Homeಮುಖಪುಟಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ...

ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

- Advertisement -
- Advertisement -

ಅಸ್ಸಾಂನಲ್ಲಿ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆಯ ವೇಳೆ ಅಸ್ಸಾಂನ ಬಿಜೆಪಿ ಸರಕಾರ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಜಟಾಪಟಿ ನಡೆದಿತ್ತು. ರಾಹುಲ್‌ ಗಾಂಧಿಯವರ ಮೇಲೆ ದಾಳಿಗೆ ಯತ್ನಿಸಲಾಗಿದೆ ಎಂಬ ಆರೋಪವು ಕೇಳಿ ಬಂದಿತ್ತು. ಇದೀಗ ಅಸ್ಸಾಂ ಸರಕಾರದ ನಡೆಯನ್ನು ಖಂಡಿಸಿ ರಾಜ್ಯದ 100 ಮಂದಿ ಹೆಸರಾಂತ ಬುದ್ದಿಜೀವಿಗಳು, ಚಿಂತಕರು ಪತ್ರವನ್ನು ಬರೆದಿದ್ದಾರೆ.

ಪತ್ರದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ನಡವಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಉಲ್ಲೇಖಿಸಲಾಗಿದೆ.

ನ್ಯಾಯ್ ಯಾತ್ರೆಯು ಅಸ್ಸಾಂನಲ್ಲಿ ತನ್ನ ಎಂಟು ದಿನಗಳ ಯಾತ್ರೆಯನ್ನು ಪೂರ್ಣಗೊಳಿಸಿ ಬಂಗಾಳವನ್ನು ಪ್ರವೇಶಿಸಿತ್ತು. ಅಸ್ಸಾಂನಲ್ಲಿ ಯಾತ್ರೆಯ ವೇಳೆ ಪದೇ ಪದೇ ಅಡೆತಡೆಗಳನ್ನು ಎದುರಿಸಿತ್ತು. ನ್ಯಾಯ ಯಾತ್ರೆಯ ವಾಹನವನ್ನು ಸುತ್ತುವರಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ಕಾರಿನ ಮೇಲೆ ದಾಳಿಯನ್ನು ಕೂಡ ನಡೆಸಿದ್ದರು. ಅಸ್ಸಾಂನ 15ನೇ ಶತಮಾನದ ಸಂತ ಶ‍್ರೀಮಂತ ಶಂಕರದೇವರ ಜನ್ಮಸ್ಥಳವಾದ ಬತದ್ರವ ಸತ್ರ ದೇವಾಲಯಕ್ಕೆ ಭೇಟಿ ನೀಡದಂತೆ ರಾಹುಲ್‌ ಗಾಂಧಿಯನ್ನು ತಡೆಯಲಾಗಿತ್ತು. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸದಂತೆ ರಾಹುಲ್‌ ಗಾಂಧಿಗೆ ತಡೆಯಲಾಗಿತ್ತು.

ಅಸ್ಸಾಂ ಕಾಂಗ್ರೆಸ್‌ ಘಟಕದ ರಾಜ್ಯಾಧ್ಯಕ್ಷ ಭೂಪೇನ್ ಬೋರಾಹ್ ಸೇರಿದಂತೆ ಕಾಂಗ್ರೆಸ್ ನಾಯಕರ ಜೊತೆ ಅಸ್ಸಾಂ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ಬಿಜೆಪಿಗರು ಹಲ್ಲೆ ನಡೆಸಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಆರೋಪಿಸಿದ್ದರು. ಇದಲ್ಲದೆ ರಾಹುಲ್‌ ಗಾಂಧಿ, ಕೆಸಿ ವೇಣುಗೋಪಾಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ  ವಿರುದ್ಧ ಹಿಂಸಾಚಾರ, ಪೊಲೀಸರ ಕರ್ತವ್ಯಕ್ಕೆ ಟಡ್ಡಿ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಪತ್ರದಲ್ಲೇನಿದೆ?

ಪ್ರಕ್ಷುಬ್ಧ ಮಣಿಪುರದಿಂದ ಶಾಂತಿಯುತವಾಗಿ ಯಾತ್ರೆ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಶಾಂತಿಯುತವಾಗಿ ಯಾತ್ರೆ ಸಾಗಿದೆ. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆಯ ಮೇಲೆ ಪದೇ ಪದೇ ದಾಳಿ ನಡೆಸಲಾಗಿದೆ. ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ವರ್ತನೆಯನ್ನು ನಾವು ಖಂಡಿಸುತ್ತೇವೆ. ಕೆಲವರು ಯಾತ್ರೆಯನ್ನು ಬೆಂಬಲಿಸಬಹುದು ಮತ್ತು ಕೆಲವರು ಬೆಂಬಲಿಸದಿರಬಹುದು. ಆದರೆ ಈ ಶಾಂತಿಯುತ ಯಾತ್ರೆಯನ್ನು ಯಾರೂ ತಡೆಯಲು ಪ್ರಯತ್ನಿಸಬಾರದು. ಯಾತ್ರೆಯು ಅಸ್ಸಾಂಗೆ ಪ್ರವೇಶಿಸಿದಾಗ ಅಸ್ಸಾಂ ಸರ್ಕಾರ ಅದಕ್ಕೆ ಅಡೆತಡೆಗಳನ್ನು ಸೃಷ್ಟಿಸಲು ಎಲ್ಲವನ್ನೂ ಪ್ರಯತ್ನಿಸಿತು. ಕೆಲವೆಡೆ ಕಿಡಿಗೇಡಿಗಳ ದಾಳಿಯೂ ನಡೆದಿದೆ. ಯಾತ್ರೆಯ ಜೊತೆಗಿದ್ದ ಪತ್ರಕರ್ತರ ವಾಹನಗಳನ್ನು ಧ್ವಂಸಗೊಳಿಸಿ ಅವರ ಕ್ಯಾಮರಾಗಳನ್ನು ಕಸಿದುಕೊಂಡಿದ್ದಾರೆ. ಸೋನಿತ್‌ಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಮೇಲೆ ದೈಹಿಕ ಹಲ್ಲೆ ನಡೆದಿದೆ. ಇಷ್ಟೆಲ್ಲ ನಡೆಯುತ್ತಿದ್ದರೂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪ್ರಕ್ಷುಬ್ಧ ಮಣಿಪುರದಿಂದ ಯಾತ್ರೆ ಶಾಂತಿಯುತವಾಗಿ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಯಾವುದೇ ಅಡ್ಡಿಯಿಲ್ಲದೆ ಶಾಂತಿಯುತವಾಗಿ ಸಾಗಿತು. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆ ಮೇಲೆ ಪದೇ ಪದೇ ದಾಳಿ ನಡೆದಿದೆ. ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ ಮತ್ತು ಅದರಲ್ಲಿ ತೊಡಗಿರುವವರನ್ನು ಬಂಧಿಸಿ ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಾವು ರಾಹುಲ್ ಗಾಂಧಿ ಮತ್ತು ಯಾತ್ರೆಯಲ್ಲಿ ಭಾಗವಹಿಸುವ ಎಲ್ಲರಿಗೂ ಶಾಂತವಾಗಿ ಯಾತ್ರೆಯಲ್ಲಿ ಸಾಗಲು ಮತ್ತು ಅಂತಹ ಪ್ರಚೋದನೆಗಳಿಗೆ ಎಂದಿಗೂ ಒಳಗಾಗದಂತೆ ಮನವಿ ಮಾಡುತ್ತೇವೆ. ಕೆಲವು ದಿನಗಳ ಹಿಂದೆ,  ಪ್ರಖ್ಯಾತ ವಿದ್ವಾಂಸ ಡಾ.ಹಿರೇನ್ ಗೊಹೈನ್ ಅವರ ವಿರುದ್ಧ ಅಸ್ಸಾಂನ ಮುಖ್ಯಮಂತ್ರಿ ಶರ್ಮಾ ಅವರು ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡುವ ಮೂಲಕ ಬುದ್ಧಿಜೀವಿಗಳನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಗೌಹಾಟಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ ಅಖಿಲ್ ರಂಜನ್ ದತ್ತಾ ವಿರುದ್ಧ ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಮುಖ್ಯಮಂತ್ರಿಗಳ ಭಾಷೆ ಮತ್ತು ನಡವಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಒಬ್ಬ ವ್ಯಕ್ತಿಗೆ ವಾಕ್ ಸ್ವಾತಂತ್ರ್ಯ ಬಹುಮುಖ್ಯ. ಇದು ಪ್ರಜಾಪ್ರಭುತ್ವದ ಸಾರ್ವತ್ರಿಕ ಹಕ್ಕು ಮತ್ತು ಮೂಲಭೂತ ಹಕ್ಕು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಯವರ ವರ್ತನೆಯಿಂದ ನಮಗೆ ಬೇಸರವಾಗಿದೆ ಮತ್ತು ನಾವು ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿಲಾಗಿದೆ.

ಪತ್ರದಲ್ಲಿ ಸಾಮಾಜಿಕ, ರಾಜಕೀಯ, ಸಾಹಿತ್ಯ ರಂಗದ ದಿಗ್ಗಜರು ಸಹಿಯನ್ನು ಹಾಕಿದ್ದಾರೆ. ಡಾ ನಾಗೇನ್ ಸೈಕಿಯಾ, ಶ್ರೀ ಕುಲದ ಕೃ ಭಟ್ಟಾಚಾರ್ಯ, ಶ್ರೀ ಹರೇಕೃಷ್ಣ ದೇಕಾ, ಶ್ರೀ ಹೈದರ್ ಹುಸೇನ್, ಶ್ರೀ ಅಪುರ್ಬಾ ಶರ್ಮಾ, ಶ್ರೀ ಕುಲೇಂದು ಪಾಠಕ್, ಡಾ ತಪೋಧೀರ್ ಭಟ್ಟಾಚಾರ್ಯ, ಡಾ ದಿನೇಶ್ ಚಿ. ಗೋಸ್ವಾಮಿ, ಶ್ರೀ ಅಜಿತ್ ಕುಮಾರ್ ಭೂಯಾನ್, ಡಾ ತೌಫಿಕ್ ರೆಹಮಾನ್ ಬೊರ್ಬೊರಾ,ಡಾ ಅಪುರ್ಬಾ ಕುಮಾರ್ ಬರುವಾ, ಡಾ ಮನೋರಮಾ ಶರ್ಮಾ, ಡಾ ದುಲಾಲ್ ಚ. ಗೋಸ್ವಾಮಿ, ಡಾ ಅನುರಾಧಾ ದತ್ತಾ, ಡಾ ಪರಮಾನಂದ ಮಹಾಂತ, ಡಾ ಅಬು ನಾಸರ್ ಸಯೀದ್ ಅಹ್ಮದ್, ಡಾ ಸಂಧ್ಯಾ ಗೋಸ್ವಾಮಿ, ಶ್ರೀ ಪ್ರಭಾತ್ ಬೋರಾ, ಶ್ರೀ ಲೋಕನಾಥ ಗೋಸ್ವಾಮಿ, ಶ್ರೀ ಉದಯಾದಿತ್ಯ ಭಾರಾಲಿ, ಶ್ರೀ ನಿತ್ಯಾ ಬೋರಾ,  ಶಾಂತಿಕಾಂ ಹಜಾರಿಕಾ, ಶ್ರೀ ಎಚ್.ಆರ್.ಎ. ಚೌಧರಿ, ಬಾದಲ್ ಚಕ್ರಬೋರಿ,  ಲಕ್ಷ್ಮೀನಾಥ ತಾಮುಳಿ, ಧೀರೇಂದ್ರ ನಾಥ್ ಸೈಕಿಯಾ, ಪ್ರದೀಪ ಆಚಾರ್ಯ, ಅಬ್ಸರ್ ಹಜಾರಿಕಾ, ಡಾ ಪದ್ಮಪಾಣಿ, ಪೂರ್ಣೇಶ್ವರನಾಥ, ಡಾ ಕಲ್ಯಾಣಿ ಬರುವಾ, ಉದ್ಧಬ್ ಕಾಕತಿ, ಡಾ ಜಿಬಾನ್ ಚಿ. ದತ್ತಬರುವಾ, ಅರುಪ್ ಬೊರ್ಬೊರಾ, ಕಮಲ್ ನಾರಾಯಣ ಚೌಧರಿ, ಅಜಿತ ಚಂದ್ರ ತಾಲೂಕದಾರ, ದೇಬೆನ್ ತಮುಳಿ, ಜ್ಞಾನ ಪೂಜಾರಿ, ಸತಾಂಜೀಬ್ ದಾಸ್, ರಾಜೇನ್ ಕಲಿತಾ, ಜ್ಞಾನನ್ ಬೊರ್ಕಕಟಿ, ದ್ವೀಪೇನ್ ಕಾಕತಿ, ಮುನಿನ್ ಬಯಾನ್, ಹೇಮಂತ ಬರ್ಮನ್, ಹೇಮಂತ ದಾಸ್, ಡಾ ನವನೀಲ್ ಬರುವಾ, ಮೃಣಾಲ್ ಕುಮಾರ್ ಬರ್ಮನ್, ಅಲಿ ಹೈದರ್ ಲಸ್ಕರ್, ವಾರಿಸ್ ಚೌಧರಿ, ಅಬ್ದುರ್ ರೆಹಮಾನ್ ಶೇಖ್, ಡಾ ಕಾಳಿಪ್ರಸಾದ್ ಶರ್ಮಾ, ಡಾ ಮೋಹನ್ ಚಿ. ಕಲಿತಾ, ಡಾ.ಸೋನಕುಮಾರ ತಾಲೂಕದಾರ್, ಡಾ ಇಂದ್ರಾಣಿ ದತ್ತಾ,  ರಬಿನ್ ದತ್ತಾ, ದೀಪಕ್ ಗೋಸ್ವಾಮಿ, ಘನಶ್ಯಾಮನಾಥ ಅವರು ಸಹಿಯನ್ನು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ: ಸಾರ್ವಜನಿಕ ಸಭೆಗಳಿಗೆ ಅನುಮತಿ ನೀಡದ ದೀದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...