Homeಮುಖಪುಟಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು.

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಕಟ್ಟಬೇಕಿರುವ 1.6 ಲಕ್ಷ ಕೋಟಿ ಎಜಿಆರ್ ಹಣ ವಿಚಾರವಾಗಿ ಅವುಗಳ ವಿರುದ್ಧ ಕಿಡಿಕಾರುತ್ತಿದ್ದ ಸುಪ್ರೀಂ ಕೋರ್ಟ್ ಇಂದು ಏಕಾಏಕಿ ಅವುಗಳಿಗೆ ಬಾಕಿ ಪಾವತಿಸಲು 10 ವರ್ಷಗಳ ಕಾಲಾವಕಾಶ ನೀಡಿದೆ.

ವೋಡಾಫೋನ್ ಐಡಿಯಾ, ಭಾರ್ತಿ ಏರ್‌ಟೆಲ್‌ ಸೇರಿದಂತೆ ಹಲವು ಕಂಪನಿಗಳಿಗೆ ಹಣ ಪಾವತಿಗೆ ಮಾರ್ಚ್ 2031 ರವರೆಗೂ ಕಾಲಾವಕಾಶ ನೀಡಿದೆ. ಆದರೆ 2021ರ ಮಾರ್ಚ್ 31ರ ಒಳಗೆ ಎಜಿಆರ್ ಬಾಕಿಯ ಶೇಕಡಾ 10ರಷ್ಟನ್ನು ಪಾವತಿಸಲು ಕೋರ್ಟ್ ತಿಳಿಸಿದೆ.

ನಾಳೆ ನಿವೃತ್ತಿಯಾಗಲಿರುವ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ. ಬಾಕಿ ಪಾವತಿಸಲು ಕನಿಷ್ಟ 7 -10 ವರ್ಷಗಳ ಗಡುವನ್ನು ಟಾಟಾ ಟೆಲಿಕಾಂ ಸಂಸ್ಥೆ ಕೇಳಿದರೇ, ವೋಡಾಫೋನ್-ಐಡಿಯಾ ಮತ್ತು ಭಾರ್ತಿ ಏರ್‌ಟೆಲ್ 15 ವರ್ಷಗಳ ಕಾಲಾವಕಾಶವನ್ನು ಕೇಳಿದ್ದವು. ಆದರೆ ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆ 20 ವರ್ಷಗಳ ಕಾಲಾವಕಾಶ ನೀಡುವಂತೆ ಸುಪ್ರೀಂಗೆ ಮನವಿ ಮಾಡಿತ್ತು.

ಹಣ ಪಾವತಿಯ ಜವಾಬ್ದಾರಿಯನ್ನು ಟೆಲಿಕಾಂ ಕಂಪನಿ ಅಧ್ಯಕ್ಷರು ವಹಿಸಬೇಕಾಗುತ್ತದೆ. ಕೇವಲ ಬಾಕಿ ಇರುವ ಹಣವಷ್ಟೇ ಅಲ್ಲದೇ, ಡಿಫಾಲ್ಟ್ ಬಡ್ಡಿ, ದಂಡ  ಮತ್ತು ನ್ಯಾಯಾಂಗ ನಿಂದನೆಯ ಹಣವನ್ನು ತುಂಬಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಏನಿದು ಎಜಿಆರ್ ಹಣ ಬಾಕಿ ತಕರಾರು?

1994 ರಾಷ್ಟ್ರೀಯ ಟೆಲಿಕಾಂ ನೀತಿಯ ಅಡಿಯಲ್ಲಿ ದೂರ ಸಂಪರ್ಕ ವಲಯವನ್ನು ಉದಾರೀಕರಣಗೊಳಿಸಲಾಯಿತು. ಈ ಬೆಳವಣಿಗೆಯ ನಂತರ ಟೆಲಿಕಾಂ ಕಂಪೆನಿಗಳಿಗೆ ತರಂಗಾಂತರಗಳನ್ನು ಸ್ಥಿರ ಪರವಾನಗಿ ವಾರ್ಷಿಕ ಶುಲ್ಕಕ್ಕೆ ಮಾರಾಟ ಮಾಡುವ ಪರಿಪಾಠ ಆರಂಭವಾಯಿತು.

ಸ್ಥಿರ ಪರವಾನಗಿ ಶುಲ್ಕದಿಂದ ಬಿಡುಗಡೆ ಹೊಂದಲು ಕೇಂದ್ರ ಸರ್ಕಾರ 1999ರಲ್ಲಿ ಆದಾಯ ಹಂಚಿಕೆ ಶುಲ್ಕ ವಿಧಾನಕ್ಕೆ ಪರವಾನಗಿಯನ್ನು ವರ್ಗಾಯಿಸಿಕೊಳ್ಳುವ ಅವಕಾಶವನ್ನು ಆಯಾ ಕಂಪೆನಿಗಳಿಗೆ ನೀಡಿತು.

ಈ ಕಾಲಘಟ್ಟದಲ್ಲಿ ಬದಲಾದ ಟೆಲಿಕಾಂ ನೀತಿಯ ಅನ್ವಯ ದೂರ ಸಂಪರ್ಕ ಆದಾಯದ ಜೊತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ವಾರ್ಷಿಕ ಪರವಾನಗಿ ಶುಲ್ಕ (ಎಜಿಆರ್) ಎಂದು ಕರೆಯಲಾಯಿತು. ತರಂಗಾತರ ಹಂಚಿಕೆ ಶುಲ್ಕದ ಜೊತೆಗೆ ಈ ಶುಲ್ಕವನ್ನು ವರ್ಷಕ್ಕೊಮ್ಮೆ ಕೇಂದ್ರ ದೂರ ಸಂಪರ್ಕ ಇಲಾಖೆಗೆ ಟೆಲಿಕಾಂ ಕಂಪೆನಿಗಳು ಪಾವತಿ ಮಾಡಬೇಕು ಎಂಬುದು ನಿಯಮ.


ಇದನ್ನೂ ಓದಿ: ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ


ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು. ಆದರೆ ಆ ಎರಡು ವಿಚಾರಕ್ಕೆ ಸುಪ್ರೀಂ ತಡೆ ನೀಡಿತ್ತು.

ಆಯಿಲ್ ಇಂಡಿಯಾ, ದೆಹಲಿ ಮೆಟ್ರೋ ರೈಲು ನಿಗಮ ಮತ್ತು ಪವರ್ ಗ್ರಿಡ್ ಕಾರ್ಪೊರೇಶನ್‌ನಂತಹ ಸಾರ್ವಜನಿಕ ವಲಯದ ಘಟಕಗಳಿಂದ ಬಾಕಿ ಹಣ ತುಂಬಿ ಕೊಡಬೇಕೆಂದು ಸರ್ಕಾರದ ದೂರಸಂಪರ್ಕ ಇಲಾಖೆ ಕೋರಿತ್ತು. ಇದಕ್ಕೆ ಸುಪ್ರೀಂಕೋರ್ಟ್ ಅನುಮತಿ ನಿರಾಕರಿಸಿ, ಕೇಂದ್ರಕ್ಕೆ ಟೆಲಿಕಾಂ ಕಂಪನಿಗಳಿಂದ ವಸೂಲಿ ಮಾಡುವಂತೆ ಖಡಕ್ ಎಚ್ಚರಿಕೆ ನೀಡಿತ್ತು.

ತನ್ನ ಹಲವು ಆದೇಶಗಳ ಹೊರತಾಗಿಯೂ ಟೆಲಿಕಾಂ ಕಂಪನಿಗಳು ಹಣ ಪಾವತಿ ಮಾಡದಿದ್ದಾಗ ಸುಪ್ರೀಂ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ ಇಂದು ಮಾತ್ರ ಸರಾಗವಾಗಿ 10 ವರ್ಷ ಸಮಯ ನೀಡುವ ಮೂಲಕ ಸುಪ್ರೀಂ ತನ್ನ ಹಿಂದಿನ ಆದೇಶಗಳನ್ನು ಮರೆತಿದ್ದು ಏಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ವೋಡಾಫೋನ್ -ಐಡಿಯಾ, ಭಾರ್ತಿ ಏರ್‌ಟೆಲ್, ಟಾಟಾ ಡೊಕೊಮೆ, ಜಿಯೋ ಸೇರಿದಂತೆ ಹಲವು ಕಂಪನಿಗಳು ಸುಮಾರು 1.6 ಲಕ್ಷ ಕೋಟಿ ಎಜಿಆರ್ ಹಣ ಬಾಕಿ ಉಳಿಸಿಕೊಂಡಿವೆ. ದಿವಾಳಿಯಾಗಿರುವ ಅನಿಲ್ ಅಂಬಾನಿ ನೇತೃತ್ವದ ರಿಲೆಯನ್ಸ್ ಕಮ್ಯುನಿಕೇ‍ಷನ್ ಈಗ ಆತನ ಸಹೋದರ ಮುಖೇಶ್ ಅಂಬಾನಿ ಪಾಲಾಗಿದ್ದು ಅದರ ಎಜಿಆರ್ ಯಾರು ಕಟ್ಟಬೇಕೆಂಬುದರ ಕುರಿತು ಸಹ ಚರ್ಚೆ ನಡೆಯುತ್ತಿವೆ.


ಇದನ್ನೂ ಓದಿ: ಜಿಯೋ ಎಂಬ ಟೆಲಿಕಾಂ ಕಂಪನಿ ಉಳಿದವುಗಳನ್ನು ನುಂಗಿ ಏಕಸ್ವಾಮ್ಯ ಸಾಧಿಸಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...