Homeಚಳವಳಿನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ದೆಹಲಿ ಪೊಲೀಸರು ಒಡ್ಡಿದ ಅಡೆತಡೆಗಳನ್ನು ದಾಟಿದ ರೈತರಿಗೆ ಪ್ರಕೃತಿ ಕೂಡ ತೀವ್ರ ಚಳಿ, ಮಳೆ, ಬಿಸಿಲಿನ ಸವಾಲೆಸೆದಿತ್ತು. ಆದರೆ ರೈತರು ಮಾತ್ರ ಯಾವುದಕ್ಕೂ ಎದೆಗುಂದಿಲ್ಲ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟ… ಫಾರ್ಮಸ್ಸ್ ಪ್ರೋಟೆಸ್ಟ್, ಪಂಜಾಬ್-ಹರಿಯಾಣ ರೈತರ ಹೋರಾಟ, ಅನ್ನದಾತರ ಹೋರಾಟ, ಕಿಸಾನ್ ಆಂದೋಲನ ಹೀಗೆ ಒಂದಾ ಎರಡಾ.. ನೂರಾರು ಹೆಸರುಗಳಿಂದ ಕರೆಸಿಕೊಂಡ, ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿ ವಿಶ್ವದ ಗಮನ ಸೆಳೆದ ದೆಹಲಿಯ ರೈತ ಹೋರಾಟಕ್ಕೆ ಶುಕ್ರವಾರ (ಮಾರ್ಚ್ 5) 100 ದಿನ ತುಂಬಿದೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿ ಚಲೋ ಆರಂಭಿಸಿ ಇಂದಿಗೆ 100 ದಿನಗಳಾಗಿವೆ. ಈ ಐತಿಹಾಸಿಕ ಹೋರಾಟ ನಡೆದುಬಂದ ದಾರಿ ನಿಜಕ್ಕೂ ಬೆರಗು ಮೂಡಿಸುತ್ತದೆ. ಅಪಮಾನ, ಅವಮಾನ, ಬೆಂಬಲ, ಸ್ಪೂರ್ತಿ, ಧೈರ್ಯ, ಪಟ್ಟುಬಿಡದ ಛಲ ಎಲ್ಲವಕ್ಕೂ ಉದಾಹರಣೆಯಾಗಿ ಈ ಶತಮಾನದಲ್ಲಿ ನಮ್ಮ ಮುಂದಿದೆ ಈ ರೈತ ಹೋರಾಟ.

ದೆಹಲಿ ಪೊಲೀಸರು ಒಡ್ಡಿದ ಅಡೆತಡೆಗಳನ್ನು ದಾಟಿದ ರೈತರಿಗೆ ಪ್ರಕೃತಿ ಕೂಡ ತೀವ್ರ ಚಳಿ, ಮಳೆ ಮೂಲಕ ಸವಾಲೆಸೆದಿತ್ತು. ಈಗಲೂ ಬೇಸಿಗೆಯ ಬಿಸಿಲು ರೈತರನ್ನು ಸುಡುತ್ತಿದೆ. ಆದರೆ ರೈತರು ಮಾತ್ರ ಯಾವುದಕ್ಕೂ ಎದೆಗುಂದಿಲ್ಲ. ಅವರ ಧ್ಯೇಯವೊಂದೆ ಅದು ಮೂರು ಕಾನೂನುಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ಬರಬೇಕು. 100 ದಿನಗಳನ್ನೂ ಪೂರೈಸಿರುವ ಈ ಹೋರಾಟ ಮೊದಲ ದಿನದ ಉತ್ಸಾಹವನ್ನು ಇನ್ನು ಹಾಗೆ ಉಳಿಸಿಕೊಂಡಿರುವುದು ಆಶ್ಚರ್ಯವೇ ಸರಿ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಮೊದ ಮೊದಲು ಬಯಲಿನಲ್ಲಿ ಆರಂಭವಾದ ವೇದಿಕೆಗಳು, ನಂತರ ದೊಡ್ಡ ದೊಡ್ಡ ವೇದಿಕೆಗಳಾಗಿ ಮಾರ್ಪಾಡಾದವು. ಎಲ್ಲಾ ರೀತಿಯ ವ್ಯವಸ್ಥೆ ಒದಗಿಸಲು ಸಂಘ ಸಂಸ್ಥೆಗಳು, ಗ್ರಾಮಗಳ ಜನರು ಮುಂದಾದರು. ಲಂಗರ್‌ಗಳ ಪಾತ್ರ ಪ್ರಮುಖವಾಯಿತು. ದೆಹಲಿಯ ಸಿಂಘು, ಟಿಕ್ರಿ, ಶಹಾಜಾನ್‌ಪುರ, ಗಾಝೀಪುರ, ಚಿಲ್ಲಾ, ಪಲ್ವಾಲ, ದಾರೂಹೇರ ಗಡಿಗಳಿಗೆ ಸೀಮಿತವಾಗಿದ್ದ ಈ ಹೋರಾಟ ಇಂದು ದೇಶಾದ್ಯಂತ ತನ್ನ ಬಾಹುಗಳನ್ನು ಚಾಚಿದೆ.

ಜಾತಿ, ಧರ್ಮ, ಲಿಂಗ, ಮೇಲು-ಕೀಳು, ಬಡವ-ಬಲ್ಲಿದ ಎಂಬ ಎಲ್ಲಾ ಭಾವನೆಗಳನ್ನು ಬದಿಗಿರಿಸಿ ಎಲ್ಲರನ್ನೂ ಒಂದು ಬೇಡಿಕೆಯಡಿಯಲ್ಲಿ ಹಿಡಿದಿಟ್ಟ ದಿಟ್ಟ ಹೋರಾಟವೆಂಬ ಖ್ಯಾತಿಗೆ ಸಾಕ್ಷಿಯಾಗಿದೆ. ತನ್ನ ಶಾಂತಿಯುತ ಪ್ರತಿಭಟನೆಯ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಭ್ರಾತೃತ್ವ-ಸೇವೆಗೆ ಹೊಸ ಅರ್ಥವನ್ನು ಈ ರೈತ ಹೋರಾಟ ನೀಡಿದೆ.

ದೆಹಲಿಯಲ್ಲಿ ಈ ಹೋರಾಟಕ್ಕೆ 100 ದಿನಗಳು ತುಂಬಿದ್ದರೇ, ಇತ್ತ ಪಂಜಾಬಿನಲ್ಲಿ ಈ ಹೋರಾಟಕ್ಕೆ 155 ದಿನಗಳು ತುಂಬಿವೆ. ಇದರ ಜೊತೆಗೆ ದೇಶದ ಹಲವು ರಾಜ್ಯಗಳಲ್ಲಿ ಈ ಹೋರಾಟ ಕಳೆಗಟ್ಟಿದೆ. ಮಹಾಪಂಚಾಯತ್‌ಗಳೆಂಬ ಹೊಸ ಕಲ್ಪನೆ ಇತರ ರಾಜ್ಯಗಳಲ್ಲೂ ಹರಿದಾಡುತ್ತಿದೆ. ತೆಲಂಗಾಣ, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಗುಜರಾತ್, ಬಿಹಾರ ಸೇರಿದಂತೆ ಹಲವು ಕಡೆ ಮಹಾಪಂಚಾಯತ್ ಮೂಲಕ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬಲಾಗುತ್ತಿದೆ.

ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ಕರ್ನಾಟಕದಲ್ಲಿ ರೈತರಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಎಂಎಸ್‌ಪಿ ದಿಲಾವೋ ಆಂದೋಲನ ಆರಂಭಿಸಲಾಗಿದೆ. ಈ ಮೂಲಕ ದೇಶದ ಎಲ್ಲಾ ರಾಜ್ಯಗಳಲ್ಲಿ ಎಂಎಸ್‌ಪಿಗಾಗಿ ಆಗ್ರಹಿಸಲಾಗುತ್ತದೆ. ಈ ಆಂದೋಲನಕ್ಕೆ ಕರ್ನಾಟಕದಿಂದ ಚಾಲನೆ ನೀಡಲಾಗಿದೆ.

ಇತ್ತ ತೀವ್ರ ಚಳಿಯನ್ನು ಕಂಡಿರುವ ರೈತರು ಈಗ ಬಿರು ಬೇಸಿಗೆಗೆ ಸಜ್ಜಾಗುತ್ತಿದ್ದಾರೆ. ತಮ್ಮ ಸುರಕ್ಷತೆಗಾಗಿ ಕುಡಿಯುವ ನೀರಿನ ವ್ಯವಸ್ಥೆ, ಪ್ರಿಡ್ಜ್, ಕೂಲರ್‌ಗಳು, ಟ್ಯ್ರಾಲಿಯಲ್ಲಿ ಅಳವಡಿಸಲಾಗುವ ಫ್ಯಾನ್‌ಗಳು, ಟೇಬಲ್ ಫ್ಯಾನ್‌ಗಳು, ಎಸಿಗಳನ್ನು ಹಾಕಿಕೊಳ್ಳಲಾಗಿದೆ. ಕುಡಿಯುವ ನೀರು, ದಿನ ನಿತ್ಯದ ಬಳಕೆಯ ನೀರಿನ ಬವಣೆ ತಪ್ಪಿಸಲು ಪ್ರತಿಭಟನಾ ಸ್ಥಳದಲ್ಲಿ ಬೋರ್‌ವೇಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಟೆಂಟ್‌ಗಳು ಮತ್ತು ಶೆಡ್‌ಗಳಲ್ಲಿ 5 ನಿಮಿಷವೂ ಕೂರಲು ಸಾಧ್ಯವಿಲ್ಲದಂತಹ ಬಿಸಿಲು ಪ್ರತಿಭಟನಾಕಾರರನ್ನು ಕಾಡುತ್ತಿದ್ದು, ಬೇಸಿಗೆಯಲ್ಲಿ ಕುಳಿತುಕೊಳ್ಳಲು, ಮಲಗಲು ತಾತ್ಕಾಲಿಕ ವಸತಿಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದಾರೆ.  ಟ್ಯ್ರಾಲಿಗಳಿಗೆ ಹೋಲಿಸಿದರೇ, ಈ ಚಪ್ಪರದ ವ್ಯವಸ್ಥೆ ಹೆಚ್ಚು ತಂಪಾಗಿರುತ್ತವೆ. ಈ ಮೂಲಕ ಸರ್ಕಾರಕ್ಕೆ ತಾವು ಇಲ್ಲಿಮದ ಎಂತಹ ಪರಿಸ್ಥಿತಿಯಲ್ಲು ವಾಪಸ್ ಹೋಗುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ರೈತ ಹೋರಾಟದಲ್ಲಿರುವವರು, ಹೋರಾಟವನ್ನು ಬೆಂಬಲಿಸುವವರು, ಪ್ರತಿಭಟನಾ ಸ್ಥಳದಲ್ಲಿರುವವರು ಕೃಷಿ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳದೆ ಇಲ್ಲಿಂದ ನಾವು ಮನೆಗೆ ಹಿಂತಿರುಗುವುದಿಲ್ಲ ಎಂದಿದ್ದಾರೆ. ತಮಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುವತ್ತ ಗಮನ ಹರಿಸಿರುವ ಇವರು ಯಾರು ಕೂಡ ವಾಪಸ್ ಹೋಗುವ ಬಗ್ಗೆ ಚಿಂತಿಸುತ್ತಿಲ್ಲ.

ಇಂದು ರೈತ ಹೋರಾಟಕ್ಕೆ 100 ದಿನ ತುಂಬಿದೆ. ಈ 100 ದಿನ 1,000 ದಿನವಾದರೂ ಇಲ್ಲಿಯೇ ಇದ್ದು ಹೋರಾಟ ಮುಂದುವರೆಸುವಂತಹ ಛಲ, ಉತ್ಸಾಹ ಎಲ್ಲಾ ಪ್ರತಿಭಟನಾ ನಿರತರಲ್ಲೂ ಕಂಡು ಬರುವುದು ಸಾಮಾನ್ಯ ಅಂಶವಾಗಿದೆ. ಇದಕ್ಕೆ ಯಾವುದೇ ವಯಸ್ಸಿನ ಮಿತಿ ಇಲ್ಲ ಎಂಬುದು ಮತ್ತಷ್ಟು ಗಮನಾರ್ಹ ವಿಚಾರ.

ಇನ್ನು, ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಮಾರ್ಚ್ 6 ಕ್ಕೆ 100 ದಿನ ತುಂಬಿದ ದಿನವನ್ನು ಆಚರಿಸುತ್ತಾರೆ. ಮಾರ್ಚ್ 6ರ ದಿನ ರೈತರು ಕುಂಡ್ಲಿ-ಮಾನೇಸರ್-ಪಾಲ್ವಾಲ್ ಎಕ್ಸ್‌ಪ್ರೆಸ್ ವೇಯನ್ನು ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ವಿವಿಧ ಸ್ಥಳಗಳಲ್ಲಿ ನಿರ್ಬಂಧಿಸುತ್ತಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ಯೋಗೇಂದ್ರ ಯಾದವ್ ಮಾಹಿತಿ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...