Homeಮುಖಪುಟಪರೀಕ್ಷಾ ಅಕ್ರಮಕ್ಕೆ ಕಠಿಣ ಶಿಕ್ಷೆ, ಭಾರೀ ದಂಡ: ಲೋಕಸಭೆಯಲ್ಲಿ ಮಂಡಿಸಿದ ಮಸೂದೆಯಲ್ಲೇನಿದೆ?

ಪರೀಕ್ಷಾ ಅಕ್ರಮಕ್ಕೆ ಕಠಿಣ ಶಿಕ್ಷೆ, ಭಾರೀ ದಂಡ: ಲೋಕಸಭೆಯಲ್ಲಿ ಮಂಡಿಸಿದ ಮಸೂದೆಯಲ್ಲೇನಿದೆ?

- Advertisement -
- Advertisement -

ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿ ಪರೀಕ್ಷೆಗಳು ಸೇರಿ ಪರೀಕ್ಷಾ ಅಕ್ರಮ ಪ್ರಕರಣಗಳಲ್ಲಿ ಗರಿಷ್ಠ ಮಟ್ಟದ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಮಸೂದೆಯನ್ನು ಕೇಂದ್ರ ಸರ್ಕಾರವು ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ್ದು, 3ರಿಂದ 10 ವರ್ಷಗಳ ಜೈಲು ಶಿಕ್ಷೆ ಮತ್ತು 1ಕೋಟಿ ರೂ.ಗಿಂತ ಕಡಿಮೆಯಿಲ್ಲದೆ ದಂಡ ವಿಧಿಸುವ ಅವಕಾಶವನ್ನು ಮಸೂದೆಯಲ್ಲಿ ಕಲ್ಪಿಸಲಾಗಿದೆ.

Public Examinations (Prevention of Unfair Means) Bill- 2024 (ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆಗಟ್ಟುವಿಕೆ) ಮಸೂದೆ-2024), ಕೇಂದ್ರೀಯ ನೇಮಕಾತಿ ಮತ್ತು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ನ ಪ್ರವೇಶ ಪರೀಕ್ಷೆಗಳು, ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC), ರೈಲ್ವೆ ನೇಮಕಾತಿ ಮಂಡಳಿಗಳು (RRBs), ಬ್ಯಾಂಕಿಂಗ್ (IBPS) ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಳು ನಡೆಸುವ ಪರೀಕ್ಷೆಗಳಿಗೆ ಅನ್ವಯಿಸಲಿದೆ.

NTA ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಪರೀಕ್ಷೆಗಳನ್ನು ನಡೆಸುತ್ತದೆ, ಉದಾಹರಣೆಗೆ ಎಂಜಿನಿಯರಿಂಗ್‌ಗಾಗಿ ಪ್ರವೇಶ ಪರೀಕ್ಷೆ (JEE), ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾತಿಗಾಗಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಮತ್ತು ಪದವಿಪೂರ್ವ ಮತ್ತು ಸ್ನಾತಕೋತ್ತರ ಅಧ್ಯಯನಗಳಿಗೆ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ CUET ಪರೀಕ್ಷೆಗಳನ್ನು ನಡೆಸುತ್ತದೆ. ಈ ಗೊತ್ತುಪಡಿಸಿದ ಸಾರ್ವಜನಿಕ ಪರೀಕ್ಷಾ ಪ್ರಾಧಿಕಾರಗಳ ಪರೀಕ್ಷೆಗಳು ಹೊರತಾಗಿ ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳು ಕೂಡ ಈ ಕಾನೂನು ವ್ಯಾಪ್ತಿಗೆ ಬರಲಿದೆ.

ಪ್ರಸ್ತುತ ಸಾರ್ವಜನಿಕ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಯಾವುದೇ ನಿರ್ದಿಷ್ಟ ವಸ್ತುನಿಷ್ಠ ಕಾನೂನು ಇಲ್ಲ ಎಂದು ಸಚಿವ ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ. ಲಾಭಕ್ಕಾಗಿ ಅನ್ಯಾಯದ ವಿಧಾನಗಳಲ್ಲಿ ತೊಡಗಿರುವ ವ್ಯಕ್ತಿಗಳು, ಸಂಘಟಿತ ಗುಂಪುಗಳು ಅಥವಾ ಸಂಸ್ಥೆಗಳಿಗೆ ಶಿಕ್ಷೆಯನ್ನು ಮಸೂದೆ ಒದಗಿಸುತ್ತದೆ, ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳನ್ನು ಅದರ ವ್ಯಾಪ್ತಿಯಿಂದ ಹೊರಗಿಡಲಾಗಿದೆ ಎಂದು ಹೇಳಲಾಗಿದೆ.

ಸಿಬ್ಬಂದಿ ಮತ್ತು ಆಡಳಿತದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ‘ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ಮಸೂದೆ 2024’ರಲ್ಲಿ 20ಪರೀಕ್ಷಾಅಕ್ರಮಗಳನ್ನು ಉಲ್ಲೇಖಿಸಿದೆ. ನಕಲಿ ಅಭ್ಯರ್ಥಿಗಳ ಹಾಜರಿ, ಉತ್ತರ ಪತ್ರಿಕೆಗಳ ಸೋರಿಕೆ, ದಾಖಲೆಗಳನ್ನು ತಿರುಚುವುದು, ಮೆರಿಟ್‌ ಪಟ್ಟಿ ಸಿದ್ಧಪಡಿಸುವಲ್ಲಿ ಅಕ್ರಮ ಎಸಗುವುದು, ಉದ್ದೇಶಪೂರ್ವಕವಾಗಿ ಭದ್ರತಾ ವ್ಯವಸ್ಥೆ ಉಲ್ಲಂಘನೆ, ಪರೀಕ್ಷಾರ್ಥಿಗಳಿಗೆ ಸೀಟು ನಿಗದಿಪಡಿಸುವಲ್ಲಿ ಅಕ್ರಮ ಎಸಗುವುದು, ಉದ್ದೇಶಪೂರ್ವಕವಾಗಿ ನಿಯಮಗಳನ್ನು ಉಲ್ಲಂಘಿಸುವ ಕ್ರಮವನ್ನು ಪರೀಕ್ಷಾ ಅಕ್ರಮಗಳೆಂದು ಹೊಸ ಮಸೂದೆಯಡಿ ಪರಿಗಣಿಸಲಾಗುತ್ತದೆ.

ತಪ್ಪಿತಸ್ಥರು ಸಂಘಟಿತ ಅಪರಾಧಗಳಲ್ಲಿ ತೊಡಿಗಿರುವುದು ದೃಢಪಟ್ಟಲ್ಲಿ ಕನಿಷ್ಠ 5ರಿಂದ 10 ವರ್ಷ ಸಜೆ, 1 ಕೋಟಿ ದಂಡ ವಿಧಿಸಲು ಅವಕಾಶವಿದೆ. ಶಿಕ್ಷಣ ಸಂಸ್ಥೆಗಳೇ ಅಕ್ರಮಗಳಲ್ಲಿ ತೊಡಗಿದ್ದರೆ ಆಸ್ತಿಯ ಜಪ್ತಿ ಜೊತೆಗೆ, ಪರೀಕ್ಷಾ ವೆಚ್ಚ ವಸೂಲಿಗೂ ಕ್ರಮ ಕೈಗೊಳ್ಳಲಾಗುತ್ತದೆ. ಸಂಘಟಿತ ಅಪರಾಧದ ಪಾತ್ರ ಇಲ್ಲದಿದ್ದರೆ 3ರಿಂದ 5 ವರ್ಷ ಸಜೆ ಹಾಗೂ 10 ಲಕ್ಷವರೆಗೂ ದಂಡ ವಿಧಿಸಲು ಅವಕಾಶವಿದೆ. ದಂಡವನ್ನು ಪಾವತಿಸಲು ತಪ್ಪಿದಲ್ಲಿ, ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಮಸೂದೆಯು ಹೇಳುತ್ತದೆ. ಎಲ್ಲಾ ಅಪರಾಧಗಳು ಜಾಮೀನು ರಹಿತ ಅಪರಾಧ ಎಂದು ಸೆಕ್ಷನ್ 9 ಹೇಳುತ್ತದೆ.

ಪರೀಕ್ಷಾ ಪ್ರಾಧಿಕಾರ ಅಥವಾ ಸೇವಾ ಪೂರೈಕೆದಾರರು ಅಥವಾ ಯಾವುದೇ ಇತರ ಸಂಸ್ಥೆ ಅಥವಾ ವ್ಯಕ್ತಿಗಳ ಗುಂಪು ಸಂಘಟಿತ ಅಪರಾಧವನ್ನು ಎಸಗಿದರೆ, ಅವರಿಗೆ ಐದು ವರ್ಷಗಳಿಗಿಂತ ಕಡಿಮೆಯಿಲ್ಲದ ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ರೂ.1 ಕೋಟಿಗಿಂತ ಕಡಿಮೆಯಿಲ್ಲದ  ದಂಡವನ್ನು ವಿಧಿಸಲಾಗುತ್ತದೆ. ದಂಡವನ್ನು ಪಾವತಿಸಲು ತಪ್ಪಿದಲ್ಲಿ, ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಬಿಲ್‌ನ ಸೆಕ್ಷನ್ 11 ಹೇಳುತ್ತದೆ.

ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಗಳಿಗೆ ಹೆಚ್ಚಿನ ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ಬಿಲ್‌ನ್ನು ಮಂಡಿಸಲಾಗಿದೆ. ಪ್ರಾಮಾಣಿಕ ಮತ್ತು ನಿಜವಾದ ಪ್ರಯತ್ನಗಳಿಗೆ ತಕ್ಕ ಪ್ರತಿಫಲ ಸಿಗುತ್ತದೆ ಮತ್ತು ಅವರ ಭವಿಷ್ಯವು ಸುರಕ್ಷಿತವಾಗಿದೆ ಎಂದು ಯುವಜನರಿಗೆ ಭರವಸೆ ನೀಡುವುದು ಮಸೂದೆಯ ಉದ್ದೇಶವಾಗಿದೆ ಎಂದು ಬಿಲ್ ಹೇಳುತ್ತದೆ.

ವಿವಿಧ ರಾಜ್ಯಗಳ ನೇಮಕಾತಿ ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆಯಲ್ಲದೆ ಕೇಂದ್ರ ಮಟ್ಟದಲ್ಲಿಯೂ ಇಂತಹ ಪ್ರಕರಣಗಳು ನಡೆದಿವೆ. ಕಳೆದ ವರ್ಷ ಮಾರ್ಚ್‌ನಲ್ಲಿ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ) ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಕಳೆದ ತಿಂಗಳು ಪಶ್ಚಿಮ ರೈಲ್ವೇಯ ರೈಲ್ವೇ ನೇಮಕಾತಿ ಕೇಂದ್ರವು ನಡೆಸಿದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಸಿಬಿಐ ವಿವಿಧ ರಾಜ್ಯಗಳ 12 ಸ್ಥಳಗಳಲ್ಲಿ ಶೋಧ ನಡೆಸಿತ್ತು.

ಇದನ್ನು ಓದಿ: ಅಲ್ಪಸಂಖ್ಯಾತರ ವಿರುದ್ಧದ ಕೇಂದ್ರದ ನಿಲುವು: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...