Homeಮುಖಪುಟಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ...

ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

- Advertisement -
- Advertisement -

ಅಸ್ಸಾಂನಲ್ಲಿ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆಯ ವೇಳೆ ಅಸ್ಸಾಂನ ಬಿಜೆಪಿ ಸರಕಾರ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಜಟಾಪಟಿ ನಡೆದಿತ್ತು. ರಾಹುಲ್‌ ಗಾಂಧಿಯವರ ಮೇಲೆ ದಾಳಿಗೆ ಯತ್ನಿಸಲಾಗಿದೆ ಎಂಬ ಆರೋಪವು ಕೇಳಿ ಬಂದಿತ್ತು. ಇದೀಗ ಅಸ್ಸಾಂ ಸರಕಾರದ ನಡೆಯನ್ನು ಖಂಡಿಸಿ ರಾಜ್ಯದ 100 ಮಂದಿ ಹೆಸರಾಂತ ಬುದ್ದಿಜೀವಿಗಳು, ಚಿಂತಕರು ಪತ್ರವನ್ನು ಬರೆದಿದ್ದಾರೆ.

ಪತ್ರದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ನಡವಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಉಲ್ಲೇಖಿಸಲಾಗಿದೆ.

ನ್ಯಾಯ್ ಯಾತ್ರೆಯು ಅಸ್ಸಾಂನಲ್ಲಿ ತನ್ನ ಎಂಟು ದಿನಗಳ ಯಾತ್ರೆಯನ್ನು ಪೂರ್ಣಗೊಳಿಸಿ ಬಂಗಾಳವನ್ನು ಪ್ರವೇಶಿಸಿತ್ತು. ಅಸ್ಸಾಂನಲ್ಲಿ ಯಾತ್ರೆಯ ವೇಳೆ ಪದೇ ಪದೇ ಅಡೆತಡೆಗಳನ್ನು ಎದುರಿಸಿತ್ತು. ನ್ಯಾಯ ಯಾತ್ರೆಯ ವಾಹನವನ್ನು ಸುತ್ತುವರಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ಕಾರಿನ ಮೇಲೆ ದಾಳಿಯನ್ನು ಕೂಡ ನಡೆಸಿದ್ದರು. ಅಸ್ಸಾಂನ 15ನೇ ಶತಮಾನದ ಸಂತ ಶ‍್ರೀಮಂತ ಶಂಕರದೇವರ ಜನ್ಮಸ್ಥಳವಾದ ಬತದ್ರವ ಸತ್ರ ದೇವಾಲಯಕ್ಕೆ ಭೇಟಿ ನೀಡದಂತೆ ರಾಹುಲ್‌ ಗಾಂಧಿಯನ್ನು ತಡೆಯಲಾಗಿತ್ತು. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸದಂತೆ ರಾಹುಲ್‌ ಗಾಂಧಿಗೆ ತಡೆಯಲಾಗಿತ್ತು.

ಅಸ್ಸಾಂ ಕಾಂಗ್ರೆಸ್‌ ಘಟಕದ ರಾಜ್ಯಾಧ್ಯಕ್ಷ ಭೂಪೇನ್ ಬೋರಾಹ್ ಸೇರಿದಂತೆ ಕಾಂಗ್ರೆಸ್ ನಾಯಕರ ಜೊತೆ ಅಸ್ಸಾಂ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ಬಿಜೆಪಿಗರು ಹಲ್ಲೆ ನಡೆಸಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಆರೋಪಿಸಿದ್ದರು. ಇದಲ್ಲದೆ ರಾಹುಲ್‌ ಗಾಂಧಿ, ಕೆಸಿ ವೇಣುಗೋಪಾಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ  ವಿರುದ್ಧ ಹಿಂಸಾಚಾರ, ಪೊಲೀಸರ ಕರ್ತವ್ಯಕ್ಕೆ ಟಡ್ಡಿ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಪತ್ರದಲ್ಲೇನಿದೆ?

ಪ್ರಕ್ಷುಬ್ಧ ಮಣಿಪುರದಿಂದ ಶಾಂತಿಯುತವಾಗಿ ಯಾತ್ರೆ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಶಾಂತಿಯುತವಾಗಿ ಯಾತ್ರೆ ಸಾಗಿದೆ. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆಯ ಮೇಲೆ ಪದೇ ಪದೇ ದಾಳಿ ನಡೆಸಲಾಗಿದೆ. ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ವರ್ತನೆಯನ್ನು ನಾವು ಖಂಡಿಸುತ್ತೇವೆ. ಕೆಲವರು ಯಾತ್ರೆಯನ್ನು ಬೆಂಬಲಿಸಬಹುದು ಮತ್ತು ಕೆಲವರು ಬೆಂಬಲಿಸದಿರಬಹುದು. ಆದರೆ ಈ ಶಾಂತಿಯುತ ಯಾತ್ರೆಯನ್ನು ಯಾರೂ ತಡೆಯಲು ಪ್ರಯತ್ನಿಸಬಾರದು. ಯಾತ್ರೆಯು ಅಸ್ಸಾಂಗೆ ಪ್ರವೇಶಿಸಿದಾಗ ಅಸ್ಸಾಂ ಸರ್ಕಾರ ಅದಕ್ಕೆ ಅಡೆತಡೆಗಳನ್ನು ಸೃಷ್ಟಿಸಲು ಎಲ್ಲವನ್ನೂ ಪ್ರಯತ್ನಿಸಿತು. ಕೆಲವೆಡೆ ಕಿಡಿಗೇಡಿಗಳ ದಾಳಿಯೂ ನಡೆದಿದೆ. ಯಾತ್ರೆಯ ಜೊತೆಗಿದ್ದ ಪತ್ರಕರ್ತರ ವಾಹನಗಳನ್ನು ಧ್ವಂಸಗೊಳಿಸಿ ಅವರ ಕ್ಯಾಮರಾಗಳನ್ನು ಕಸಿದುಕೊಂಡಿದ್ದಾರೆ. ಸೋನಿತ್‌ಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಮೇಲೆ ದೈಹಿಕ ಹಲ್ಲೆ ನಡೆದಿದೆ. ಇಷ್ಟೆಲ್ಲ ನಡೆಯುತ್ತಿದ್ದರೂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪ್ರಕ್ಷುಬ್ಧ ಮಣಿಪುರದಿಂದ ಯಾತ್ರೆ ಶಾಂತಿಯುತವಾಗಿ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಯಾವುದೇ ಅಡ್ಡಿಯಿಲ್ಲದೆ ಶಾಂತಿಯುತವಾಗಿ ಸಾಗಿತು. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆ ಮೇಲೆ ಪದೇ ಪದೇ ದಾಳಿ ನಡೆದಿದೆ. ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ ಮತ್ತು ಅದರಲ್ಲಿ ತೊಡಗಿರುವವರನ್ನು ಬಂಧಿಸಿ ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಾವು ರಾಹುಲ್ ಗಾಂಧಿ ಮತ್ತು ಯಾತ್ರೆಯಲ್ಲಿ ಭಾಗವಹಿಸುವ ಎಲ್ಲರಿಗೂ ಶಾಂತವಾಗಿ ಯಾತ್ರೆಯಲ್ಲಿ ಸಾಗಲು ಮತ್ತು ಅಂತಹ ಪ್ರಚೋದನೆಗಳಿಗೆ ಎಂದಿಗೂ ಒಳಗಾಗದಂತೆ ಮನವಿ ಮಾಡುತ್ತೇವೆ. ಕೆಲವು ದಿನಗಳ ಹಿಂದೆ,  ಪ್ರಖ್ಯಾತ ವಿದ್ವಾಂಸ ಡಾ.ಹಿರೇನ್ ಗೊಹೈನ್ ಅವರ ವಿರುದ್ಧ ಅಸ್ಸಾಂನ ಮುಖ್ಯಮಂತ್ರಿ ಶರ್ಮಾ ಅವರು ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡುವ ಮೂಲಕ ಬುದ್ಧಿಜೀವಿಗಳನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಗೌಹಾಟಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ ಅಖಿಲ್ ರಂಜನ್ ದತ್ತಾ ವಿರುದ್ಧ ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಮುಖ್ಯಮಂತ್ರಿಗಳ ಭಾಷೆ ಮತ್ತು ನಡವಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಒಬ್ಬ ವ್ಯಕ್ತಿಗೆ ವಾಕ್ ಸ್ವಾತಂತ್ರ್ಯ ಬಹುಮುಖ್ಯ. ಇದು ಪ್ರಜಾಪ್ರಭುತ್ವದ ಸಾರ್ವತ್ರಿಕ ಹಕ್ಕು ಮತ್ತು ಮೂಲಭೂತ ಹಕ್ಕು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಯವರ ವರ್ತನೆಯಿಂದ ನಮಗೆ ಬೇಸರವಾಗಿದೆ ಮತ್ತು ನಾವು ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿಲಾಗಿದೆ.

ಪತ್ರದಲ್ಲಿ ಸಾಮಾಜಿಕ, ರಾಜಕೀಯ, ಸಾಹಿತ್ಯ ರಂಗದ ದಿಗ್ಗಜರು ಸಹಿಯನ್ನು ಹಾಕಿದ್ದಾರೆ. ಡಾ ನಾಗೇನ್ ಸೈಕಿಯಾ, ಶ್ರೀ ಕುಲದ ಕೃ ಭಟ್ಟಾಚಾರ್ಯ, ಶ್ರೀ ಹರೇಕೃಷ್ಣ ದೇಕಾ, ಶ್ರೀ ಹೈದರ್ ಹುಸೇನ್, ಶ್ರೀ ಅಪುರ್ಬಾ ಶರ್ಮಾ, ಶ್ರೀ ಕುಲೇಂದು ಪಾಠಕ್, ಡಾ ತಪೋಧೀರ್ ಭಟ್ಟಾಚಾರ್ಯ, ಡಾ ದಿನೇಶ್ ಚಿ. ಗೋಸ್ವಾಮಿ, ಶ್ರೀ ಅಜಿತ್ ಕುಮಾರ್ ಭೂಯಾನ್, ಡಾ ತೌಫಿಕ್ ರೆಹಮಾನ್ ಬೊರ್ಬೊರಾ,ಡಾ ಅಪುರ್ಬಾ ಕುಮಾರ್ ಬರುವಾ, ಡಾ ಮನೋರಮಾ ಶರ್ಮಾ, ಡಾ ದುಲಾಲ್ ಚ. ಗೋಸ್ವಾಮಿ, ಡಾ ಅನುರಾಧಾ ದತ್ತಾ, ಡಾ ಪರಮಾನಂದ ಮಹಾಂತ, ಡಾ ಅಬು ನಾಸರ್ ಸಯೀದ್ ಅಹ್ಮದ್, ಡಾ ಸಂಧ್ಯಾ ಗೋಸ್ವಾಮಿ, ಶ್ರೀ ಪ್ರಭಾತ್ ಬೋರಾ, ಶ್ರೀ ಲೋಕನಾಥ ಗೋಸ್ವಾಮಿ, ಶ್ರೀ ಉದಯಾದಿತ್ಯ ಭಾರಾಲಿ, ಶ್ರೀ ನಿತ್ಯಾ ಬೋರಾ,  ಶಾಂತಿಕಾಂ ಹಜಾರಿಕಾ, ಶ್ರೀ ಎಚ್.ಆರ್.ಎ. ಚೌಧರಿ, ಬಾದಲ್ ಚಕ್ರಬೋರಿ,  ಲಕ್ಷ್ಮೀನಾಥ ತಾಮುಳಿ, ಧೀರೇಂದ್ರ ನಾಥ್ ಸೈಕಿಯಾ, ಪ್ರದೀಪ ಆಚಾರ್ಯ, ಅಬ್ಸರ್ ಹಜಾರಿಕಾ, ಡಾ ಪದ್ಮಪಾಣಿ, ಪೂರ್ಣೇಶ್ವರನಾಥ, ಡಾ ಕಲ್ಯಾಣಿ ಬರುವಾ, ಉದ್ಧಬ್ ಕಾಕತಿ, ಡಾ ಜಿಬಾನ್ ಚಿ. ದತ್ತಬರುವಾ, ಅರುಪ್ ಬೊರ್ಬೊರಾ, ಕಮಲ್ ನಾರಾಯಣ ಚೌಧರಿ, ಅಜಿತ ಚಂದ್ರ ತಾಲೂಕದಾರ, ದೇಬೆನ್ ತಮುಳಿ, ಜ್ಞಾನ ಪೂಜಾರಿ, ಸತಾಂಜೀಬ್ ದಾಸ್, ರಾಜೇನ್ ಕಲಿತಾ, ಜ್ಞಾನನ್ ಬೊರ್ಕಕಟಿ, ದ್ವೀಪೇನ್ ಕಾಕತಿ, ಮುನಿನ್ ಬಯಾನ್, ಹೇಮಂತ ಬರ್ಮನ್, ಹೇಮಂತ ದಾಸ್, ಡಾ ನವನೀಲ್ ಬರುವಾ, ಮೃಣಾಲ್ ಕುಮಾರ್ ಬರ್ಮನ್, ಅಲಿ ಹೈದರ್ ಲಸ್ಕರ್, ವಾರಿಸ್ ಚೌಧರಿ, ಅಬ್ದುರ್ ರೆಹಮಾನ್ ಶೇಖ್, ಡಾ ಕಾಳಿಪ್ರಸಾದ್ ಶರ್ಮಾ, ಡಾ ಮೋಹನ್ ಚಿ. ಕಲಿತಾ, ಡಾ.ಸೋನಕುಮಾರ ತಾಲೂಕದಾರ್, ಡಾ ಇಂದ್ರಾಣಿ ದತ್ತಾ,  ರಬಿನ್ ದತ್ತಾ, ದೀಪಕ್ ಗೋಸ್ವಾಮಿ, ಘನಶ್ಯಾಮನಾಥ ಅವರು ಸಹಿಯನ್ನು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ: ಸಾರ್ವಜನಿಕ ಸಭೆಗಳಿಗೆ ಅನುಮತಿ ನೀಡದ ದೀದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...