Homeಅಂತರಾಷ್ಟ್ರೀಯಜಗತ್ತಿನ 100 ಕೋಟಿ ಮಕ್ಕಳು ಹಿಂಸೆಯಿಂದ ಬಳಲುತ್ತಿದ್ದಾರೆ: ವಿಶ್ವ ಆರೋಗ್ಯ ಸಂಸ್ಥೆ

ಜಗತ್ತಿನ 100 ಕೋಟಿ ಮಕ್ಕಳು ಹಿಂಸೆಯಿಂದ ಬಳಲುತ್ತಿದ್ದಾರೆ: ವಿಶ್ವ ಆರೋಗ್ಯ ಸಂಸ್ಥೆ

- Advertisement -
- Advertisement -

ಸುಮಾರು 100 ಕೋಟಿಗಿಂತಲೂ ಹೆಚ್ಚು ಮಕ್ಕಳು ಕಿರುಕುಳ, ಬೆದರಿಸುವಿಕೆ, ದೈಹಿಕ ಅಥವಾ ಭಾವನಾತ್ಮಕ ನಿಂದನೆ, ಲೈಂಗಿಕ ಹಿಂಸೆಯಂತಹ ವಿವಿಧ ರೀತಿಯ ಹಿಂಸೆಯಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ ವಿಶ್ವ ಆರೋಗ್ಯ ಸಂಸ್ಥೆಯ ವರದಿ ಹೇಳಿದೆ. ಪ್ರತಿ 13 ನಿಮಿಷಗಳಿಗೊಮ್ಮೆ ಒಂದು ಮಗು ಅಥವಾ ಹದಿಹರೆಯದ ಮಗು ಹತ್ಯೆಗೊಳಗಾಗುತ್ತಾರೆ ಮತ್ತು ಪ್ರತಿ ವರ್ಷ ಸುಮಾರು 40,000 ಮಕ್ಕಳು ತಡೆಗಟ್ಟಬಹುದಾದ ಸಾವುಗಳಿಗೆ ಬಲಿಯಾಗುತ್ತಾರೆ ಎಂದು ಅದು ಹೇಳಿದೆ. ಜಗತ್ತಿನ 100 ಕೋಟಿ ಮಕ್ಕಳು

ಹಿಂಸೆಗೆ ಒಳಗಾಗುವ ಮಕ್ಕಳಲ್ಲಿ ಅರ್ಧದಷ್ಟು ಜನರು ಮಾತ್ರ ತಮ್ಮ ಹಿಂಸೆಯನ್ನು ಹೇಳುತ್ತಾರೆ. ಅದರಲ್ಲಿ ಕೇವಲ 10% ಮಾತ್ರ ಯಾವುದಾದರೂ ಸಹಾಯ ಪಡೆಯುತ್ತಾರೆ ಎಂದು ವರದಿ ಉಲ್ಲೇಖಿಸಿದೆ. ಪ್ರತಿ 10 ಮಕ್ಕಳಲ್ಲಿ 9 ಮಕ್ಕಳು ಇನ್ನೂ ದೈಹಿಕ ಶಿಕ್ಷೆ ಮತ್ತು ಲೈಂಗಿಕ ದೌರ್ಜನ್ಯದಂತಹ ಬಾಲ್ಯದ ಹಿಂಸೆಯನ್ನು ನಿಷೇಧಿಸದ ದೇಶಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2ರಿಂದ 17ರ ವರೆಗಿನ ವರ್ಷದ ಮಕ್ಕಳಲ್ಲಿ ಅರ್ಧಕ್ಕಿಂತ ಹೆಚ್ಚು ಮಕ್ಕಳು ಅಂದರೆ 100 ಕೋಟಿಗಿಂತಲೂ ಹೆಚ್ಚು ಮಕ್ಕಳು ಪ್ರತಿ ವರ್ಷ ಕೆಲವು ರೀತಿಯ ಹಿಂಸೆಯನ್ನು ಅನುಭವಿಸುತ್ತಾರೆ. ಈ ಹಿಂಸೆ ಆತಂಕ, ಖಿನ್ನತೆ, ಅಸುರಕ್ಷಿತ ಲೈಂಗಿಕತೆ, ಧೂಮಪಾನ ಮತ್ತು ಮಾದಕ ದ್ರವ್ಯ ಸೇವನೆಯಂತಹ ಅಪಾಯಕಾರಿ ನಡವಳಿಕೆಗಳಿಗೆ ಕೊಡುಗೆ ನೀಡುತ್ತದೆ ಜೊತೆಗೆ ಮಕ್ಕಳಲ್ಲಿ ಶೈಕ್ಷಣಿಕ ಸಾಧನೆಯನ್ನು ಕಡಿಮೆ ಮಾಡುತ್ತದೆ ಎಂದು ವರದಿ ಹೇಳಿದೆ.

ದೈಹಿಕ ಶಿಕ್ಷೆ ಸೇರಿದಂತೆ ಮಕ್ಕಳ ಮೇಲೆ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ 100 ಕ್ಕೂ ಹೆಚ್ಚು ಸರ್ಕಾರಗಳು ಮಕ್ಕಳ ಮೇಲಿನ ದೌರ್ಜನ್ಯವನ್ನು ಕೊನೆಗೊಳಿಸಲು ಕೊಲಂಬಿಯಾದ ಬೊಗೋಟಾದಲ್ಲಿ ಗುರುವಾರ ನಡೆದ ಮಹತ್ವದ ಕಾರ್ಯಕ್ರಮದಲ್ಲಿ ಐತಿಹಾಸಿಕ ಒಪ್ಪಂದಗಳನ್ನು ಮಾಡಿವೆ.

“ತಡೆಗಟ್ಟಲು ಸಾಧ್ಯವಿರುವ ಹೊರತಾಗಿಯೂ, ಪ್ರಪಂಚದಾದ್ಯಂತದ ಲಕ್ಷಾಂತರ ಮಕ್ಕಳಿಗೆ ಭಯಾನಕ ಹಿಂಸೆ ಎಂಬುವುದು ದೈನಂದಿನ ವಾಸ್ತವವಾಗಿ ಪರಿಣಮಿಸಿದೆ. ತಲೆಮಾರುಗಳಿಂದ ದಾಟಿ ಬರುತ್ತಿರುವ ಇದನ್ನು, ಸರ್ಕಾರಗಳು ನಿರ್ಣಾಯಕವಾಗಿ ಪ್ರತಿಜ್ಞೆಗಳನ್ನು ಮಾಡಿ ಅದನ್ನು ಜಾರಿಗೊಳಿಸಿದರೆ ಹಿಂಸಾಚಾರವನ್ನು ನಿಲ್ಲಸಬಹುದು. ಹೀಗಾದರೆ ಶಾಲೆಗಳನ್ನು ಸುರಕ್ಷಿತಗೊಳಿಸಲು ಮತ್ತು ಆನ್‌ಲೈನ್ ದುರುಪಯೋಗವನ್ನು ನಿಭಾಯಿಸಲು ಕುಟುಂಬಗಳಿಗೆ ನೆರವಾಗಲು ಸಾಧ್ಯವಾಗುತ್ತದೆ. ಜೊತೆಗೆ ಶಾಶ್ವತ ಹಾನಿ ಮತ್ತು ಕಳಪೆ ಆರೋಗ್ಯದಿಂದ ಮಕ್ಕಳನ್ನು ರಕ್ಷಿಸಲು ಈ ಕ್ರಮಗಳು ಮೂಲಭೂತವಾಗಿ ಅವಶ್ಯಕವಾಗಿದೆ ಎಂದು” ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕರಾದ ಡಾ. ಟೆಡ್ರೊಸ್ ಹೇಳಿದ್ದಾರೆ.

ಐದರಲ್ಲಿ ಮೂರು ಮಕ್ಕಳು ತಮ್ಮ ಮನೆಗಳಲ್ಲಿ ದೈಹಿಕ ವಿಧಾನದಿಂದ ನಿಯಮಿತವಾಗಿ ಶಿಕ್ಷೆಗೆ ಒಳಗಾಗುತ್ತಾರೆ. ಜೊತೆಗೆ ಐದು ಹುಡುಗಿಯರಲ್ಲಿ ಒಬ್ಬರು ಮತ್ತು ಏಳು ಹುಡುಗರಲ್ಲಿ ಒಬ್ಬರು ಲೈಂಗಿಕ ದೌರ್ಜನ್ಯವನ್ನು ಅನುಭವಿಸುತ್ತಾರೆ ಎಂದು ವಿಶ್ವ ಸಂಸ್ಥೆ ಹೇಳಿದೆ. ಜಗತ್ತಿನ 100 ಕೋಟಿ ಮಕ್ಕಳು

ಇದನ್ನೂ ಓದಿ: ‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...