Homeಮುಖಪುಟರೈತ ಹೋರಾಟಕ್ಕೆ 100 ದಿನ: ಹೆದ್ದಾರಿ ತಡೆ, ಬಿಜೆಪಿ ಬಹಿಷ್ಕರಿಸಲು ರೈತರ ಕರೆ

ರೈತ ಹೋರಾಟಕ್ಕೆ 100 ದಿನ: ಹೆದ್ದಾರಿ ತಡೆ, ಬಿಜೆಪಿ ಬಹಿಷ್ಕರಿಸಲು ರೈತರ ಕರೆ

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ನೂರು ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ 5 ಗಂಟೆಗಳ ಹೆದ್ದಾರಿ ತಡೆ ಹೋರಾಟ ಆರಂಭವಾಗಿದೆ. ಅಲ್ಲದೇ ದೇಶಾದ್ಯಂತ ಕಪ್ಪು ಬಾವುಟ ಹಾರಿಸಿ ಕರಾಳ ದಿನ ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ.

ಇಂದು ದೆಹಲಿಯ ಕುಂಡ್ಲಿ-ಮಾನೇಸರ್ ಪಾಲ್ವಾಲ್ ಎಕ್ಸ್‌ಪ್ರೆಸ್ ಹೆದ್ದಾರಿಯನ್ನು ಐದು ಗಂಟೆಗಳ ಕಾಲ ನಿರ್ಬಂಧಿಸಲಾಗಿದೆ. ಅದೇ ರೀತಿಯಾಗಿ ಹರಿಯಾಣದಲ್ಲಿ ಇಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ರೈತರು ಪಾಲ್ವಾಲ್‌ನಲ್ಲಿ ವೆಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯನ್ನು ನಿರ್ಬಂಧಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ ಹೆದ್ದಾರಿಗಳ ಸಮೀಪವಿರುವ ಟೋಲ್ ಪ್ಲಾಜಾಗಳನ್ನು ಮುಕ್ತಗೊಳಿಸಲು ಮತ್ತು ದೇಶಾದ್ಯಂತ ಕಚೇರಿಗಳು ಮತ್ತು ಮನೆಗಳ ಮೇಲೆ ಕಪ್ಪು ಧ್ವಜಗಳನ್ನು ಹಾರಿಸುವ ಮೂಲಕ ಕರಾಳ ದಿನ ಆಚರಿಸಲು ಕರೆ ನೀಡಿದೆ.

ನೂರು ದಿನಗಳ ಕಾಲ ರೈತರು ಹೋರಾಡಿದರು ಅವರ ಕಾಳಜಿಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಹಾಗಾಗಿ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ತೀವ್ರಗೊಳಿಸಲು, ಬಿಜೆಪಿಯನ್ನು ರಾಜಕೀಯವಾಗಿ ಬಹಿಷ್ಕರಿಸುವಂತೆ ರೈತರು ಕರೆ ನೀಡಿದ್ದಾರೆ.

ಈ ಕುರಿತು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿ #FarmersCallBJPboycott ಎಂಬ ಹ್ಯಾಷ್‌ಟ್ಯಾಗ್ ನೀಡಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಗೆಲ್ಲುವ ಪಕ್ಷಗಳಿಗೆ ಮತ ನೀಡುವಂತೆ ರೈತರು ಮನವಿ ಮಾಡಿದ್ದಾರೆ. ಕೆಲ ರಾಜ್ಯಗಳಲ್ಲಿ ಪ್ರಚಾರ ನಡೆಸಲು ರೈತರು ನಿರ್ಧಿರಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ಬಿಜೆಪಿಗೆ ಮತ ನೀಡದಂತೆ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಲಿರುವ ಟಿಕಾಯತ್‌‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...