Homeಚಳವಳಿರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ ರೈತರ ಸಂಖ್ಯೆ ಹೆಚ್ಚಿರುವ ಕಾರಣ ಆಯಾ ರಾಜ್ಯಗಳ ಜನರು ಇನ್ನು ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಈಗ ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೆ ಏರಿರುವ ಹೊತ್ತಲ್ಲಿ, ಪ್ರತಿಭಟನೆಗೆ ಸಾಥ್ ನೀಡಲು ತೆರಳುವವರಿಗೆ 100 ಲೀಟರ್‌ ಪೆಟ್ರೋಲ್ ಉಚಿತವಾಗಿ ನೀಡಲು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧರಿಸಿ ರೈತರನ್ನು ಬೆಂಬಲಿಸಿದೆ.

ದೆಹಲಿಯ ಸಿಂಘು ಗಡಿಯಲ್ಲಿರುವ ಜಿಟಿ ರಸ್ತೆಯಲ್ಲಿ ಸುಮಾರು 15 ರಿಂದ 20 ಪೆಟ್ರೋಲ್ ಬಂಕ್‌ಗಳಿದ್ದು, ಇವು ರೈತರ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತಪಡಿಸಿವೆ. ರೈತರ ಪ್ರತಿಭಟನೆ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧಾರದ ಕುರಿತು ಮಾತಾಡಿರುವ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಇದು ರೈತರ ಪ್ರತಿಭಟನೆ ಅಲ್ಲ, ದೇಶದ ಜನರ ಪ್ರತಿಭಟನೆ ಎಂದಿದ್ದಾರೆ.

“ಹರಿಯಾಣ ಪೆಟ್ರೋಲಿಯಂ ಪಂಪ್ ಅಸೋಷಿಯೇಷನ್ ರೈತರ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಲಿದೆ. , ಜಿಟಿ ರಸ್ತೆಯಲ್ಲಿ ಇರುವ ಎಲ್ಲಾ 20ಕ್ಕೂ ಹೆಚ್ಚು ಬಂಕ್‌ಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡಿವೆ. ನಮಗೆ ಎಷ್ಟು ಸಾಧ್ಯವೋ ಅಷ್ಟು ಪ್ರತಿಭಟನಾನಿರತ ರೈತರಿಗೆ ಸಹಾಯ ಮಾಡುತ್ತವೆ. ಬಂಕ್‌ಗಳಲ್ಲಿ ಇರುವ ವಿದ್ಯುತ್, ನೀರು, ಸ್ಥಳ, ನಿದ್ರಿಸಲು ಜಾಗ ಎಲ್ಲ ಮೂಲಭೂತ ಸೌಕರ್ಯಗಳ ಬಳಕೆ ರೈತರಿಗಾಗಿ ಇದೆ. ಜೊತೆಗೆ, ರೈತರಿಗೆ ಬೆಂಬಲ ನೀಡಲು ಪ್ರತಿಭಟನಾ ಸ್ಥಳಕ್ಕೆ ಹೋಗುವವರಿಗೆ ಉಳಿಯಲು ಸ್ಥಳ ನೀಡಲಾಗಿದೆ. ಅವರಿಗೆ ಬೇಕಾದ ಎಲ್ಲಾ ಸೌಲಭ್ಯವನ್ನು ವ್ಯವಸ್ಥೆ ಮಾಡಲಾಗಿದೆ” ಎಂದರು.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

’ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುವವರಿಗೆ ಇಲ್ಲಿನ ಪೆಟ್ರೋಲ್ ಬಂಕ್‌ಗಳಲ್ಲಿ 100 ಲೀಟರ್‌ ತೈಲ ಉಚಿತವಾಗಿ ನೀಡಲಾಗುತ್ತದೆ. ಅದು ಪೆಟ್ರೋಲ್, ಡಿಸೇಲ್ ಯಾವುದಾದರೂ ಆಗಿರಲಿ, ರೈತರಿಗೆ ಬೆಂಬಲ ನಿಡಲು ಹೊರಟವರಿಗೆ ಉಚಿತವಾಗಿ ಹಾಕಲಾಗುತ್ತದೆ. ಇಲ್ಲಿಯವರೆಗೆ ಎಷ್ಟು ಜನ ಪೆಟ್ರೋಲ್ ಹಾಕಿಸಿದ್ದಾರೆ ಎಂಬ ಫೀಡ್‌ಬ್ಯಾಕ್ ನಾವಿನ್ನು ತೆಗೆದುಕೊಂಡಿಲ್ಲ. ಪೆಟ್ರೋಲ್ ಬಂಕ್‌ಗಳು ಈ ರೀತಿ ರೈತರಿಗೆ ಬೆಂಬಲ ನೀಡಲು ನಿರ್ಧಾರ ಮಾಡಿವೆ’ ಎಂದರು.

ಮುಂದುವರೆದು, “ಈ ರೈತರ ಪ್ರತಿಭಟನೆ ದೇಶದ ಜನರ ಧ್ವನಿಯಾಗಿದೆ. ಈ ರೈತರ ಪ್ರತಿಭಟನೆ ಸೋತರೇ, ಅದು ದೇಶದ ಸೋಲು. ಏಕೆಂದರೆ, ಇದು ಅಂಬಾನಿ ಮತ್ತು ರೈತರ ನಡುವಿನ ಹೋರಾಟವಲ್ಲ, ಅಧಿಕಾರಶಾಹಿ ಮತ್ತು ಪ್ರಜಾಪ್ರಭುತ್ವದ ನಡುವಿನ ಹೋರಾಟ” ಎಂದು ಕಾಂಗ್ರೆಸ್ ಶಾಸಕರು ಆಗಿರುವ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.

“ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು. ಏಕೆಂದರೆ, ರೈತರನ್ನು ಮಾರಾಟ ಮಾಡುವುದು ಅಷ್ಟು ಸುಲಭದ ಮಾತಲ್ಲ ಎಂಬ ಸುಳಿವು ಮೋದಿಯವರಿಗೆ ಇರಲಿಲ್ಲ. ಬ್ರಿಟೀಷರೇ ರೈತರನ್ನು ಮಾರಾಟ ಮಾಡಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

’ದೇಶದಲ್ಲಿ ಈ ಬಿಜೆಪಿ, ಆರ್‌ಎಸ್‌ಎಸ್ ಜನರಲ್ಲಿ ಜಾತಿ ಧರ್ಮದ ಬಗೆಗೆ ದ್ವೇಷ ಹುಟ್ಟಿಹಾಕಿ ಸಮಾಜವನ್ನು ಹೊಡೆಯುವ ಕೆಲಸ ಮಾಡುತ್ತಿವೆ. ಇದರ ಬಗ್ಗೆ ಗೋಧಿ ಮೀಡಿಯಾ ಏನೂ ಮತಾಡುವುದಿಲ್ಲ. ಅದು ಮೋದಿಯವರ ಗುಲಾಮಿ ಮೀಡಿಯಾ ಆಗಿದೆ. ಅದು ಎಲ್ಲರನ್ನು ಗುಲಾಮರನ್ನಾಗಿಸಲು ಹೊರಟಿದೆ. ಆದರೆ ರೈತರು ಗುಲಾಮಗಿರಿಯನ್ನು ಮುರಿಯುವ ಸಲುವಾಗಿ ಹೋರಾಟಕ್ಕೆ ನಿಂತಿದ್ದಾರೆ” ಎಂದು ಮಾಧ್ಯಮಗಳ ಏಕಪಕ್ಷೀಯತೆಯನ್ನು ಟೀಕಿಸಿದ್ದಾರೆ.

’ಇದು ಜನಸಾಮಾನ್ಯರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಾಗಿದೆ. ಜನಸಾಮಾನ್ಯರು ಬೆಳೆ ಬೆಳೆಯುವುದಿಲ್ಲ. ಆದರೆ ಅದಾನಿ ಅಂಬಾನಿ ಅವರಿಂದ 20 ರೂಪಾಯಿಗೆ ದೊರೆಯುವ ಪದಾರ್ಥವನ್ನು 200 ರೂಪಾಯಿಗೆ ತೆಗೆದುಕೊಳ್ಳಬೇಕಾಗುತ್ತದೆ. ಇದನ್ನು ಜನಸಾಮಾನ್ಯರು ಮರೆಯಬಾರದು. ಇಂದು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಜನರ ಪ್ರತಿಭಟನೆಯಾಗಿದೆ. ಇದು ದೇಶದ ಪ್ರತಿಭಟನೆಯಾನ್ನಾಗಿಸಬೇಕು” ಎಂದು ಜನರನ್ನು ಪ್ರತಿಭಟನೆಗೆ ಒತ್ತಾಯಿಸಿದ್ದಾರೆ.

ಜೊತೆಗೆ, ’ಜನರು ದೇಶವನ್ನು ಪ್ರಜಾಪ್ರಭುತ್ವ, ಸಂವಿಧಾನಿಕವಾಗಿಯೇ ಇರಿಸಿಕೊಳ್ಳಬೇಕೋ ಅಥವಾ ಅಧಿಕಾರಶಾಯಿ ಆರ್‌ಎಸ್‌ಎಸ್‌, ಬಿಜೆಪಿಗೆ ಒಪ್ಪಿಸಬೇಕೋ ಎಂಬುದನ್ನು ಯೋಚಿಸಬೇಕು’ ಎಂದು ಕಾಂಗ್ರೆಸ್ ಶಾಸಕ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.


ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...