Homeಮುಖಪುಟ100 ಕೋಟಿ ಲಂಚದ ಆರೋಪ, ಮೈತ್ರಿ ಪಕ್ಷಗಳ ಸಭೆಯಲ್ಲಿ ಅನಿಲ್ ದೇಶ್‌ಮುಖ್ ಭವಿಷ್ಯ

100 ಕೋಟಿ ಲಂಚದ ಆರೋಪ, ಮೈತ್ರಿ ಪಕ್ಷಗಳ ಸಭೆಯಲ್ಲಿ ಅನಿಲ್ ದೇಶ್‌ಮುಖ್ ಭವಿಷ್ಯ

- Advertisement -
- Advertisement -

ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಿಸಿ ಕೊಡಲು ಗೃಹ ಸಚಿವರು ಸೂಚಿಸಿದ್ದರು ಎಂಬ ಐಪಿಎಸ್ ಅಧಿಕಾರಿ ಪರಮ್ ಬೀರ್ ‌ಸಿಂಗ್ ಆರೋಪದ ಹಿನ್ನೆಲೆ ಇಂದು ಮಹಾರಾಷ್ಟ್ರ ಸರ್ಕಾರದ ಮೈತ್ರಿಪಕ್ಷಗಳು ದೆಹಲಿಯಲ್ಲಿ ಸಭೆ ನಡೆಸಲಿವೆ. ಗೃಹ ಸಚಿವ ಅನಿಲ್ ದೇಶ್‌ಮುಖ್ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸಿವೆ ಹಾಗಾಗಿ ದೇಶ್‌ಮುಖ್‌ ಮೇಲಿನ ಆರೋಪದ ಕುರಿತು ಸಭೆಯಲ್ಲಿ ಚರ್ಚಿಸಲಿವೆ.

ಮುಖೇಶ್ ಅಂಬಾನಿ ಮನೆ ಮುಂದೆ ಜಿಲೆಟಿನ್ ಕಡ್ಡಿಗಳಿದ್ದ ವಾಹನ ಪತ್ತೆಯಾದ ಪ್ರಕರಣದ ತನಿಖೆಯಲ್ಲಿ ಲೋಪ ಎಸಗಿದ ಆರೋಪದ ಮೇಲೆ ಮುಂಬೈ ಪೊಲೀಸ್ ಕಮಿಷನರ್ ಹುದ್ದೆಯಿಂದ ವರ್ಗಾವಣೆಗೊಂಡ ಪರಮ್ ಬೀರ್ ಸಿಂಗ್ ಗೃಹ ಸಚಿವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು.

ಅನಿಲ್ ದೇಶಮುಖ್ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿದ್ದು, ಮೈತ್ರಿಪಕ್ಷಗಳಲ್ಲೂ ಕೆಲವರು ಇಂಥದ್ದೇ ಅಭಿಪ್ರಾಯ ಹೊಂದಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ್ದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಾಜಿ ಪೊಲೀಸ್ ಅಧಿಕಾರಿ ಜುಲಿಯೊ ರಿಬೆರೋ ಅವರಿಂದ ಈ ಬಗ್ಗೆ ತನಿಖೆ ಮಾಡಿಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ತಿಂಗಳಿಗೆ 100 ಕೋಟಿ ಲಂಚ ಆರೋಪ: ಗೃಹ ಸಚಿವ ದೇಶ್‌ಮುಖ್ ರಾಜೀನಾಮೆಗೆ ಒತ್ತಡ

ಅನಿಲ್ ದೇಶ್‌ಮುಖ್ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷ ಬಿಜೆಪಿ ಮುಂಬೈ, ಪುಣೆ ಮತ್ತು ನಾಗಪುರಗಳಲ್ಲಿ ಪ್ರತಿಭಟನೆ ನಡೆಸಿದೆ. ಗೃಹ ಸಚಿವರು 100 ಕೋಟಿ ರೂ. ಸಂಗ್ರಹಿಸಲು ಸೂಚಿಸಿದ್ದಾರೆ ಎನ್ನುವುದಾದರೆ, ಉಳಿದ ಸಚಿವರು ಎಷ್ಟೆಷ್ಟು ಸಂಗ್ರಹಕ್ಕೆ ಸೂಚಿಸಿದ್ದರು ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.

ಆರೋಪ ಸುಳ್ಳು, ತಮ್ಮನ್ನು ಉಳಿಸಿಕೊಲ್ಳಲು ಪರಮ್ ಬೀರ್ ಸಿಂಗ್ ಹೀಗೆ ಹೇಳುತ್ತಿದ್ದಾರೆ. ತಮ್ಮ ಮತ್ತು ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ವಿರುದ್ಧ ನಡೆದಿರುವ  ಷಡ್ಯಂತ್ರವಿದು ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಪ್ರಕಟಣೆ ನೀಡಿದ್ದಾರೆ.

ಪ್ರಕರಣ ಸಂಬಂಧ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶರದ್ ಪವಾರ್, ಈ ಆರೋಪ ಬಂದಿರುವ ಸಂದರ್ಭವೇ ಅನುಮಾನಾಸ್ಪದವಾಗಿದೆ. ವರ್ಗಾವಣೆಗೊಂಡ ನಂತರ ಮಾಜಿ ಪೊಲೀಸ್ ಆಯುಕ್ತರು 100 ಕೋಟಿ ಲಂಚದ ಆರೋಪ ಮಾಡಿದ್ದಾರೆ. ಮೈತ್ರಿ ಸರ್ಕಾರವನ್ನು ಬೀಳಿಸುವ ಸಂಚು ಇದರ ಹಿಂದೆ ಇರಬಹುದು. ಆದರೆ ನಾವು ಸಮಲೋಚನೆ ನಡೆಸಿ ಎಲ್ಲ ಸರಿಪಡಿಸುತ್ತೇವೆ. ಸರ್ಕಾರ ಐದು ವರ್ಷ ಗಟ್ಟಿಯಾಗಿ ಇರಲಿದೆ ಎಂದಿದ್ದಾರೆ.

ಜುಲಿಯೋ ರಿಬೆರೋ ದಕ್ಷತೆ ಬಗ್ಗೆ ಎಲ್ಲರಿಗೂ ತಿಳಿದಿದೆ. ಅವರ ತನಿಖೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಪವಾರ್ ಅಭಿಪ್ರಾಯ ಪಟ್ಟಿದ್ದಾರೆ. ಇದು ಗಂಭೀರ ಪ್ರಕರಣವಾದ್ದರಿಂದ ದೇಶ್‌ಮುಖ್ ರಾಜೀನಾಮೆ ಪಡೆಯುವುದು ಸೂಕ್ತ ಎಂದು ಸಿಎಮ ಠಾಕ್ರೆ ಕೂಡ ಯೋಚಿಸಿದ್ದಾರೆ ಎಂದು ಮೈತ್ರಿಕೂಟದ ಉನ್ನತ ನಾಯಕರೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಕ್ಕೆ ಗೃಹ ಸಚಿವರ ಸೂಚನೆ- ಪರಮ್ ಬೀರ್ ಸಿಂಗ್ ಆರೋಪ

ಅಂಬಾನಿ ಮನೆ ಎದುರು ಪತ್ತೆಯಾದ ಜಿಲೆಟಿನ್ ಕಡ್ಡಿಗಳಿದ್ದ ವಾಹನ ಸುತ್ತಲಿನ ತನಿಖೆಯಲ್ಲಿ ಪರಮ್ ಬೀರ್ ಸಿಂಗ್ ಲೋಪ ಎಸಗಿದ್ದು ಖಾತರಿಯಾದ ಕಾರಣ ತಾನು ಮತ್ತು ಸಿಎಂ ಠಾಕ್ರೆ ಅವರನ್ನು ಕಮೀಷನರ್ ಹುದ್ದೆಯಿಂದ ವರ್ಗಾವಣೆ ಮಾಡಿದ್ದೆವು. ಈ ಕಾರಣಕ್ಕೆ ಸಿಂಗ್ ಈಗ ತಮ್ಮ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಅವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸುವುದಾಗಿ ಅನಿಲ್ ದೇಶಮುಖ್ ತಿಳಿಸಿದ್ದಾರೆ.

’ಆ ಹುದ್ದೆಯಿಂದ ತೆಗೆದು ಹಾಕುವ ಒಂದು ದಿನ ಮೊದಲೆ ಸಿಂಗ್ ಅವರಿಗೆ ತಿಳಿದಿತ್ತು. ಹಿಂದಿನ ದಿನ ಅವರು ಸಹಾಯಕ ಪೊಲೀಸ್ ಕಮೀಷನರ್ ಸಂಜಯ್ ಪಾಟೀಲರೊಂದಿಗೆ ವ್ಯಾಟ್ಸಾಪ್ ಚಾಟ್ ನಡೆಸಿ, ತಮ್ಮ ವಿರುದ್ಧ ಸಾಕ್ಷ್ಯ ಸಂಗ್ರಹಕ್ಕೆ ಯತ್ನಿಸಿದ್ದರು’ ಎಂದು ದೇಶಮುಖ್ ಆರೋಪಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಜಿಲೆಟಿನ್ ಪ್ರಕರಣ ಮತ್ತು ವಾಹನ ಮಾಲೀಕ ಹಿರೇನ್ ಅವರ ಸಾವಿಗೆ ಸಂಬಧಿಸಿದಂತೆ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಎನ್‌ಐಎ ಬಂಧಿಸಿದ ನಂತರ ಈ ಬೆಳವಣಿಗೆಗಳು ನಡೆದಿವೆ.

ಪರಮ್ ಬೀರ್ ಸಿಂಗ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ, ಸಚಿವರು ಮುಂಬೈ ಪೊಲೀಸ್ ಅಧಿಕಾರಿಗಳಿಗೆ ಪ್ರತಿ ತಿಂಗಳು 100 ಕೋಟಿ ರೂಪಾಯಿ ಕಲೆಕ್ಷನ್ ಗುರಿಯನ್ನು ನಿಗದಿಪಡಿಸಿದ್ದರು. ರೆಸ್ಟೋರೆಂಟ್‌ಗಳು, ಪಬ್‌ಗಳು, ಬಾರ್‌ಗಳು ಮತ್ತು ಹುಕ್ಕಾ ಪಾರ್ಲರ್‌ಗಳಿಂದ ಹಣವನ್ನು ಸಂಗ್ರಹಿಸಲು ಸೂಚಿಸಿದ್ದರು. ಫೆಬ್ರವರಿಯಲ್ಲಿ ಈ ಬೇಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...