Homeಮುಖಪುಟಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು.

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಕಟ್ಟಬೇಕಿರುವ 1.6 ಲಕ್ಷ ಕೋಟಿ ಎಜಿಆರ್ ಹಣ ವಿಚಾರವಾಗಿ ಅವುಗಳ ವಿರುದ್ಧ ಕಿಡಿಕಾರುತ್ತಿದ್ದ ಸುಪ್ರೀಂ ಕೋರ್ಟ್ ಇಂದು ಏಕಾಏಕಿ ಅವುಗಳಿಗೆ ಬಾಕಿ ಪಾವತಿಸಲು 10 ವರ್ಷಗಳ ಕಾಲಾವಕಾಶ ನೀಡಿದೆ.

ವೋಡಾಫೋನ್ ಐಡಿಯಾ, ಭಾರ್ತಿ ಏರ್‌ಟೆಲ್‌ ಸೇರಿದಂತೆ ಹಲವು ಕಂಪನಿಗಳಿಗೆ ಹಣ ಪಾವತಿಗೆ ಮಾರ್ಚ್ 2031 ರವರೆಗೂ ಕಾಲಾವಕಾಶ ನೀಡಿದೆ. ಆದರೆ 2021ರ ಮಾರ್ಚ್ 31ರ ಒಳಗೆ ಎಜಿಆರ್ ಬಾಕಿಯ ಶೇಕಡಾ 10ರಷ್ಟನ್ನು ಪಾವತಿಸಲು ಕೋರ್ಟ್ ತಿಳಿಸಿದೆ.

ನಾಳೆ ನಿವೃತ್ತಿಯಾಗಲಿರುವ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ. ಬಾಕಿ ಪಾವತಿಸಲು ಕನಿಷ್ಟ 7 -10 ವರ್ಷಗಳ ಗಡುವನ್ನು ಟಾಟಾ ಟೆಲಿಕಾಂ ಸಂಸ್ಥೆ ಕೇಳಿದರೇ, ವೋಡಾಫೋನ್-ಐಡಿಯಾ ಮತ್ತು ಭಾರ್ತಿ ಏರ್‌ಟೆಲ್ 15 ವರ್ಷಗಳ ಕಾಲಾವಕಾಶವನ್ನು ಕೇಳಿದ್ದವು. ಆದರೆ ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆ 20 ವರ್ಷಗಳ ಕಾಲಾವಕಾಶ ನೀಡುವಂತೆ ಸುಪ್ರೀಂಗೆ ಮನವಿ ಮಾಡಿತ್ತು.

ಹಣ ಪಾವತಿಯ ಜವಾಬ್ದಾರಿಯನ್ನು ಟೆಲಿಕಾಂ ಕಂಪನಿ ಅಧ್ಯಕ್ಷರು ವಹಿಸಬೇಕಾಗುತ್ತದೆ. ಕೇವಲ ಬಾಕಿ ಇರುವ ಹಣವಷ್ಟೇ ಅಲ್ಲದೇ, ಡಿಫಾಲ್ಟ್ ಬಡ್ಡಿ, ದಂಡ  ಮತ್ತು ನ್ಯಾಯಾಂಗ ನಿಂದನೆಯ ಹಣವನ್ನು ತುಂಬಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಏನಿದು ಎಜಿಆರ್ ಹಣ ಬಾಕಿ ತಕರಾರು?

1994 ರಾಷ್ಟ್ರೀಯ ಟೆಲಿಕಾಂ ನೀತಿಯ ಅಡಿಯಲ್ಲಿ ದೂರ ಸಂಪರ್ಕ ವಲಯವನ್ನು ಉದಾರೀಕರಣಗೊಳಿಸಲಾಯಿತು. ಈ ಬೆಳವಣಿಗೆಯ ನಂತರ ಟೆಲಿಕಾಂ ಕಂಪೆನಿಗಳಿಗೆ ತರಂಗಾಂತರಗಳನ್ನು ಸ್ಥಿರ ಪರವಾನಗಿ ವಾರ್ಷಿಕ ಶುಲ್ಕಕ್ಕೆ ಮಾರಾಟ ಮಾಡುವ ಪರಿಪಾಠ ಆರಂಭವಾಯಿತು.

ಸ್ಥಿರ ಪರವಾನಗಿ ಶುಲ್ಕದಿಂದ ಬಿಡುಗಡೆ ಹೊಂದಲು ಕೇಂದ್ರ ಸರ್ಕಾರ 1999ರಲ್ಲಿ ಆದಾಯ ಹಂಚಿಕೆ ಶುಲ್ಕ ವಿಧಾನಕ್ಕೆ ಪರವಾನಗಿಯನ್ನು ವರ್ಗಾಯಿಸಿಕೊಳ್ಳುವ ಅವಕಾಶವನ್ನು ಆಯಾ ಕಂಪೆನಿಗಳಿಗೆ ನೀಡಿತು.

ಈ ಕಾಲಘಟ್ಟದಲ್ಲಿ ಬದಲಾದ ಟೆಲಿಕಾಂ ನೀತಿಯ ಅನ್ವಯ ದೂರ ಸಂಪರ್ಕ ಆದಾಯದ ಜೊತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ವಾರ್ಷಿಕ ಪರವಾನಗಿ ಶುಲ್ಕ (ಎಜಿಆರ್) ಎಂದು ಕರೆಯಲಾಯಿತು. ತರಂಗಾತರ ಹಂಚಿಕೆ ಶುಲ್ಕದ ಜೊತೆಗೆ ಈ ಶುಲ್ಕವನ್ನು ವರ್ಷಕ್ಕೊಮ್ಮೆ ಕೇಂದ್ರ ದೂರ ಸಂಪರ್ಕ ಇಲಾಖೆಗೆ ಟೆಲಿಕಾಂ ಕಂಪೆನಿಗಳು ಪಾವತಿ ಮಾಡಬೇಕು ಎಂಬುದು ನಿಯಮ.


ಇದನ್ನೂ ಓದಿ: ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ


ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು. ಆದರೆ ಆ ಎರಡು ವಿಚಾರಕ್ಕೆ ಸುಪ್ರೀಂ ತಡೆ ನೀಡಿತ್ತು.

ಆಯಿಲ್ ಇಂಡಿಯಾ, ದೆಹಲಿ ಮೆಟ್ರೋ ರೈಲು ನಿಗಮ ಮತ್ತು ಪವರ್ ಗ್ರಿಡ್ ಕಾರ್ಪೊರೇಶನ್‌ನಂತಹ ಸಾರ್ವಜನಿಕ ವಲಯದ ಘಟಕಗಳಿಂದ ಬಾಕಿ ಹಣ ತುಂಬಿ ಕೊಡಬೇಕೆಂದು ಸರ್ಕಾರದ ದೂರಸಂಪರ್ಕ ಇಲಾಖೆ ಕೋರಿತ್ತು. ಇದಕ್ಕೆ ಸುಪ್ರೀಂಕೋರ್ಟ್ ಅನುಮತಿ ನಿರಾಕರಿಸಿ, ಕೇಂದ್ರಕ್ಕೆ ಟೆಲಿಕಾಂ ಕಂಪನಿಗಳಿಂದ ವಸೂಲಿ ಮಾಡುವಂತೆ ಖಡಕ್ ಎಚ್ಚರಿಕೆ ನೀಡಿತ್ತು.

ತನ್ನ ಹಲವು ಆದೇಶಗಳ ಹೊರತಾಗಿಯೂ ಟೆಲಿಕಾಂ ಕಂಪನಿಗಳು ಹಣ ಪಾವತಿ ಮಾಡದಿದ್ದಾಗ ಸುಪ್ರೀಂ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ ಇಂದು ಮಾತ್ರ ಸರಾಗವಾಗಿ 10 ವರ್ಷ ಸಮಯ ನೀಡುವ ಮೂಲಕ ಸುಪ್ರೀಂ ತನ್ನ ಹಿಂದಿನ ಆದೇಶಗಳನ್ನು ಮರೆತಿದ್ದು ಏಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ವೋಡಾಫೋನ್ -ಐಡಿಯಾ, ಭಾರ್ತಿ ಏರ್‌ಟೆಲ್, ಟಾಟಾ ಡೊಕೊಮೆ, ಜಿಯೋ ಸೇರಿದಂತೆ ಹಲವು ಕಂಪನಿಗಳು ಸುಮಾರು 1.6 ಲಕ್ಷ ಕೋಟಿ ಎಜಿಆರ್ ಹಣ ಬಾಕಿ ಉಳಿಸಿಕೊಂಡಿವೆ. ದಿವಾಳಿಯಾಗಿರುವ ಅನಿಲ್ ಅಂಬಾನಿ ನೇತೃತ್ವದ ರಿಲೆಯನ್ಸ್ ಕಮ್ಯುನಿಕೇ‍ಷನ್ ಈಗ ಆತನ ಸಹೋದರ ಮುಖೇಶ್ ಅಂಬಾನಿ ಪಾಲಾಗಿದ್ದು ಅದರ ಎಜಿಆರ್ ಯಾರು ಕಟ್ಟಬೇಕೆಂಬುದರ ಕುರಿತು ಸಹ ಚರ್ಚೆ ನಡೆಯುತ್ತಿವೆ.


ಇದನ್ನೂ ಓದಿ: ಜಿಯೋ ಎಂಬ ಟೆಲಿಕಾಂ ಕಂಪನಿ ಉಳಿದವುಗಳನ್ನು ನುಂಗಿ ಏಕಸ್ವಾಮ್ಯ ಸಾಧಿಸಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...