Homeಅಂತರಾಷ್ಟ್ರೀಯಜಗತ್ತಿನ 100 ಕೋಟಿ ಮಕ್ಕಳು ಹಿಂಸೆಯಿಂದ ಬಳಲುತ್ತಿದ್ದಾರೆ: ವಿಶ್ವ ಆರೋಗ್ಯ ಸಂಸ್ಥೆ

ಜಗತ್ತಿನ 100 ಕೋಟಿ ಮಕ್ಕಳು ಹಿಂಸೆಯಿಂದ ಬಳಲುತ್ತಿದ್ದಾರೆ: ವಿಶ್ವ ಆರೋಗ್ಯ ಸಂಸ್ಥೆ

- Advertisement -
- Advertisement -

ಸುಮಾರು 100 ಕೋಟಿಗಿಂತಲೂ ಹೆಚ್ಚು ಮಕ್ಕಳು ಕಿರುಕುಳ, ಬೆದರಿಸುವಿಕೆ, ದೈಹಿಕ ಅಥವಾ ಭಾವನಾತ್ಮಕ ನಿಂದನೆ, ಲೈಂಗಿಕ ಹಿಂಸೆಯಂತಹ ವಿವಿಧ ರೀತಿಯ ಹಿಂಸೆಯಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ ವಿಶ್ವ ಆರೋಗ್ಯ ಸಂಸ್ಥೆಯ ವರದಿ ಹೇಳಿದೆ. ಪ್ರತಿ 13 ನಿಮಿಷಗಳಿಗೊಮ್ಮೆ ಒಂದು ಮಗು ಅಥವಾ ಹದಿಹರೆಯದ ಮಗು ಹತ್ಯೆಗೊಳಗಾಗುತ್ತಾರೆ ಮತ್ತು ಪ್ರತಿ ವರ್ಷ ಸುಮಾರು 40,000 ಮಕ್ಕಳು ತಡೆಗಟ್ಟಬಹುದಾದ ಸಾವುಗಳಿಗೆ ಬಲಿಯಾಗುತ್ತಾರೆ ಎಂದು ಅದು ಹೇಳಿದೆ. ಜಗತ್ತಿನ 100 ಕೋಟಿ ಮಕ್ಕಳು

ಹಿಂಸೆಗೆ ಒಳಗಾಗುವ ಮಕ್ಕಳಲ್ಲಿ ಅರ್ಧದಷ್ಟು ಜನರು ಮಾತ್ರ ತಮ್ಮ ಹಿಂಸೆಯನ್ನು ಹೇಳುತ್ತಾರೆ. ಅದರಲ್ಲಿ ಕೇವಲ 10% ಮಾತ್ರ ಯಾವುದಾದರೂ ಸಹಾಯ ಪಡೆಯುತ್ತಾರೆ ಎಂದು ವರದಿ ಉಲ್ಲೇಖಿಸಿದೆ. ಪ್ರತಿ 10 ಮಕ್ಕಳಲ್ಲಿ 9 ಮಕ್ಕಳು ಇನ್ನೂ ದೈಹಿಕ ಶಿಕ್ಷೆ ಮತ್ತು ಲೈಂಗಿಕ ದೌರ್ಜನ್ಯದಂತಹ ಬಾಲ್ಯದ ಹಿಂಸೆಯನ್ನು ನಿಷೇಧಿಸದ ದೇಶಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2ರಿಂದ 17ರ ವರೆಗಿನ ವರ್ಷದ ಮಕ್ಕಳಲ್ಲಿ ಅರ್ಧಕ್ಕಿಂತ ಹೆಚ್ಚು ಮಕ್ಕಳು ಅಂದರೆ 100 ಕೋಟಿಗಿಂತಲೂ ಹೆಚ್ಚು ಮಕ್ಕಳು ಪ್ರತಿ ವರ್ಷ ಕೆಲವು ರೀತಿಯ ಹಿಂಸೆಯನ್ನು ಅನುಭವಿಸುತ್ತಾರೆ. ಈ ಹಿಂಸೆ ಆತಂಕ, ಖಿನ್ನತೆ, ಅಸುರಕ್ಷಿತ ಲೈಂಗಿಕತೆ, ಧೂಮಪಾನ ಮತ್ತು ಮಾದಕ ದ್ರವ್ಯ ಸೇವನೆಯಂತಹ ಅಪಾಯಕಾರಿ ನಡವಳಿಕೆಗಳಿಗೆ ಕೊಡುಗೆ ನೀಡುತ್ತದೆ ಜೊತೆಗೆ ಮಕ್ಕಳಲ್ಲಿ ಶೈಕ್ಷಣಿಕ ಸಾಧನೆಯನ್ನು ಕಡಿಮೆ ಮಾಡುತ್ತದೆ ಎಂದು ವರದಿ ಹೇಳಿದೆ.

ದೈಹಿಕ ಶಿಕ್ಷೆ ಸೇರಿದಂತೆ ಮಕ್ಕಳ ಮೇಲೆ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ 100 ಕ್ಕೂ ಹೆಚ್ಚು ಸರ್ಕಾರಗಳು ಮಕ್ಕಳ ಮೇಲಿನ ದೌರ್ಜನ್ಯವನ್ನು ಕೊನೆಗೊಳಿಸಲು ಕೊಲಂಬಿಯಾದ ಬೊಗೋಟಾದಲ್ಲಿ ಗುರುವಾರ ನಡೆದ ಮಹತ್ವದ ಕಾರ್ಯಕ್ರಮದಲ್ಲಿ ಐತಿಹಾಸಿಕ ಒಪ್ಪಂದಗಳನ್ನು ಮಾಡಿವೆ.

“ತಡೆಗಟ್ಟಲು ಸಾಧ್ಯವಿರುವ ಹೊರತಾಗಿಯೂ, ಪ್ರಪಂಚದಾದ್ಯಂತದ ಲಕ್ಷಾಂತರ ಮಕ್ಕಳಿಗೆ ಭಯಾನಕ ಹಿಂಸೆ ಎಂಬುವುದು ದೈನಂದಿನ ವಾಸ್ತವವಾಗಿ ಪರಿಣಮಿಸಿದೆ. ತಲೆಮಾರುಗಳಿಂದ ದಾಟಿ ಬರುತ್ತಿರುವ ಇದನ್ನು, ಸರ್ಕಾರಗಳು ನಿರ್ಣಾಯಕವಾಗಿ ಪ್ರತಿಜ್ಞೆಗಳನ್ನು ಮಾಡಿ ಅದನ್ನು ಜಾರಿಗೊಳಿಸಿದರೆ ಹಿಂಸಾಚಾರವನ್ನು ನಿಲ್ಲಸಬಹುದು. ಹೀಗಾದರೆ ಶಾಲೆಗಳನ್ನು ಸುರಕ್ಷಿತಗೊಳಿಸಲು ಮತ್ತು ಆನ್‌ಲೈನ್ ದುರುಪಯೋಗವನ್ನು ನಿಭಾಯಿಸಲು ಕುಟುಂಬಗಳಿಗೆ ನೆರವಾಗಲು ಸಾಧ್ಯವಾಗುತ್ತದೆ. ಜೊತೆಗೆ ಶಾಶ್ವತ ಹಾನಿ ಮತ್ತು ಕಳಪೆ ಆರೋಗ್ಯದಿಂದ ಮಕ್ಕಳನ್ನು ರಕ್ಷಿಸಲು ಈ ಕ್ರಮಗಳು ಮೂಲಭೂತವಾಗಿ ಅವಶ್ಯಕವಾಗಿದೆ ಎಂದು” ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕರಾದ ಡಾ. ಟೆಡ್ರೊಸ್ ಹೇಳಿದ್ದಾರೆ.

ಐದರಲ್ಲಿ ಮೂರು ಮಕ್ಕಳು ತಮ್ಮ ಮನೆಗಳಲ್ಲಿ ದೈಹಿಕ ವಿಧಾನದಿಂದ ನಿಯಮಿತವಾಗಿ ಶಿಕ್ಷೆಗೆ ಒಳಗಾಗುತ್ತಾರೆ. ಜೊತೆಗೆ ಐದು ಹುಡುಗಿಯರಲ್ಲಿ ಒಬ್ಬರು ಮತ್ತು ಏಳು ಹುಡುಗರಲ್ಲಿ ಒಬ್ಬರು ಲೈಂಗಿಕ ದೌರ್ಜನ್ಯವನ್ನು ಅನುಭವಿಸುತ್ತಾರೆ ಎಂದು ವಿಶ್ವ ಸಂಸ್ಥೆ ಹೇಳಿದೆ. ಜಗತ್ತಿನ 100 ಕೋಟಿ ಮಕ್ಕಳು

ಇದನ್ನೂ ಓದಿ: ‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....