Homeಕರ್ನಾಟಕಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ-...

ಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ- ಸಿಪಿಐ(ಎಂ)

- Advertisement -
- Advertisement -

ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕೊಡುಗೆಯನ್ನು ಪಡೆಯಲು ಉದ್ದೇಶಿಸಿರುವ, ಬಡವರು ಹಾಗೂ ಮಹಿಳಾ ಶಿಕ್ಷಣಕ್ಕೆ ಕುತ್ತು ತರಲಿರುವ ಸರಕಾರಿ ಸುತ್ತೋಲೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)- ಸಿಪಿಐ(ಎಂ) ಒತ್ತಾಯಿಸಿದೆ.

ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಮೂಲಕ ಹೊರಡಿಸಲಾದ ಸುತ್ತೋಲೆಯು ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುತ್ತದೆ. ಬಡವರು, ದಲಿತರು ಹಾಗೂ ಮಹಿಳಾ ಶಿಕ್ಷಣವನ್ನು ನಿರಾಕರಿಸುವ ಮತ್ತು ಸಾರ್ವಜನಿಕ ಶಿಕ್ಷಣವನ್ನು ಕಳಚಿಹಾಕಿ ಖಾಸಗೀ ಶಿಕ್ಷಣವನ್ನು ಬಲಗೊಳಿಸುವ, ದುರುದ್ದೇಶದಿಂದ ಹೊರಡಿಸಿದ ಸುತ್ತೋಲೆ ಇದಾಗಿದೆ. ತಕ್ಷಣವೇ ಸದರಿ ಸುತ್ತೋಲೆಯನ್ನು ವಾಪಾಸು ಪಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶೈಕ್ಷಣಿಕ ಸ್ಥಿತಿಗತಿಯನ್ನು ಉತ್ತಮಪಡಿಸಲು, ಸೌಲಭ್ಯಗಳಿಂದ ಬಲಪಡಿಸಲು, ವಿದ್ಯಾರ್ಥಿಗಳ ಪೋಷಕರುಗಳಿಂದ ಮಾಸಿಕ ತಲಾ 100 ರೂ.ಗಳ ಕೊಡುಗೆ ಅಥವಾ ದಾನಗಳನ್ನು ಸಂಗ್ರಹಿಸುವಂತೆ ಶಾಲಾ ಮೇಲುಸ್ತುವಾರಿಗಳಿಗೆ ಮತ್ತು ಆ ಮೂಲಕ ಅಪ್ರತ್ಯಕ್ಷವಾಗಿ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗದವರಿಗೆ ಈ ಸುತ್ತೋಲೆಯು ಆದೇಶಿಸುತ್ತದೆ. ಈ ಕೊಡುಗೆಯನ್ನು ಮನವೊಲಿಸಿ ಪಡೆಯಬೇಕೇ ಹೊರತು ಬಲವಂತವಾಗಿಯಲ್ಲವೆಂದು ಸುತ್ತೋಲೆಯು ದಪ್ಪಕ್ಷರಗಳಲ್ಲಿ ಹೇಳಿದರೂ, ಪರಿಣಾಮ ಒಂದೇ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲೆ- ಶೌಚಾಲಯಗಳ ಸ್ವಚ್ಛತೆ, ಕುಡಿಯುವ ನೀರು ಸೌಲಭ್ಯ, ವಿದ್ಯುತ್ ಬಿಲ್ ಪಾವತಿ, ಆಟದ ಮೈದಾನದ ಸುಧಾರಣೆ, ಗಣಕ ಯಂತ್ರಗಳ ರಿಪೇರಿ, ಬೋಧನೋಪಕರಣಗಳು, ಅಗತ್ಯವಾದ ಅತಿಥಿ ಶಿಕ್ಷಕರ ವೇತನಗಳು ಸೇರಿದಂತೆ ಮೊದಲ ಮತ್ತು ಎರಡನೇ ಆದ್ಯತೆಯಲ್ಲಿ ಪಟ್ಟಿ ಮಾಡಿದ ಸುಮಾರು 17 ಅಗತ್ಯಗಳಿಗಾಗಿ ಈ ಹಣವನ್ನು ಖರ್ಚು ಮಾಡಲು ಮೇಲುಸ್ತುವಾರಿ ಸಮಿತಿಗಳಿಗೆ ಸೂಚಿಸಲಾಗಿದೆ. ಸರಕಾರ ತನ್ನ ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಕೆಲಸಗಳಿಗೆ ಪೂರಕವಾದ ಸೌಲಭ್ಯಗಳಿಲ್ಲವೆಂದು ಮತ್ತು ಅವುಗಳಿಗಾಗಿ ಸರಕಾರ ನೆರವು ನೀಡದೆಂಬ ಸಂದೇಶವನ್ನು ಈ ಸುತ್ತೋಲೆ ಸಾರ್ವಜನಿಕರಿಗೆ ರವಾನಿಸಿದೆ. ಸೌಲಭ್ಯಗಳಿಲ್ಲದ ಶಾಲೆಗಳಿಗೆ ನಿಮ್ಮ ಮಕ್ಕಳನ್ನು ಯಾಕೆ ಸೇರಿಸುತ್ತೀರೆಂಬ ಪ್ರಶ್ನೆಯನ್ನು ಎಸೆಯುವ ಮೂಲಕ ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುವ ಹಾಗೂ ಶಿಕ್ಷಣ ಪಡೆಯಲೇ ಬೇಕೆಂಬುವವರನ್ನು ಖಾಸಗೀ ಶಿಕ್ಷಣ ಸಂಸ್ಥೆಗಳ ಕಡೆ ದೂಡುವ ಜನವಿರೋಧಿ, ಬಡವರ ವಿರೋಧಿ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಈ ಸುತ್ತೋಲೆಯು ಖಾಸಗೀ ಶಿಕ್ಷಣ ಸಂಸ್ಥೆಗಳು ಯಾವ ಯಾವ ವಿಷಯಗಳ ಮೇಲೆ ಹೊಸದಾಗಿ ಕೊಡುಗೆಗಳನ್ನು ಪಡೆಯಬಹುದೆಂಬುದನ್ನು ಅಪ್ರತ್ಯಕ್ಷವಾಗಿ ಹೇಳುತ್ತಾ ಖಾಸಗೀ ಶಿಕ್ಷಣಾರ್ಥಿಗಳ ಲೂಟಿಗೆ ನೆರವಾಗುತ್ತದೆ. ಈ ಸುತ್ತೋಲೆಯು ಬಡವರು, ದಲಿತರು, ಮಹಿಳಾ ಶಿಕ್ಷಣಕ್ಕೆ ಪೂರಕವಾಗಿದ್ದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸೌಲಭ್ಯಗಳಿರುವುದಿಲ್ಲ. ಕನಿಷ್ಟ ಸೌಲಭ್ಯಗಳು ಬೇಕೆಂದರೂ ನೀವು ಕೊಡುಗೆ ನೀಡಬೇಕಾದದ್ದೆ ಎಂದು ಒತ್ತಾಯಿಸುತ್ತದೆ. ಇದು ಸಂವಿಧಾನ ನೀಡಿರುವ ಉಚಿತ ಶಿಕ್ಷಣದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿರಿ: ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶ ಶುಲ್ಕ ನೀತಿ ವಿರೋಧಿಸಿ AIDSO ಪ್ರತಿಭಟನೆ

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು, ಶಿಕ್ಷಕರನ್ನು ತುಂಬುವುದಿಲ್ಲ. ಹೊಸದಾಗಿ ಖಾಲಿಯಾಗುವ ಸಿಬ್ಬಂದಿಗಳ ಹುದ್ದೆಗಳನ್ನು ಸರಕಾರ ತುಂಬುವುದಿಲ್ಲ ಎಂಬ ಜನ ವಿರೋಧಿ ಸಂದೇಶವನ್ನು ಈ ಸುತ್ತೋಲೆ ಬಯಲುಗೊಳಿಸುತ್ತದೆ. ಮುಂದೆ ಸಿಬ್ಬಂದಿಗಳ ಕೊರತೆ ಎದುರಿಸುವಾಗ, ಮಾತ್ರವಲ್ಲಾ ಇತರೆ ಸೌಲಭ್ಯಗಳು ಬೇಕೆನ್ನುವಾಗ ನೀವುಗಳೇ ಕೊಡುಗೆ ನೀಡುವ ಮೂಲಕ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿರೆಂದು ಹಾಗೂ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳಿರೆಂದು ಹೇಳುತ್ತದೆ. ಇದರಿಂದಾಗಿ, ಈ ಕೊಡುಗೆ ನೀಡಲಾಗದ ಸುಮಾರು 1.5 ಕೋಟಿಗೂ ಅಧಿಕ ಸಂಖ್ಯೆಯ ಬಿಪಿಎಲ್, ಅಂತ್ಯೋದಯ ಮತ್ತು ಎಪಿಎಲ್ ಕುಟುಂಬಗಳ ಮಕ್ಕಳಿಗೆ ಇನ್ನು ಮುಂದೆ ಶಿಕ್ಷಣವೆಂಬುದು ಮರೀಚಿಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇರಳದ ಎಡ ಮತ್ತು ಪ್ರಜಾಸತ್ತಾತ್ಮಕ ರಂಗದ ಸರಕಾರ ಶಿಕ್ಷಣ ರಂಗದಲ್ಲಿ ಸಾರ್ವಜನಿಕ ಬಂಡವಾಳ ತೊಡಗಿಸುವಿಕೆಯನ್ನು ಹೆಚ್ಚಿಸುವ ಮೂಲಕ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸಿದೆ. ಖಾಸಗೀ ಶಿಕ್ಷಣ ಸಂಸ್ಥೆಗಳ ದಶಲಕ್ಷಾಂತರ ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುವಂತಹ ಪರಿಸ್ಥಿತಿಯನ್ನು ನಿರ್ಮಿಸಿದೆ. ಆದರೇ ರಾಜ್ಯದ ಬಿಜೆಪಿ ಸರಕಾರ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ತೀವ್ರ ಖಂಡನೀಯವಾಗಿದೆ ಎಂದಿ‌ದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...