Homeಚಳವಳಿನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ದೆಹಲಿ ಪೊಲೀಸರು ಒಡ್ಡಿದ ಅಡೆತಡೆಗಳನ್ನು ದಾಟಿದ ರೈತರಿಗೆ ಪ್ರಕೃತಿ ಕೂಡ ತೀವ್ರ ಚಳಿ, ಮಳೆ, ಬಿಸಿಲಿನ ಸವಾಲೆಸೆದಿತ್ತು. ಆದರೆ ರೈತರು ಮಾತ್ರ ಯಾವುದಕ್ಕೂ ಎದೆಗುಂದಿಲ್ಲ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟ… ಫಾರ್ಮಸ್ಸ್ ಪ್ರೋಟೆಸ್ಟ್, ಪಂಜಾಬ್-ಹರಿಯಾಣ ರೈತರ ಹೋರಾಟ, ಅನ್ನದಾತರ ಹೋರಾಟ, ಕಿಸಾನ್ ಆಂದೋಲನ ಹೀಗೆ ಒಂದಾ ಎರಡಾ.. ನೂರಾರು ಹೆಸರುಗಳಿಂದ ಕರೆಸಿಕೊಂಡ, ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿ ವಿಶ್ವದ ಗಮನ ಸೆಳೆದ ದೆಹಲಿಯ ರೈತ ಹೋರಾಟಕ್ಕೆ ಶುಕ್ರವಾರ (ಮಾರ್ಚ್ 5) 100 ದಿನ ತುಂಬಿದೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿ ಚಲೋ ಆರಂಭಿಸಿ ಇಂದಿಗೆ 100 ದಿನಗಳಾಗಿವೆ. ಈ ಐತಿಹಾಸಿಕ ಹೋರಾಟ ನಡೆದುಬಂದ ದಾರಿ ನಿಜಕ್ಕೂ ಬೆರಗು ಮೂಡಿಸುತ್ತದೆ. ಅಪಮಾನ, ಅವಮಾನ, ಬೆಂಬಲ, ಸ್ಪೂರ್ತಿ, ಧೈರ್ಯ, ಪಟ್ಟುಬಿಡದ ಛಲ ಎಲ್ಲವಕ್ಕೂ ಉದಾಹರಣೆಯಾಗಿ ಈ ಶತಮಾನದಲ್ಲಿ ನಮ್ಮ ಮುಂದಿದೆ ಈ ರೈತ ಹೋರಾಟ.

ದೆಹಲಿ ಪೊಲೀಸರು ಒಡ್ಡಿದ ಅಡೆತಡೆಗಳನ್ನು ದಾಟಿದ ರೈತರಿಗೆ ಪ್ರಕೃತಿ ಕೂಡ ತೀವ್ರ ಚಳಿ, ಮಳೆ ಮೂಲಕ ಸವಾಲೆಸೆದಿತ್ತು. ಈಗಲೂ ಬೇಸಿಗೆಯ ಬಿಸಿಲು ರೈತರನ್ನು ಸುಡುತ್ತಿದೆ. ಆದರೆ ರೈತರು ಮಾತ್ರ ಯಾವುದಕ್ಕೂ ಎದೆಗುಂದಿಲ್ಲ. ಅವರ ಧ್ಯೇಯವೊಂದೆ ಅದು ಮೂರು ಕಾನೂನುಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ಬರಬೇಕು. 100 ದಿನಗಳನ್ನೂ ಪೂರೈಸಿರುವ ಈ ಹೋರಾಟ ಮೊದಲ ದಿನದ ಉತ್ಸಾಹವನ್ನು ಇನ್ನು ಹಾಗೆ ಉಳಿಸಿಕೊಂಡಿರುವುದು ಆಶ್ಚರ್ಯವೇ ಸರಿ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಮೊದ ಮೊದಲು ಬಯಲಿನಲ್ಲಿ ಆರಂಭವಾದ ವೇದಿಕೆಗಳು, ನಂತರ ದೊಡ್ಡ ದೊಡ್ಡ ವೇದಿಕೆಗಳಾಗಿ ಮಾರ್ಪಾಡಾದವು. ಎಲ್ಲಾ ರೀತಿಯ ವ್ಯವಸ್ಥೆ ಒದಗಿಸಲು ಸಂಘ ಸಂಸ್ಥೆಗಳು, ಗ್ರಾಮಗಳ ಜನರು ಮುಂದಾದರು. ಲಂಗರ್‌ಗಳ ಪಾತ್ರ ಪ್ರಮುಖವಾಯಿತು. ದೆಹಲಿಯ ಸಿಂಘು, ಟಿಕ್ರಿ, ಶಹಾಜಾನ್‌ಪುರ, ಗಾಝೀಪುರ, ಚಿಲ್ಲಾ, ಪಲ್ವಾಲ, ದಾರೂಹೇರ ಗಡಿಗಳಿಗೆ ಸೀಮಿತವಾಗಿದ್ದ ಈ ಹೋರಾಟ ಇಂದು ದೇಶಾದ್ಯಂತ ತನ್ನ ಬಾಹುಗಳನ್ನು ಚಾಚಿದೆ.

ಜಾತಿ, ಧರ್ಮ, ಲಿಂಗ, ಮೇಲು-ಕೀಳು, ಬಡವ-ಬಲ್ಲಿದ ಎಂಬ ಎಲ್ಲಾ ಭಾವನೆಗಳನ್ನು ಬದಿಗಿರಿಸಿ ಎಲ್ಲರನ್ನೂ ಒಂದು ಬೇಡಿಕೆಯಡಿಯಲ್ಲಿ ಹಿಡಿದಿಟ್ಟ ದಿಟ್ಟ ಹೋರಾಟವೆಂಬ ಖ್ಯಾತಿಗೆ ಸಾಕ್ಷಿಯಾಗಿದೆ. ತನ್ನ ಶಾಂತಿಯುತ ಪ್ರತಿಭಟನೆಯ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಭ್ರಾತೃತ್ವ-ಸೇವೆಗೆ ಹೊಸ ಅರ್ಥವನ್ನು ಈ ರೈತ ಹೋರಾಟ ನೀಡಿದೆ.

ದೆಹಲಿಯಲ್ಲಿ ಈ ಹೋರಾಟಕ್ಕೆ 100 ದಿನಗಳು ತುಂಬಿದ್ದರೇ, ಇತ್ತ ಪಂಜಾಬಿನಲ್ಲಿ ಈ ಹೋರಾಟಕ್ಕೆ 155 ದಿನಗಳು ತುಂಬಿವೆ. ಇದರ ಜೊತೆಗೆ ದೇಶದ ಹಲವು ರಾಜ್ಯಗಳಲ್ಲಿ ಈ ಹೋರಾಟ ಕಳೆಗಟ್ಟಿದೆ. ಮಹಾಪಂಚಾಯತ್‌ಗಳೆಂಬ ಹೊಸ ಕಲ್ಪನೆ ಇತರ ರಾಜ್ಯಗಳಲ್ಲೂ ಹರಿದಾಡುತ್ತಿದೆ. ತೆಲಂಗಾಣ, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಗುಜರಾತ್, ಬಿಹಾರ ಸೇರಿದಂತೆ ಹಲವು ಕಡೆ ಮಹಾಪಂಚಾಯತ್ ಮೂಲಕ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬಲಾಗುತ್ತಿದೆ.

ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ಕರ್ನಾಟಕದಲ್ಲಿ ರೈತರಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಎಂಎಸ್‌ಪಿ ದಿಲಾವೋ ಆಂದೋಲನ ಆರಂಭಿಸಲಾಗಿದೆ. ಈ ಮೂಲಕ ದೇಶದ ಎಲ್ಲಾ ರಾಜ್ಯಗಳಲ್ಲಿ ಎಂಎಸ್‌ಪಿಗಾಗಿ ಆಗ್ರಹಿಸಲಾಗುತ್ತದೆ. ಈ ಆಂದೋಲನಕ್ಕೆ ಕರ್ನಾಟಕದಿಂದ ಚಾಲನೆ ನೀಡಲಾಗಿದೆ.

ಇತ್ತ ತೀವ್ರ ಚಳಿಯನ್ನು ಕಂಡಿರುವ ರೈತರು ಈಗ ಬಿರು ಬೇಸಿಗೆಗೆ ಸಜ್ಜಾಗುತ್ತಿದ್ದಾರೆ. ತಮ್ಮ ಸುರಕ್ಷತೆಗಾಗಿ ಕುಡಿಯುವ ನೀರಿನ ವ್ಯವಸ್ಥೆ, ಪ್ರಿಡ್ಜ್, ಕೂಲರ್‌ಗಳು, ಟ್ಯ್ರಾಲಿಯಲ್ಲಿ ಅಳವಡಿಸಲಾಗುವ ಫ್ಯಾನ್‌ಗಳು, ಟೇಬಲ್ ಫ್ಯಾನ್‌ಗಳು, ಎಸಿಗಳನ್ನು ಹಾಕಿಕೊಳ್ಳಲಾಗಿದೆ. ಕುಡಿಯುವ ನೀರು, ದಿನ ನಿತ್ಯದ ಬಳಕೆಯ ನೀರಿನ ಬವಣೆ ತಪ್ಪಿಸಲು ಪ್ರತಿಭಟನಾ ಸ್ಥಳದಲ್ಲಿ ಬೋರ್‌ವೇಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಟೆಂಟ್‌ಗಳು ಮತ್ತು ಶೆಡ್‌ಗಳಲ್ಲಿ 5 ನಿಮಿಷವೂ ಕೂರಲು ಸಾಧ್ಯವಿಲ್ಲದಂತಹ ಬಿಸಿಲು ಪ್ರತಿಭಟನಾಕಾರರನ್ನು ಕಾಡುತ್ತಿದ್ದು, ಬೇಸಿಗೆಯಲ್ಲಿ ಕುಳಿತುಕೊಳ್ಳಲು, ಮಲಗಲು ತಾತ್ಕಾಲಿಕ ವಸತಿಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದಾರೆ.  ಟ್ಯ್ರಾಲಿಗಳಿಗೆ ಹೋಲಿಸಿದರೇ, ಈ ಚಪ್ಪರದ ವ್ಯವಸ್ಥೆ ಹೆಚ್ಚು ತಂಪಾಗಿರುತ್ತವೆ. ಈ ಮೂಲಕ ಸರ್ಕಾರಕ್ಕೆ ತಾವು ಇಲ್ಲಿಮದ ಎಂತಹ ಪರಿಸ್ಥಿತಿಯಲ್ಲು ವಾಪಸ್ ಹೋಗುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ರೈತ ಹೋರಾಟದಲ್ಲಿರುವವರು, ಹೋರಾಟವನ್ನು ಬೆಂಬಲಿಸುವವರು, ಪ್ರತಿಭಟನಾ ಸ್ಥಳದಲ್ಲಿರುವವರು ಕೃಷಿ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳದೆ ಇಲ್ಲಿಂದ ನಾವು ಮನೆಗೆ ಹಿಂತಿರುಗುವುದಿಲ್ಲ ಎಂದಿದ್ದಾರೆ. ತಮಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುವತ್ತ ಗಮನ ಹರಿಸಿರುವ ಇವರು ಯಾರು ಕೂಡ ವಾಪಸ್ ಹೋಗುವ ಬಗ್ಗೆ ಚಿಂತಿಸುತ್ತಿಲ್ಲ.

ಇಂದು ರೈತ ಹೋರಾಟಕ್ಕೆ 100 ದಿನ ತುಂಬಿದೆ. ಈ 100 ದಿನ 1,000 ದಿನವಾದರೂ ಇಲ್ಲಿಯೇ ಇದ್ದು ಹೋರಾಟ ಮುಂದುವರೆಸುವಂತಹ ಛಲ, ಉತ್ಸಾಹ ಎಲ್ಲಾ ಪ್ರತಿಭಟನಾ ನಿರತರಲ್ಲೂ ಕಂಡು ಬರುವುದು ಸಾಮಾನ್ಯ ಅಂಶವಾಗಿದೆ. ಇದಕ್ಕೆ ಯಾವುದೇ ವಯಸ್ಸಿನ ಮಿತಿ ಇಲ್ಲ ಎಂಬುದು ಮತ್ತಷ್ಟು ಗಮನಾರ್ಹ ವಿಚಾರ.

ಇನ್ನು, ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಮಾರ್ಚ್ 6 ಕ್ಕೆ 100 ದಿನ ತುಂಬಿದ ದಿನವನ್ನು ಆಚರಿಸುತ್ತಾರೆ. ಮಾರ್ಚ್ 6ರ ದಿನ ರೈತರು ಕುಂಡ್ಲಿ-ಮಾನೇಸರ್-ಪಾಲ್ವಾಲ್ ಎಕ್ಸ್‌ಪ್ರೆಸ್ ವೇಯನ್ನು ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ವಿವಿಧ ಸ್ಥಳಗಳಲ್ಲಿ ನಿರ್ಬಂಧಿಸುತ್ತಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ಯೋಗೇಂದ್ರ ಯಾದವ್ ಮಾಹಿತಿ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...