Homeಮುಖಪುಟಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು.

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಕಟ್ಟಬೇಕಿರುವ 1.6 ಲಕ್ಷ ಕೋಟಿ ಎಜಿಆರ್ ಹಣ ವಿಚಾರವಾಗಿ ಅವುಗಳ ವಿರುದ್ಧ ಕಿಡಿಕಾರುತ್ತಿದ್ದ ಸುಪ್ರೀಂ ಕೋರ್ಟ್ ಇಂದು ಏಕಾಏಕಿ ಅವುಗಳಿಗೆ ಬಾಕಿ ಪಾವತಿಸಲು 10 ವರ್ಷಗಳ ಕಾಲಾವಕಾಶ ನೀಡಿದೆ.

ವೋಡಾಫೋನ್ ಐಡಿಯಾ, ಭಾರ್ತಿ ಏರ್‌ಟೆಲ್‌ ಸೇರಿದಂತೆ ಹಲವು ಕಂಪನಿಗಳಿಗೆ ಹಣ ಪಾವತಿಗೆ ಮಾರ್ಚ್ 2031 ರವರೆಗೂ ಕಾಲಾವಕಾಶ ನೀಡಿದೆ. ಆದರೆ 2021ರ ಮಾರ್ಚ್ 31ರ ಒಳಗೆ ಎಜಿಆರ್ ಬಾಕಿಯ ಶೇಕಡಾ 10ರಷ್ಟನ್ನು ಪಾವತಿಸಲು ಕೋರ್ಟ್ ತಿಳಿಸಿದೆ.

ನಾಳೆ ನಿವೃತ್ತಿಯಾಗಲಿರುವ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ. ಬಾಕಿ ಪಾವತಿಸಲು ಕನಿಷ್ಟ 7 -10 ವರ್ಷಗಳ ಗಡುವನ್ನು ಟಾಟಾ ಟೆಲಿಕಾಂ ಸಂಸ್ಥೆ ಕೇಳಿದರೇ, ವೋಡಾಫೋನ್-ಐಡಿಯಾ ಮತ್ತು ಭಾರ್ತಿ ಏರ್‌ಟೆಲ್ 15 ವರ್ಷಗಳ ಕಾಲಾವಕಾಶವನ್ನು ಕೇಳಿದ್ದವು. ಆದರೆ ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆ 20 ವರ್ಷಗಳ ಕಾಲಾವಕಾಶ ನೀಡುವಂತೆ ಸುಪ್ರೀಂಗೆ ಮನವಿ ಮಾಡಿತ್ತು.

ಹಣ ಪಾವತಿಯ ಜವಾಬ್ದಾರಿಯನ್ನು ಟೆಲಿಕಾಂ ಕಂಪನಿ ಅಧ್ಯಕ್ಷರು ವಹಿಸಬೇಕಾಗುತ್ತದೆ. ಕೇವಲ ಬಾಕಿ ಇರುವ ಹಣವಷ್ಟೇ ಅಲ್ಲದೇ, ಡಿಫಾಲ್ಟ್ ಬಡ್ಡಿ, ದಂಡ  ಮತ್ತು ನ್ಯಾಯಾಂಗ ನಿಂದನೆಯ ಹಣವನ್ನು ತುಂಬಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಏನಿದು ಎಜಿಆರ್ ಹಣ ಬಾಕಿ ತಕರಾರು?

1994 ರಾಷ್ಟ್ರೀಯ ಟೆಲಿಕಾಂ ನೀತಿಯ ಅಡಿಯಲ್ಲಿ ದೂರ ಸಂಪರ್ಕ ವಲಯವನ್ನು ಉದಾರೀಕರಣಗೊಳಿಸಲಾಯಿತು. ಈ ಬೆಳವಣಿಗೆಯ ನಂತರ ಟೆಲಿಕಾಂ ಕಂಪೆನಿಗಳಿಗೆ ತರಂಗಾಂತರಗಳನ್ನು ಸ್ಥಿರ ಪರವಾನಗಿ ವಾರ್ಷಿಕ ಶುಲ್ಕಕ್ಕೆ ಮಾರಾಟ ಮಾಡುವ ಪರಿಪಾಠ ಆರಂಭವಾಯಿತು.

ಸ್ಥಿರ ಪರವಾನಗಿ ಶುಲ್ಕದಿಂದ ಬಿಡುಗಡೆ ಹೊಂದಲು ಕೇಂದ್ರ ಸರ್ಕಾರ 1999ರಲ್ಲಿ ಆದಾಯ ಹಂಚಿಕೆ ಶುಲ್ಕ ವಿಧಾನಕ್ಕೆ ಪರವಾನಗಿಯನ್ನು ವರ್ಗಾಯಿಸಿಕೊಳ್ಳುವ ಅವಕಾಶವನ್ನು ಆಯಾ ಕಂಪೆನಿಗಳಿಗೆ ನೀಡಿತು.

ಈ ಕಾಲಘಟ್ಟದಲ್ಲಿ ಬದಲಾದ ಟೆಲಿಕಾಂ ನೀತಿಯ ಅನ್ವಯ ದೂರ ಸಂಪರ್ಕ ಆದಾಯದ ಜೊತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ವಾರ್ಷಿಕ ಪರವಾನಗಿ ಶುಲ್ಕ (ಎಜಿಆರ್) ಎಂದು ಕರೆಯಲಾಯಿತು. ತರಂಗಾತರ ಹಂಚಿಕೆ ಶುಲ್ಕದ ಜೊತೆಗೆ ಈ ಶುಲ್ಕವನ್ನು ವರ್ಷಕ್ಕೊಮ್ಮೆ ಕೇಂದ್ರ ದೂರ ಸಂಪರ್ಕ ಇಲಾಖೆಗೆ ಟೆಲಿಕಾಂ ಕಂಪೆನಿಗಳು ಪಾವತಿ ಮಾಡಬೇಕು ಎಂಬುದು ನಿಯಮ.


ಇದನ್ನೂ ಓದಿ: ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ


ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು. ಆದರೆ ಆ ಎರಡು ವಿಚಾರಕ್ಕೆ ಸುಪ್ರೀಂ ತಡೆ ನೀಡಿತ್ತು.

ಆಯಿಲ್ ಇಂಡಿಯಾ, ದೆಹಲಿ ಮೆಟ್ರೋ ರೈಲು ನಿಗಮ ಮತ್ತು ಪವರ್ ಗ್ರಿಡ್ ಕಾರ್ಪೊರೇಶನ್‌ನಂತಹ ಸಾರ್ವಜನಿಕ ವಲಯದ ಘಟಕಗಳಿಂದ ಬಾಕಿ ಹಣ ತುಂಬಿ ಕೊಡಬೇಕೆಂದು ಸರ್ಕಾರದ ದೂರಸಂಪರ್ಕ ಇಲಾಖೆ ಕೋರಿತ್ತು. ಇದಕ್ಕೆ ಸುಪ್ರೀಂಕೋರ್ಟ್ ಅನುಮತಿ ನಿರಾಕರಿಸಿ, ಕೇಂದ್ರಕ್ಕೆ ಟೆಲಿಕಾಂ ಕಂಪನಿಗಳಿಂದ ವಸೂಲಿ ಮಾಡುವಂತೆ ಖಡಕ್ ಎಚ್ಚರಿಕೆ ನೀಡಿತ್ತು.

ತನ್ನ ಹಲವು ಆದೇಶಗಳ ಹೊರತಾಗಿಯೂ ಟೆಲಿಕಾಂ ಕಂಪನಿಗಳು ಹಣ ಪಾವತಿ ಮಾಡದಿದ್ದಾಗ ಸುಪ್ರೀಂ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ ಇಂದು ಮಾತ್ರ ಸರಾಗವಾಗಿ 10 ವರ್ಷ ಸಮಯ ನೀಡುವ ಮೂಲಕ ಸುಪ್ರೀಂ ತನ್ನ ಹಿಂದಿನ ಆದೇಶಗಳನ್ನು ಮರೆತಿದ್ದು ಏಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ವೋಡಾಫೋನ್ -ಐಡಿಯಾ, ಭಾರ್ತಿ ಏರ್‌ಟೆಲ್, ಟಾಟಾ ಡೊಕೊಮೆ, ಜಿಯೋ ಸೇರಿದಂತೆ ಹಲವು ಕಂಪನಿಗಳು ಸುಮಾರು 1.6 ಲಕ್ಷ ಕೋಟಿ ಎಜಿಆರ್ ಹಣ ಬಾಕಿ ಉಳಿಸಿಕೊಂಡಿವೆ. ದಿವಾಳಿಯಾಗಿರುವ ಅನಿಲ್ ಅಂಬಾನಿ ನೇತೃತ್ವದ ರಿಲೆಯನ್ಸ್ ಕಮ್ಯುನಿಕೇ‍ಷನ್ ಈಗ ಆತನ ಸಹೋದರ ಮುಖೇಶ್ ಅಂಬಾನಿ ಪಾಲಾಗಿದ್ದು ಅದರ ಎಜಿಆರ್ ಯಾರು ಕಟ್ಟಬೇಕೆಂಬುದರ ಕುರಿತು ಸಹ ಚರ್ಚೆ ನಡೆಯುತ್ತಿವೆ.


ಇದನ್ನೂ ಓದಿ: ಜಿಯೋ ಎಂಬ ಟೆಲಿಕಾಂ ಕಂಪನಿ ಉಳಿದವುಗಳನ್ನು ನುಂಗಿ ಏಕಸ್ವಾಮ್ಯ ಸಾಧಿಸಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....