Homeಚಳವಳಿನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ದೆಹಲಿ ಪೊಲೀಸರು ಒಡ್ಡಿದ ಅಡೆತಡೆಗಳನ್ನು ದಾಟಿದ ರೈತರಿಗೆ ಪ್ರಕೃತಿ ಕೂಡ ತೀವ್ರ ಚಳಿ, ಮಳೆ, ಬಿಸಿಲಿನ ಸವಾಲೆಸೆದಿತ್ತು. ಆದರೆ ರೈತರು ಮಾತ್ರ ಯಾವುದಕ್ಕೂ ಎದೆಗುಂದಿಲ್ಲ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟ… ಫಾರ್ಮಸ್ಸ್ ಪ್ರೋಟೆಸ್ಟ್, ಪಂಜಾಬ್-ಹರಿಯಾಣ ರೈತರ ಹೋರಾಟ, ಅನ್ನದಾತರ ಹೋರಾಟ, ಕಿಸಾನ್ ಆಂದೋಲನ ಹೀಗೆ ಒಂದಾ ಎರಡಾ.. ನೂರಾರು ಹೆಸರುಗಳಿಂದ ಕರೆಸಿಕೊಂಡ, ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿ ವಿಶ್ವದ ಗಮನ ಸೆಳೆದ ದೆಹಲಿಯ ರೈತ ಹೋರಾಟಕ್ಕೆ ಶುಕ್ರವಾರ (ಮಾರ್ಚ್ 5) 100 ದಿನ ತುಂಬಿದೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿ ಚಲೋ ಆರಂಭಿಸಿ ಇಂದಿಗೆ 100 ದಿನಗಳಾಗಿವೆ. ಈ ಐತಿಹಾಸಿಕ ಹೋರಾಟ ನಡೆದುಬಂದ ದಾರಿ ನಿಜಕ್ಕೂ ಬೆರಗು ಮೂಡಿಸುತ್ತದೆ. ಅಪಮಾನ, ಅವಮಾನ, ಬೆಂಬಲ, ಸ್ಪೂರ್ತಿ, ಧೈರ್ಯ, ಪಟ್ಟುಬಿಡದ ಛಲ ಎಲ್ಲವಕ್ಕೂ ಉದಾಹರಣೆಯಾಗಿ ಈ ಶತಮಾನದಲ್ಲಿ ನಮ್ಮ ಮುಂದಿದೆ ಈ ರೈತ ಹೋರಾಟ.

ದೆಹಲಿ ಪೊಲೀಸರು ಒಡ್ಡಿದ ಅಡೆತಡೆಗಳನ್ನು ದಾಟಿದ ರೈತರಿಗೆ ಪ್ರಕೃತಿ ಕೂಡ ತೀವ್ರ ಚಳಿ, ಮಳೆ ಮೂಲಕ ಸವಾಲೆಸೆದಿತ್ತು. ಈಗಲೂ ಬೇಸಿಗೆಯ ಬಿಸಿಲು ರೈತರನ್ನು ಸುಡುತ್ತಿದೆ. ಆದರೆ ರೈತರು ಮಾತ್ರ ಯಾವುದಕ್ಕೂ ಎದೆಗುಂದಿಲ್ಲ. ಅವರ ಧ್ಯೇಯವೊಂದೆ ಅದು ಮೂರು ಕಾನೂನುಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ಬರಬೇಕು. 100 ದಿನಗಳನ್ನೂ ಪೂರೈಸಿರುವ ಈ ಹೋರಾಟ ಮೊದಲ ದಿನದ ಉತ್ಸಾಹವನ್ನು ಇನ್ನು ಹಾಗೆ ಉಳಿಸಿಕೊಂಡಿರುವುದು ಆಶ್ಚರ್ಯವೇ ಸರಿ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಮೊದ ಮೊದಲು ಬಯಲಿನಲ್ಲಿ ಆರಂಭವಾದ ವೇದಿಕೆಗಳು, ನಂತರ ದೊಡ್ಡ ದೊಡ್ಡ ವೇದಿಕೆಗಳಾಗಿ ಮಾರ್ಪಾಡಾದವು. ಎಲ್ಲಾ ರೀತಿಯ ವ್ಯವಸ್ಥೆ ಒದಗಿಸಲು ಸಂಘ ಸಂಸ್ಥೆಗಳು, ಗ್ರಾಮಗಳ ಜನರು ಮುಂದಾದರು. ಲಂಗರ್‌ಗಳ ಪಾತ್ರ ಪ್ರಮುಖವಾಯಿತು. ದೆಹಲಿಯ ಸಿಂಘು, ಟಿಕ್ರಿ, ಶಹಾಜಾನ್‌ಪುರ, ಗಾಝೀಪುರ, ಚಿಲ್ಲಾ, ಪಲ್ವಾಲ, ದಾರೂಹೇರ ಗಡಿಗಳಿಗೆ ಸೀಮಿತವಾಗಿದ್ದ ಈ ಹೋರಾಟ ಇಂದು ದೇಶಾದ್ಯಂತ ತನ್ನ ಬಾಹುಗಳನ್ನು ಚಾಚಿದೆ.

ಜಾತಿ, ಧರ್ಮ, ಲಿಂಗ, ಮೇಲು-ಕೀಳು, ಬಡವ-ಬಲ್ಲಿದ ಎಂಬ ಎಲ್ಲಾ ಭಾವನೆಗಳನ್ನು ಬದಿಗಿರಿಸಿ ಎಲ್ಲರನ್ನೂ ಒಂದು ಬೇಡಿಕೆಯಡಿಯಲ್ಲಿ ಹಿಡಿದಿಟ್ಟ ದಿಟ್ಟ ಹೋರಾಟವೆಂಬ ಖ್ಯಾತಿಗೆ ಸಾಕ್ಷಿಯಾಗಿದೆ. ತನ್ನ ಶಾಂತಿಯುತ ಪ್ರತಿಭಟನೆಯ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಭ್ರಾತೃತ್ವ-ಸೇವೆಗೆ ಹೊಸ ಅರ್ಥವನ್ನು ಈ ರೈತ ಹೋರಾಟ ನೀಡಿದೆ.

ದೆಹಲಿಯಲ್ಲಿ ಈ ಹೋರಾಟಕ್ಕೆ 100 ದಿನಗಳು ತುಂಬಿದ್ದರೇ, ಇತ್ತ ಪಂಜಾಬಿನಲ್ಲಿ ಈ ಹೋರಾಟಕ್ಕೆ 155 ದಿನಗಳು ತುಂಬಿವೆ. ಇದರ ಜೊತೆಗೆ ದೇಶದ ಹಲವು ರಾಜ್ಯಗಳಲ್ಲಿ ಈ ಹೋರಾಟ ಕಳೆಗಟ್ಟಿದೆ. ಮಹಾಪಂಚಾಯತ್‌ಗಳೆಂಬ ಹೊಸ ಕಲ್ಪನೆ ಇತರ ರಾಜ್ಯಗಳಲ್ಲೂ ಹರಿದಾಡುತ್ತಿದೆ. ತೆಲಂಗಾಣ, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಗುಜರಾತ್, ಬಿಹಾರ ಸೇರಿದಂತೆ ಹಲವು ಕಡೆ ಮಹಾಪಂಚಾಯತ್ ಮೂಲಕ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬಲಾಗುತ್ತಿದೆ.

ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ಕರ್ನಾಟಕದಲ್ಲಿ ರೈತರಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಎಂಎಸ್‌ಪಿ ದಿಲಾವೋ ಆಂದೋಲನ ಆರಂಭಿಸಲಾಗಿದೆ. ಈ ಮೂಲಕ ದೇಶದ ಎಲ್ಲಾ ರಾಜ್ಯಗಳಲ್ಲಿ ಎಂಎಸ್‌ಪಿಗಾಗಿ ಆಗ್ರಹಿಸಲಾಗುತ್ತದೆ. ಈ ಆಂದೋಲನಕ್ಕೆ ಕರ್ನಾಟಕದಿಂದ ಚಾಲನೆ ನೀಡಲಾಗಿದೆ.

ಇತ್ತ ತೀವ್ರ ಚಳಿಯನ್ನು ಕಂಡಿರುವ ರೈತರು ಈಗ ಬಿರು ಬೇಸಿಗೆಗೆ ಸಜ್ಜಾಗುತ್ತಿದ್ದಾರೆ. ತಮ್ಮ ಸುರಕ್ಷತೆಗಾಗಿ ಕುಡಿಯುವ ನೀರಿನ ವ್ಯವಸ್ಥೆ, ಪ್ರಿಡ್ಜ್, ಕೂಲರ್‌ಗಳು, ಟ್ಯ್ರಾಲಿಯಲ್ಲಿ ಅಳವಡಿಸಲಾಗುವ ಫ್ಯಾನ್‌ಗಳು, ಟೇಬಲ್ ಫ್ಯಾನ್‌ಗಳು, ಎಸಿಗಳನ್ನು ಹಾಕಿಕೊಳ್ಳಲಾಗಿದೆ. ಕುಡಿಯುವ ನೀರು, ದಿನ ನಿತ್ಯದ ಬಳಕೆಯ ನೀರಿನ ಬವಣೆ ತಪ್ಪಿಸಲು ಪ್ರತಿಭಟನಾ ಸ್ಥಳದಲ್ಲಿ ಬೋರ್‌ವೇಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಟೆಂಟ್‌ಗಳು ಮತ್ತು ಶೆಡ್‌ಗಳಲ್ಲಿ 5 ನಿಮಿಷವೂ ಕೂರಲು ಸಾಧ್ಯವಿಲ್ಲದಂತಹ ಬಿಸಿಲು ಪ್ರತಿಭಟನಾಕಾರರನ್ನು ಕಾಡುತ್ತಿದ್ದು, ಬೇಸಿಗೆಯಲ್ಲಿ ಕುಳಿತುಕೊಳ್ಳಲು, ಮಲಗಲು ತಾತ್ಕಾಲಿಕ ವಸತಿಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದಾರೆ.  ಟ್ಯ್ರಾಲಿಗಳಿಗೆ ಹೋಲಿಸಿದರೇ, ಈ ಚಪ್ಪರದ ವ್ಯವಸ್ಥೆ ಹೆಚ್ಚು ತಂಪಾಗಿರುತ್ತವೆ. ಈ ಮೂಲಕ ಸರ್ಕಾರಕ್ಕೆ ತಾವು ಇಲ್ಲಿಮದ ಎಂತಹ ಪರಿಸ್ಥಿತಿಯಲ್ಲು ವಾಪಸ್ ಹೋಗುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ರೈತ ಹೋರಾಟದಲ್ಲಿರುವವರು, ಹೋರಾಟವನ್ನು ಬೆಂಬಲಿಸುವವರು, ಪ್ರತಿಭಟನಾ ಸ್ಥಳದಲ್ಲಿರುವವರು ಕೃಷಿ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳದೆ ಇಲ್ಲಿಂದ ನಾವು ಮನೆಗೆ ಹಿಂತಿರುಗುವುದಿಲ್ಲ ಎಂದಿದ್ದಾರೆ. ತಮಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುವತ್ತ ಗಮನ ಹರಿಸಿರುವ ಇವರು ಯಾರು ಕೂಡ ವಾಪಸ್ ಹೋಗುವ ಬಗ್ಗೆ ಚಿಂತಿಸುತ್ತಿಲ್ಲ.

ಇಂದು ರೈತ ಹೋರಾಟಕ್ಕೆ 100 ದಿನ ತುಂಬಿದೆ. ಈ 100 ದಿನ 1,000 ದಿನವಾದರೂ ಇಲ್ಲಿಯೇ ಇದ್ದು ಹೋರಾಟ ಮುಂದುವರೆಸುವಂತಹ ಛಲ, ಉತ್ಸಾಹ ಎಲ್ಲಾ ಪ್ರತಿಭಟನಾ ನಿರತರಲ್ಲೂ ಕಂಡು ಬರುವುದು ಸಾಮಾನ್ಯ ಅಂಶವಾಗಿದೆ. ಇದಕ್ಕೆ ಯಾವುದೇ ವಯಸ್ಸಿನ ಮಿತಿ ಇಲ್ಲ ಎಂಬುದು ಮತ್ತಷ್ಟು ಗಮನಾರ್ಹ ವಿಚಾರ.

ಇನ್ನು, ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಮಾರ್ಚ್ 6 ಕ್ಕೆ 100 ದಿನ ತುಂಬಿದ ದಿನವನ್ನು ಆಚರಿಸುತ್ತಾರೆ. ಮಾರ್ಚ್ 6ರ ದಿನ ರೈತರು ಕುಂಡ್ಲಿ-ಮಾನೇಸರ್-ಪಾಲ್ವಾಲ್ ಎಕ್ಸ್‌ಪ್ರೆಸ್ ವೇಯನ್ನು ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ವಿವಿಧ ಸ್ಥಳಗಳಲ್ಲಿ ನಿರ್ಬಂಧಿಸುತ್ತಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ಯೋಗೇಂದ್ರ ಯಾದವ್ ಮಾಹಿತಿ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...