Homeಚಳವಳಿರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ ರೈತರ ಸಂಖ್ಯೆ ಹೆಚ್ಚಿರುವ ಕಾರಣ ಆಯಾ ರಾಜ್ಯಗಳ ಜನರು ಇನ್ನು ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಈಗ ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೆ ಏರಿರುವ ಹೊತ್ತಲ್ಲಿ, ಪ್ರತಿಭಟನೆಗೆ ಸಾಥ್ ನೀಡಲು ತೆರಳುವವರಿಗೆ 100 ಲೀಟರ್‌ ಪೆಟ್ರೋಲ್ ಉಚಿತವಾಗಿ ನೀಡಲು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧರಿಸಿ ರೈತರನ್ನು ಬೆಂಬಲಿಸಿದೆ.

ದೆಹಲಿಯ ಸಿಂಘು ಗಡಿಯಲ್ಲಿರುವ ಜಿಟಿ ರಸ್ತೆಯಲ್ಲಿ ಸುಮಾರು 15 ರಿಂದ 20 ಪೆಟ್ರೋಲ್ ಬಂಕ್‌ಗಳಿದ್ದು, ಇವು ರೈತರ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತಪಡಿಸಿವೆ. ರೈತರ ಪ್ರತಿಭಟನೆ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧಾರದ ಕುರಿತು ಮಾತಾಡಿರುವ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಇದು ರೈತರ ಪ್ರತಿಭಟನೆ ಅಲ್ಲ, ದೇಶದ ಜನರ ಪ್ರತಿಭಟನೆ ಎಂದಿದ್ದಾರೆ.

“ಹರಿಯಾಣ ಪೆಟ್ರೋಲಿಯಂ ಪಂಪ್ ಅಸೋಷಿಯೇಷನ್ ರೈತರ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಲಿದೆ. , ಜಿಟಿ ರಸ್ತೆಯಲ್ಲಿ ಇರುವ ಎಲ್ಲಾ 20ಕ್ಕೂ ಹೆಚ್ಚು ಬಂಕ್‌ಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡಿವೆ. ನಮಗೆ ಎಷ್ಟು ಸಾಧ್ಯವೋ ಅಷ್ಟು ಪ್ರತಿಭಟನಾನಿರತ ರೈತರಿಗೆ ಸಹಾಯ ಮಾಡುತ್ತವೆ. ಬಂಕ್‌ಗಳಲ್ಲಿ ಇರುವ ವಿದ್ಯುತ್, ನೀರು, ಸ್ಥಳ, ನಿದ್ರಿಸಲು ಜಾಗ ಎಲ್ಲ ಮೂಲಭೂತ ಸೌಕರ್ಯಗಳ ಬಳಕೆ ರೈತರಿಗಾಗಿ ಇದೆ. ಜೊತೆಗೆ, ರೈತರಿಗೆ ಬೆಂಬಲ ನೀಡಲು ಪ್ರತಿಭಟನಾ ಸ್ಥಳಕ್ಕೆ ಹೋಗುವವರಿಗೆ ಉಳಿಯಲು ಸ್ಥಳ ನೀಡಲಾಗಿದೆ. ಅವರಿಗೆ ಬೇಕಾದ ಎಲ್ಲಾ ಸೌಲಭ್ಯವನ್ನು ವ್ಯವಸ್ಥೆ ಮಾಡಲಾಗಿದೆ” ಎಂದರು.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

’ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುವವರಿಗೆ ಇಲ್ಲಿನ ಪೆಟ್ರೋಲ್ ಬಂಕ್‌ಗಳಲ್ಲಿ 100 ಲೀಟರ್‌ ತೈಲ ಉಚಿತವಾಗಿ ನೀಡಲಾಗುತ್ತದೆ. ಅದು ಪೆಟ್ರೋಲ್, ಡಿಸೇಲ್ ಯಾವುದಾದರೂ ಆಗಿರಲಿ, ರೈತರಿಗೆ ಬೆಂಬಲ ನಿಡಲು ಹೊರಟವರಿಗೆ ಉಚಿತವಾಗಿ ಹಾಕಲಾಗುತ್ತದೆ. ಇಲ್ಲಿಯವರೆಗೆ ಎಷ್ಟು ಜನ ಪೆಟ್ರೋಲ್ ಹಾಕಿಸಿದ್ದಾರೆ ಎಂಬ ಫೀಡ್‌ಬ್ಯಾಕ್ ನಾವಿನ್ನು ತೆಗೆದುಕೊಂಡಿಲ್ಲ. ಪೆಟ್ರೋಲ್ ಬಂಕ್‌ಗಳು ಈ ರೀತಿ ರೈತರಿಗೆ ಬೆಂಬಲ ನೀಡಲು ನಿರ್ಧಾರ ಮಾಡಿವೆ’ ಎಂದರು.

ಮುಂದುವರೆದು, “ಈ ರೈತರ ಪ್ರತಿಭಟನೆ ದೇಶದ ಜನರ ಧ್ವನಿಯಾಗಿದೆ. ಈ ರೈತರ ಪ್ರತಿಭಟನೆ ಸೋತರೇ, ಅದು ದೇಶದ ಸೋಲು. ಏಕೆಂದರೆ, ಇದು ಅಂಬಾನಿ ಮತ್ತು ರೈತರ ನಡುವಿನ ಹೋರಾಟವಲ್ಲ, ಅಧಿಕಾರಶಾಹಿ ಮತ್ತು ಪ್ರಜಾಪ್ರಭುತ್ವದ ನಡುವಿನ ಹೋರಾಟ” ಎಂದು ಕಾಂಗ್ರೆಸ್ ಶಾಸಕರು ಆಗಿರುವ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.

“ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು. ಏಕೆಂದರೆ, ರೈತರನ್ನು ಮಾರಾಟ ಮಾಡುವುದು ಅಷ್ಟು ಸುಲಭದ ಮಾತಲ್ಲ ಎಂಬ ಸುಳಿವು ಮೋದಿಯವರಿಗೆ ಇರಲಿಲ್ಲ. ಬ್ರಿಟೀಷರೇ ರೈತರನ್ನು ಮಾರಾಟ ಮಾಡಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

’ದೇಶದಲ್ಲಿ ಈ ಬಿಜೆಪಿ, ಆರ್‌ಎಸ್‌ಎಸ್ ಜನರಲ್ಲಿ ಜಾತಿ ಧರ್ಮದ ಬಗೆಗೆ ದ್ವೇಷ ಹುಟ್ಟಿಹಾಕಿ ಸಮಾಜವನ್ನು ಹೊಡೆಯುವ ಕೆಲಸ ಮಾಡುತ್ತಿವೆ. ಇದರ ಬಗ್ಗೆ ಗೋಧಿ ಮೀಡಿಯಾ ಏನೂ ಮತಾಡುವುದಿಲ್ಲ. ಅದು ಮೋದಿಯವರ ಗುಲಾಮಿ ಮೀಡಿಯಾ ಆಗಿದೆ. ಅದು ಎಲ್ಲರನ್ನು ಗುಲಾಮರನ್ನಾಗಿಸಲು ಹೊರಟಿದೆ. ಆದರೆ ರೈತರು ಗುಲಾಮಗಿರಿಯನ್ನು ಮುರಿಯುವ ಸಲುವಾಗಿ ಹೋರಾಟಕ್ಕೆ ನಿಂತಿದ್ದಾರೆ” ಎಂದು ಮಾಧ್ಯಮಗಳ ಏಕಪಕ್ಷೀಯತೆಯನ್ನು ಟೀಕಿಸಿದ್ದಾರೆ.

’ಇದು ಜನಸಾಮಾನ್ಯರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಾಗಿದೆ. ಜನಸಾಮಾನ್ಯರು ಬೆಳೆ ಬೆಳೆಯುವುದಿಲ್ಲ. ಆದರೆ ಅದಾನಿ ಅಂಬಾನಿ ಅವರಿಂದ 20 ರೂಪಾಯಿಗೆ ದೊರೆಯುವ ಪದಾರ್ಥವನ್ನು 200 ರೂಪಾಯಿಗೆ ತೆಗೆದುಕೊಳ್ಳಬೇಕಾಗುತ್ತದೆ. ಇದನ್ನು ಜನಸಾಮಾನ್ಯರು ಮರೆಯಬಾರದು. ಇಂದು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಜನರ ಪ್ರತಿಭಟನೆಯಾಗಿದೆ. ಇದು ದೇಶದ ಪ್ರತಿಭಟನೆಯಾನ್ನಾಗಿಸಬೇಕು” ಎಂದು ಜನರನ್ನು ಪ್ರತಿಭಟನೆಗೆ ಒತ್ತಾಯಿಸಿದ್ದಾರೆ.

ಜೊತೆಗೆ, ’ಜನರು ದೇಶವನ್ನು ಪ್ರಜಾಪ್ರಭುತ್ವ, ಸಂವಿಧಾನಿಕವಾಗಿಯೇ ಇರಿಸಿಕೊಳ್ಳಬೇಕೋ ಅಥವಾ ಅಧಿಕಾರಶಾಯಿ ಆರ್‌ಎಸ್‌ಎಸ್‌, ಬಿಜೆಪಿಗೆ ಒಪ್ಪಿಸಬೇಕೋ ಎಂಬುದನ್ನು ಯೋಚಿಸಬೇಕು’ ಎಂದು ಕಾಂಗ್ರೆಸ್ ಶಾಸಕ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.


ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...