Homeಚಳವಳಿರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ ರೈತರ ಸಂಖ್ಯೆ ಹೆಚ್ಚಿರುವ ಕಾರಣ ಆಯಾ ರಾಜ್ಯಗಳ ಜನರು ಇನ್ನು ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಈಗ ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೆ ಏರಿರುವ ಹೊತ್ತಲ್ಲಿ, ಪ್ರತಿಭಟನೆಗೆ ಸಾಥ್ ನೀಡಲು ತೆರಳುವವರಿಗೆ 100 ಲೀಟರ್‌ ಪೆಟ್ರೋಲ್ ಉಚಿತವಾಗಿ ನೀಡಲು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧರಿಸಿ ರೈತರನ್ನು ಬೆಂಬಲಿಸಿದೆ.

ದೆಹಲಿಯ ಸಿಂಘು ಗಡಿಯಲ್ಲಿರುವ ಜಿಟಿ ರಸ್ತೆಯಲ್ಲಿ ಸುಮಾರು 15 ರಿಂದ 20 ಪೆಟ್ರೋಲ್ ಬಂಕ್‌ಗಳಿದ್ದು, ಇವು ರೈತರ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತಪಡಿಸಿವೆ. ರೈತರ ಪ್ರತಿಭಟನೆ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧಾರದ ಕುರಿತು ಮಾತಾಡಿರುವ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಇದು ರೈತರ ಪ್ರತಿಭಟನೆ ಅಲ್ಲ, ದೇಶದ ಜನರ ಪ್ರತಿಭಟನೆ ಎಂದಿದ್ದಾರೆ.

“ಹರಿಯಾಣ ಪೆಟ್ರೋಲಿಯಂ ಪಂಪ್ ಅಸೋಷಿಯೇಷನ್ ರೈತರ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಲಿದೆ. , ಜಿಟಿ ರಸ್ತೆಯಲ್ಲಿ ಇರುವ ಎಲ್ಲಾ 20ಕ್ಕೂ ಹೆಚ್ಚು ಬಂಕ್‌ಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡಿವೆ. ನಮಗೆ ಎಷ್ಟು ಸಾಧ್ಯವೋ ಅಷ್ಟು ಪ್ರತಿಭಟನಾನಿರತ ರೈತರಿಗೆ ಸಹಾಯ ಮಾಡುತ್ತವೆ. ಬಂಕ್‌ಗಳಲ್ಲಿ ಇರುವ ವಿದ್ಯುತ್, ನೀರು, ಸ್ಥಳ, ನಿದ್ರಿಸಲು ಜಾಗ ಎಲ್ಲ ಮೂಲಭೂತ ಸೌಕರ್ಯಗಳ ಬಳಕೆ ರೈತರಿಗಾಗಿ ಇದೆ. ಜೊತೆಗೆ, ರೈತರಿಗೆ ಬೆಂಬಲ ನೀಡಲು ಪ್ರತಿಭಟನಾ ಸ್ಥಳಕ್ಕೆ ಹೋಗುವವರಿಗೆ ಉಳಿಯಲು ಸ್ಥಳ ನೀಡಲಾಗಿದೆ. ಅವರಿಗೆ ಬೇಕಾದ ಎಲ್ಲಾ ಸೌಲಭ್ಯವನ್ನು ವ್ಯವಸ್ಥೆ ಮಾಡಲಾಗಿದೆ” ಎಂದರು.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

’ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುವವರಿಗೆ ಇಲ್ಲಿನ ಪೆಟ್ರೋಲ್ ಬಂಕ್‌ಗಳಲ್ಲಿ 100 ಲೀಟರ್‌ ತೈಲ ಉಚಿತವಾಗಿ ನೀಡಲಾಗುತ್ತದೆ. ಅದು ಪೆಟ್ರೋಲ್, ಡಿಸೇಲ್ ಯಾವುದಾದರೂ ಆಗಿರಲಿ, ರೈತರಿಗೆ ಬೆಂಬಲ ನಿಡಲು ಹೊರಟವರಿಗೆ ಉಚಿತವಾಗಿ ಹಾಕಲಾಗುತ್ತದೆ. ಇಲ್ಲಿಯವರೆಗೆ ಎಷ್ಟು ಜನ ಪೆಟ್ರೋಲ್ ಹಾಕಿಸಿದ್ದಾರೆ ಎಂಬ ಫೀಡ್‌ಬ್ಯಾಕ್ ನಾವಿನ್ನು ತೆಗೆದುಕೊಂಡಿಲ್ಲ. ಪೆಟ್ರೋಲ್ ಬಂಕ್‌ಗಳು ಈ ರೀತಿ ರೈತರಿಗೆ ಬೆಂಬಲ ನೀಡಲು ನಿರ್ಧಾರ ಮಾಡಿವೆ’ ಎಂದರು.

ಮುಂದುವರೆದು, “ಈ ರೈತರ ಪ್ರತಿಭಟನೆ ದೇಶದ ಜನರ ಧ್ವನಿಯಾಗಿದೆ. ಈ ರೈತರ ಪ್ರತಿಭಟನೆ ಸೋತರೇ, ಅದು ದೇಶದ ಸೋಲು. ಏಕೆಂದರೆ, ಇದು ಅಂಬಾನಿ ಮತ್ತು ರೈತರ ನಡುವಿನ ಹೋರಾಟವಲ್ಲ, ಅಧಿಕಾರಶಾಹಿ ಮತ್ತು ಪ್ರಜಾಪ್ರಭುತ್ವದ ನಡುವಿನ ಹೋರಾಟ” ಎಂದು ಕಾಂಗ್ರೆಸ್ ಶಾಸಕರು ಆಗಿರುವ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.

“ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು. ಏಕೆಂದರೆ, ರೈತರನ್ನು ಮಾರಾಟ ಮಾಡುವುದು ಅಷ್ಟು ಸುಲಭದ ಮಾತಲ್ಲ ಎಂಬ ಸುಳಿವು ಮೋದಿಯವರಿಗೆ ಇರಲಿಲ್ಲ. ಬ್ರಿಟೀಷರೇ ರೈತರನ್ನು ಮಾರಾಟ ಮಾಡಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

’ದೇಶದಲ್ಲಿ ಈ ಬಿಜೆಪಿ, ಆರ್‌ಎಸ್‌ಎಸ್ ಜನರಲ್ಲಿ ಜಾತಿ ಧರ್ಮದ ಬಗೆಗೆ ದ್ವೇಷ ಹುಟ್ಟಿಹಾಕಿ ಸಮಾಜವನ್ನು ಹೊಡೆಯುವ ಕೆಲಸ ಮಾಡುತ್ತಿವೆ. ಇದರ ಬಗ್ಗೆ ಗೋಧಿ ಮೀಡಿಯಾ ಏನೂ ಮತಾಡುವುದಿಲ್ಲ. ಅದು ಮೋದಿಯವರ ಗುಲಾಮಿ ಮೀಡಿಯಾ ಆಗಿದೆ. ಅದು ಎಲ್ಲರನ್ನು ಗುಲಾಮರನ್ನಾಗಿಸಲು ಹೊರಟಿದೆ. ಆದರೆ ರೈತರು ಗುಲಾಮಗಿರಿಯನ್ನು ಮುರಿಯುವ ಸಲುವಾಗಿ ಹೋರಾಟಕ್ಕೆ ನಿಂತಿದ್ದಾರೆ” ಎಂದು ಮಾಧ್ಯಮಗಳ ಏಕಪಕ್ಷೀಯತೆಯನ್ನು ಟೀಕಿಸಿದ್ದಾರೆ.

’ಇದು ಜನಸಾಮಾನ್ಯರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಾಗಿದೆ. ಜನಸಾಮಾನ್ಯರು ಬೆಳೆ ಬೆಳೆಯುವುದಿಲ್ಲ. ಆದರೆ ಅದಾನಿ ಅಂಬಾನಿ ಅವರಿಂದ 20 ರೂಪಾಯಿಗೆ ದೊರೆಯುವ ಪದಾರ್ಥವನ್ನು 200 ರೂಪಾಯಿಗೆ ತೆಗೆದುಕೊಳ್ಳಬೇಕಾಗುತ್ತದೆ. ಇದನ್ನು ಜನಸಾಮಾನ್ಯರು ಮರೆಯಬಾರದು. ಇಂದು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಜನರ ಪ್ರತಿಭಟನೆಯಾಗಿದೆ. ಇದು ದೇಶದ ಪ್ರತಿಭಟನೆಯಾನ್ನಾಗಿಸಬೇಕು” ಎಂದು ಜನರನ್ನು ಪ್ರತಿಭಟನೆಗೆ ಒತ್ತಾಯಿಸಿದ್ದಾರೆ.

ಜೊತೆಗೆ, ’ಜನರು ದೇಶವನ್ನು ಪ್ರಜಾಪ್ರಭುತ್ವ, ಸಂವಿಧಾನಿಕವಾಗಿಯೇ ಇರಿಸಿಕೊಳ್ಳಬೇಕೋ ಅಥವಾ ಅಧಿಕಾರಶಾಯಿ ಆರ್‌ಎಸ್‌ಎಸ್‌, ಬಿಜೆಪಿಗೆ ಒಪ್ಪಿಸಬೇಕೋ ಎಂಬುದನ್ನು ಯೋಚಿಸಬೇಕು’ ಎಂದು ಕಾಂಗ್ರೆಸ್ ಶಾಸಕ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.


ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...