Homeಮುಖಪುಟಪರೀಕ್ಷಾ ಅಕ್ರಮಕ್ಕೆ ಕಠಿಣ ಶಿಕ್ಷೆ, ಭಾರೀ ದಂಡ: ಲೋಕಸಭೆಯಲ್ಲಿ ಮಂಡಿಸಿದ ಮಸೂದೆಯಲ್ಲೇನಿದೆ?

ಪರೀಕ್ಷಾ ಅಕ್ರಮಕ್ಕೆ ಕಠಿಣ ಶಿಕ್ಷೆ, ಭಾರೀ ದಂಡ: ಲೋಕಸಭೆಯಲ್ಲಿ ಮಂಡಿಸಿದ ಮಸೂದೆಯಲ್ಲೇನಿದೆ?

- Advertisement -
- Advertisement -

ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿ ಪರೀಕ್ಷೆಗಳು ಸೇರಿ ಪರೀಕ್ಷಾ ಅಕ್ರಮ ಪ್ರಕರಣಗಳಲ್ಲಿ ಗರಿಷ್ಠ ಮಟ್ಟದ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಮಸೂದೆಯನ್ನು ಕೇಂದ್ರ ಸರ್ಕಾರವು ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ್ದು, 3ರಿಂದ 10 ವರ್ಷಗಳ ಜೈಲು ಶಿಕ್ಷೆ ಮತ್ತು 1ಕೋಟಿ ರೂ.ಗಿಂತ ಕಡಿಮೆಯಿಲ್ಲದೆ ದಂಡ ವಿಧಿಸುವ ಅವಕಾಶವನ್ನು ಮಸೂದೆಯಲ್ಲಿ ಕಲ್ಪಿಸಲಾಗಿದೆ.

Public Examinations (Prevention of Unfair Means) Bill- 2024 (ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆಗಟ್ಟುವಿಕೆ) ಮಸೂದೆ-2024), ಕೇಂದ್ರೀಯ ನೇಮಕಾತಿ ಮತ್ತು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ನ ಪ್ರವೇಶ ಪರೀಕ್ಷೆಗಳು, ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC), ರೈಲ್ವೆ ನೇಮಕಾತಿ ಮಂಡಳಿಗಳು (RRBs), ಬ್ಯಾಂಕಿಂಗ್ (IBPS) ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಳು ನಡೆಸುವ ಪರೀಕ್ಷೆಗಳಿಗೆ ಅನ್ವಯಿಸಲಿದೆ.

NTA ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಪರೀಕ್ಷೆಗಳನ್ನು ನಡೆಸುತ್ತದೆ, ಉದಾಹರಣೆಗೆ ಎಂಜಿನಿಯರಿಂಗ್‌ಗಾಗಿ ಪ್ರವೇಶ ಪರೀಕ್ಷೆ (JEE), ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾತಿಗಾಗಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಮತ್ತು ಪದವಿಪೂರ್ವ ಮತ್ತು ಸ್ನಾತಕೋತ್ತರ ಅಧ್ಯಯನಗಳಿಗೆ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ CUET ಪರೀಕ್ಷೆಗಳನ್ನು ನಡೆಸುತ್ತದೆ. ಈ ಗೊತ್ತುಪಡಿಸಿದ ಸಾರ್ವಜನಿಕ ಪರೀಕ್ಷಾ ಪ್ರಾಧಿಕಾರಗಳ ಪರೀಕ್ಷೆಗಳು ಹೊರತಾಗಿ ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳು ಕೂಡ ಈ ಕಾನೂನು ವ್ಯಾಪ್ತಿಗೆ ಬರಲಿದೆ.

ಪ್ರಸ್ತುತ ಸಾರ್ವಜನಿಕ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಯಾವುದೇ ನಿರ್ದಿಷ್ಟ ವಸ್ತುನಿಷ್ಠ ಕಾನೂನು ಇಲ್ಲ ಎಂದು ಸಚಿವ ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ. ಲಾಭಕ್ಕಾಗಿ ಅನ್ಯಾಯದ ವಿಧಾನಗಳಲ್ಲಿ ತೊಡಗಿರುವ ವ್ಯಕ್ತಿಗಳು, ಸಂಘಟಿತ ಗುಂಪುಗಳು ಅಥವಾ ಸಂಸ್ಥೆಗಳಿಗೆ ಶಿಕ್ಷೆಯನ್ನು ಮಸೂದೆ ಒದಗಿಸುತ್ತದೆ, ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳನ್ನು ಅದರ ವ್ಯಾಪ್ತಿಯಿಂದ ಹೊರಗಿಡಲಾಗಿದೆ ಎಂದು ಹೇಳಲಾಗಿದೆ.

ಸಿಬ್ಬಂದಿ ಮತ್ತು ಆಡಳಿತದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ‘ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ಮಸೂದೆ 2024’ರಲ್ಲಿ 20ಪರೀಕ್ಷಾಅಕ್ರಮಗಳನ್ನು ಉಲ್ಲೇಖಿಸಿದೆ. ನಕಲಿ ಅಭ್ಯರ್ಥಿಗಳ ಹಾಜರಿ, ಉತ್ತರ ಪತ್ರಿಕೆಗಳ ಸೋರಿಕೆ, ದಾಖಲೆಗಳನ್ನು ತಿರುಚುವುದು, ಮೆರಿಟ್‌ ಪಟ್ಟಿ ಸಿದ್ಧಪಡಿಸುವಲ್ಲಿ ಅಕ್ರಮ ಎಸಗುವುದು, ಉದ್ದೇಶಪೂರ್ವಕವಾಗಿ ಭದ್ರತಾ ವ್ಯವಸ್ಥೆ ಉಲ್ಲಂಘನೆ, ಪರೀಕ್ಷಾರ್ಥಿಗಳಿಗೆ ಸೀಟು ನಿಗದಿಪಡಿಸುವಲ್ಲಿ ಅಕ್ರಮ ಎಸಗುವುದು, ಉದ್ದೇಶಪೂರ್ವಕವಾಗಿ ನಿಯಮಗಳನ್ನು ಉಲ್ಲಂಘಿಸುವ ಕ್ರಮವನ್ನು ಪರೀಕ್ಷಾ ಅಕ್ರಮಗಳೆಂದು ಹೊಸ ಮಸೂದೆಯಡಿ ಪರಿಗಣಿಸಲಾಗುತ್ತದೆ.

ತಪ್ಪಿತಸ್ಥರು ಸಂಘಟಿತ ಅಪರಾಧಗಳಲ್ಲಿ ತೊಡಿಗಿರುವುದು ದೃಢಪಟ್ಟಲ್ಲಿ ಕನಿಷ್ಠ 5ರಿಂದ 10 ವರ್ಷ ಸಜೆ, 1 ಕೋಟಿ ದಂಡ ವಿಧಿಸಲು ಅವಕಾಶವಿದೆ. ಶಿಕ್ಷಣ ಸಂಸ್ಥೆಗಳೇ ಅಕ್ರಮಗಳಲ್ಲಿ ತೊಡಗಿದ್ದರೆ ಆಸ್ತಿಯ ಜಪ್ತಿ ಜೊತೆಗೆ, ಪರೀಕ್ಷಾ ವೆಚ್ಚ ವಸೂಲಿಗೂ ಕ್ರಮ ಕೈಗೊಳ್ಳಲಾಗುತ್ತದೆ. ಸಂಘಟಿತ ಅಪರಾಧದ ಪಾತ್ರ ಇಲ್ಲದಿದ್ದರೆ 3ರಿಂದ 5 ವರ್ಷ ಸಜೆ ಹಾಗೂ 10 ಲಕ್ಷವರೆಗೂ ದಂಡ ವಿಧಿಸಲು ಅವಕಾಶವಿದೆ. ದಂಡವನ್ನು ಪಾವತಿಸಲು ತಪ್ಪಿದಲ್ಲಿ, ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಮಸೂದೆಯು ಹೇಳುತ್ತದೆ. ಎಲ್ಲಾ ಅಪರಾಧಗಳು ಜಾಮೀನು ರಹಿತ ಅಪರಾಧ ಎಂದು ಸೆಕ್ಷನ್ 9 ಹೇಳುತ್ತದೆ.

ಪರೀಕ್ಷಾ ಪ್ರಾಧಿಕಾರ ಅಥವಾ ಸೇವಾ ಪೂರೈಕೆದಾರರು ಅಥವಾ ಯಾವುದೇ ಇತರ ಸಂಸ್ಥೆ ಅಥವಾ ವ್ಯಕ್ತಿಗಳ ಗುಂಪು ಸಂಘಟಿತ ಅಪರಾಧವನ್ನು ಎಸಗಿದರೆ, ಅವರಿಗೆ ಐದು ವರ್ಷಗಳಿಗಿಂತ ಕಡಿಮೆಯಿಲ್ಲದ ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ರೂ.1 ಕೋಟಿಗಿಂತ ಕಡಿಮೆಯಿಲ್ಲದ  ದಂಡವನ್ನು ವಿಧಿಸಲಾಗುತ್ತದೆ. ದಂಡವನ್ನು ಪಾವತಿಸಲು ತಪ್ಪಿದಲ್ಲಿ, ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಬಿಲ್‌ನ ಸೆಕ್ಷನ್ 11 ಹೇಳುತ್ತದೆ.

ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಗಳಿಗೆ ಹೆಚ್ಚಿನ ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ಬಿಲ್‌ನ್ನು ಮಂಡಿಸಲಾಗಿದೆ. ಪ್ರಾಮಾಣಿಕ ಮತ್ತು ನಿಜವಾದ ಪ್ರಯತ್ನಗಳಿಗೆ ತಕ್ಕ ಪ್ರತಿಫಲ ಸಿಗುತ್ತದೆ ಮತ್ತು ಅವರ ಭವಿಷ್ಯವು ಸುರಕ್ಷಿತವಾಗಿದೆ ಎಂದು ಯುವಜನರಿಗೆ ಭರವಸೆ ನೀಡುವುದು ಮಸೂದೆಯ ಉದ್ದೇಶವಾಗಿದೆ ಎಂದು ಬಿಲ್ ಹೇಳುತ್ತದೆ.

ವಿವಿಧ ರಾಜ್ಯಗಳ ನೇಮಕಾತಿ ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆಯಲ್ಲದೆ ಕೇಂದ್ರ ಮಟ್ಟದಲ್ಲಿಯೂ ಇಂತಹ ಪ್ರಕರಣಗಳು ನಡೆದಿವೆ. ಕಳೆದ ವರ್ಷ ಮಾರ್ಚ್‌ನಲ್ಲಿ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ) ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಕಳೆದ ತಿಂಗಳು ಪಶ್ಚಿಮ ರೈಲ್ವೇಯ ರೈಲ್ವೇ ನೇಮಕಾತಿ ಕೇಂದ್ರವು ನಡೆಸಿದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಸಿಬಿಐ ವಿವಿಧ ರಾಜ್ಯಗಳ 12 ಸ್ಥಳಗಳಲ್ಲಿ ಶೋಧ ನಡೆಸಿತ್ತು.

ಇದನ್ನು ಓದಿ: ಅಲ್ಪಸಂಖ್ಯಾತರ ವಿರುದ್ಧದ ಕೇಂದ್ರದ ನಿಲುವು: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...