Homeಕರ್ನಾಟಕಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ-...

ಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ- ಸಿಪಿಐ(ಎಂ)

- Advertisement -
- Advertisement -

ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕೊಡುಗೆಯನ್ನು ಪಡೆಯಲು ಉದ್ದೇಶಿಸಿರುವ, ಬಡವರು ಹಾಗೂ ಮಹಿಳಾ ಶಿಕ್ಷಣಕ್ಕೆ ಕುತ್ತು ತರಲಿರುವ ಸರಕಾರಿ ಸುತ್ತೋಲೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)- ಸಿಪಿಐ(ಎಂ) ಒತ್ತಾಯಿಸಿದೆ.

ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಮೂಲಕ ಹೊರಡಿಸಲಾದ ಸುತ್ತೋಲೆಯು ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುತ್ತದೆ. ಬಡವರು, ದಲಿತರು ಹಾಗೂ ಮಹಿಳಾ ಶಿಕ್ಷಣವನ್ನು ನಿರಾಕರಿಸುವ ಮತ್ತು ಸಾರ್ವಜನಿಕ ಶಿಕ್ಷಣವನ್ನು ಕಳಚಿಹಾಕಿ ಖಾಸಗೀ ಶಿಕ್ಷಣವನ್ನು ಬಲಗೊಳಿಸುವ, ದುರುದ್ದೇಶದಿಂದ ಹೊರಡಿಸಿದ ಸುತ್ತೋಲೆ ಇದಾಗಿದೆ. ತಕ್ಷಣವೇ ಸದರಿ ಸುತ್ತೋಲೆಯನ್ನು ವಾಪಾಸು ಪಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶೈಕ್ಷಣಿಕ ಸ್ಥಿತಿಗತಿಯನ್ನು ಉತ್ತಮಪಡಿಸಲು, ಸೌಲಭ್ಯಗಳಿಂದ ಬಲಪಡಿಸಲು, ವಿದ್ಯಾರ್ಥಿಗಳ ಪೋಷಕರುಗಳಿಂದ ಮಾಸಿಕ ತಲಾ 100 ರೂ.ಗಳ ಕೊಡುಗೆ ಅಥವಾ ದಾನಗಳನ್ನು ಸಂಗ್ರಹಿಸುವಂತೆ ಶಾಲಾ ಮೇಲುಸ್ತುವಾರಿಗಳಿಗೆ ಮತ್ತು ಆ ಮೂಲಕ ಅಪ್ರತ್ಯಕ್ಷವಾಗಿ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗದವರಿಗೆ ಈ ಸುತ್ತೋಲೆಯು ಆದೇಶಿಸುತ್ತದೆ. ಈ ಕೊಡುಗೆಯನ್ನು ಮನವೊಲಿಸಿ ಪಡೆಯಬೇಕೇ ಹೊರತು ಬಲವಂತವಾಗಿಯಲ್ಲವೆಂದು ಸುತ್ತೋಲೆಯು ದಪ್ಪಕ್ಷರಗಳಲ್ಲಿ ಹೇಳಿದರೂ, ಪರಿಣಾಮ ಒಂದೇ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲೆ- ಶೌಚಾಲಯಗಳ ಸ್ವಚ್ಛತೆ, ಕುಡಿಯುವ ನೀರು ಸೌಲಭ್ಯ, ವಿದ್ಯುತ್ ಬಿಲ್ ಪಾವತಿ, ಆಟದ ಮೈದಾನದ ಸುಧಾರಣೆ, ಗಣಕ ಯಂತ್ರಗಳ ರಿಪೇರಿ, ಬೋಧನೋಪಕರಣಗಳು, ಅಗತ್ಯವಾದ ಅತಿಥಿ ಶಿಕ್ಷಕರ ವೇತನಗಳು ಸೇರಿದಂತೆ ಮೊದಲ ಮತ್ತು ಎರಡನೇ ಆದ್ಯತೆಯಲ್ಲಿ ಪಟ್ಟಿ ಮಾಡಿದ ಸುಮಾರು 17 ಅಗತ್ಯಗಳಿಗಾಗಿ ಈ ಹಣವನ್ನು ಖರ್ಚು ಮಾಡಲು ಮೇಲುಸ್ತುವಾರಿ ಸಮಿತಿಗಳಿಗೆ ಸೂಚಿಸಲಾಗಿದೆ. ಸರಕಾರ ತನ್ನ ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಕೆಲಸಗಳಿಗೆ ಪೂರಕವಾದ ಸೌಲಭ್ಯಗಳಿಲ್ಲವೆಂದು ಮತ್ತು ಅವುಗಳಿಗಾಗಿ ಸರಕಾರ ನೆರವು ನೀಡದೆಂಬ ಸಂದೇಶವನ್ನು ಈ ಸುತ್ತೋಲೆ ಸಾರ್ವಜನಿಕರಿಗೆ ರವಾನಿಸಿದೆ. ಸೌಲಭ್ಯಗಳಿಲ್ಲದ ಶಾಲೆಗಳಿಗೆ ನಿಮ್ಮ ಮಕ್ಕಳನ್ನು ಯಾಕೆ ಸೇರಿಸುತ್ತೀರೆಂಬ ಪ್ರಶ್ನೆಯನ್ನು ಎಸೆಯುವ ಮೂಲಕ ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುವ ಹಾಗೂ ಶಿಕ್ಷಣ ಪಡೆಯಲೇ ಬೇಕೆಂಬುವವರನ್ನು ಖಾಸಗೀ ಶಿಕ್ಷಣ ಸಂಸ್ಥೆಗಳ ಕಡೆ ದೂಡುವ ಜನವಿರೋಧಿ, ಬಡವರ ವಿರೋಧಿ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಈ ಸುತ್ತೋಲೆಯು ಖಾಸಗೀ ಶಿಕ್ಷಣ ಸಂಸ್ಥೆಗಳು ಯಾವ ಯಾವ ವಿಷಯಗಳ ಮೇಲೆ ಹೊಸದಾಗಿ ಕೊಡುಗೆಗಳನ್ನು ಪಡೆಯಬಹುದೆಂಬುದನ್ನು ಅಪ್ರತ್ಯಕ್ಷವಾಗಿ ಹೇಳುತ್ತಾ ಖಾಸಗೀ ಶಿಕ್ಷಣಾರ್ಥಿಗಳ ಲೂಟಿಗೆ ನೆರವಾಗುತ್ತದೆ. ಈ ಸುತ್ತೋಲೆಯು ಬಡವರು, ದಲಿತರು, ಮಹಿಳಾ ಶಿಕ್ಷಣಕ್ಕೆ ಪೂರಕವಾಗಿದ್ದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸೌಲಭ್ಯಗಳಿರುವುದಿಲ್ಲ. ಕನಿಷ್ಟ ಸೌಲಭ್ಯಗಳು ಬೇಕೆಂದರೂ ನೀವು ಕೊಡುಗೆ ನೀಡಬೇಕಾದದ್ದೆ ಎಂದು ಒತ್ತಾಯಿಸುತ್ತದೆ. ಇದು ಸಂವಿಧಾನ ನೀಡಿರುವ ಉಚಿತ ಶಿಕ್ಷಣದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿರಿ: ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶ ಶುಲ್ಕ ನೀತಿ ವಿರೋಧಿಸಿ AIDSO ಪ್ರತಿಭಟನೆ

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು, ಶಿಕ್ಷಕರನ್ನು ತುಂಬುವುದಿಲ್ಲ. ಹೊಸದಾಗಿ ಖಾಲಿಯಾಗುವ ಸಿಬ್ಬಂದಿಗಳ ಹುದ್ದೆಗಳನ್ನು ಸರಕಾರ ತುಂಬುವುದಿಲ್ಲ ಎಂಬ ಜನ ವಿರೋಧಿ ಸಂದೇಶವನ್ನು ಈ ಸುತ್ತೋಲೆ ಬಯಲುಗೊಳಿಸುತ್ತದೆ. ಮುಂದೆ ಸಿಬ್ಬಂದಿಗಳ ಕೊರತೆ ಎದುರಿಸುವಾಗ, ಮಾತ್ರವಲ್ಲಾ ಇತರೆ ಸೌಲಭ್ಯಗಳು ಬೇಕೆನ್ನುವಾಗ ನೀವುಗಳೇ ಕೊಡುಗೆ ನೀಡುವ ಮೂಲಕ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿರೆಂದು ಹಾಗೂ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳಿರೆಂದು ಹೇಳುತ್ತದೆ. ಇದರಿಂದಾಗಿ, ಈ ಕೊಡುಗೆ ನೀಡಲಾಗದ ಸುಮಾರು 1.5 ಕೋಟಿಗೂ ಅಧಿಕ ಸಂಖ್ಯೆಯ ಬಿಪಿಎಲ್, ಅಂತ್ಯೋದಯ ಮತ್ತು ಎಪಿಎಲ್ ಕುಟುಂಬಗಳ ಮಕ್ಕಳಿಗೆ ಇನ್ನು ಮುಂದೆ ಶಿಕ್ಷಣವೆಂಬುದು ಮರೀಚಿಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇರಳದ ಎಡ ಮತ್ತು ಪ್ರಜಾಸತ್ತಾತ್ಮಕ ರಂಗದ ಸರಕಾರ ಶಿಕ್ಷಣ ರಂಗದಲ್ಲಿ ಸಾರ್ವಜನಿಕ ಬಂಡವಾಳ ತೊಡಗಿಸುವಿಕೆಯನ್ನು ಹೆಚ್ಚಿಸುವ ಮೂಲಕ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸಿದೆ. ಖಾಸಗೀ ಶಿಕ್ಷಣ ಸಂಸ್ಥೆಗಳ ದಶಲಕ್ಷಾಂತರ ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುವಂತಹ ಪರಿಸ್ಥಿತಿಯನ್ನು ನಿರ್ಮಿಸಿದೆ. ಆದರೇ ರಾಜ್ಯದ ಬಿಜೆಪಿ ಸರಕಾರ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ತೀವ್ರ ಖಂಡನೀಯವಾಗಿದೆ ಎಂದಿ‌ದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...