Homeಚಳವಳಿನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ದೆಹಲಿ ಪೊಲೀಸರು ಒಡ್ಡಿದ ಅಡೆತಡೆಗಳನ್ನು ದಾಟಿದ ರೈತರಿಗೆ ಪ್ರಕೃತಿ ಕೂಡ ತೀವ್ರ ಚಳಿ, ಮಳೆ, ಬಿಸಿಲಿನ ಸವಾಲೆಸೆದಿತ್ತು. ಆದರೆ ರೈತರು ಮಾತ್ರ ಯಾವುದಕ್ಕೂ ಎದೆಗುಂದಿಲ್ಲ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟ… ಫಾರ್ಮಸ್ಸ್ ಪ್ರೋಟೆಸ್ಟ್, ಪಂಜಾಬ್-ಹರಿಯಾಣ ರೈತರ ಹೋರಾಟ, ಅನ್ನದಾತರ ಹೋರಾಟ, ಕಿಸಾನ್ ಆಂದೋಲನ ಹೀಗೆ ಒಂದಾ ಎರಡಾ.. ನೂರಾರು ಹೆಸರುಗಳಿಂದ ಕರೆಸಿಕೊಂಡ, ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿ ವಿಶ್ವದ ಗಮನ ಸೆಳೆದ ದೆಹಲಿಯ ರೈತ ಹೋರಾಟಕ್ಕೆ ಶುಕ್ರವಾರ (ಮಾರ್ಚ್ 5) 100 ದಿನ ತುಂಬಿದೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿ ಚಲೋ ಆರಂಭಿಸಿ ಇಂದಿಗೆ 100 ದಿನಗಳಾಗಿವೆ. ಈ ಐತಿಹಾಸಿಕ ಹೋರಾಟ ನಡೆದುಬಂದ ದಾರಿ ನಿಜಕ್ಕೂ ಬೆರಗು ಮೂಡಿಸುತ್ತದೆ. ಅಪಮಾನ, ಅವಮಾನ, ಬೆಂಬಲ, ಸ್ಪೂರ್ತಿ, ಧೈರ್ಯ, ಪಟ್ಟುಬಿಡದ ಛಲ ಎಲ್ಲವಕ್ಕೂ ಉದಾಹರಣೆಯಾಗಿ ಈ ಶತಮಾನದಲ್ಲಿ ನಮ್ಮ ಮುಂದಿದೆ ಈ ರೈತ ಹೋರಾಟ.

ದೆಹಲಿ ಪೊಲೀಸರು ಒಡ್ಡಿದ ಅಡೆತಡೆಗಳನ್ನು ದಾಟಿದ ರೈತರಿಗೆ ಪ್ರಕೃತಿ ಕೂಡ ತೀವ್ರ ಚಳಿ, ಮಳೆ ಮೂಲಕ ಸವಾಲೆಸೆದಿತ್ತು. ಈಗಲೂ ಬೇಸಿಗೆಯ ಬಿಸಿಲು ರೈತರನ್ನು ಸುಡುತ್ತಿದೆ. ಆದರೆ ರೈತರು ಮಾತ್ರ ಯಾವುದಕ್ಕೂ ಎದೆಗುಂದಿಲ್ಲ. ಅವರ ಧ್ಯೇಯವೊಂದೆ ಅದು ಮೂರು ಕಾನೂನುಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ಬರಬೇಕು. 100 ದಿನಗಳನ್ನೂ ಪೂರೈಸಿರುವ ಈ ಹೋರಾಟ ಮೊದಲ ದಿನದ ಉತ್ಸಾಹವನ್ನು ಇನ್ನು ಹಾಗೆ ಉಳಿಸಿಕೊಂಡಿರುವುದು ಆಶ್ಚರ್ಯವೇ ಸರಿ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಮೊದ ಮೊದಲು ಬಯಲಿನಲ್ಲಿ ಆರಂಭವಾದ ವೇದಿಕೆಗಳು, ನಂತರ ದೊಡ್ಡ ದೊಡ್ಡ ವೇದಿಕೆಗಳಾಗಿ ಮಾರ್ಪಾಡಾದವು. ಎಲ್ಲಾ ರೀತಿಯ ವ್ಯವಸ್ಥೆ ಒದಗಿಸಲು ಸಂಘ ಸಂಸ್ಥೆಗಳು, ಗ್ರಾಮಗಳ ಜನರು ಮುಂದಾದರು. ಲಂಗರ್‌ಗಳ ಪಾತ್ರ ಪ್ರಮುಖವಾಯಿತು. ದೆಹಲಿಯ ಸಿಂಘು, ಟಿಕ್ರಿ, ಶಹಾಜಾನ್‌ಪುರ, ಗಾಝೀಪುರ, ಚಿಲ್ಲಾ, ಪಲ್ವಾಲ, ದಾರೂಹೇರ ಗಡಿಗಳಿಗೆ ಸೀಮಿತವಾಗಿದ್ದ ಈ ಹೋರಾಟ ಇಂದು ದೇಶಾದ್ಯಂತ ತನ್ನ ಬಾಹುಗಳನ್ನು ಚಾಚಿದೆ.

ಜಾತಿ, ಧರ್ಮ, ಲಿಂಗ, ಮೇಲು-ಕೀಳು, ಬಡವ-ಬಲ್ಲಿದ ಎಂಬ ಎಲ್ಲಾ ಭಾವನೆಗಳನ್ನು ಬದಿಗಿರಿಸಿ ಎಲ್ಲರನ್ನೂ ಒಂದು ಬೇಡಿಕೆಯಡಿಯಲ್ಲಿ ಹಿಡಿದಿಟ್ಟ ದಿಟ್ಟ ಹೋರಾಟವೆಂಬ ಖ್ಯಾತಿಗೆ ಸಾಕ್ಷಿಯಾಗಿದೆ. ತನ್ನ ಶಾಂತಿಯುತ ಪ್ರತಿಭಟನೆಯ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಭ್ರಾತೃತ್ವ-ಸೇವೆಗೆ ಹೊಸ ಅರ್ಥವನ್ನು ಈ ರೈತ ಹೋರಾಟ ನೀಡಿದೆ.

ದೆಹಲಿಯಲ್ಲಿ ಈ ಹೋರಾಟಕ್ಕೆ 100 ದಿನಗಳು ತುಂಬಿದ್ದರೇ, ಇತ್ತ ಪಂಜಾಬಿನಲ್ಲಿ ಈ ಹೋರಾಟಕ್ಕೆ 155 ದಿನಗಳು ತುಂಬಿವೆ. ಇದರ ಜೊತೆಗೆ ದೇಶದ ಹಲವು ರಾಜ್ಯಗಳಲ್ಲಿ ಈ ಹೋರಾಟ ಕಳೆಗಟ್ಟಿದೆ. ಮಹಾಪಂಚಾಯತ್‌ಗಳೆಂಬ ಹೊಸ ಕಲ್ಪನೆ ಇತರ ರಾಜ್ಯಗಳಲ್ಲೂ ಹರಿದಾಡುತ್ತಿದೆ. ತೆಲಂಗಾಣ, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಗುಜರಾತ್, ಬಿಹಾರ ಸೇರಿದಂತೆ ಹಲವು ಕಡೆ ಮಹಾಪಂಚಾಯತ್ ಮೂಲಕ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬಲಾಗುತ್ತಿದೆ.

ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ಕರ್ನಾಟಕದಲ್ಲಿ ರೈತರಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಎಂಎಸ್‌ಪಿ ದಿಲಾವೋ ಆಂದೋಲನ ಆರಂಭಿಸಲಾಗಿದೆ. ಈ ಮೂಲಕ ದೇಶದ ಎಲ್ಲಾ ರಾಜ್ಯಗಳಲ್ಲಿ ಎಂಎಸ್‌ಪಿಗಾಗಿ ಆಗ್ರಹಿಸಲಾಗುತ್ತದೆ. ಈ ಆಂದೋಲನಕ್ಕೆ ಕರ್ನಾಟಕದಿಂದ ಚಾಲನೆ ನೀಡಲಾಗಿದೆ.

ಇತ್ತ ತೀವ್ರ ಚಳಿಯನ್ನು ಕಂಡಿರುವ ರೈತರು ಈಗ ಬಿರು ಬೇಸಿಗೆಗೆ ಸಜ್ಜಾಗುತ್ತಿದ್ದಾರೆ. ತಮ್ಮ ಸುರಕ್ಷತೆಗಾಗಿ ಕುಡಿಯುವ ನೀರಿನ ವ್ಯವಸ್ಥೆ, ಪ್ರಿಡ್ಜ್, ಕೂಲರ್‌ಗಳು, ಟ್ಯ್ರಾಲಿಯಲ್ಲಿ ಅಳವಡಿಸಲಾಗುವ ಫ್ಯಾನ್‌ಗಳು, ಟೇಬಲ್ ಫ್ಯಾನ್‌ಗಳು, ಎಸಿಗಳನ್ನು ಹಾಕಿಕೊಳ್ಳಲಾಗಿದೆ. ಕುಡಿಯುವ ನೀರು, ದಿನ ನಿತ್ಯದ ಬಳಕೆಯ ನೀರಿನ ಬವಣೆ ತಪ್ಪಿಸಲು ಪ್ರತಿಭಟನಾ ಸ್ಥಳದಲ್ಲಿ ಬೋರ್‌ವೇಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಟೆಂಟ್‌ಗಳು ಮತ್ತು ಶೆಡ್‌ಗಳಲ್ಲಿ 5 ನಿಮಿಷವೂ ಕೂರಲು ಸಾಧ್ಯವಿಲ್ಲದಂತಹ ಬಿಸಿಲು ಪ್ರತಿಭಟನಾಕಾರರನ್ನು ಕಾಡುತ್ತಿದ್ದು, ಬೇಸಿಗೆಯಲ್ಲಿ ಕುಳಿತುಕೊಳ್ಳಲು, ಮಲಗಲು ತಾತ್ಕಾಲಿಕ ವಸತಿಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದಾರೆ.  ಟ್ಯ್ರಾಲಿಗಳಿಗೆ ಹೋಲಿಸಿದರೇ, ಈ ಚಪ್ಪರದ ವ್ಯವಸ್ಥೆ ಹೆಚ್ಚು ತಂಪಾಗಿರುತ್ತವೆ. ಈ ಮೂಲಕ ಸರ್ಕಾರಕ್ಕೆ ತಾವು ಇಲ್ಲಿಮದ ಎಂತಹ ಪರಿಸ್ಥಿತಿಯಲ್ಲು ವಾಪಸ್ ಹೋಗುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ರೈತ ಹೋರಾಟದಲ್ಲಿರುವವರು, ಹೋರಾಟವನ್ನು ಬೆಂಬಲಿಸುವವರು, ಪ್ರತಿಭಟನಾ ಸ್ಥಳದಲ್ಲಿರುವವರು ಕೃಷಿ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳದೆ ಇಲ್ಲಿಂದ ನಾವು ಮನೆಗೆ ಹಿಂತಿರುಗುವುದಿಲ್ಲ ಎಂದಿದ್ದಾರೆ. ತಮಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುವತ್ತ ಗಮನ ಹರಿಸಿರುವ ಇವರು ಯಾರು ಕೂಡ ವಾಪಸ್ ಹೋಗುವ ಬಗ್ಗೆ ಚಿಂತಿಸುತ್ತಿಲ್ಲ.

ಇಂದು ರೈತ ಹೋರಾಟಕ್ಕೆ 100 ದಿನ ತುಂಬಿದೆ. ಈ 100 ದಿನ 1,000 ದಿನವಾದರೂ ಇಲ್ಲಿಯೇ ಇದ್ದು ಹೋರಾಟ ಮುಂದುವರೆಸುವಂತಹ ಛಲ, ಉತ್ಸಾಹ ಎಲ್ಲಾ ಪ್ರತಿಭಟನಾ ನಿರತರಲ್ಲೂ ಕಂಡು ಬರುವುದು ಸಾಮಾನ್ಯ ಅಂಶವಾಗಿದೆ. ಇದಕ್ಕೆ ಯಾವುದೇ ವಯಸ್ಸಿನ ಮಿತಿ ಇಲ್ಲ ಎಂಬುದು ಮತ್ತಷ್ಟು ಗಮನಾರ್ಹ ವಿಚಾರ.

ಇನ್ನು, ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಮಾರ್ಚ್ 6 ಕ್ಕೆ 100 ದಿನ ತುಂಬಿದ ದಿನವನ್ನು ಆಚರಿಸುತ್ತಾರೆ. ಮಾರ್ಚ್ 6ರ ದಿನ ರೈತರು ಕುಂಡ್ಲಿ-ಮಾನೇಸರ್-ಪಾಲ್ವಾಲ್ ಎಕ್ಸ್‌ಪ್ರೆಸ್ ವೇಯನ್ನು ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ವಿವಿಧ ಸ್ಥಳಗಳಲ್ಲಿ ನಿರ್ಬಂಧಿಸುತ್ತಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ಯೋಗೇಂದ್ರ ಯಾದವ್ ಮಾಹಿತಿ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...