Homeಮುಖಪುಟಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ...

ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

- Advertisement -
- Advertisement -

ಅಸ್ಸಾಂನಲ್ಲಿ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆಯ ವೇಳೆ ಅಸ್ಸಾಂನ ಬಿಜೆಪಿ ಸರಕಾರ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಜಟಾಪಟಿ ನಡೆದಿತ್ತು. ರಾಹುಲ್‌ ಗಾಂಧಿಯವರ ಮೇಲೆ ದಾಳಿಗೆ ಯತ್ನಿಸಲಾಗಿದೆ ಎಂಬ ಆರೋಪವು ಕೇಳಿ ಬಂದಿತ್ತು. ಇದೀಗ ಅಸ್ಸಾಂ ಸರಕಾರದ ನಡೆಯನ್ನು ಖಂಡಿಸಿ ರಾಜ್ಯದ 100 ಮಂದಿ ಹೆಸರಾಂತ ಬುದ್ದಿಜೀವಿಗಳು, ಚಿಂತಕರು ಪತ್ರವನ್ನು ಬರೆದಿದ್ದಾರೆ.

ಪತ್ರದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ನಡವಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಉಲ್ಲೇಖಿಸಲಾಗಿದೆ.

ನ್ಯಾಯ್ ಯಾತ್ರೆಯು ಅಸ್ಸಾಂನಲ್ಲಿ ತನ್ನ ಎಂಟು ದಿನಗಳ ಯಾತ್ರೆಯನ್ನು ಪೂರ್ಣಗೊಳಿಸಿ ಬಂಗಾಳವನ್ನು ಪ್ರವೇಶಿಸಿತ್ತು. ಅಸ್ಸಾಂನಲ್ಲಿ ಯಾತ್ರೆಯ ವೇಳೆ ಪದೇ ಪದೇ ಅಡೆತಡೆಗಳನ್ನು ಎದುರಿಸಿತ್ತು. ನ್ಯಾಯ ಯಾತ್ರೆಯ ವಾಹನವನ್ನು ಸುತ್ತುವರಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ಕಾರಿನ ಮೇಲೆ ದಾಳಿಯನ್ನು ಕೂಡ ನಡೆಸಿದ್ದರು. ಅಸ್ಸಾಂನ 15ನೇ ಶತಮಾನದ ಸಂತ ಶ‍್ರೀಮಂತ ಶಂಕರದೇವರ ಜನ್ಮಸ್ಥಳವಾದ ಬತದ್ರವ ಸತ್ರ ದೇವಾಲಯಕ್ಕೆ ಭೇಟಿ ನೀಡದಂತೆ ರಾಹುಲ್‌ ಗಾಂಧಿಯನ್ನು ತಡೆಯಲಾಗಿತ್ತು. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸದಂತೆ ರಾಹುಲ್‌ ಗಾಂಧಿಗೆ ತಡೆಯಲಾಗಿತ್ತು.

ಅಸ್ಸಾಂ ಕಾಂಗ್ರೆಸ್‌ ಘಟಕದ ರಾಜ್ಯಾಧ್ಯಕ್ಷ ಭೂಪೇನ್ ಬೋರಾಹ್ ಸೇರಿದಂತೆ ಕಾಂಗ್ರೆಸ್ ನಾಯಕರ ಜೊತೆ ಅಸ್ಸಾಂ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ಬಿಜೆಪಿಗರು ಹಲ್ಲೆ ನಡೆಸಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಆರೋಪಿಸಿದ್ದರು. ಇದಲ್ಲದೆ ರಾಹುಲ್‌ ಗಾಂಧಿ, ಕೆಸಿ ವೇಣುಗೋಪಾಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ  ವಿರುದ್ಧ ಹಿಂಸಾಚಾರ, ಪೊಲೀಸರ ಕರ್ತವ್ಯಕ್ಕೆ ಟಡ್ಡಿ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಪತ್ರದಲ್ಲೇನಿದೆ?

ಪ್ರಕ್ಷುಬ್ಧ ಮಣಿಪುರದಿಂದ ಶಾಂತಿಯುತವಾಗಿ ಯಾತ್ರೆ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಶಾಂತಿಯುತವಾಗಿ ಯಾತ್ರೆ ಸಾಗಿದೆ. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆಯ ಮೇಲೆ ಪದೇ ಪದೇ ದಾಳಿ ನಡೆಸಲಾಗಿದೆ. ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ವರ್ತನೆಯನ್ನು ನಾವು ಖಂಡಿಸುತ್ತೇವೆ. ಕೆಲವರು ಯಾತ್ರೆಯನ್ನು ಬೆಂಬಲಿಸಬಹುದು ಮತ್ತು ಕೆಲವರು ಬೆಂಬಲಿಸದಿರಬಹುದು. ಆದರೆ ಈ ಶಾಂತಿಯುತ ಯಾತ್ರೆಯನ್ನು ಯಾರೂ ತಡೆಯಲು ಪ್ರಯತ್ನಿಸಬಾರದು. ಯಾತ್ರೆಯು ಅಸ್ಸಾಂಗೆ ಪ್ರವೇಶಿಸಿದಾಗ ಅಸ್ಸಾಂ ಸರ್ಕಾರ ಅದಕ್ಕೆ ಅಡೆತಡೆಗಳನ್ನು ಸೃಷ್ಟಿಸಲು ಎಲ್ಲವನ್ನೂ ಪ್ರಯತ್ನಿಸಿತು. ಕೆಲವೆಡೆ ಕಿಡಿಗೇಡಿಗಳ ದಾಳಿಯೂ ನಡೆದಿದೆ. ಯಾತ್ರೆಯ ಜೊತೆಗಿದ್ದ ಪತ್ರಕರ್ತರ ವಾಹನಗಳನ್ನು ಧ್ವಂಸಗೊಳಿಸಿ ಅವರ ಕ್ಯಾಮರಾಗಳನ್ನು ಕಸಿದುಕೊಂಡಿದ್ದಾರೆ. ಸೋನಿತ್‌ಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಮೇಲೆ ದೈಹಿಕ ಹಲ್ಲೆ ನಡೆದಿದೆ. ಇಷ್ಟೆಲ್ಲ ನಡೆಯುತ್ತಿದ್ದರೂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪ್ರಕ್ಷುಬ್ಧ ಮಣಿಪುರದಿಂದ ಯಾತ್ರೆ ಶಾಂತಿಯುತವಾಗಿ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಯಾವುದೇ ಅಡ್ಡಿಯಿಲ್ಲದೆ ಶಾಂತಿಯುತವಾಗಿ ಸಾಗಿತು. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆ ಮೇಲೆ ಪದೇ ಪದೇ ದಾಳಿ ನಡೆದಿದೆ. ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ ಮತ್ತು ಅದರಲ್ಲಿ ತೊಡಗಿರುವವರನ್ನು ಬಂಧಿಸಿ ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಾವು ರಾಹುಲ್ ಗಾಂಧಿ ಮತ್ತು ಯಾತ್ರೆಯಲ್ಲಿ ಭಾಗವಹಿಸುವ ಎಲ್ಲರಿಗೂ ಶಾಂತವಾಗಿ ಯಾತ್ರೆಯಲ್ಲಿ ಸಾಗಲು ಮತ್ತು ಅಂತಹ ಪ್ರಚೋದನೆಗಳಿಗೆ ಎಂದಿಗೂ ಒಳಗಾಗದಂತೆ ಮನವಿ ಮಾಡುತ್ತೇವೆ. ಕೆಲವು ದಿನಗಳ ಹಿಂದೆ,  ಪ್ರಖ್ಯಾತ ವಿದ್ವಾಂಸ ಡಾ.ಹಿರೇನ್ ಗೊಹೈನ್ ಅವರ ವಿರುದ್ಧ ಅಸ್ಸಾಂನ ಮುಖ್ಯಮಂತ್ರಿ ಶರ್ಮಾ ಅವರು ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡುವ ಮೂಲಕ ಬುದ್ಧಿಜೀವಿಗಳನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಗೌಹಾಟಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ ಅಖಿಲ್ ರಂಜನ್ ದತ್ತಾ ವಿರುದ್ಧ ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಮುಖ್ಯಮಂತ್ರಿಗಳ ಭಾಷೆ ಮತ್ತು ನಡವಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಒಬ್ಬ ವ್ಯಕ್ತಿಗೆ ವಾಕ್ ಸ್ವಾತಂತ್ರ್ಯ ಬಹುಮುಖ್ಯ. ಇದು ಪ್ರಜಾಪ್ರಭುತ್ವದ ಸಾರ್ವತ್ರಿಕ ಹಕ್ಕು ಮತ್ತು ಮೂಲಭೂತ ಹಕ್ಕು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಯವರ ವರ್ತನೆಯಿಂದ ನಮಗೆ ಬೇಸರವಾಗಿದೆ ಮತ್ತು ನಾವು ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿಲಾಗಿದೆ.

ಪತ್ರದಲ್ಲಿ ಸಾಮಾಜಿಕ, ರಾಜಕೀಯ, ಸಾಹಿತ್ಯ ರಂಗದ ದಿಗ್ಗಜರು ಸಹಿಯನ್ನು ಹಾಕಿದ್ದಾರೆ. ಡಾ ನಾಗೇನ್ ಸೈಕಿಯಾ, ಶ್ರೀ ಕುಲದ ಕೃ ಭಟ್ಟಾಚಾರ್ಯ, ಶ್ರೀ ಹರೇಕೃಷ್ಣ ದೇಕಾ, ಶ್ರೀ ಹೈದರ್ ಹುಸೇನ್, ಶ್ರೀ ಅಪುರ್ಬಾ ಶರ್ಮಾ, ಶ್ರೀ ಕುಲೇಂದು ಪಾಠಕ್, ಡಾ ತಪೋಧೀರ್ ಭಟ್ಟಾಚಾರ್ಯ, ಡಾ ದಿನೇಶ್ ಚಿ. ಗೋಸ್ವಾಮಿ, ಶ್ರೀ ಅಜಿತ್ ಕುಮಾರ್ ಭೂಯಾನ್, ಡಾ ತೌಫಿಕ್ ರೆಹಮಾನ್ ಬೊರ್ಬೊರಾ,ಡಾ ಅಪುರ್ಬಾ ಕುಮಾರ್ ಬರುವಾ, ಡಾ ಮನೋರಮಾ ಶರ್ಮಾ, ಡಾ ದುಲಾಲ್ ಚ. ಗೋಸ್ವಾಮಿ, ಡಾ ಅನುರಾಧಾ ದತ್ತಾ, ಡಾ ಪರಮಾನಂದ ಮಹಾಂತ, ಡಾ ಅಬು ನಾಸರ್ ಸಯೀದ್ ಅಹ್ಮದ್, ಡಾ ಸಂಧ್ಯಾ ಗೋಸ್ವಾಮಿ, ಶ್ರೀ ಪ್ರಭಾತ್ ಬೋರಾ, ಶ್ರೀ ಲೋಕನಾಥ ಗೋಸ್ವಾಮಿ, ಶ್ರೀ ಉದಯಾದಿತ್ಯ ಭಾರಾಲಿ, ಶ್ರೀ ನಿತ್ಯಾ ಬೋರಾ,  ಶಾಂತಿಕಾಂ ಹಜಾರಿಕಾ, ಶ್ರೀ ಎಚ್.ಆರ್.ಎ. ಚೌಧರಿ, ಬಾದಲ್ ಚಕ್ರಬೋರಿ,  ಲಕ್ಷ್ಮೀನಾಥ ತಾಮುಳಿ, ಧೀರೇಂದ್ರ ನಾಥ್ ಸೈಕಿಯಾ, ಪ್ರದೀಪ ಆಚಾರ್ಯ, ಅಬ್ಸರ್ ಹಜಾರಿಕಾ, ಡಾ ಪದ್ಮಪಾಣಿ, ಪೂರ್ಣೇಶ್ವರನಾಥ, ಡಾ ಕಲ್ಯಾಣಿ ಬರುವಾ, ಉದ್ಧಬ್ ಕಾಕತಿ, ಡಾ ಜಿಬಾನ್ ಚಿ. ದತ್ತಬರುವಾ, ಅರುಪ್ ಬೊರ್ಬೊರಾ, ಕಮಲ್ ನಾರಾಯಣ ಚೌಧರಿ, ಅಜಿತ ಚಂದ್ರ ತಾಲೂಕದಾರ, ದೇಬೆನ್ ತಮುಳಿ, ಜ್ಞಾನ ಪೂಜಾರಿ, ಸತಾಂಜೀಬ್ ದಾಸ್, ರಾಜೇನ್ ಕಲಿತಾ, ಜ್ಞಾನನ್ ಬೊರ್ಕಕಟಿ, ದ್ವೀಪೇನ್ ಕಾಕತಿ, ಮುನಿನ್ ಬಯಾನ್, ಹೇಮಂತ ಬರ್ಮನ್, ಹೇಮಂತ ದಾಸ್, ಡಾ ನವನೀಲ್ ಬರುವಾ, ಮೃಣಾಲ್ ಕುಮಾರ್ ಬರ್ಮನ್, ಅಲಿ ಹೈದರ್ ಲಸ್ಕರ್, ವಾರಿಸ್ ಚೌಧರಿ, ಅಬ್ದುರ್ ರೆಹಮಾನ್ ಶೇಖ್, ಡಾ ಕಾಳಿಪ್ರಸಾದ್ ಶರ್ಮಾ, ಡಾ ಮೋಹನ್ ಚಿ. ಕಲಿತಾ, ಡಾ.ಸೋನಕುಮಾರ ತಾಲೂಕದಾರ್, ಡಾ ಇಂದ್ರಾಣಿ ದತ್ತಾ,  ರಬಿನ್ ದತ್ತಾ, ದೀಪಕ್ ಗೋಸ್ವಾಮಿ, ಘನಶ್ಯಾಮನಾಥ ಅವರು ಸಹಿಯನ್ನು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ: ಸಾರ್ವಜನಿಕ ಸಭೆಗಳಿಗೆ ಅನುಮತಿ ನೀಡದ ದೀದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...