Homeಚಳವಳಿರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ ರೈತರ ಸಂಖ್ಯೆ ಹೆಚ್ಚಿರುವ ಕಾರಣ ಆಯಾ ರಾಜ್ಯಗಳ ಜನರು ಇನ್ನು ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಈಗ ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೆ ಏರಿರುವ ಹೊತ್ತಲ್ಲಿ, ಪ್ರತಿಭಟನೆಗೆ ಸಾಥ್ ನೀಡಲು ತೆರಳುವವರಿಗೆ 100 ಲೀಟರ್‌ ಪೆಟ್ರೋಲ್ ಉಚಿತವಾಗಿ ನೀಡಲು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧರಿಸಿ ರೈತರನ್ನು ಬೆಂಬಲಿಸಿದೆ.

ದೆಹಲಿಯ ಸಿಂಘು ಗಡಿಯಲ್ಲಿರುವ ಜಿಟಿ ರಸ್ತೆಯಲ್ಲಿ ಸುಮಾರು 15 ರಿಂದ 20 ಪೆಟ್ರೋಲ್ ಬಂಕ್‌ಗಳಿದ್ದು, ಇವು ರೈತರ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತಪಡಿಸಿವೆ. ರೈತರ ಪ್ರತಿಭಟನೆ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧಾರದ ಕುರಿತು ಮಾತಾಡಿರುವ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಇದು ರೈತರ ಪ್ರತಿಭಟನೆ ಅಲ್ಲ, ದೇಶದ ಜನರ ಪ್ರತಿಭಟನೆ ಎಂದಿದ್ದಾರೆ.

“ಹರಿಯಾಣ ಪೆಟ್ರೋಲಿಯಂ ಪಂಪ್ ಅಸೋಷಿಯೇಷನ್ ರೈತರ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಲಿದೆ. , ಜಿಟಿ ರಸ್ತೆಯಲ್ಲಿ ಇರುವ ಎಲ್ಲಾ 20ಕ್ಕೂ ಹೆಚ್ಚು ಬಂಕ್‌ಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡಿವೆ. ನಮಗೆ ಎಷ್ಟು ಸಾಧ್ಯವೋ ಅಷ್ಟು ಪ್ರತಿಭಟನಾನಿರತ ರೈತರಿಗೆ ಸಹಾಯ ಮಾಡುತ್ತವೆ. ಬಂಕ್‌ಗಳಲ್ಲಿ ಇರುವ ವಿದ್ಯುತ್, ನೀರು, ಸ್ಥಳ, ನಿದ್ರಿಸಲು ಜಾಗ ಎಲ್ಲ ಮೂಲಭೂತ ಸೌಕರ್ಯಗಳ ಬಳಕೆ ರೈತರಿಗಾಗಿ ಇದೆ. ಜೊತೆಗೆ, ರೈತರಿಗೆ ಬೆಂಬಲ ನೀಡಲು ಪ್ರತಿಭಟನಾ ಸ್ಥಳಕ್ಕೆ ಹೋಗುವವರಿಗೆ ಉಳಿಯಲು ಸ್ಥಳ ನೀಡಲಾಗಿದೆ. ಅವರಿಗೆ ಬೇಕಾದ ಎಲ್ಲಾ ಸೌಲಭ್ಯವನ್ನು ವ್ಯವಸ್ಥೆ ಮಾಡಲಾಗಿದೆ” ಎಂದರು.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

’ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುವವರಿಗೆ ಇಲ್ಲಿನ ಪೆಟ್ರೋಲ್ ಬಂಕ್‌ಗಳಲ್ಲಿ 100 ಲೀಟರ್‌ ತೈಲ ಉಚಿತವಾಗಿ ನೀಡಲಾಗುತ್ತದೆ. ಅದು ಪೆಟ್ರೋಲ್, ಡಿಸೇಲ್ ಯಾವುದಾದರೂ ಆಗಿರಲಿ, ರೈತರಿಗೆ ಬೆಂಬಲ ನಿಡಲು ಹೊರಟವರಿಗೆ ಉಚಿತವಾಗಿ ಹಾಕಲಾಗುತ್ತದೆ. ಇಲ್ಲಿಯವರೆಗೆ ಎಷ್ಟು ಜನ ಪೆಟ್ರೋಲ್ ಹಾಕಿಸಿದ್ದಾರೆ ಎಂಬ ಫೀಡ್‌ಬ್ಯಾಕ್ ನಾವಿನ್ನು ತೆಗೆದುಕೊಂಡಿಲ್ಲ. ಪೆಟ್ರೋಲ್ ಬಂಕ್‌ಗಳು ಈ ರೀತಿ ರೈತರಿಗೆ ಬೆಂಬಲ ನೀಡಲು ನಿರ್ಧಾರ ಮಾಡಿವೆ’ ಎಂದರು.

ಮುಂದುವರೆದು, “ಈ ರೈತರ ಪ್ರತಿಭಟನೆ ದೇಶದ ಜನರ ಧ್ವನಿಯಾಗಿದೆ. ಈ ರೈತರ ಪ್ರತಿಭಟನೆ ಸೋತರೇ, ಅದು ದೇಶದ ಸೋಲು. ಏಕೆಂದರೆ, ಇದು ಅಂಬಾನಿ ಮತ್ತು ರೈತರ ನಡುವಿನ ಹೋರಾಟವಲ್ಲ, ಅಧಿಕಾರಶಾಹಿ ಮತ್ತು ಪ್ರಜಾಪ್ರಭುತ್ವದ ನಡುವಿನ ಹೋರಾಟ” ಎಂದು ಕಾಂಗ್ರೆಸ್ ಶಾಸಕರು ಆಗಿರುವ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.

“ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು. ಏಕೆಂದರೆ, ರೈತರನ್ನು ಮಾರಾಟ ಮಾಡುವುದು ಅಷ್ಟು ಸುಲಭದ ಮಾತಲ್ಲ ಎಂಬ ಸುಳಿವು ಮೋದಿಯವರಿಗೆ ಇರಲಿಲ್ಲ. ಬ್ರಿಟೀಷರೇ ರೈತರನ್ನು ಮಾರಾಟ ಮಾಡಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

’ದೇಶದಲ್ಲಿ ಈ ಬಿಜೆಪಿ, ಆರ್‌ಎಸ್‌ಎಸ್ ಜನರಲ್ಲಿ ಜಾತಿ ಧರ್ಮದ ಬಗೆಗೆ ದ್ವೇಷ ಹುಟ್ಟಿಹಾಕಿ ಸಮಾಜವನ್ನು ಹೊಡೆಯುವ ಕೆಲಸ ಮಾಡುತ್ತಿವೆ. ಇದರ ಬಗ್ಗೆ ಗೋಧಿ ಮೀಡಿಯಾ ಏನೂ ಮತಾಡುವುದಿಲ್ಲ. ಅದು ಮೋದಿಯವರ ಗುಲಾಮಿ ಮೀಡಿಯಾ ಆಗಿದೆ. ಅದು ಎಲ್ಲರನ್ನು ಗುಲಾಮರನ್ನಾಗಿಸಲು ಹೊರಟಿದೆ. ಆದರೆ ರೈತರು ಗುಲಾಮಗಿರಿಯನ್ನು ಮುರಿಯುವ ಸಲುವಾಗಿ ಹೋರಾಟಕ್ಕೆ ನಿಂತಿದ್ದಾರೆ” ಎಂದು ಮಾಧ್ಯಮಗಳ ಏಕಪಕ್ಷೀಯತೆಯನ್ನು ಟೀಕಿಸಿದ್ದಾರೆ.

’ಇದು ಜನಸಾಮಾನ್ಯರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಾಗಿದೆ. ಜನಸಾಮಾನ್ಯರು ಬೆಳೆ ಬೆಳೆಯುವುದಿಲ್ಲ. ಆದರೆ ಅದಾನಿ ಅಂಬಾನಿ ಅವರಿಂದ 20 ರೂಪಾಯಿಗೆ ದೊರೆಯುವ ಪದಾರ್ಥವನ್ನು 200 ರೂಪಾಯಿಗೆ ತೆಗೆದುಕೊಳ್ಳಬೇಕಾಗುತ್ತದೆ. ಇದನ್ನು ಜನಸಾಮಾನ್ಯರು ಮರೆಯಬಾರದು. ಇಂದು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಜನರ ಪ್ರತಿಭಟನೆಯಾಗಿದೆ. ಇದು ದೇಶದ ಪ್ರತಿಭಟನೆಯಾನ್ನಾಗಿಸಬೇಕು” ಎಂದು ಜನರನ್ನು ಪ್ರತಿಭಟನೆಗೆ ಒತ್ತಾಯಿಸಿದ್ದಾರೆ.

ಜೊತೆಗೆ, ’ಜನರು ದೇಶವನ್ನು ಪ್ರಜಾಪ್ರಭುತ್ವ, ಸಂವಿಧಾನಿಕವಾಗಿಯೇ ಇರಿಸಿಕೊಳ್ಳಬೇಕೋ ಅಥವಾ ಅಧಿಕಾರಶಾಯಿ ಆರ್‌ಎಸ್‌ಎಸ್‌, ಬಿಜೆಪಿಗೆ ಒಪ್ಪಿಸಬೇಕೋ ಎಂಬುದನ್ನು ಯೋಚಿಸಬೇಕು’ ಎಂದು ಕಾಂಗ್ರೆಸ್ ಶಾಸಕ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.


ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...