Homeಮುಖಪುಟಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ...

ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

- Advertisement -
- Advertisement -

ಅಸ್ಸಾಂನಲ್ಲಿ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆಯ ವೇಳೆ ಅಸ್ಸಾಂನ ಬಿಜೆಪಿ ಸರಕಾರ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಜಟಾಪಟಿ ನಡೆದಿತ್ತು. ರಾಹುಲ್‌ ಗಾಂಧಿಯವರ ಮೇಲೆ ದಾಳಿಗೆ ಯತ್ನಿಸಲಾಗಿದೆ ಎಂಬ ಆರೋಪವು ಕೇಳಿ ಬಂದಿತ್ತು. ಇದೀಗ ಅಸ್ಸಾಂ ಸರಕಾರದ ನಡೆಯನ್ನು ಖಂಡಿಸಿ ರಾಜ್ಯದ 100 ಮಂದಿ ಹೆಸರಾಂತ ಬುದ್ದಿಜೀವಿಗಳು, ಚಿಂತಕರು ಪತ್ರವನ್ನು ಬರೆದಿದ್ದಾರೆ.

ಪತ್ರದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ನಡವಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಉಲ್ಲೇಖಿಸಲಾಗಿದೆ.

ನ್ಯಾಯ್ ಯಾತ್ರೆಯು ಅಸ್ಸಾಂನಲ್ಲಿ ತನ್ನ ಎಂಟು ದಿನಗಳ ಯಾತ್ರೆಯನ್ನು ಪೂರ್ಣಗೊಳಿಸಿ ಬಂಗಾಳವನ್ನು ಪ್ರವೇಶಿಸಿತ್ತು. ಅಸ್ಸಾಂನಲ್ಲಿ ಯಾತ್ರೆಯ ವೇಳೆ ಪದೇ ಪದೇ ಅಡೆತಡೆಗಳನ್ನು ಎದುರಿಸಿತ್ತು. ನ್ಯಾಯ ಯಾತ್ರೆಯ ವಾಹನವನ್ನು ಸುತ್ತುವರಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ಕಾರಿನ ಮೇಲೆ ದಾಳಿಯನ್ನು ಕೂಡ ನಡೆಸಿದ್ದರು. ಅಸ್ಸಾಂನ 15ನೇ ಶತಮಾನದ ಸಂತ ಶ‍್ರೀಮಂತ ಶಂಕರದೇವರ ಜನ್ಮಸ್ಥಳವಾದ ಬತದ್ರವ ಸತ್ರ ದೇವಾಲಯಕ್ಕೆ ಭೇಟಿ ನೀಡದಂತೆ ರಾಹುಲ್‌ ಗಾಂಧಿಯನ್ನು ತಡೆಯಲಾಗಿತ್ತು. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸದಂತೆ ರಾಹುಲ್‌ ಗಾಂಧಿಗೆ ತಡೆಯಲಾಗಿತ್ತು.

ಅಸ್ಸಾಂ ಕಾಂಗ್ರೆಸ್‌ ಘಟಕದ ರಾಜ್ಯಾಧ್ಯಕ್ಷ ಭೂಪೇನ್ ಬೋರಾಹ್ ಸೇರಿದಂತೆ ಕಾಂಗ್ರೆಸ್ ನಾಯಕರ ಜೊತೆ ಅಸ್ಸಾಂ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ಬಿಜೆಪಿಗರು ಹಲ್ಲೆ ನಡೆಸಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಆರೋಪಿಸಿದ್ದರು. ಇದಲ್ಲದೆ ರಾಹುಲ್‌ ಗಾಂಧಿ, ಕೆಸಿ ವೇಣುಗೋಪಾಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ  ವಿರುದ್ಧ ಹಿಂಸಾಚಾರ, ಪೊಲೀಸರ ಕರ್ತವ್ಯಕ್ಕೆ ಟಡ್ಡಿ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಪತ್ರದಲ್ಲೇನಿದೆ?

ಪ್ರಕ್ಷುಬ್ಧ ಮಣಿಪುರದಿಂದ ಶಾಂತಿಯುತವಾಗಿ ಯಾತ್ರೆ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಶಾಂತಿಯುತವಾಗಿ ಯಾತ್ರೆ ಸಾಗಿದೆ. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆಯ ಮೇಲೆ ಪದೇ ಪದೇ ದಾಳಿ ನಡೆಸಲಾಗಿದೆ. ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ವರ್ತನೆಯನ್ನು ನಾವು ಖಂಡಿಸುತ್ತೇವೆ. ಕೆಲವರು ಯಾತ್ರೆಯನ್ನು ಬೆಂಬಲಿಸಬಹುದು ಮತ್ತು ಕೆಲವರು ಬೆಂಬಲಿಸದಿರಬಹುದು. ಆದರೆ ಈ ಶಾಂತಿಯುತ ಯಾತ್ರೆಯನ್ನು ಯಾರೂ ತಡೆಯಲು ಪ್ರಯತ್ನಿಸಬಾರದು. ಯಾತ್ರೆಯು ಅಸ್ಸಾಂಗೆ ಪ್ರವೇಶಿಸಿದಾಗ ಅಸ್ಸಾಂ ಸರ್ಕಾರ ಅದಕ್ಕೆ ಅಡೆತಡೆಗಳನ್ನು ಸೃಷ್ಟಿಸಲು ಎಲ್ಲವನ್ನೂ ಪ್ರಯತ್ನಿಸಿತು. ಕೆಲವೆಡೆ ಕಿಡಿಗೇಡಿಗಳ ದಾಳಿಯೂ ನಡೆದಿದೆ. ಯಾತ್ರೆಯ ಜೊತೆಗಿದ್ದ ಪತ್ರಕರ್ತರ ವಾಹನಗಳನ್ನು ಧ್ವಂಸಗೊಳಿಸಿ ಅವರ ಕ್ಯಾಮರಾಗಳನ್ನು ಕಸಿದುಕೊಂಡಿದ್ದಾರೆ. ಸೋನಿತ್‌ಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಮೇಲೆ ದೈಹಿಕ ಹಲ್ಲೆ ನಡೆದಿದೆ. ಇಷ್ಟೆಲ್ಲ ನಡೆಯುತ್ತಿದ್ದರೂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪ್ರಕ್ಷುಬ್ಧ ಮಣಿಪುರದಿಂದ ಯಾತ್ರೆ ಶಾಂತಿಯುತವಾಗಿ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಯಾವುದೇ ಅಡ್ಡಿಯಿಲ್ಲದೆ ಶಾಂತಿಯುತವಾಗಿ ಸಾಗಿತು. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆ ಮೇಲೆ ಪದೇ ಪದೇ ದಾಳಿ ನಡೆದಿದೆ. ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ ಮತ್ತು ಅದರಲ್ಲಿ ತೊಡಗಿರುವವರನ್ನು ಬಂಧಿಸಿ ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಾವು ರಾಹುಲ್ ಗಾಂಧಿ ಮತ್ತು ಯಾತ್ರೆಯಲ್ಲಿ ಭಾಗವಹಿಸುವ ಎಲ್ಲರಿಗೂ ಶಾಂತವಾಗಿ ಯಾತ್ರೆಯಲ್ಲಿ ಸಾಗಲು ಮತ್ತು ಅಂತಹ ಪ್ರಚೋದನೆಗಳಿಗೆ ಎಂದಿಗೂ ಒಳಗಾಗದಂತೆ ಮನವಿ ಮಾಡುತ್ತೇವೆ. ಕೆಲವು ದಿನಗಳ ಹಿಂದೆ,  ಪ್ರಖ್ಯಾತ ವಿದ್ವಾಂಸ ಡಾ.ಹಿರೇನ್ ಗೊಹೈನ್ ಅವರ ವಿರುದ್ಧ ಅಸ್ಸಾಂನ ಮುಖ್ಯಮಂತ್ರಿ ಶರ್ಮಾ ಅವರು ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡುವ ಮೂಲಕ ಬುದ್ಧಿಜೀವಿಗಳನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಗೌಹಾಟಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ ಅಖಿಲ್ ರಂಜನ್ ದತ್ತಾ ವಿರುದ್ಧ ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಮುಖ್ಯಮಂತ್ರಿಗಳ ಭಾಷೆ ಮತ್ತು ನಡವಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಒಬ್ಬ ವ್ಯಕ್ತಿಗೆ ವಾಕ್ ಸ್ವಾತಂತ್ರ್ಯ ಬಹುಮುಖ್ಯ. ಇದು ಪ್ರಜಾಪ್ರಭುತ್ವದ ಸಾರ್ವತ್ರಿಕ ಹಕ್ಕು ಮತ್ತು ಮೂಲಭೂತ ಹಕ್ಕು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಯವರ ವರ್ತನೆಯಿಂದ ನಮಗೆ ಬೇಸರವಾಗಿದೆ ಮತ್ತು ನಾವು ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿಲಾಗಿದೆ.

ಪತ್ರದಲ್ಲಿ ಸಾಮಾಜಿಕ, ರಾಜಕೀಯ, ಸಾಹಿತ್ಯ ರಂಗದ ದಿಗ್ಗಜರು ಸಹಿಯನ್ನು ಹಾಕಿದ್ದಾರೆ. ಡಾ ನಾಗೇನ್ ಸೈಕಿಯಾ, ಶ್ರೀ ಕುಲದ ಕೃ ಭಟ್ಟಾಚಾರ್ಯ, ಶ್ರೀ ಹರೇಕೃಷ್ಣ ದೇಕಾ, ಶ್ರೀ ಹೈದರ್ ಹುಸೇನ್, ಶ್ರೀ ಅಪುರ್ಬಾ ಶರ್ಮಾ, ಶ್ರೀ ಕುಲೇಂದು ಪಾಠಕ್, ಡಾ ತಪೋಧೀರ್ ಭಟ್ಟಾಚಾರ್ಯ, ಡಾ ದಿನೇಶ್ ಚಿ. ಗೋಸ್ವಾಮಿ, ಶ್ರೀ ಅಜಿತ್ ಕುಮಾರ್ ಭೂಯಾನ್, ಡಾ ತೌಫಿಕ್ ರೆಹಮಾನ್ ಬೊರ್ಬೊರಾ,ಡಾ ಅಪುರ್ಬಾ ಕುಮಾರ್ ಬರುವಾ, ಡಾ ಮನೋರಮಾ ಶರ್ಮಾ, ಡಾ ದುಲಾಲ್ ಚ. ಗೋಸ್ವಾಮಿ, ಡಾ ಅನುರಾಧಾ ದತ್ತಾ, ಡಾ ಪರಮಾನಂದ ಮಹಾಂತ, ಡಾ ಅಬು ನಾಸರ್ ಸಯೀದ್ ಅಹ್ಮದ್, ಡಾ ಸಂಧ್ಯಾ ಗೋಸ್ವಾಮಿ, ಶ್ರೀ ಪ್ರಭಾತ್ ಬೋರಾ, ಶ್ರೀ ಲೋಕನಾಥ ಗೋಸ್ವಾಮಿ, ಶ್ರೀ ಉದಯಾದಿತ್ಯ ಭಾರಾಲಿ, ಶ್ರೀ ನಿತ್ಯಾ ಬೋರಾ,  ಶಾಂತಿಕಾಂ ಹಜಾರಿಕಾ, ಶ್ರೀ ಎಚ್.ಆರ್.ಎ. ಚೌಧರಿ, ಬಾದಲ್ ಚಕ್ರಬೋರಿ,  ಲಕ್ಷ್ಮೀನಾಥ ತಾಮುಳಿ, ಧೀರೇಂದ್ರ ನಾಥ್ ಸೈಕಿಯಾ, ಪ್ರದೀಪ ಆಚಾರ್ಯ, ಅಬ್ಸರ್ ಹಜಾರಿಕಾ, ಡಾ ಪದ್ಮಪಾಣಿ, ಪೂರ್ಣೇಶ್ವರನಾಥ, ಡಾ ಕಲ್ಯಾಣಿ ಬರುವಾ, ಉದ್ಧಬ್ ಕಾಕತಿ, ಡಾ ಜಿಬಾನ್ ಚಿ. ದತ್ತಬರುವಾ, ಅರುಪ್ ಬೊರ್ಬೊರಾ, ಕಮಲ್ ನಾರಾಯಣ ಚೌಧರಿ, ಅಜಿತ ಚಂದ್ರ ತಾಲೂಕದಾರ, ದೇಬೆನ್ ತಮುಳಿ, ಜ್ಞಾನ ಪೂಜಾರಿ, ಸತಾಂಜೀಬ್ ದಾಸ್, ರಾಜೇನ್ ಕಲಿತಾ, ಜ್ಞಾನನ್ ಬೊರ್ಕಕಟಿ, ದ್ವೀಪೇನ್ ಕಾಕತಿ, ಮುನಿನ್ ಬಯಾನ್, ಹೇಮಂತ ಬರ್ಮನ್, ಹೇಮಂತ ದಾಸ್, ಡಾ ನವನೀಲ್ ಬರುವಾ, ಮೃಣಾಲ್ ಕುಮಾರ್ ಬರ್ಮನ್, ಅಲಿ ಹೈದರ್ ಲಸ್ಕರ್, ವಾರಿಸ್ ಚೌಧರಿ, ಅಬ್ದುರ್ ರೆಹಮಾನ್ ಶೇಖ್, ಡಾ ಕಾಳಿಪ್ರಸಾದ್ ಶರ್ಮಾ, ಡಾ ಮೋಹನ್ ಚಿ. ಕಲಿತಾ, ಡಾ.ಸೋನಕುಮಾರ ತಾಲೂಕದಾರ್, ಡಾ ಇಂದ್ರಾಣಿ ದತ್ತಾ,  ರಬಿನ್ ದತ್ತಾ, ದೀಪಕ್ ಗೋಸ್ವಾಮಿ, ಘನಶ್ಯಾಮನಾಥ ಅವರು ಸಹಿಯನ್ನು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ: ಸಾರ್ವಜನಿಕ ಸಭೆಗಳಿಗೆ ಅನುಮತಿ ನೀಡದ ದೀದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...