Homeಮುಖಪುಟತಿಂಗಳಿಗೆ 100 ಕೋಟಿ ಲಂಚ ಆರೋಪ: ಗೃಹ ಸಚಿವ ದೇಶ್‌ಮುಖ್ ರಾಜೀನಾಮೆಗೆ ಒತ್ತಡ

ತಿಂಗಳಿಗೆ 100 ಕೋಟಿ ಲಂಚ ಆರೋಪ: ಗೃಹ ಸಚಿವ ದೇಶ್‌ಮುಖ್ ರಾಜೀನಾಮೆಗೆ ಒತ್ತಡ

- Advertisement -
- Advertisement -

ಮುಖೇಶ್ ಅಂಬಾನಿ ಮನೆ ಮುಂದೆ ಜಿಲೆಟಿನ್ ಕಡ್ಡಿಗಳಿದ್ದ ವಾಹನ ಪತ್ತೆ ಪ್ರಕರಣದಲ್ಲಿ ವಜಾಗೊಂಡಿರುವ ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್‌ ಸಿಂಗ್, ಗೃಹ ಸಚಿವ ಅನಿಲ್ ದೇಶ್‌ಮುಖ್ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು, ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಭ್ರಷ್ಟಾಚಾರದ ಆರೋಪ ಗಂಭೀರವಾಗಿರುವುದರಿಂದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಸಂಪುಟದಿಂದ ಹೊರ ಹೋಗಬೇಕಾಗುತ್ತದೆ ಎಂದು ರಾಜ್ಯದ ಆಡಳಿತ ಒಕ್ಕೂಟದ ಉನ್ನತ ಮುಖಂಡರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಇದೇ ಅಭಿಪ್ರಾಯದಲ್ಲಿದ್ದು, ಇಂದು (ಭಾನುವಾರ) ಸಂಜೆ ಶಿವಸೇನೆ ಮುಖಂಡರು ಮತ್ತು ಮಿತ್ರಪಕ್ಷ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ನಡುವೆ ಸಭೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮುಖೇಶ್ ಅಂಬಾನಿ ಮನೆ ಬಳಿ ಸ್ಪೋಟಕವಿದ್ದ ವಾಹನ ಪ್ರಕರಣದ ಭದ್ರತಾ ತನಿಖೆಯಲ್ಲಿ ಲೋಪ ಎಸಗಿದ್ದಾರೆ ಎಂದು ಮುಂಬೈ ಪೊಲೀಸ್ ಆಯುಕ್ತ ಸ್ಥಾನದಿಂದ ವಜಾಗೊಳಿಸಲ್ಪಟ್ಟ ಪರಮ್ ಬೀರ್ ಸಿಂಗ್,  ಗೃಹ ಸಚಿವರು “ತಿಂಗಳಿಗೆ 100 ಕೋಟಿ ರೂಪಾಯಿ ಲಂಚ ಸಂಗ್ರಹಿಸುವ ಗುರಿ ಹೊಂದಿದ್ದಾರೆ” ಎಂದು ಆರೋಪಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಕ್ಕೆ ಗೃಹ ಸಚಿವರ ಸೂಚನೆ- ಪರಮ್ ಬೀರ್ ಸಿಂಗ್ ಆರೋಪ

ಗೃಹ ಸಚಿವರ ಮೇಲಿನ ಭ್ರಷ್ಟಾಚಾರ ಆರೋಪ ಈಗ ಮೈತ್ರಿಯಲ್ಲಿ ತಳಮಳಕ್ಕೆ ಕಾರಣವಾಗಿದ್ದು, ದೇಶಮುಖ್ ರಾಜೀನಾಮೆಗೆ ಒತ್ತಡ ಹೆಚ್ಚಿದೆ ಎನ್ನಲಾಗಿದೆ. ಎನ್‌ಸಿಪಿ ಪಕ್ಷದ ದೇಶ್‌ಮುಖ್ ರಾಜೀನಾಮೆಗೆ ಮೈತ್ರಿ ಪಕ್ಷ ಕಾಂಗ್ರೆಸ್ ಕೂಡ ಒತ್ತಾಯಿಸಿದೆ ಎನ್ನಲಾಗಿದ್ದು, ಇಂದು (ಭಾನುವಾರ) ಸಂಜೆ ದೇಶ್‌ಮುಖ್ ಭವಿಷ್ಯ ತಿಳಿಯಲಿದೆ.

ಆರೋಪಗಳನ್ನು ನಿರಾಕರಿಸಿರುವ ದೇಶ್‌ಮುಖ್, ಪರಮ್ ಬೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ. ಆದರೆ ಅವರನ್ನು ತೆಗೆದುಹಾಕುವಂತೆ ರಾಜ್ಯದ ಪ್ರತಿಪಕ್ಷ ಬಿಜೆಪಿ ಕರೆ ನೀಡಿದೆ.

ಪರಮ್ ಬೀರ್ ಸಿಂಗ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ, ಮುಕೇಶ್ ಅಂಬಾನಿ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಸಚಿನ್ ವಾಜೆ ಸೇರಿದಂತೆ ಹಲವಾರು ಅಧಿಕಾರಿಗಳನ್ನು ಸುಲಿಗೆ ದಂಧೆ ನಡೆಸುವಂತೆ ಸಚಿವರು ಕೇಳಿದ್ದಾರೆ ಎಂದು ತಿಳಿಸಿದ್ದಾರೆ.

ಸಚಿವರು ಮುಂಬೈ ಪೊಲೀಸ್ ಅಧಿಕಾರಿಗಳಿಗೆ ಪ್ರತಿ ತಿಂಗಳು 100 ಕೋಟಿ ರೂಪಾಯಿ ಕಲೆಕ್ಷನ್ ಗುರಿಯನ್ನು ನಿಗದಿಪಡಿಸಿದ್ದರು. ರೆಸ್ಟೋರೆಂಟ್‌ಗಳು, ಪಬ್‌ಗಳು, ಬಾರ್‌ಗಳು ಮತ್ತು ಹುಕ್ಕಾ ಪಾರ್ಲರ್‌ಗಳಿಂದ ಹಣವನ್ನು ಸಂಗ್ರಹಿಸಲು ಸೂಚಿಸಿದ್ದರು. ಫೆಬ್ರವರಿಯಲ್ಲಿ ಈ ಬೇಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಗೃಹ ಸಚಿವರು ಹಲವಾರು ಸಂದರ್ಭಗಳಲ್ಲಿ ಪೊಲೀಸ್ ಅಧಿಕಾರಿಗಳಿಗೆ ಪ್ರಕರಣಗಳನ್ನು ಹೇಗೆ ನಿರ್ವಹಿಸಬೇಕು ಮತ್ತು ಆರೋಪಗಳನ್ನು ಹೇಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದ್ದರು, ಆಗಾಗ್ಗೆ ತಮ್ಮನ್ನು ಮತ್ತು ಇತರ ಹಿರಿಯರನ್ನು “ಬೈಪಾಸ್” ಮಾಡಲು ಪೊಲೀಸ್ ಅಧಿಕಾರಿಗಳನ್ನು ಅವರ ಮನೆಗೆ ಕರೆಸಿಕೊಳ್ಳುತ್ತ ಬಂದಿದ್ದರು ಎಂದು ಪತ್ರದಲ್ಲಿ ಆರೋಪಿಸಲಾಗಿದೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....