 20 ವರ್ಷಗಳ ಕಾಲಾವಕಾಶ ನೀಡುವಂತೆ ಸುಪ್ರೀಂಗೆ ಮನವಿ ಮಾಡಿತ್ತು.

ಹಣ ಪಾವತಿಯ ಜವಾಬ್ದಾರಿಯನ್ನು ಟೆಲಿಕಾಂ ಕಂಪನಿ ಅಧ್ಯಕ್ಷರು ವಹಿಸಬೇಕಾಗುತ್ತದೆ. ಕೇವಲ ಬಾಕಿ ಇರುವ ಹಣವಷ್ಟೇ ಅಲ್ಲದೇ, ಡಿಫಾಲ್ಟ್ ಬಡ್ಡಿ, ದಂಡ  ಮತ್ತು ನ್ಯಾಯಾಂಗ ನಿಂದನೆಯ ಹಣವನ್ನು ತುಂಬಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಏನಿದು ಎಜಿಆರ್ ಹಣ ಬಾಕಿ ತಕರಾರು?

1994 ರಾಷ್ಟ್ರೀಯ ಟೆಲಿಕಾಂ ನೀತಿಯ ಅಡಿಯಲ್ಲಿ ದೂರ ಸಂಪರ್ಕ ವಲಯವನ್ನು ಉದಾರೀಕರಣಗೊಳಿಸಲಾಯಿತು. ಈ ಬೆಳವಣಿಗೆಯ ನಂತರ ಟೆಲಿಕಾಂ ಕಂಪೆನಿಗಳಿಗೆ ತರಂಗಾಂತರಗಳನ್ನು ಸ್ಥಿರ ಪರವಾನಗಿ ವಾರ್ಷಿಕ ಶುಲ್ಕಕ್ಕೆ ಮಾರಾಟ ಮಾಡುವ ಪರಿಪಾಠ ಆರಂಭವಾಯಿತು.

ಸ್ಥಿರ ಪರವಾನಗಿ ಶುಲ್ಕದಿಂದ ಬಿಡುಗಡೆ ಹೊಂದಲು ಕೇಂದ್ರ ಸರ್ಕಾರ 1999ರಲ್ಲಿ ಆದಾಯ ಹಂಚಿಕೆ ಶುಲ್ಕ ವಿಧಾನಕ್ಕೆ ಪರವಾನಗಿಯನ್ನು ವರ್ಗಾಯಿಸಿಕೊಳ್ಳುವ ಅವಕಾಶವನ್ನು ಆಯಾ ಕಂಪೆನಿಗಳಿಗೆ ನೀಡಿತು.

ಈ ಕಾಲಘಟ್ಟದಲ್ಲಿ ಬದಲಾದ ಟೆಲಿಕಾಂ ನೀತಿಯ ಅನ್ವಯ ದೂರ ಸಂಪರ್ಕ ಆದಾಯದ ಜೊತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ವಾರ್ಷಿಕ ಪರವಾನಗಿ ಶುಲ್ಕ (ಎಜಿಆರ್) ಎಂದು ಕರೆಯಲಾಯಿತು. ತರಂಗಾತರ ಹಂಚಿಕೆ ಶುಲ್ಕದ ಜೊತೆಗೆ ಈ ಶುಲ್ಕವನ್ನು ವರ್ಷಕ್ಕೊಮ್ಮೆ ಕೇಂದ್ರ ದೂರ ಸಂಪರ್ಕ ಇಲಾಖೆಗೆ ಟೆಲಿಕಾಂ ಕಂಪೆನಿಗಳು ಪಾವತಿ ಮಾಡಬೇಕು ಎಂಬುದು ನಿಯಮ.


ಇದನ್ನೂ ಓದಿ: ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ


ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು. ಆದರೆ ಆ ಎರಡು ವಿಚಾರಕ್ಕೆ ಸುಪ್ರೀಂ ತಡೆ ನೀಡಿತ್ತು.

ಆಯಿಲ್ ಇಂಡಿಯಾ, ದೆಹಲಿ ಮೆಟ್ರೋ ರೈಲು ನಿಗಮ ಮತ್ತು ಪವರ್ ಗ್ರಿಡ್ ಕಾರ್ಪೊರೇಶನ್‌ನಂತಹ ಸಾರ್ವಜನಿಕ ವಲಯದ ಘಟಕಗಳಿಂದ ಬಾಕಿ ಹಣ ತುಂಬಿ ಕೊಡಬೇಕೆಂದು ಸರ್ಕಾರದ ದೂರಸಂಪರ್ಕ ಇಲಾಖೆ ಕೋರಿತ್ತು. ಇದಕ್ಕೆ ಸುಪ್ರೀಂಕೋರ್ಟ್ ಅನುಮತಿ ನಿರಾಕರಿಸಿ, ಕೇಂದ್ರಕ್ಕೆ ಟೆಲಿಕಾಂ ಕಂಪನಿಗಳಿಂದ ವಸೂಲಿ ಮಾಡುವಂತೆ ಖಡಕ್ ಎಚ್ಚರಿಕೆ ನೀಡಿತ್ತು.

ತನ್ನ ಹಲವು ಆದೇಶಗಳ ಹೊರತಾಗಿಯೂ ಟೆಲಿಕಾಂ ಕಂಪನಿಗಳು ಹಣ ಪಾವತಿ ಮಾಡದಿದ್ದಾಗ ಸುಪ್ರೀಂ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ ಇಂದು ಮಾತ್ರ ಸರಾಗವಾಗಿ 10 ವರ್ಷ ಸಮಯ ನೀಡುವ ಮೂಲಕ ಸುಪ್ರೀಂ ತನ್ನ ಹಿಂದಿನ ಆದೇಶಗಳನ್ನು ಮರೆತಿದ್ದು ಏಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ವೋಡಾಫೋನ್ -ಐಡಿಯಾ, ಭಾರ್ತಿ ಏರ್‌ಟೆಲ್, ಟಾಟಾ ಡೊಕೊಮೆ, ಜಿಯೋ ಸೇರಿದಂತೆ ಹಲವು ಕಂಪನಿಗಳು ಸುಮಾರು 1.6 ಲಕ್ಷ ಕೋಟಿ ಎಜಿಆರ್ ಹಣ ಬಾಕಿ ಉಳಿಸಿಕೊಂಡಿವೆ. ದಿವಾಳಿಯಾಗಿರುವ ಅನಿಲ್ ಅಂಬಾನಿ ನೇತೃತ್ವದ ರಿಲೆಯನ್ಸ್ ಕಮ್ಯುನಿಕೇ‍ಷನ್ ಈಗ ಆತನ ಸಹೋದರ ಮುಖೇಶ್ ಅಂಬಾನಿ ಪಾಲಾಗಿದ್ದು ಅದರ ಎಜಿಆರ್ ಯಾರು ಕಟ್ಟಬೇಕೆಂಬುದರ ಕುರಿತು ಸಹ ಚರ್ಚೆ ನಡೆಯುತ್ತಿವೆ.


ಇದನ್ನೂ ಓದಿ: ಜಿಯೋ ಎಂಬ ಟೆಲಿಕಾಂ ಕಂಪನಿ ಉಳಿದವುಗಳನ್ನು ನುಂಗಿ ಏಕಸ್ವಾಮ್ಯ ಸಾಧಿಸಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...