Homeಚಳವಳಿನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ದೆಹಲಿ ಪೊಲೀಸರು ಒಡ್ಡಿದ ಅಡೆತಡೆಗಳನ್ನು ದಾಟಿದ ರೈತರಿಗೆ ಪ್ರಕೃತಿ ಕೂಡ ತೀವ್ರ ಚಳಿ, ಮಳೆ, ಬಿಸಿಲಿನ ಸವಾಲೆಸೆದಿತ್ತು. ಆದರೆ ರೈತರು ಮಾತ್ರ ಯಾವುದಕ್ಕೂ ಎದೆಗುಂದಿಲ್ಲ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟ… ಫಾರ್ಮಸ್ಸ್ ಪ್ರೋಟೆಸ್ಟ್, ಪಂಜಾಬ್-ಹರಿಯಾಣ ರೈತರ ಹೋರಾಟ, ಅನ್ನದಾತರ ಹೋರಾಟ, ಕಿಸಾನ್ ಆಂದೋಲನ ಹೀಗೆ ಒಂದಾ ಎರಡಾ.. ನೂರಾರು ಹೆಸರುಗಳಿಂದ ಕರೆಸಿಕೊಂಡ, ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿ ವಿಶ್ವದ ಗಮನ ಸೆಳೆದ ದೆಹಲಿಯ ರೈತ ಹೋರಾಟಕ್ಕೆ ಶುಕ್ರವಾರ (ಮಾರ್ಚ್ 5) 100 ದಿನ ತುಂಬಿದೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿ ಚಲೋ ಆರಂಭಿಸಿ ಇಂದಿಗೆ 100 ದಿನಗಳಾಗಿವೆ. ಈ ಐತಿಹಾಸಿಕ ಹೋರಾಟ ನಡೆದುಬಂದ ದಾರಿ ನಿಜಕ್ಕೂ ಬೆರಗು ಮೂಡಿಸುತ್ತದೆ. ಅಪಮಾನ, ಅವಮಾನ, ಬೆಂಬಲ, ಸ್ಪೂರ್ತಿ, ಧೈರ್ಯ, ಪಟ್ಟುಬಿಡದ ಛಲ ಎಲ್ಲವಕ್ಕೂ ಉದಾಹರಣೆಯಾಗಿ ಈ ಶತಮಾನದಲ್ಲಿ ನಮ್ಮ ಮುಂದಿದೆ ಈ ರೈತ ಹೋರಾಟ.

ದೆಹಲಿ ಪೊಲೀಸರು ಒಡ್ಡಿದ ಅಡೆತಡೆಗಳನ್ನು ದಾಟಿದ ರೈತರಿಗೆ ಪ್ರಕೃತಿ ಕೂಡ ತೀವ್ರ ಚಳಿ, ಮಳೆ ಮೂಲಕ ಸವಾಲೆಸೆದಿತ್ತು. ಈಗಲೂ ಬೇಸಿಗೆಯ ಬಿಸಿಲು ರೈತರನ್ನು ಸುಡುತ್ತಿದೆ. ಆದರೆ ರೈತರು ಮಾತ್ರ ಯಾವುದಕ್ಕೂ ಎದೆಗುಂದಿಲ್ಲ. ಅವರ ಧ್ಯೇಯವೊಂದೆ ಅದು ಮೂರು ಕಾನೂನುಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ಬರಬೇಕು. 100 ದಿನಗಳನ್ನೂ ಪೂರೈಸಿರುವ ಈ ಹೋರಾಟ ಮೊದಲ ದಿನದ ಉತ್ಸಾಹವನ್ನು ಇನ್ನು ಹಾಗೆ ಉಳಿಸಿಕೊಂಡಿರುವುದು ಆಶ್ಚರ್ಯವೇ ಸರಿ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಮೊದ ಮೊದಲು ಬಯಲಿನಲ್ಲಿ ಆರಂಭವಾದ ವೇದಿಕೆಗಳು, ನಂತರ ದೊಡ್ಡ ದೊಡ್ಡ ವೇದಿಕೆಗಳಾಗಿ ಮಾರ್ಪಾಡಾದವು. ಎಲ್ಲಾ ರೀತಿಯ ವ್ಯವಸ್ಥೆ ಒದಗಿಸಲು ಸಂಘ ಸಂಸ್ಥೆಗಳು, ಗ್ರಾಮಗಳ ಜನರು ಮುಂದಾದರು. ಲಂಗರ್‌ಗಳ ಪಾತ್ರ ಪ್ರಮುಖವಾಯಿತು. ದೆಹಲಿಯ ಸಿಂಘು, ಟಿಕ್ರಿ, ಶಹಾಜಾನ್‌ಪುರ, ಗಾಝೀಪುರ, ಚಿಲ್ಲಾ, ಪಲ್ವಾಲ, ದಾರೂಹೇರ ಗಡಿಗಳಿಗೆ ಸೀಮಿತವಾಗಿದ್ದ ಈ ಹೋರಾಟ ಇಂದು ದೇಶಾದ್ಯಂತ ತನ್ನ ಬಾಹುಗಳನ್ನು ಚಾಚಿದೆ.

ಜಾತಿ, ಧರ್ಮ, ಲಿಂಗ, ಮೇಲು-ಕೀಳು, ಬಡವ-ಬಲ್ಲಿದ ಎಂಬ ಎಲ್ಲಾ ಭಾವನೆಗಳನ್ನು ಬದಿಗಿರಿಸಿ ಎಲ್ಲರನ್ನೂ ಒಂದು ಬೇಡಿಕೆಯಡಿಯಲ್ಲಿ ಹಿಡಿದಿಟ್ಟ ದಿಟ್ಟ ಹೋರಾಟವೆಂಬ ಖ್ಯಾತಿಗೆ ಸಾಕ್ಷಿಯಾಗಿದೆ. ತನ್ನ ಶಾಂತಿಯುತ ಪ್ರತಿಭಟನೆಯ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಭ್ರಾತೃತ್ವ-ಸೇವೆಗೆ ಹೊಸ ಅರ್ಥವನ್ನು ಈ ರೈತ ಹೋರಾಟ ನೀಡಿದೆ.

ದೆಹಲಿಯಲ್ಲಿ ಈ ಹೋರಾಟಕ್ಕೆ 100 ದಿನಗಳು ತುಂಬಿದ್ದರೇ, ಇತ್ತ ಪಂಜಾಬಿನಲ್ಲಿ ಈ ಹೋರಾಟಕ್ಕೆ 155 ದಿನಗಳು ತುಂಬಿವೆ. ಇದರ ಜೊತೆಗೆ ದೇಶದ ಹಲವು ರಾಜ್ಯಗಳಲ್ಲಿ ಈ ಹೋರಾಟ ಕಳೆಗಟ್ಟಿದೆ. ಮಹಾಪಂಚಾಯತ್‌ಗಳೆಂಬ ಹೊಸ ಕಲ್ಪನೆ ಇತರ ರಾಜ್ಯಗಳಲ್ಲೂ ಹರಿದಾಡುತ್ತಿದೆ. ತೆಲಂಗಾಣ, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಗುಜರಾತ್, ಬಿಹಾರ ಸೇರಿದಂತೆ ಹಲವು ಕಡೆ ಮಹಾಪಂಚಾಯತ್ ಮೂಲಕ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬಲಾಗುತ್ತಿದೆ.

ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ಕರ್ನಾಟಕದಲ್ಲಿ ರೈತರಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಎಂಎಸ್‌ಪಿ ದಿಲಾವೋ ಆಂದೋಲನ ಆರಂಭಿಸಲಾಗಿದೆ. ಈ ಮೂಲಕ ದೇಶದ ಎಲ್ಲಾ ರಾಜ್ಯಗಳಲ್ಲಿ ಎಂಎಸ್‌ಪಿಗಾಗಿ ಆಗ್ರಹಿಸಲಾಗುತ್ತದೆ. ಈ ಆಂದೋಲನಕ್ಕೆ ಕರ್ನಾಟಕದಿಂದ ಚಾಲನೆ ನೀಡಲಾಗಿದೆ.

ಇತ್ತ ತೀವ್ರ ಚಳಿಯನ್ನು ಕಂಡಿರುವ ರೈತರು ಈಗ ಬಿರು ಬೇಸಿಗೆಗೆ ಸಜ್ಜಾಗುತ್ತಿದ್ದಾರೆ. ತಮ್ಮ ಸುರಕ್ಷತೆಗಾಗಿ ಕುಡಿಯುವ ನೀರಿನ ವ್ಯವಸ್ಥೆ, ಪ್ರಿಡ್ಜ್, ಕೂಲರ್‌ಗಳು, ಟ್ಯ್ರಾಲಿಯಲ್ಲಿ ಅಳವಡಿಸಲಾಗುವ ಫ್ಯಾನ್‌ಗಳು, ಟೇಬಲ್ ಫ್ಯಾನ್‌ಗಳು, ಎಸಿಗಳನ್ನು ಹಾಕಿಕೊಳ್ಳಲಾಗಿದೆ. ಕುಡಿಯುವ ನೀರು, ದಿನ ನಿತ್ಯದ ಬಳಕೆಯ ನೀರಿನ ಬವಣೆ ತಪ್ಪಿಸಲು ಪ್ರತಿಭಟನಾ ಸ್ಥಳದಲ್ಲಿ ಬೋರ್‌ವೇಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಟೆಂಟ್‌ಗಳು ಮತ್ತು ಶೆಡ್‌ಗಳಲ್ಲಿ 5 ನಿಮಿಷವೂ ಕೂರಲು ಸಾಧ್ಯವಿಲ್ಲದಂತಹ ಬಿಸಿಲು ಪ್ರತಿಭಟನಾಕಾರರನ್ನು ಕಾಡುತ್ತಿದ್ದು, ಬೇಸಿಗೆಯಲ್ಲಿ ಕುಳಿತುಕೊಳ್ಳಲು, ಮಲಗಲು ತಾತ್ಕಾಲಿಕ ವಸತಿಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದಾರೆ.  ಟ್ಯ್ರಾಲಿಗಳಿಗೆ ಹೋಲಿಸಿದರೇ, ಈ ಚಪ್ಪರದ ವ್ಯವಸ್ಥೆ ಹೆಚ್ಚು ತಂಪಾಗಿರುತ್ತವೆ. ಈ ಮೂಲಕ ಸರ್ಕಾರಕ್ಕೆ ತಾವು ಇಲ್ಲಿಮದ ಎಂತಹ ಪರಿಸ್ಥಿತಿಯಲ್ಲು ವಾಪಸ್ ಹೋಗುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ರೈತ ಹೋರಾಟದಲ್ಲಿರುವವರು, ಹೋರಾಟವನ್ನು ಬೆಂಬಲಿಸುವವರು, ಪ್ರತಿಭಟನಾ ಸ್ಥಳದಲ್ಲಿರುವವರು ಕೃಷಿ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳದೆ ಇಲ್ಲಿಂದ ನಾವು ಮನೆಗೆ ಹಿಂತಿರುಗುವುದಿಲ್ಲ ಎಂದಿದ್ದಾರೆ. ತಮಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುವತ್ತ ಗಮನ ಹರಿಸಿರುವ ಇವರು ಯಾರು ಕೂಡ ವಾಪಸ್ ಹೋಗುವ ಬಗ್ಗೆ ಚಿಂತಿಸುತ್ತಿಲ್ಲ.

ಇಂದು ರೈತ ಹೋರಾಟಕ್ಕೆ 100 ದಿನ ತುಂಬಿದೆ. ಈ 100 ದಿನ 1,000 ದಿನವಾದರೂ ಇಲ್ಲಿಯೇ ಇದ್ದು ಹೋರಾಟ ಮುಂದುವರೆಸುವಂತಹ ಛಲ, ಉತ್ಸಾಹ ಎಲ್ಲಾ ಪ್ರತಿಭಟನಾ ನಿರತರಲ್ಲೂ ಕಂಡು ಬರುವುದು ಸಾಮಾನ್ಯ ಅಂಶವಾಗಿದೆ. ಇದಕ್ಕೆ ಯಾವುದೇ ವಯಸ್ಸಿನ ಮಿತಿ ಇಲ್ಲ ಎಂಬುದು ಮತ್ತಷ್ಟು ಗಮನಾರ್ಹ ವಿಚಾರ.

ಇನ್ನು, ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಮಾರ್ಚ್ 6 ಕ್ಕೆ 100 ದಿನ ತುಂಬಿದ ದಿನವನ್ನು ಆಚರಿಸುತ್ತಾರೆ. ಮಾರ್ಚ್ 6ರ ದಿನ ರೈತರು ಕುಂಡ್ಲಿ-ಮಾನೇಸರ್-ಪಾಲ್ವಾಲ್ ಎಕ್ಸ್‌ಪ್ರೆಸ್ ವೇಯನ್ನು ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ವಿವಿಧ ಸ್ಥಳಗಳಲ್ಲಿ ನಿರ್ಬಂಧಿಸುತ್ತಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ಯೋಗೇಂದ್ರ ಯಾದವ್ ಮಾಹಿತಿ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...