ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ನೂರು ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ 5 ಗಂಟೆಗಳ ಹೆದ್ದಾರಿ ತಡೆ ಹೋರಾಟ ಆರಂಭವಾಗಿದೆ. ಅಲ್ಲದೇ ದೇಶಾದ್ಯಂತ ಕಪ್ಪು ಬಾವುಟ ಹಾರಿಸಿ ಕರಾಳ ದಿನ ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ.
ಇಂದು ದೆಹಲಿಯ ಕುಂಡ್ಲಿ-ಮಾನೇಸರ್ ಪಾಲ್ವಾಲ್ ಎಕ್ಸ್ಪ್ರೆಸ್ ಹೆದ್ದಾರಿಯನ್ನು ಐದು ಗಂಟೆಗಳ ಕಾಲ ನಿರ್ಬಂಧಿಸಲಾಗಿದೆ. ಅದೇ ರೀತಿಯಾಗಿ ಹರಿಯಾಣದಲ್ಲಿ ಇಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ರೈತರು ಪಾಲ್ವಾಲ್ನಲ್ಲಿ ವೆಸ್ಟರ್ನ್ ಪೆರಿಫೆರಲ್ ಎಕ್ಸ್ಪ್ರೆಸ್ವೇಯನ್ನು ನಿರ್ಬಂಧಿಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ ಹೆದ್ದಾರಿಗಳ ಸಮೀಪವಿರುವ ಟೋಲ್ ಪ್ಲಾಜಾಗಳನ್ನು ಮುಕ್ತಗೊಳಿಸಲು ಮತ್ತು ದೇಶಾದ್ಯಂತ ಕಚೇರಿಗಳು ಮತ್ತು ಮನೆಗಳ ಮೇಲೆ ಕಪ್ಪು ಧ್ವಜಗಳನ್ನು ಹಾರಿಸುವ ಮೂಲಕ ಕರಾಳ ದಿನ ಆಚರಿಸಲು ಕರೆ ನೀಡಿದೆ.
ನೂರು ದಿನಗಳ ಕಾಲ ರೈತರು ಹೋರಾಡಿದರು ಅವರ ಕಾಳಜಿಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಹಾಗಾಗಿ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ತೀವ್ರಗೊಳಿಸಲು, ಬಿಜೆಪಿಯನ್ನು ರಾಜಕೀಯವಾಗಿ ಬಹಿಷ್ಕರಿಸುವಂತೆ ರೈತರು ಕರೆ ನೀಡಿದ್ದಾರೆ.
Over 100 days & still Modi govt. has been a FAILURE in understanding the needs of the farmers from the 3 Farm Bills.
To intensify the ongoing protest, the farmers have urged people to boycott BJP politically. #FarmersCallBJPboycott pic.twitter.com/AWdgdbgLpa
— Kisan Ekta Morcha (@Kisanektamorcha) March 6, 2021
ಈ ಕುರಿತು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿ #FarmersCallBJPboycott ಎಂಬ ಹ್ಯಾಷ್ಟ್ಯಾಗ್ ನೀಡಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಗೆಲ್ಲುವ ಪಕ್ಷಗಳಿಗೆ ಮತ ನೀಡುವಂತೆ ರೈತರು ಮನವಿ ಮಾಡಿದ್ದಾರೆ. ಕೆಲ ರಾಜ್ಯಗಳಲ್ಲಿ ಪ್ರಚಾರ ನಡೆಸಲು ರೈತರು ನಿರ್ಧಿರಿಸಿದ್ದಾರೆ.
ಇದನ್ನೂ ಓದಿ: ರೈತ ಹೋರಾಟ: ಬಿಜೆಪಿಗೆ ಮತ ನೀಡದಂತೆ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಲಿರುವ ಟಿಕಾಯತ್