Homeಮುಖಪುಟ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ...

‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್ ಆರೋಪ

- Advertisement -
- Advertisement -

ತೆಲಂಗಾಣದ ಮುನುಗೋಡೆ ಉಪಚುನಾವಣೆಗೆ ಮುಂಚಿತವಾಗಿ ಪಕ್ಷ ಬದಲಾಯಿಸಲು ಆಡಳಿತಾರೂಢ ಟಿಆರ್‌ಎಸ್ ಪಕ್ಷದ 20 ರಿಂದ 30 ಶಾಸಕರಿಗೆ ಭಾರಿ ಮೊತ್ತದ ಹಣವನ್ನು ಬಿಜೆಪಿ ಪಾವತಿಸುತ್ತಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ (ಕೆಸಿಆರ್‌‌) ಅವರು ಭಾನುವಾರ ಹೇಳಿದ್ದು,‘‘ಬಿಜೆಪಿಯ ‘ದಲ್ಲಾಳಿಗಳು’ ಹಾಲಿ ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌ ನೀಡಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ನೀವು ನಿನ್ನೆ ನೋಡಿದ್ದೀರಿ. ಇಲ್ಲಿ ಒಬ್ಬ ಕೆಸಿಆರ್ ಜೋರಾಗಿ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಹೀಗಾಗಿ ಅವರ ರಾಜಕೀಯ ಅಂತ್ಯವನ್ನು ಮಾಡೋಣ ಎಂದು ಬಿಜೆಪಿ ಯೋಚಿಸುತ್ತಿದೆ. ಅವರು ಪ್ರತಿ ಶಾಸಕರನ್ನು 100 ಕೋಟಿ ರೂ.ಗೆ ಖರೀದಿಸಲು ದಲ್ಲಾಳಿಗಳನ್ನು ಕಳುಹಿಸಿದ್ದಾರೆ” ಎಂದು ಮುಖ್ಯಮಂತ್ರಿ ಕೆಸಿಆರ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರು 20 ಅಥವಾ 30 ಶಾಸಕರನ್ನು ಖರೀದಿಸಲು ಬಯಸಿದ್ದರು. ಈ ಮೂಲಕ ಕೆಸಿಆರ್ ಸರ್ಕಾರವನ್ನು ಉರುಳಿಸಿ, ತೆಲಂಗಾಣವನ್ನು ಅತಿಕ್ರಮಿಸಿ ನಂತರ ತಮ್ಮ ಇಚ್ಛೆಯಂತೆ ಖಾಸಗೀಕರಣವನ್ನು ಜಾರಿಗೊಳಿಸಬಹುದು ಎಂದು ಬಯಸಿದ್ದರು” ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರೆ ನನಗೆ ತೊಂದರೆ ಕೊಡುತ್ತಿದ್ದಾರೆ: ಜನಾರ್ದನ ರೆಡ್ಡಿ ಅಸಮಾಧಾನ

ಟಿಆರ್‌ಎಸ್ ಶಾಸಕರಿಗೆ ಲಂಚ ನೀಡಿದ ಆರೋಪದಲ್ಲಿ ಬಿಜೆಪಿ ಏಜೆಂಟರೆಂದು ಹೇಳಲಾದ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಒಂದು ದಿನದ ನಂತರ ಮುಖ್ಯಮಂತ್ರಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.

ಟಿಆರ್‌ಎಸ್ ಶಾಸಕರಲ್ಲೊಬ್ಬರಾದ ಪೈಲಟ್ ರೋಹಿತ್ ರೆಡ್ಡಿ ಅವರ ದೂರಿನ ಆಧಾರದ ಮೇಲೆ ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ, ನಂದ ಕುಮಾರ್ ಮತ್ತು ಸಿಂಹಯಾಜಿ ಸ್ವಾಮಿ ವಿರುದ್ಧ ಕ್ರಿಮಿನಲ್ ಪಿತೂರಿ, ಲಂಚ ನೀಡುವಿಕೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ 1988 ರ ಉಪಬಂಧಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಆರೋಪಿಗಳು ತನಗೆ 100 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದಾರೆ ಎಂದು ಶಾಸಕ ರೋಹಿತ್ ರೆಡ್ಡಿ ಆರೋಪಿಸಿದ್ದಾರೆ. ಬಿಜೆಪಿಯ ಹಣಕ್ಕೆ ಪ್ರತಿಯಾಗಿ ಶಾಸಕರು ಟಿಆರ್‌ಎಸ್ ತೊರೆದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಾಗಿತ್ತು.

ಇದನ್ನೂ ಓದಿ: ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

“ಶಾಸಕರಿಗೆ ನೀಡಲಾಗಿದ್ದ 100 ಕೋಟಿ ರೂ.ಗಳನ್ನು ಒದಗಿಸಿದವರು ಯಾರು? ಈ ಬಗ್ಗೆ ತನಿಖೆ ನಡೆಯಬೇಕು. ಈ ಸಮಸ್ಯೆಯ ಹಿಂದೆ ಯಾರಿದ್ದಾರೆ? ಸಮಸ್ಯೆಯ ಸೃಷ್ಟಿಕರ್ತರು ತಮ್ಮ ಹುದ್ದೆಗಳಲ್ಲಿ ಮುಂದುವರಿಯಲು ಅರ್ಹರೇ?” ಎಂದು ಕೆಸಿಆರ್ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ಹಿರಿಯ ನಾಯಕ ಮತ್ತು ಒಕ್ಕೂಟ ಸರ್ಕಾರದ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ,“ಇಂದು ನೀವು ಅವರನ್ನು ದೆಹಲಿ ದಲ್ಲಾಳಿಗಳು ಎಂದು ಕರೆಯುತ್ತೀರಿ. ದಲ್ಲಾಳಿತನದ ಮೂಲಕವೇ ನೀವು ಈ ಮೊದಲು ನಿಮ್ಮ ಪಕ್ಷಕ್ಕೆ ಸೇರಿದ ಎಲ್ಲಾ ಶಾಸಕರನ್ನು ಪ್ರೋತ್ಸಾಹಿಸಿದ್ದೀರಿ” ಎಂದು ಟ್ವೀಟ್ ಮಾಡಿದ್ದಾರೆ.

“ನಾನು ಒಂದು ವಿಷಯ ತಿಳಿಸುತ್ತಿದ್ದೇನೆ ಕೆಸಿಆರ್ ಅವರೇ, ನಿಮ್ಮ ಸರ್ಕಾರವನ್ನು ಬೀಳಿಸುವ ಉದ್ದೇಶ ನಮಗಿಲ್ಲ. ಚುನಾವಣೆಯಲ್ಲಿ ನಿಮ್ಮದೇ ಅಜೆಂಡಾ ಆಗುವಂತೆ ನಿಮ್ಮದೇ ಸರ್ಕಾರವನ್ನು ಉರುಳಿಸಿ ಅನುಕಂಪ ಗಳಿಸುವ ಯೋಚನೆ ನಿಮ್ಮಲ್ಲಿರಬಹುದು. ನಮ್ಮ ಪಕ್ಷಕ್ಕೆ ಅಂತಹ ಉದ್ದೇಶವಿಲ್ಲ. ಈಗಾಗಲೇ ನೀವು ಜನರಲ್ಲಿ ನಿಮ್ಮ ಗೌರವವನ್ನು ಕಳೆದುಕೊಂಡಿದ್ದೀರಿ, ಜನರು ನಿಮ್ಮನ್ನು ಮತ್ತು ನಿಮ್ಮ ಪಕ್ಷವನ್ನು ಅಸಹ್ಯಪಡುತ್ತಿದ್ದಾರೆ” ಎಂದು ಕಿಶನ್ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ: ಒಂದೇ ತಿಂಗಳಲ್ಲಿ ಮೂರು ಪ್ರಕರಣ

ಈ ಮಧ್ಯೆ, ತೆಲಂಗಾಣದ ಆಡಳಿತಾರೂಢ ಟಿಆರ್‌ಎಸ್ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ್ದ ಸಾಮಾನ್ಯ ಸಮ್ಮತಿಯನ್ನು ಹಿಂಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...