Homeಮುಖಪುಟಪರೀಕ್ಷಾ ಅಕ್ರಮಕ್ಕೆ ಕಠಿಣ ಶಿಕ್ಷೆ, ಭಾರೀ ದಂಡ: ಲೋಕಸಭೆಯಲ್ಲಿ ಮಂಡಿಸಿದ ಮಸೂದೆಯಲ್ಲೇನಿದೆ?

ಪರೀಕ್ಷಾ ಅಕ್ರಮಕ್ಕೆ ಕಠಿಣ ಶಿಕ್ಷೆ, ಭಾರೀ ದಂಡ: ಲೋಕಸಭೆಯಲ್ಲಿ ಮಂಡಿಸಿದ ಮಸೂದೆಯಲ್ಲೇನಿದೆ?

- Advertisement -
- Advertisement -

ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿ ಪರೀಕ್ಷೆಗಳು ಸೇರಿ ಪರೀಕ್ಷಾ ಅಕ್ರಮ ಪ್ರಕರಣಗಳಲ್ಲಿ ಗರಿಷ್ಠ ಮಟ್ಟದ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಮಸೂದೆಯನ್ನು ಕೇಂದ್ರ ಸರ್ಕಾರವು ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ್ದು, 3ರಿಂದ 10 ವರ್ಷಗಳ ಜೈಲು ಶಿಕ್ಷೆ ಮತ್ತು 1ಕೋಟಿ ರೂ.ಗಿಂತ ಕಡಿಮೆಯಿಲ್ಲದೆ ದಂಡ ವಿಧಿಸುವ ಅವಕಾಶವನ್ನು ಮಸೂದೆಯಲ್ಲಿ ಕಲ್ಪಿಸಲಾಗಿದೆ.

Public Examinations (Prevention of Unfair Means) Bill- 2024 (ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆಗಟ್ಟುವಿಕೆ) ಮಸೂದೆ-2024), ಕೇಂದ್ರೀಯ ನೇಮಕಾತಿ ಮತ್ತು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ನ ಪ್ರವೇಶ ಪರೀಕ್ಷೆಗಳು, ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC), ರೈಲ್ವೆ ನೇಮಕಾತಿ ಮಂಡಳಿಗಳು (RRBs), ಬ್ಯಾಂಕಿಂಗ್ (IBPS) ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಳು ನಡೆಸುವ ಪರೀಕ್ಷೆಗಳಿಗೆ ಅನ್ವಯಿಸಲಿದೆ.

NTA ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಪರೀಕ್ಷೆಗಳನ್ನು ನಡೆಸುತ್ತದೆ, ಉದಾಹರಣೆಗೆ ಎಂಜಿನಿಯರಿಂಗ್‌ಗಾಗಿ ಪ್ರವೇಶ ಪರೀಕ್ಷೆ (JEE), ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾತಿಗಾಗಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಮತ್ತು ಪದವಿಪೂರ್ವ ಮತ್ತು ಸ್ನಾತಕೋತ್ತರ ಅಧ್ಯಯನಗಳಿಗೆ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ CUET ಪರೀಕ್ಷೆಗಳನ್ನು ನಡೆಸುತ್ತದೆ. ಈ ಗೊತ್ತುಪಡಿಸಿದ ಸಾರ್ವಜನಿಕ ಪರೀಕ್ಷಾ ಪ್ರಾಧಿಕಾರಗಳ ಪರೀಕ್ಷೆಗಳು ಹೊರತಾಗಿ ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳು ಕೂಡ ಈ ಕಾನೂನು ವ್ಯಾಪ್ತಿಗೆ ಬರಲಿದೆ.

ಪ್ರಸ್ತುತ ಸಾರ್ವಜನಿಕ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಯಾವುದೇ ನಿರ್ದಿಷ್ಟ ವಸ್ತುನಿಷ್ಠ ಕಾನೂನು ಇಲ್ಲ ಎಂದು ಸಚಿವ ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ. ಲಾಭಕ್ಕಾಗಿ ಅನ್ಯಾಯದ ವಿಧಾನಗಳಲ್ಲಿ ತೊಡಗಿರುವ ವ್ಯಕ್ತಿಗಳು, ಸಂಘಟಿತ ಗುಂಪುಗಳು ಅಥವಾ ಸಂಸ್ಥೆಗಳಿಗೆ ಶಿಕ್ಷೆಯನ್ನು ಮಸೂದೆ ಒದಗಿಸುತ್ತದೆ, ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳನ್ನು ಅದರ ವ್ಯಾಪ್ತಿಯಿಂದ ಹೊರಗಿಡಲಾಗಿದೆ ಎಂದು ಹೇಳಲಾಗಿದೆ.

ಸಿಬ್ಬಂದಿ ಮತ್ತು ಆಡಳಿತದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ‘ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ಮಸೂದೆ 2024’ರಲ್ಲಿ 20ಪರೀಕ್ಷಾಅಕ್ರಮಗಳನ್ನು ಉಲ್ಲೇಖಿಸಿದೆ. ನಕಲಿ ಅಭ್ಯರ್ಥಿಗಳ ಹಾಜರಿ, ಉತ್ತರ ಪತ್ರಿಕೆಗಳ ಸೋರಿಕೆ, ದಾಖಲೆಗಳನ್ನು ತಿರುಚುವುದು, ಮೆರಿಟ್‌ ಪಟ್ಟಿ ಸಿದ್ಧಪಡಿಸುವಲ್ಲಿ ಅಕ್ರಮ ಎಸಗುವುದು, ಉದ್ದೇಶಪೂರ್ವಕವಾಗಿ ಭದ್ರತಾ ವ್ಯವಸ್ಥೆ ಉಲ್ಲಂಘನೆ, ಪರೀಕ್ಷಾರ್ಥಿಗಳಿಗೆ ಸೀಟು ನಿಗದಿಪಡಿಸುವಲ್ಲಿ ಅಕ್ರಮ ಎಸಗುವುದು, ಉದ್ದೇಶಪೂರ್ವಕವಾಗಿ ನಿಯಮಗಳನ್ನು ಉಲ್ಲಂಘಿಸುವ ಕ್ರಮವನ್ನು ಪರೀಕ್ಷಾ ಅಕ್ರಮಗಳೆಂದು ಹೊಸ ಮಸೂದೆಯಡಿ ಪರಿಗಣಿಸಲಾಗುತ್ತದೆ.

ತಪ್ಪಿತಸ್ಥರು ಸಂಘಟಿತ ಅಪರಾಧಗಳಲ್ಲಿ ತೊಡಿಗಿರುವುದು ದೃಢಪಟ್ಟಲ್ಲಿ ಕನಿಷ್ಠ 5ರಿಂದ 10 ವರ್ಷ ಸಜೆ, 1 ಕೋಟಿ ದಂಡ ವಿಧಿಸಲು ಅವಕಾಶವಿದೆ. ಶಿಕ್ಷಣ ಸಂಸ್ಥೆಗಳೇ ಅಕ್ರಮಗಳಲ್ಲಿ ತೊಡಗಿದ್ದರೆ ಆಸ್ತಿಯ ಜಪ್ತಿ ಜೊತೆಗೆ, ಪರೀಕ್ಷಾ ವೆಚ್ಚ ವಸೂಲಿಗೂ ಕ್ರಮ ಕೈಗೊಳ್ಳಲಾಗುತ್ತದೆ. ಸಂಘಟಿತ ಅಪರಾಧದ ಪಾತ್ರ ಇಲ್ಲದಿದ್ದರೆ 3ರಿಂದ 5 ವರ್ಷ ಸಜೆ ಹಾಗೂ 10 ಲಕ್ಷವರೆಗೂ ದಂಡ ವಿಧಿಸಲು ಅವಕಾಶವಿದೆ. ದಂಡವನ್ನು ಪಾವತಿಸಲು ತಪ್ಪಿದಲ್ಲಿ, ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಮಸೂದೆಯು ಹೇಳುತ್ತದೆ. ಎಲ್ಲಾ ಅಪರಾಧಗಳು ಜಾಮೀನು ರಹಿತ ಅಪರಾಧ ಎಂದು ಸೆಕ್ಷನ್ 9 ಹೇಳುತ್ತದೆ.

ಪರೀಕ್ಷಾ ಪ್ರಾಧಿಕಾರ ಅಥವಾ ಸೇವಾ ಪೂರೈಕೆದಾರರು ಅಥವಾ ಯಾವುದೇ ಇತರ ಸಂಸ್ಥೆ ಅಥವಾ ವ್ಯಕ್ತಿಗಳ ಗುಂಪು ಸಂಘಟಿತ ಅಪರಾಧವನ್ನು ಎಸಗಿದರೆ, ಅವರಿಗೆ ಐದು ವರ್ಷಗಳಿಗಿಂತ ಕಡಿಮೆಯಿಲ್ಲದ ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ರೂ.1 ಕೋಟಿಗಿಂತ ಕಡಿಮೆಯಿಲ್ಲದ  ದಂಡವನ್ನು ವಿಧಿಸಲಾಗುತ್ತದೆ. ದಂಡವನ್ನು ಪಾವತಿಸಲು ತಪ್ಪಿದಲ್ಲಿ, ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಬಿಲ್‌ನ ಸೆಕ್ಷನ್ 11 ಹೇಳುತ್ತದೆ.

ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಗಳಿಗೆ ಹೆಚ್ಚಿನ ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ಬಿಲ್‌ನ್ನು ಮಂಡಿಸಲಾಗಿದೆ. ಪ್ರಾಮಾಣಿಕ ಮತ್ತು ನಿಜವಾದ ಪ್ರಯತ್ನಗಳಿಗೆ ತಕ್ಕ ಪ್ರತಿಫಲ ಸಿಗುತ್ತದೆ ಮತ್ತು ಅವರ ಭವಿಷ್ಯವು ಸುರಕ್ಷಿತವಾಗಿದೆ ಎಂದು ಯುವಜನರಿಗೆ ಭರವಸೆ ನೀಡುವುದು ಮಸೂದೆಯ ಉದ್ದೇಶವಾಗಿದೆ ಎಂದು ಬಿಲ್ ಹೇಳುತ್ತದೆ.

ವಿವಿಧ ರಾಜ್ಯಗಳ ನೇಮಕಾತಿ ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆಯಲ್ಲದೆ ಕೇಂದ್ರ ಮಟ್ಟದಲ್ಲಿಯೂ ಇಂತಹ ಪ್ರಕರಣಗಳು ನಡೆದಿವೆ. ಕಳೆದ ವರ್ಷ ಮಾರ್ಚ್‌ನಲ್ಲಿ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ) ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಕಳೆದ ತಿಂಗಳು ಪಶ್ಚಿಮ ರೈಲ್ವೇಯ ರೈಲ್ವೇ ನೇಮಕಾತಿ ಕೇಂದ್ರವು ನಡೆಸಿದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಸಿಬಿಐ ವಿವಿಧ ರಾಜ್ಯಗಳ 12 ಸ್ಥಳಗಳಲ್ಲಿ ಶೋಧ ನಡೆಸಿತ್ತು.

ಇದನ್ನು ಓದಿ: ಅಲ್ಪಸಂಖ್ಯಾತರ ವಿರುದ್ಧದ ಕೇಂದ್ರದ ನಿಲುವು: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...