Homeಕರ್ನಾಟಕಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ-...

ಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ- ಸಿಪಿಐ(ಎಂ)

- Advertisement -
- Advertisement -

ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕೊಡುಗೆಯನ್ನು ಪಡೆಯಲು ಉದ್ದೇಶಿಸಿರುವ, ಬಡವರು ಹಾಗೂ ಮಹಿಳಾ ಶಿಕ್ಷಣಕ್ಕೆ ಕುತ್ತು ತರಲಿರುವ ಸರಕಾರಿ ಸುತ್ತೋಲೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)- ಸಿಪಿಐ(ಎಂ) ಒತ್ತಾಯಿಸಿದೆ.

ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಮೂಲಕ ಹೊರಡಿಸಲಾದ ಸುತ್ತೋಲೆಯು ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುತ್ತದೆ. ಬಡವರು, ದಲಿತರು ಹಾಗೂ ಮಹಿಳಾ ಶಿಕ್ಷಣವನ್ನು ನಿರಾಕರಿಸುವ ಮತ್ತು ಸಾರ್ವಜನಿಕ ಶಿಕ್ಷಣವನ್ನು ಕಳಚಿಹಾಕಿ ಖಾಸಗೀ ಶಿಕ್ಷಣವನ್ನು ಬಲಗೊಳಿಸುವ, ದುರುದ್ದೇಶದಿಂದ ಹೊರಡಿಸಿದ ಸುತ್ತೋಲೆ ಇದಾಗಿದೆ. ತಕ್ಷಣವೇ ಸದರಿ ಸುತ್ತೋಲೆಯನ್ನು ವಾಪಾಸು ಪಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶೈಕ್ಷಣಿಕ ಸ್ಥಿತಿಗತಿಯನ್ನು ಉತ್ತಮಪಡಿಸಲು, ಸೌಲಭ್ಯಗಳಿಂದ ಬಲಪಡಿಸಲು, ವಿದ್ಯಾರ್ಥಿಗಳ ಪೋಷಕರುಗಳಿಂದ ಮಾಸಿಕ ತಲಾ 100 ರೂ.ಗಳ ಕೊಡುಗೆ ಅಥವಾ ದಾನಗಳನ್ನು ಸಂಗ್ರಹಿಸುವಂತೆ ಶಾಲಾ ಮೇಲುಸ್ತುವಾರಿಗಳಿಗೆ ಮತ್ತು ಆ ಮೂಲಕ ಅಪ್ರತ್ಯಕ್ಷವಾಗಿ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗದವರಿಗೆ ಈ ಸುತ್ತೋಲೆಯು ಆದೇಶಿಸುತ್ತದೆ. ಈ ಕೊಡುಗೆಯನ್ನು ಮನವೊಲಿಸಿ ಪಡೆಯಬೇಕೇ ಹೊರತು ಬಲವಂತವಾಗಿಯಲ್ಲವೆಂದು ಸುತ್ತೋಲೆಯು ದಪ್ಪಕ್ಷರಗಳಲ್ಲಿ ಹೇಳಿದರೂ, ಪರಿಣಾಮ ಒಂದೇ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲೆ- ಶೌಚಾಲಯಗಳ ಸ್ವಚ್ಛತೆ, ಕುಡಿಯುವ ನೀರು ಸೌಲಭ್ಯ, ವಿದ್ಯುತ್ ಬಿಲ್ ಪಾವತಿ, ಆಟದ ಮೈದಾನದ ಸುಧಾರಣೆ, ಗಣಕ ಯಂತ್ರಗಳ ರಿಪೇರಿ, ಬೋಧನೋಪಕರಣಗಳು, ಅಗತ್ಯವಾದ ಅತಿಥಿ ಶಿಕ್ಷಕರ ವೇತನಗಳು ಸೇರಿದಂತೆ ಮೊದಲ ಮತ್ತು ಎರಡನೇ ಆದ್ಯತೆಯಲ್ಲಿ ಪಟ್ಟಿ ಮಾಡಿದ ಸುಮಾರು 17 ಅಗತ್ಯಗಳಿಗಾಗಿ ಈ ಹಣವನ್ನು ಖರ್ಚು ಮಾಡಲು ಮೇಲುಸ್ತುವಾರಿ ಸಮಿತಿಗಳಿಗೆ ಸೂಚಿಸಲಾಗಿದೆ. ಸರಕಾರ ತನ್ನ ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಕೆಲಸಗಳಿಗೆ ಪೂರಕವಾದ ಸೌಲಭ್ಯಗಳಿಲ್ಲವೆಂದು ಮತ್ತು ಅವುಗಳಿಗಾಗಿ ಸರಕಾರ ನೆರವು ನೀಡದೆಂಬ ಸಂದೇಶವನ್ನು ಈ ಸುತ್ತೋಲೆ ಸಾರ್ವಜನಿಕರಿಗೆ ರವಾನಿಸಿದೆ. ಸೌಲಭ್ಯಗಳಿಲ್ಲದ ಶಾಲೆಗಳಿಗೆ ನಿಮ್ಮ ಮಕ್ಕಳನ್ನು ಯಾಕೆ ಸೇರಿಸುತ್ತೀರೆಂಬ ಪ್ರಶ್ನೆಯನ್ನು ಎಸೆಯುವ ಮೂಲಕ ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುವ ಹಾಗೂ ಶಿಕ್ಷಣ ಪಡೆಯಲೇ ಬೇಕೆಂಬುವವರನ್ನು ಖಾಸಗೀ ಶಿಕ್ಷಣ ಸಂಸ್ಥೆಗಳ ಕಡೆ ದೂಡುವ ಜನವಿರೋಧಿ, ಬಡವರ ವಿರೋಧಿ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಈ ಸುತ್ತೋಲೆಯು ಖಾಸಗೀ ಶಿಕ್ಷಣ ಸಂಸ್ಥೆಗಳು ಯಾವ ಯಾವ ವಿಷಯಗಳ ಮೇಲೆ ಹೊಸದಾಗಿ ಕೊಡುಗೆಗಳನ್ನು ಪಡೆಯಬಹುದೆಂಬುದನ್ನು ಅಪ್ರತ್ಯಕ್ಷವಾಗಿ ಹೇಳುತ್ತಾ ಖಾಸಗೀ ಶಿಕ್ಷಣಾರ್ಥಿಗಳ ಲೂಟಿಗೆ ನೆರವಾಗುತ್ತದೆ. ಈ ಸುತ್ತೋಲೆಯು ಬಡವರು, ದಲಿತರು, ಮಹಿಳಾ ಶಿಕ್ಷಣಕ್ಕೆ ಪೂರಕವಾಗಿದ್ದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸೌಲಭ್ಯಗಳಿರುವುದಿಲ್ಲ. ಕನಿಷ್ಟ ಸೌಲಭ್ಯಗಳು ಬೇಕೆಂದರೂ ನೀವು ಕೊಡುಗೆ ನೀಡಬೇಕಾದದ್ದೆ ಎಂದು ಒತ್ತಾಯಿಸುತ್ತದೆ. ಇದು ಸಂವಿಧಾನ ನೀಡಿರುವ ಉಚಿತ ಶಿಕ್ಷಣದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿರಿ: ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶ ಶುಲ್ಕ ನೀತಿ ವಿರೋಧಿಸಿ AIDSO ಪ್ರತಿಭಟನೆ

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು, ಶಿಕ್ಷಕರನ್ನು ತುಂಬುವುದಿಲ್ಲ. ಹೊಸದಾಗಿ ಖಾಲಿಯಾಗುವ ಸಿಬ್ಬಂದಿಗಳ ಹುದ್ದೆಗಳನ್ನು ಸರಕಾರ ತುಂಬುವುದಿಲ್ಲ ಎಂಬ ಜನ ವಿರೋಧಿ ಸಂದೇಶವನ್ನು ಈ ಸುತ್ತೋಲೆ ಬಯಲುಗೊಳಿಸುತ್ತದೆ. ಮುಂದೆ ಸಿಬ್ಬಂದಿಗಳ ಕೊರತೆ ಎದುರಿಸುವಾಗ, ಮಾತ್ರವಲ್ಲಾ ಇತರೆ ಸೌಲಭ್ಯಗಳು ಬೇಕೆನ್ನುವಾಗ ನೀವುಗಳೇ ಕೊಡುಗೆ ನೀಡುವ ಮೂಲಕ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿರೆಂದು ಹಾಗೂ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳಿರೆಂದು ಹೇಳುತ್ತದೆ. ಇದರಿಂದಾಗಿ, ಈ ಕೊಡುಗೆ ನೀಡಲಾಗದ ಸುಮಾರು 1.5 ಕೋಟಿಗೂ ಅಧಿಕ ಸಂಖ್ಯೆಯ ಬಿಪಿಎಲ್, ಅಂತ್ಯೋದಯ ಮತ್ತು ಎಪಿಎಲ್ ಕುಟುಂಬಗಳ ಮಕ್ಕಳಿಗೆ ಇನ್ನು ಮುಂದೆ ಶಿಕ್ಷಣವೆಂಬುದು ಮರೀಚಿಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇರಳದ ಎಡ ಮತ್ತು ಪ್ರಜಾಸತ್ತಾತ್ಮಕ ರಂಗದ ಸರಕಾರ ಶಿಕ್ಷಣ ರಂಗದಲ್ಲಿ ಸಾರ್ವಜನಿಕ ಬಂಡವಾಳ ತೊಡಗಿಸುವಿಕೆಯನ್ನು ಹೆಚ್ಚಿಸುವ ಮೂಲಕ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸಿದೆ. ಖಾಸಗೀ ಶಿಕ್ಷಣ ಸಂಸ್ಥೆಗಳ ದಶಲಕ್ಷಾಂತರ ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುವಂತಹ ಪರಿಸ್ಥಿತಿಯನ್ನು ನಿರ್ಮಿಸಿದೆ. ಆದರೇ ರಾಜ್ಯದ ಬಿಜೆಪಿ ಸರಕಾರ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ತೀವ್ರ ಖಂಡನೀಯವಾಗಿದೆ ಎಂದಿ‌ದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...