Homeಚಳವಳಿರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ ರೈತರ ಸಂಖ್ಯೆ ಹೆಚ್ಚಿರುವ ಕಾರಣ ಆಯಾ ರಾಜ್ಯಗಳ ಜನರು ಇನ್ನು ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಈಗ ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೆ ಏರಿರುವ ಹೊತ್ತಲ್ಲಿ, ಪ್ರತಿಭಟನೆಗೆ ಸಾಥ್ ನೀಡಲು ತೆರಳುವವರಿಗೆ 100 ಲೀಟರ್‌ ಪೆಟ್ರೋಲ್ ಉಚಿತವಾಗಿ ನೀಡಲು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧರಿಸಿ ರೈತರನ್ನು ಬೆಂಬಲಿಸಿದೆ.

ದೆಹಲಿಯ ಸಿಂಘು ಗಡಿಯಲ್ಲಿರುವ ಜಿಟಿ ರಸ್ತೆಯಲ್ಲಿ ಸುಮಾರು 15 ರಿಂದ 20 ಪೆಟ್ರೋಲ್ ಬಂಕ್‌ಗಳಿದ್ದು, ಇವು ರೈತರ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತಪಡಿಸಿವೆ. ರೈತರ ಪ್ರತಿಭಟನೆ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧಾರದ ಕುರಿತು ಮಾತಾಡಿರುವ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಇದು ರೈತರ ಪ್ರತಿಭಟನೆ ಅಲ್ಲ, ದೇಶದ ಜನರ ಪ್ರತಿಭಟನೆ ಎಂದಿದ್ದಾರೆ.

“ಹರಿಯಾಣ ಪೆಟ್ರೋಲಿಯಂ ಪಂಪ್ ಅಸೋಷಿಯೇಷನ್ ರೈತರ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಲಿದೆ. , ಜಿಟಿ ರಸ್ತೆಯಲ್ಲಿ ಇರುವ ಎಲ್ಲಾ 20ಕ್ಕೂ ಹೆಚ್ಚು ಬಂಕ್‌ಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡಿವೆ. ನಮಗೆ ಎಷ್ಟು ಸಾಧ್ಯವೋ ಅಷ್ಟು ಪ್ರತಿಭಟನಾನಿರತ ರೈತರಿಗೆ ಸಹಾಯ ಮಾಡುತ್ತವೆ. ಬಂಕ್‌ಗಳಲ್ಲಿ ಇರುವ ವಿದ್ಯುತ್, ನೀರು, ಸ್ಥಳ, ನಿದ್ರಿಸಲು ಜಾಗ ಎಲ್ಲ ಮೂಲಭೂತ ಸೌಕರ್ಯಗಳ ಬಳಕೆ ರೈತರಿಗಾಗಿ ಇದೆ. ಜೊತೆಗೆ, ರೈತರಿಗೆ ಬೆಂಬಲ ನೀಡಲು ಪ್ರತಿಭಟನಾ ಸ್ಥಳಕ್ಕೆ ಹೋಗುವವರಿಗೆ ಉಳಿಯಲು ಸ್ಥಳ ನೀಡಲಾಗಿದೆ. ಅವರಿಗೆ ಬೇಕಾದ ಎಲ್ಲಾ ಸೌಲಭ್ಯವನ್ನು ವ್ಯವಸ್ಥೆ ಮಾಡಲಾಗಿದೆ” ಎಂದರು.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

’ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುವವರಿಗೆ ಇಲ್ಲಿನ ಪೆಟ್ರೋಲ್ ಬಂಕ್‌ಗಳಲ್ಲಿ 100 ಲೀಟರ್‌ ತೈಲ ಉಚಿತವಾಗಿ ನೀಡಲಾಗುತ್ತದೆ. ಅದು ಪೆಟ್ರೋಲ್, ಡಿಸೇಲ್ ಯಾವುದಾದರೂ ಆಗಿರಲಿ, ರೈತರಿಗೆ ಬೆಂಬಲ ನಿಡಲು ಹೊರಟವರಿಗೆ ಉಚಿತವಾಗಿ ಹಾಕಲಾಗುತ್ತದೆ. ಇಲ್ಲಿಯವರೆಗೆ ಎಷ್ಟು ಜನ ಪೆಟ್ರೋಲ್ ಹಾಕಿಸಿದ್ದಾರೆ ಎಂಬ ಫೀಡ್‌ಬ್ಯಾಕ್ ನಾವಿನ್ನು ತೆಗೆದುಕೊಂಡಿಲ್ಲ. ಪೆಟ್ರೋಲ್ ಬಂಕ್‌ಗಳು ಈ ರೀತಿ ರೈತರಿಗೆ ಬೆಂಬಲ ನೀಡಲು ನಿರ್ಧಾರ ಮಾಡಿವೆ’ ಎಂದರು.

ಮುಂದುವರೆದು, “ಈ ರೈತರ ಪ್ರತಿಭಟನೆ ದೇಶದ ಜನರ ಧ್ವನಿಯಾಗಿದೆ. ಈ ರೈತರ ಪ್ರತಿಭಟನೆ ಸೋತರೇ, ಅದು ದೇಶದ ಸೋಲು. ಏಕೆಂದರೆ, ಇದು ಅಂಬಾನಿ ಮತ್ತು ರೈತರ ನಡುವಿನ ಹೋರಾಟವಲ್ಲ, ಅಧಿಕಾರಶಾಹಿ ಮತ್ತು ಪ್ರಜಾಪ್ರಭುತ್ವದ ನಡುವಿನ ಹೋರಾಟ” ಎಂದು ಕಾಂಗ್ರೆಸ್ ಶಾಸಕರು ಆಗಿರುವ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.

“ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು. ಏಕೆಂದರೆ, ರೈತರನ್ನು ಮಾರಾಟ ಮಾಡುವುದು ಅಷ್ಟು ಸುಲಭದ ಮಾತಲ್ಲ ಎಂಬ ಸುಳಿವು ಮೋದಿಯವರಿಗೆ ಇರಲಿಲ್ಲ. ಬ್ರಿಟೀಷರೇ ರೈತರನ್ನು ಮಾರಾಟ ಮಾಡಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

’ದೇಶದಲ್ಲಿ ಈ ಬಿಜೆಪಿ, ಆರ್‌ಎಸ್‌ಎಸ್ ಜನರಲ್ಲಿ ಜಾತಿ ಧರ್ಮದ ಬಗೆಗೆ ದ್ವೇಷ ಹುಟ್ಟಿಹಾಕಿ ಸಮಾಜವನ್ನು ಹೊಡೆಯುವ ಕೆಲಸ ಮಾಡುತ್ತಿವೆ. ಇದರ ಬಗ್ಗೆ ಗೋಧಿ ಮೀಡಿಯಾ ಏನೂ ಮತಾಡುವುದಿಲ್ಲ. ಅದು ಮೋದಿಯವರ ಗುಲಾಮಿ ಮೀಡಿಯಾ ಆಗಿದೆ. ಅದು ಎಲ್ಲರನ್ನು ಗುಲಾಮರನ್ನಾಗಿಸಲು ಹೊರಟಿದೆ. ಆದರೆ ರೈತರು ಗುಲಾಮಗಿರಿಯನ್ನು ಮುರಿಯುವ ಸಲುವಾಗಿ ಹೋರಾಟಕ್ಕೆ ನಿಂತಿದ್ದಾರೆ” ಎಂದು ಮಾಧ್ಯಮಗಳ ಏಕಪಕ್ಷೀಯತೆಯನ್ನು ಟೀಕಿಸಿದ್ದಾರೆ.

’ಇದು ಜನಸಾಮಾನ್ಯರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಾಗಿದೆ. ಜನಸಾಮಾನ್ಯರು ಬೆಳೆ ಬೆಳೆಯುವುದಿಲ್ಲ. ಆದರೆ ಅದಾನಿ ಅಂಬಾನಿ ಅವರಿಂದ 20 ರೂಪಾಯಿಗೆ ದೊರೆಯುವ ಪದಾರ್ಥವನ್ನು 200 ರೂಪಾಯಿಗೆ ತೆಗೆದುಕೊಳ್ಳಬೇಕಾಗುತ್ತದೆ. ಇದನ್ನು ಜನಸಾಮಾನ್ಯರು ಮರೆಯಬಾರದು. ಇಂದು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಜನರ ಪ್ರತಿಭಟನೆಯಾಗಿದೆ. ಇದು ದೇಶದ ಪ್ರತಿಭಟನೆಯಾನ್ನಾಗಿಸಬೇಕು” ಎಂದು ಜನರನ್ನು ಪ್ರತಿಭಟನೆಗೆ ಒತ್ತಾಯಿಸಿದ್ದಾರೆ.

ಜೊತೆಗೆ, ’ಜನರು ದೇಶವನ್ನು ಪ್ರಜಾಪ್ರಭುತ್ವ, ಸಂವಿಧಾನಿಕವಾಗಿಯೇ ಇರಿಸಿಕೊಳ್ಳಬೇಕೋ ಅಥವಾ ಅಧಿಕಾರಶಾಯಿ ಆರ್‌ಎಸ್‌ಎಸ್‌, ಬಿಜೆಪಿಗೆ ಒಪ್ಪಿಸಬೇಕೋ ಎಂಬುದನ್ನು ಯೋಚಿಸಬೇಕು’ ಎಂದು ಕಾಂಗ್ರೆಸ್ ಶಾಸಕ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.


ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....